Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:21 - ಕನ್ನಡ ಸಮಕಾಲಿಕ ಅನುವಾದ

21 ಅವನು ತನಗಿದ್ದದ್ದನ್ನೆಲ್ಲಾ ತೆಗೆದುಕೊಂಡು ಓಡಿಹೋದನು. ಅವನು ಎದ್ದು ಗಿಲ್ಯಾದ್ ಪರ್ವತಕ್ಕೆ ಅಭಿಮುಖವಾಗಿ ಯೂಫ್ರೇಟೀಸ್ ನದಿಯನ್ನು ದಾಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಹೀಗೆ ಅವನು ತನ್ನ ಆಸ್ತಿಯನ್ನೆಲ್ಲಾ ತೆಗೆದುಕೊಂಡು ಯೂಫ್ರೆಟಿಸ್ ಮಹಾ ನದಿಯನ್ನು ದಾಟಿ ಗಿಲ್ಯಾದೆಂಬ ಬೆಟ್ಟದ ಸೀಮೆಯ ದಾರಿಯನ್ನು ಹಿಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಹೀಗೆ ಅವನು ತನ್ನ ಆಸ್ತಿಪಾಸ್ತಿಯೊಂದಿಗೆ ಓಡಿಹೋಗಿ ಯೂಫ್ರೆಟಿಸ್ ಮಹಾನದಿಯನ್ನು ದಾಟಿ ಗಿಲ್ಯಾದ್‍ ಎಂಬ ಗುಡ್ಡಗಾಡಿನ ದಾರಿಯನ್ನು ಹಿಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಹೀಗೆ ಅವನು ತನ್ನ ಆಸ್ತಿಯನ್ನೆಲ್ಲಾ ತೆಗೆದುಕೊಂಡು ಓಡಿಹೋಗಿ ಯೂಫ್ರೇಟೀಸ್ ಮಹಾನದಿಯನ್ನು ದಾಟಿ ಗಿಲ್ಯಾದೆಂಬ ಬೆಟ್ಟದ ಸೀಮೆಯ ದಾರಿಯನ್ನು ಹಿಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯಾಕೋಬನು ತನ್ನ ಕುಟುಂಬವನ್ನು ಕರೆದುಕೊಂಡು, ತನ್ನ ಪ್ರತಿಯೊಂದು ಸ್ವತ್ತನ್ನು ತೆಗೆದುಕೊಂಡು ಬೇಗನೆ ಅಲ್ಲಿಂದ ಹೊರಟನು. ಅವರು ಯೂಫ್ರೇಟೀಸ್ ಮಹಾನದಿಯನ್ನು ದಾಟಿ, ಬೆಟ್ಟಗಳ ಸೀಮೆಯಿಂದ ಗಿಲ್ಯಾದ್ ದೇಶದ ಕಡೆಗೆ ಪ್ರಯಾಣ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:21
18 ತಿಳಿವುಗಳ ಹೋಲಿಕೆ  

ಈ ಸಮಯದಲ್ಲಿ ಅರಾಮ್ಯರ ಅರಸನಾದ ಹಜಾಯೇಲನು ಹೋಗಿ ಗತ್ ಊರಿನ ಮೇಲೆ ಯುದ್ಧಮಾಡಿ, ಅದನ್ನು ವಶಪಡಿಸಿಕೊಂಡನು. ನಂತರ ಹಜಾಯೇಲನು ಯೆರೂಸಲೇಮಿನ ಮೇಲೆ ದಾಳಿಮಾಡಲು ಹೊರಟನು.


ಚೀಯೋನಿನ ಕಡೆಗೆ ಅಭಿಮುಖರಾಗಿ ಅದರ ಮಾರ್ಗವನ್ನು ವಿಚಾರಿಸಿ ಬನ್ನಿ; ಮರೆತು ಹೋಗದ ನಿತ್ಯವಾದ ಒಡಂಬಡಿಕೆಯಿಂದ ಯೆಹೋವ ದೇವರನ್ನು ಸೇರಿಕೊಳ್ಳೋಣ, ಅನ್ನುವರು.


ಗಿಲ್ಯಾದಿನ ಪ್ರವಾಸಿಗಳಲ್ಲಿ ತಿಷ್ಬೀಯ ಊರಿನವನಾದ ಎಲೀಯನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವ ದೇವರ ಜೀವದಾಣೆ, ನನ್ನ ಮಾತಿನ ಪ್ರಕಾರ ಸೂಚಿಸಿದ ಹೊರತು ಇಂದಿನಿಂದ ಕೆಲವು ವರ್ಷಗಳವರೆಗೆ ಮಂಜಾಗಲಿ ಅಥವಾ ಮಳೆಯಾಗಲಿ ಬೀಳುವುದಿಲ್ಲ,” ಎಂದನು.


ಆಗ ಗಿಲ್ಯಾದಿನ ಜನರೂ, ಪ್ರಧಾನರೂ ಒಬ್ಬರಿಗೊಬ್ಬರು, “ಯಾವನು ಅಮ್ಮೋನಿಯರ ಮೇಲೆ ಯುದ್ಧಮಾಡಲಾರಂಭಿಸುವನೋ, ಅವನು ಗಿಲ್ಯಾದಿನ ನಿವಾಸಿಗಳಿಗೆಲ್ಲಾ ತಲೆಯಾಗಿರುವನು,” ಎಂದು ಮಾತನಾಡಿಕೊಂಡರು.


ಆ ಕಾಲದಲ್ಲಿ ನಾವು ಸ್ವತಂತ್ರಿಸಿಕೊಂಡ ದೇಶವನ್ನು ಅರ್ನೋನ್ ಹಳ್ಳದ ಸಮೀಪದಲ್ಲಿರುವ ಅರೋಯೇರಿನಿಂದ ಮೊದಲ್ಗೊಂಡು, ಅರ್ಧ ಗಿಲ್ಯಾದ್ ಬೆಟ್ಟವನ್ನೂ, ಅದರ ಪಟ್ಟಣಗಳನ್ನೂ ರೂಬೇನ್ಯರ ಪ್ರದೇಶದವರೆಗೂ, ಗಾದನ ಪ್ರದೇಶದವರೆಗೂ ಕೊಟ್ಟೆನು.


ರೂಬೇನನ ಮಕ್ಕಳಿಗೂ ಗಾದನ ಮಕ್ಕಳಿಗೂ ಅಧಿಕ ಸಂಖೆಯಲ್ಲಿ ಪಶುಗಳು ಇದ್ದವು. ಅವರು ಯಜ್ಜೇರ್, ಗಿಲ್ಯಾದ್ ಎಂಬ ದೇಶಗಳನ್ನು ನೋಡಿದಾಗ, ಅದು ಪಶುಗಳಿಗೆ ತಕ್ಕ ಸ್ಥಳವೆಂದು ತಿಳಿದುಕೊಂಡರು.


ಆದರೆ ಇಸ್ರಾಯೇಲನ್ನು ಆಶೀರ್ವದಿಸುವುದಕ್ಕೆ ಯೆಹೋವ ದೇವರ ದೃಷ್ಟಿಗೆ ಒಳ್ಳೆಯದೆಂದು ಬಿಳಾಮನು ನೋಡಿದಾಗ, ಅವನು ಮುಂಚಿನ ಹಾಗೆ ಶಕುನವನ್ನು ಕಂಡುಕೊಳ್ಳುವುದಕ್ಕೆ ಹೋಗದೆ, ತನ್ನ ಮುಖವನ್ನು ಮರುಭೂಮಿಯ ಕಡೆಗೆ ತಿರುಗಿಸಿಕೊಂಡನು.


ಇದಲ್ಲದೆ ಗೋಷೆನ್ ಪ್ರಾಂತಕ್ಕೆ ಮಾರ್ಗವನ್ನು ತೋರಿಸುವಂತೆ ಯಾಕೋಬನು ಯೆಹೂದನನ್ನು ತನ್ನ ಮುಂದಾಗಿ ಯೋಸೇಫನ ಬಳಿಗೆ ಕಳುಹಿಸಿದನು. ಅವರು ಗೋಷೆನ್ ಪ್ರಾಂತಕ್ಕೆ ಬಂದು ಸೇರಿದರು.


ಅವರು ಊಟಕ್ಕೆ ಕುಳಿತುಕೊಂಡಾಗ, ತಮ್ಮ ಕಣ್ಣುಗಳನ್ನೆತ್ತಿ ನೋಡಲಾಗಿ, ಇಷ್ಮಾಯೇಲರ ಗುಂಪು ಗಿಲ್ಯಾದಿನಿಂದ ಬರುತ್ತಿತ್ತು. ಅವರ ಒಂಟೆಗಳು ಸಾಂಬ್ರಾಣಿ, ಸುಗಂಧ ತೈಲ, ರಕ್ತಬೋಳಗಳನ್ನು ಹೊರುತ್ತಿದ್ದವು. ಅವರು ಅವುಗಳನ್ನು ಈಜಿಪ್ಟಿಗೆ ತೆಗೆದುಕೊಂಡು ಹೋಗುತ್ತಿದ್ದರು.


ಆಗ ಅವನು ತನ್ನ ಬಂಧುಗಳನ್ನು ಕರೆದುಕೊಂಡು, ಅವನನ್ನು ಬೆನ್ನಟ್ಟಿ, ಏಳು ದಿನ ಪ್ರಯಾಣಮಾಡಿ, ಗಿಲ್ಯಾದ್ ಪರ್ವತದಲ್ಲಿ ಅವನನ್ನು ಸಂಧಿಸಿದನು.


ಅದೇ ದಿನದಲ್ಲಿ ಯೆಹೋವ ದೇವರು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು, “ಈಜಿಪ್ಟ್ ದೇಶದ ನದಿಯಿಂದ ಮಹಾನದಿ ಯೂಫ್ರೇಟೀಸ್ ನದಿಯವರೆಗೆ ವಾಸಿಸುವ


ಮೂರನೆಯ ನದಿಯ ಹೆಸರು ಟೈಗ್ರಿಸ್; ಅದು ಅಸ್ಸೀರಿಯಾ ದೇಶದ ಪೂರ್ವಕ್ಕೆ ಹರಿಯುತ್ತಿತ್ತು. ನಾಲ್ಕನೆಯ ನದಿಯು ಯೂಫ್ರೇಟೀಸ್.


ಆದರೆ ಯಾಕೋಬನು ತಾನು ಹೋಗುವುದನ್ನು ಅರಾಮ್ಯನಾದ ಲಾಬಾನನಿಗೆ ತಿಳಿಸದೆ ವಂಚಿಸಿ ಓಡಿಹೋದನು.


ಯಾಕೋಬನು ಓಡಿಹೋದನೆಂದು ಮೂರನೆಯ ದಿವಸದಲ್ಲಿ ಲಾಬಾನನಿಗೆ ತಿಳಿಯಿತು.


ಅಲ್ಲಿಂದ ಗಿಲ್ಯಾದಿಗೂ, ತಖ್ತೀಮ್ ಹೊಜೀ ಪ್ರದೇಶಕ್ಕೂ, ಅಲ್ಲಿಂದ ದಾನ್ ಯಾನಿಗೂ, ಅಲ್ಲಿಂದ ಸುತ್ತಿಕೊಂಡು ಸೀದೋನಿಗೂ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು