Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 30:27 - ಕನ್ನಡ ಸಮಕಾಲಿಕ ಅನುವಾದ

27 ಲಾಬಾನನು ಅವನಿಗೆ, “ನಾನು ನಿನ್ನ ದೃಷ್ಟಿಯಲ್ಲಿ ದಯೆ ಹೊಂದಿದವನಾಗಿದ್ದರೆ, ನನ್ನ ಬಳಿಯಲ್ಲಿಯೇ ಇರು. ಏಕೆಂದರೆ ಯೆಹೋವ ದೇವರು ನಿನಗೋಸ್ಕರ ನನ್ನನ್ನು ಆಶೀರ್ವದಿಸಿದ್ದಾರೆಂದು ನಾನು ಭವಿಷ್ಯಜ್ಞಾನ ಅನುಭವದಿಂದ ಕಲಿತುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ನಾನು ನಿನಗೆ ಮಾಡಿದ ಸೇವೆಯನ್ನು ನೀನು ಬಲ್ಲವನಾಗಿರುವೆ” ಎಂದು ಹೇಳಲು ಲಾಬಾನನು ಅವನಿಗೆ, “ನನ್ನ ಮೇಲೆ ದಯೆ ಇಟ್ಟು ನನ್ನ ಬಳಿಯಲ್ಲೇ ಇರು. ಯೆಹೋವನು ನಿನ್ನ ನಿಮಿತ್ತ ನನ್ನನ್ನು ಅಭಿವೃದ್ಧಿಪಡಿಸಿದ್ದಾನೆಂದು ಚೆನ್ನಾಗಿ ತಿಳಿದುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಅದಕ್ಕೆ ಲಾಬಾನನು, “ನನ್ನ ಮೇಲೆ ದಯವಿಟ್ಟು ನನ್ನ ಬಳಿಯಲ್ಲೇ ತಂಗಿರು. ಸರ್ವೇಶ್ವರ ಸ್ವಾಮಿ ನಿನ್ನ ನಿಮಿತ್ತ ನನ್ನನ್ನು ಅಭಿವೃದ್ಧಿಗೊಳಿಸಿದ್ದಾರೆಂದು ಶಾಸ್ತ್ರೋಕ್ತವಾಗಿ ತಿಳಿದುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಲಾಬಾನನು ಅವನಿಗೆ - ನನ್ನ ಮೇಲೆ ದಯವಿಟ್ಟು ನನ್ನ ಬಳಿಯಲ್ಲೇ ಇರು; ಯೆಹೋವನು ನಿನ್ನ ನಿವಿುತ್ತ ನನ್ನನ್ನು ಅಭಿವೃದ್ಧಿಪಡಿಸಿದ್ದಾನೆಂದು ಚೆನ್ನಾಗಿ ತಿಳಿದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಲಾಬಾನನು ಅವನಿಗೆ, “ನಾನು ಹೇಳುವುದನ್ನು ಕೇಳು; ಯೆಹೋವನು ನಿನ್ನ ನಿಮಿತ್ತವಾಗಿ ನನ್ನನ್ನು ಆಶೀರ್ವದಿಸಿದ್ದಾನೆಂದು ನನಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 30:27
25 ತಿಳಿವುಗಳ ಹೋಲಿಕೆ  

ಅವನನ್ನು ಎಲ್ಲಾ ಸಂಕಟಗಳಿಂದ ಬಿಡಿಸಿದರು. ದೇವರು ಯೋಸೇಫನಿಗೆ ಜ್ಞಾನವನ್ನು ಕೊಟ್ಟು ಈಜಿಪ್ಟಿನ ಅರಸನಾದ ಫರೋಹನ ಮೆಚ್ಚುಗೆಗೆ ಪಾತ್ರನಾಗುವಂತೆ ಮಾಡಿದರು. ಹೀಗೆ ಯೋಸೇಫನನ್ನು ಈಜಿಪ್ಟ್ ದೇಶದ ಮೇಲೆಯೂ ತನ್ನ ಅರಮನೆಯ ಮೇಲೆಯೂ ಅಧಿಕಾರಿಯನ್ನಾಗಿ ಫರೋಹನು ನೇಮಿಸಿದನು.


ಆಗ ಅವರ ಸಂತಾನವು ಇತರ ಜನಾಂಗಗಳಲ್ಲಿ ಪ್ರಸಿದ್ಧವಾಗುವುದು. ಅವರಿಂದಾದ ಉತ್ಪತ್ತಿ ಜನರ ಮಧ್ಯದಲ್ಲಿ ತಿಳಿಸಲಾಗುವುದು. ಅವರನ್ನು ನೋಡುವವರೆಲ್ಲರೂ, ಅವರೇ ಯೆಹೋವ ದೇವರು ಆಶೀರ್ವದಿಸಿದ ಸಂತಾನ ಎಂದು ಒಪ್ಪಿಕೊಳ್ಳುವರು.


ಅದಕ್ಕೆ ಅವಳು, “ನನ್ನ ಒಡೆಯನೇ, ನನಗೆ ನಿಮ್ಮ ದೃಷ್ಟಿಯಲ್ಲಿ ಉಪಕಾರವಾಗಲಿ. ಏಕೆಂದರೆ ನಾನು ನಿಮ್ಮ ದಾಸಿಯರಲ್ಲಿ ಒಬ್ಬಳಂತೆ ನಿಲ್ಲುವುದಕ್ಕೂ ಯೋಗ್ಯಳಲ್ಲ ಆದರೂ ದಯೆಯಿಂದ ಮಾತನಾಡಿಸಿದಿರಿ” ಎಂದಳು.


ಅದೇ ರಾತ್ರಿಯಲ್ಲಿ ಯೆಹೋವ ದೇವರು ಅವನಿಗೆ ಕಾಣಿಸಿಕೊಂಡು, “ನಿನ್ನ ತಂದೆ ಅಬ್ರಹಾಮನ ದೇವರು ನಾನೇ, ಭಯಪಡಬೇಡ. ಏಕೆಂದರೆ ನಾನು ನಿನ್ನ ಸಂಗಡ ಇದ್ದೇನೆ, ನನ್ನ ದಾಸನಾದ ಅಬ್ರಹಾಮನಿಗೋಸ್ಕರ ನಿನ್ನನ್ನು ಆಶೀರ್ವದಿಸಿ, ನಿನ್ನ ಸಂತತಿಯನ್ನು ಹೆಚ್ಚಿಸುವೆನು,” ಎಂದರು.


“ಇದಲ್ಲದೆ ಈ ಜನರಿಗೆ ಈಜಿಪ್ಟಿನವರ ಕಣ್ಣೆದುರಿನಲ್ಲಿ ದಯೆ ದೊರಕುವಂತೆ ಮಾಡುವೆನು. ನೀವು ಹೋಗುವಾಗ ಬರಿಗೈಯಲ್ಲಿ ಹೋಗುವುದಿಲ್ಲ.


ನಿನ್ನನ್ನು ಆಶೀರ್ವದಿಸುವವರನ್ನು ನಾನು ಆಶೀರ್ವದಿಸುವೆನು. ನಿನ್ನನ್ನು ಶಪಿಸುವವರನ್ನು ನಾನು ಶಪಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದು.”


ಆಗ ಅವರು, “ನೀನೇ ನಮ್ಮನ್ನು ಬದುಕಿಸಿದ್ದೀ, ನಮ್ಮ ಒಡೆಯನ ಕಣ್ಣುಗಳ ಮುಂದೆ ನಮಗೆ ದಯೆ ದೊರಕಲಿ. ನಾವು ಫರೋಹನ ದಾಸರಾಗಿರುವೆವು,” ಎಂದರು.


ಅದಕ್ಕೆ ಏಸಾವನು, “ನನ್ನ ಬಳಿಯಲ್ಲಿರುವ ಜನರಲ್ಲಿ ಕೆಲವರನ್ನು ನಿನ್ನ ಬಳಿಯಲ್ಲಿ ಬಿಟ್ಟು ಹೋಗುತ್ತೇನೆ,” ಅನ್ನಲು. ಯಾಕೋಬನು, “ಅದರ ಅಗತ್ಯವೇನು? ನನ್ನ ಒಡೆಯನ ದೃಷ್ಟಿಯಲ್ಲಿ ನನಗೆ ದಯೆ ದೊರಕಲಿ,” ಎಂದನು.


ನಾನು ಬರುವುದಕ್ಕಿಂತ ಮುಂಚೆ ನಿನಗಿದ್ದದ್ದು ಸ್ವಲ್ಪವೇ. ಈಗ ಅದು ಬಹಳವಾಗಿ ಹೆಚ್ಚಿದೆ. ನಾನು ಬಂದಂದಿನಿಂದ ಯೆಹೋವ ದೇವರು ನಿನ್ನನ್ನು ಆಶೀರ್ವದಿಸಿದ್ದಾರೆ. ಈಗ ನಾನು ನನ್ನ ಸ್ವಂತ ಮನೆಗೋಸ್ಕರ ಯಾವಾಗ ಸಂಪಾದಿಸಲಿ?” ಎಂದನು.


ಅಬ್ರಹಾಮನು ಅವರಿಗೆ, “ನನ್ನ ಸ್ವಾಮಿ, ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರೆತಿದ್ದರೆ, ನಿಮ್ಮ ದಾಸನ ಬಳಿಯಿಂದ ಹೊರಟು ಹೋಗಬೇಡಿ.


ಆಗ ದೇವರು ದಾನಿಯೇಲನ ಮೇಲೆ ಕಂಚುಕಿಯರ ಯಜಮಾನನ ದಯೆ, ಕನಿಕರ ತೋರುವಂತೆ ಮಾಡಿದರು.


ಇದಲ್ಲದೆ ಫರೋಹನು ಹದದನನ್ನು ಬಹಳವಾಗಿ ಮೆಚ್ಚಿಕೊಂಡನು. ಫರೋಹನು ತನ್ನ ಹೆಂಡತಿಯೂ ರಾಣಿಯೂ ಆದ ತಪ್ನೆಸ್ ಎಂಬವಳ ಸಹೋದರಿಯನ್ನು ಅವನಿಗೆ ಮದುವೆ ಮಾಡಿಕೊಟ್ಟನು.


ಈ ರೀತಿಯಲ್ಲಿ ನೀವು ನನ್ನನ್ನು ನಡೆಸುವುದಾದರೆ, ಈಗಲೇ ನನ್ನನ್ನು ಕೊಂದುಬಿಡಿ. ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರೆತರೆ, ನಾನು ನನ್ನ ಸ್ವಂತ ನಾಶವನ್ನು ಎದುರಿಸದಂತೆ ಕಾಪಾಡಿ,” ಎಂದನು.


ಬಳಿಕ ಶೆಕೆಮನು ಆಕೆಯ ತಂದೆಗೂ, ಆಕೆಯ ಸಹೋದರರಿಗೂ, “ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರಕಲಿ, ನೀವು ಕೇಳಿದ್ದನ್ನು ನಾನು ನಿಮಗೆ ಕೊಡುವೆನು.


ಯೆಹೋವ ದೇವರು ಹೀಗೆನ್ನುತ್ತಾರೆ: “ರಸ ದೊರೆಯಬಹುದಾದ ದ್ರಾಕ್ಷಿ ಗೊಂಚಲನ್ನು ಒಬ್ಬನು ನೋಡಿ, ‘ಹಾಳು ಮಾಡಬೇಡ, ಅದರಲ್ಲಿ ಪ್ರಯೋಜನವಿದೆ,’ ಎನ್ನುವಂತೆ ನಾನು ನನ್ನ ಸೇವಕರನ್ನು ಲಕ್ಷ್ಯಕ್ಕೆ ತಂದು ಇವರನ್ನೆಲ್ಲಾ ಹಾಳುಮಾಡಬಾರದು ಎಂದುಕೊಳ್ಳುವೆನು.


ಆದರೆ ದೇಶದಲ್ಲಿ ಹತ್ತನೆಯ ಪಾಲು ಉಳಿದಿದ್ದರೂ, ಅದು ಕೂಡ ನಾಶವಾಗುವುದು. ಏಲಾ ಮರವನ್ನಾಗಲೀ, ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ ಉಳಿಯುವುದು ಬುಡ ಮಾತ್ರ. ಅದೇ ರೀತಿಯಾಗಿ ಪವಿತ್ರ ಜನರು ದೇಶದಲ್ಲಿ ಬುಡವಾಗಿ ಉಳಿದಿರುವರು.”


ಅಂಥವರು ನೀರಿನ ಕಾಲುವೆಗಳ ಬಳಿಯಲ್ಲಿ ನೆಟ್ಟಿರುವ, ಮರದ ಹಾಗಿರುವರು. ಅಂಥ ಮರವು ತಕ್ಕ ಕಾಲದಲ್ಲಿ ಫಲಕೊಡುತ್ತದೆ, ಅದರ ಎಲೆ ಉದುರುವುದೇ ಇಲ್ಲ. ಅದರಂತೆ ಅವರು ಮಾಡುವ ಕಾರ್ಯವೆಲ್ಲವೂ ಸಫಲವಾಗುವುದು.


ಅರಸನಿಗೆ, “ಅರಸನಿಗೆ ಮೆಚ್ಚಿಗೆಯಾದರೆ ಮತ್ತು ನಿಮ್ಮ ಸೇವಕನಿಗೆ ನಿಮ್ಮ ಮುಂದೆ ದಯೆ ದೊರಕಿದರೆ, ನನ್ನನ್ನು ನನ್ನ ತಂದೆಗಳ ಸಮಾಧಿಗಳಿರುವ ಪಟ್ಟಣವನ್ನು ಕಟ್ಟಿಸುವುದಕ್ಕಾಗಿ ಯೆಹೂದಕ್ಕೆ ನನ್ನನ್ನು ಕಳುಹಿಸಬೇಕು,” ಎಂದೆನು.


ದೇವರೇ, ನಿಮ್ಮ ಹೆಸರಲ್ಲಿ ಭಯಭಕ್ತಿಯಿಂದ ಹರ್ಷಿಸುವ ನಿಮ್ಮ ಸೇವಕರ ಪ್ರಾರ್ಥನೆಗೆ ಕಿವಿಗೊಡಿರಿ. ಇಂದು ನಿಮ್ಮ ಸೇವಕನಾದ ನನಗೆ ಯಶಸ್ವಿಯನ್ನು ಕೊಟ್ಟು, ಈ ಅರಸನ ದೃಷ್ಟಿಯಲ್ಲಿ ನನಗೆ ದಯೆ ದೊರಕುವಂತೆ ಮಾಡಿರಿ,” ಎಂದು ಬೇಡಿಕೊಂಡೆನು. ಆ ದಿವಸಗಳಲ್ಲಿ ನಾನು ಅರಸನಿಗೆ ಪಾನ ಸೇವಕನಾಗಿದ್ದೆನು.


ಸೌಲನು ಇಷಯನ ಬಳಿಗೆ ಮನುಷ್ಯನನ್ನು ಕಳುಹಿಸಿ, “ದಾವೀದನು ನನ್ನ ಸಮ್ಮುಖದಲ್ಲಿ ಸೇವೆಮಾಡಲಿ. ಏಕೆಂದರೆ ನಾನು ದಾವೀದನನ್ನು ಮೆಚ್ಚಿದ್ದೇನೆ,” ಎಂದನು.


ಮೋಶೆಯು ಯೆಹೋವ ದೇವರಿಗೆ, “ಈ ಎಲ್ಲಾ ಜನರ ಭಾರವನ್ನು ನನ್ನ ಮೇಲೆ ಹೊರಿಸಿ ನೀವು ಏಕೆ ತೊಂದರೆಯನ್ನು ನಿಮ್ಮ ಸೇವಕನ ಮೇಲೆ ತಂದಿದ್ದೀರಿ? ನಿಮ್ಮನ್ನು ಅತೃಪ್ತಿಗೊಳಿಸಲು ನಾನೇನು ಮಾಡಿದ್ದೇನೆ?


ಆ ಪಾತ್ರೆಯು ನನ್ನ ಒಡೆಯನು ಕುಡಿಯುವ ಪಾತ್ರೆಯಲ್ಲವೋ? ಅದರಿಂದ ನಿಜವಾಗಿಯೂ ಅವನು ದೈವೋಕ್ತಿಯನ್ನು ಹೇಳುವನಲ್ಲಾ? ನೀವು ಹೀಗೆ ಮಾಡಿದ್ದು ಕೆಟ್ಟದ್ದಾಗಿದೆ,’ ಎಂದು ಅವರಿಗೆ ಹೇಳು,” ಎಂದನು.


ಯೆಹೋವ ದೇವರ ಮಂಜೂಷವು ಗಿತ್ತೀಯನಾದ ಓಬೇದ್ ಏದೋಮನ ಮನೆಯಲ್ಲಿ ಮೂರು ತಿಂಗಳು ಇದ್ದುದರಿಂದ, ಯೆಹೋವ ದೇವರು ಓಬೇದ್ ಎದೋಮನನ್ನೂ, ಅವನ ಮನೆಯವರೆಲ್ಲರನ್ನೂ ಆಶೀರ್ವದಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು