Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:24 - ಕನ್ನಡ ಸಮಕಾಲಿಕ ಅನುವಾದ

24 ಆ ರಾತ್ರಿ ದೇವರು ಸ್ವಪ್ನದಲ್ಲಿ ಅರಾಮಿನವನಾದ ಲಾಬಾನನ ಬಳಿಗೆ ಬಂದು ಅವನಿಗೆ, “ನೀನು ಯಾಕೋಬನ ಸಂಗಡ ಒಳ್ಳೆಯದನ್ನಾಗಲಿ, ಕೆಟ್ಟದ್ದನ್ನಾಗಲಿ ಮಾತನಾಡದಂತೆ ಎಚ್ಚರಿಕೆಯಾಗಿರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆದರೆ ರಾತ್ರಿಯಲ್ಲಿ ದೇವರು ಅರಾಮ್ಯನಾದ ಲಾಬಾನನ ಕನಸಿನಲ್ಲಿ ಬಂದು, “ನೀನು ಯಾಕೋಬನ ಸಂಗಡ ಒಳ್ಳೆಯದನ್ನಾಗಲಿ ಕೆಟ್ಟದ್ದನ್ನಾಗಲಿ ಮಾತನಾಡದಂತೆ ಎಚ್ಚರಿಕೆಯಾಗಿರು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಆ ರಾತ್ರಿಯಲ್ಲಿ ದೇವರು ಆರಾಮ್ಯನಾದ ಲಾಬಾನನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ಎಚ್ಚರಿಕೆ, ಯಕೋಬನಿಗೆ ನೀನು ಯಾವ ಬೆದರಿಕೆಯನ್ನೂ ಹಾಕಬೇಡ!” ಎಂದು ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆದರೆ ರಾತ್ರಿಯಲ್ಲಿ ದೇವರು ಅರಾಮ್ಯನಾದ ಲಾಬಾನನ ಕನಸಿನಲ್ಲಿ ಬಂದು - ನೋಡಿಕೋ, ನೀನು ಯಾಕೋಬನಿಗೆ ಏನೂ ಅನ್ನಬೇಡ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆ ರಾತ್ರಿ ದೇವರು ಲಾಬಾನನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ಎಚ್ಚರಿಕೆಯಾಗಿರು; ನೀನು ಯಾಕೋಬನಿಗೆ ಹೇಳುವ ಪ್ರತಿಯೊಂದು ಮಾತಿನ ಬಗ್ಗೆ ಎಚ್ಚರಿಕೆಯಾಗಿರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:24
28 ತಿಳಿವುಗಳ ಹೋಲಿಕೆ  

ಅದಕ್ಕೆ ಲಾಬಾನನು ಮತ್ತು ಬೆತೂಯೇಲನು, “ಈ ಕಾರ್ಯವು ಯೆಹೋವ ದೇವರಿಂದಲೇ ಉಂಟಾಯಿತು. ನಾವಂತೂ ಹೌದೆಂದೂ ಅಲ್ಲವೆಂದೂ ಹೇಳಲಾರೆವು


ಆದರೆ ದೇವರು ಅಬೀಮೆಲೆಕನಿಗೆ ರಾತ್ರಿಯ ಕನಸಿನಲ್ಲಿ ಬಂದು, “ನೀನು ಆ ಸ್ರೀಯನ್ನು ತೆಗೆದುಕೊಂಡ ಕಾರಣ ಸಾಯತಕ್ಕವನಾಗಿದ್ದಿ, ಏಕೆಂದರೆ ಆಕೆಯು ಆ ಮನುಷ್ಯನ ಹೆಂಡತಿ,” ಎಂದು ಅವನಿಗೆ ಹೇಳಿದರು.


ನಿನಗೆ ಕೇಡು ಮಾಡುವುದಕ್ಕೆ ನನ್ನ ಕೈಯಲ್ಲಿ ಸಾಮರ್ಥ್ಯ ಇದೆ. ಆದರೆ ನಿನ್ನ ತಂದೆಯ ದೇವರು ನಿನ್ನೆ ರಾತ್ರಿ ನನ್ನ ಸಂಗಡ ಮಾತನಾಡಿ, ‘ನೀನು ಯಾಕೋಬನ ಸಂಗಡ ಒಳ್ಳೆಯದನ್ನಾಗಲಿ, ಕೆಟ್ಟದ್ದನ್ನಾಗಲಿ ಹೇಳದಂತೆ ಎಚ್ಚರವಾಗಿರು,’ ಎಂದು ಹೇಳಿದರು.


‘ಬಾಲಾಕನು ನನಗೆ ತನ್ನ ಮನೆ ತುಂಬ ಬೆಳ್ಳಿಬಂಗಾರಗಳನ್ನು ಕೊಟ್ಟರೂ, ನನ್ನ ಹೃದಯದಿಂದ ಒಳ್ಳೆಯದನ್ನಾದರೂ, ಕೆಟ್ಟದ್ದನ್ನಾದರೂ ಮಾಡುವುದಕ್ಕೆ ಯೆಹೋವ ದೇವರ ಆಜ್ಞೆಯನ್ನು ಮೀರಲಾರೆನು. ಯೆಹೋವ ದೇವರು ಏನು ಹೇಳುತ್ತಾರೋ, ಅದನ್ನೇ ಹೇಳುವೆನೆಂದು ನಾನು ಹೇಳಲಿಲ್ಲವೋ’? ಈಗ, ನನ್ನ ಜನರ ಬಳಿಗೆ ಹೋಗುತ್ತೇನೆ.


ನನ್ನ ತಂದೆ ದೇವರೂ, ಅಬ್ರಹಾಮನ ದೇವರೂ, ಇಸಾಕನ ಭಯವೂ ನನ್ನೊಂದಿಗೆ ಇಲ್ಲದೆ ಹೋಗಿದ್ದರೆ, ನಿಶ್ಚಯವಾಗಿ ನೀನು ನನ್ನನ್ನು ಬರಿಗೈಯಿಂದ ಕಳುಹಿಸುತ್ತಿದ್ದೆ. ನನ್ನ ಬಾಧೆಯನ್ನೂ, ನನ್ನ ಕಷ್ಟವನ್ನೂ ದೇವರು ಕಂಡು, ನಿನ್ನೆ ರಾತ್ರಿ ನಿನ್ನನ್ನು ಗದರಿಸಿದ್ದಾರೆ,” ಎಂದನು.


ಪಿಲಾತನು ನ್ಯಾಯಾಸನದ ಮೇಲೆ ಕೂತಿದ್ದಾಗ, ಅವನ ಹೆಂಡತಿಯು ಅವನಿಗೆ, “ನೀನು ಆ ನೀತಿವಂತನ ಗೊಡವೆಗೆ ಹೋಗಬೇಡ. ಈ ದಿವಸ ನಾನು ಸ್ವಪ್ನದಲ್ಲಿ ಆತನ ವಿಷಯವಾಗಿ ಬಹಳ ಕಷ್ಟಪಟ್ಟಿದ್ದೇನೆ,” ಎಂದು ಹೇಳಿ ಕಳುಹಿಸಿದಳು.


ಆದರೆ ಅಬ್ಷಾಲೋಮನು ತನ್ನ ಸಹೋದರನಾದ ಅಮ್ನೋನನ ಸಂಗಡ ಒಳ್ಳೆಯದಾದರೂ, ಕೆಟ್ಟದ್ದಾದರೂ ಮಾತನಾಡದೆ ಇದ್ದನು. ಏಕೆಂದರೆ ಅವನು ತನ್ನ ಸಹೋದರಿಯಾದ ತಾಮಾರಳನ್ನು ಅವಮಾನ ಮಾಡಿದ್ದರಿಂದ, ಅಬ್ಷಾಲೋಮನು ಅವನನ್ನು ಹಗೆ ಮಾಡಿದನು.


ಅವನು ಹೀಗೆ ಯೋಚಿಸುತ್ತಿದ್ದಾಗ, ಕರ್ತನ ದೂತನು ಕನಸಿನಲ್ಲಿ ಅವನಿಗೆ ಪ್ರತ್ಯಕ್ಷನಾಗಿ, “ದಾವೀದನ ವಂಶದ ಯೋಸೇಫನೇ, ಮರಿಯಳನ್ನು ನಿನ್ನ ಹೆಂಡತಿಯನ್ನಾಗಿ ಸ್ವೀಕರಿಸಲು ಅಂಜಬೇಡ. ಆಕೆ ಗರ್ಭವತಿಯಾಗಿರುವುದು ಪವಿತ್ರಾತ್ಮರಿಂದಲೇ.


ಯಾಕೋಬನು ಸಿರಿಯಾ ದೇಶಕ್ಕೆ ಓಡಿಹೋದನು. ಇಸ್ರಾಯೇಲನು ಹೆಂಡತಿಯ ನಿಮಿತ್ತ ಸೇವೆಮಾಡಿ, ಹೆಂಡತಿಯ ನಿಮಿತ್ತ ಕುರಿಗಳನ್ನು ಕಾದನು.


ನೀನು ನನಗೆ ವಿರೋಧವಾಗಿ ಮಾಡುವ ನಿನ್ನ ರೌದ್ರವೂ ನಿನ್ನ ಅಹಂಕಾರವೂ ನನ್ನ ಕಿವಿಗಳಿಗೆ ತಲುಪಿದೆ. ಆದ್ದರಿಂದ ನಾನು ನನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ; ನನ್ನ ಕಡಿವಾಣವನ್ನು ನಿನ್ನ ಬಾಯಲ್ಲಿಯೂ ಹಾಕಿ, ನೀನು ಬಂದ ದಾರಿಯಿಂದಲೇ ನಿನ್ನನ್ನು ಹಿಂದಿರುಗಿಸುವೆನು.


ಅವನ ದೇಹವು ಮಗುವಿನ ದೇಹಕ್ಕಿಂತ ಮೃದುವಾಗಿರಲಿ; ಅವನು ಪುನಃ ತನ್ನ ಯೌವನದ ದಿನಗಳಿಗೆ ಹಿಂದಿರುಗಲಿ,’ ಎಂದು ಹೇಳುತ್ತಿದ್ದನು.


ಅವನು ಗಿಬ್ಯೋನಿನಲ್ಲಿರುವಾಗ ರಾತ್ರಿಯಲ್ಲಿ ಸ್ವಪ್ನದೊಳಗೆ ಯೆಹೋವ ದೇವರು ಸೊಲೊಮೋನನಿಗೆ ಕಾಣಿಸಿಕೊಂಡರು. ದೇವರು ಅವನಿಗೆ, “ನಾನು ನಿನಗೆ ಏನು ವರ ಕೊಡಬೇಕು? ಕೇಳಿಕೋ,” ಎಂದರು.


ಆಮೇಲೆ ನೀವು ನಿಮ್ಮ ದೇವರಾದ ಯೆಹೋವ ದೇವರ ಮುಂದೆ, “ಅರಾಮ್ಯನಾದ ನಮ್ಮ ಮೂಲಪಿತೃವು ಗತಿಯಿಲ್ಲದವನಾಗಿ ಅಲೆದಾಡುತ್ತಾ ಸ್ವಲ್ಪ ಜನರೊಡನೆ ಈಜಿಪ್ಟ್ ದೇಶಕ್ಕೆ ಹೋಗಿ ಅಲ್ಲಿ ಇಳಿದುಕೊಂಡನು. ಅಲ್ಲಿ ಅವನ ಸಂತಾನದವರು ಹೆಚ್ಚಿ ಬಲಿಷ್ಠವಾದ ಮಹಾಜನಾಂಗವಾದರು.


ಆಗ ಯೆಹೋವ ದೇವರ ದೂತನು ಮುಂದೆ ಹೋಗಿ ಬಲಕ್ಕೂ ಎಡಕ್ಕೂ ತಿರುಗುವುದಕ್ಕೆ ಮಾರ್ಗವಿಲ್ಲದ ಇಕ್ಕಟ್ಟಿನ ಸ್ಥಳದಲ್ಲಿ ನಿಂತನು.


ಆಗ ದೇವರು ಬಿಳಾಮನ ಬಳಿಗೆ ರಾತ್ರಿಯಲ್ಲಿ ಬಂದು ಅವನಿಗೆ, “ಈ ಮನುಷ್ಯರು ನಿನ್ನನ್ನು ಕರೆಯುವುದಕ್ಕೆ ಬಂದಿದ್ದರೆ, ನೀನು ಎದ್ದು ಅವರ ಸಂಗಡ ಹೋಗು. ಆದರೆ ನಾನು ನಿನಗೆ ಹೇಳುವ ಮಾತಿನಂತೆಯೇ ನೀನು ಮಾಡಬೇಕು,” ಎಂದರು.


ಯೆಹೋವ ದೇವರು ಅವರಿಗೆ ಹೀಗೆ ಹೇಳಿದನು, “ನನ್ನ ಮಾತುಗಳನ್ನು ಈಗ ಕೇಳಿರಿ: “ನಿಮ್ಮಲ್ಲಿ ಒಬ್ಬ ಪ್ರವಾದಿ ಇದ್ದರೆ ಯೆಹೋವ ದೇವರಾದ ನಾನು ದರ್ಶನದಲ್ಲಿ ಪ್ರಕಟಿಸುವೆನು, ಇಲ್ಲವೆ ಕನಸಿನಲ್ಲಿಯೂ ನಾನು ಅವನೊಡನೆ ಮಾತನಾಡುವೆನು.


ಎರಡು ಪೂರ್ಣ ವರ್ಷಗಳು ಕಳೆದ ಮೇಲೆ ಫರೋಹನು ಒಂದು ಕನಸನ್ನು ಕಂಡನು. ಆ ಕನಸಿನಲ್ಲಿ ಅವನು ನೈಲ್ ನದಿಯ ಬಳಿಯಲ್ಲಿ ನಿಂತಿದ್ದನು.


ಅವರಿಬ್ಬರಿಗೂ ಅಂದರೆ, ಈಜಿಪ್ಟ್ ದೇಶದ ಅರಸನು ಸೆರೆಯಲ್ಲಿ ಹಾಕಿಸಿದ್ದ ಪಾನದಾಯಕನಿಗೂ, ರೊಟ್ಟಿಗಾರನಿಗೂ ಒಂದೇ ರಾತ್ರಿ ಕನಸು ಬಿತ್ತು. ಅವರವರ ಕನಸಿಗೆ ಅದರದೇ ಆದ ಅರ್ಥವಿತ್ತು.


“ಇದಲ್ಲದೆ ಕುರಿಗಳು ಸಂಗಮ ಮಾಡುವಾಗ, ಸ್ವಪ್ನದಲ್ಲಿ ನಾನು ನನ್ನ ಕಣ್ಣುಗಳನ್ನೆತ್ತಿ ನೋಡಲಾಗಿ, ಕುರಿಗಳ ಮೇಲೆ ಏರುವ ಟಗರುಗಳು ಚುಕ್ಕೆ, ಮಚ್ಚೆ, ರೇಖೆಗಳುಳ್ಳವುಗಳಾಗಿದ್ದವು.


ಇಸಾಕನು ಯಾಕೋಬನನ್ನು ಕಳುಹಿಸಿದಾಗ, ಅವನು ಪದ್ದನ್ ಅರಾಮಿನಲ್ಲಿದ್ದ ಯಾಕೋಬನ ಮತ್ತು ಏಸಾವನ ತಾಯಿ ರೆಬೆಕ್ಕಳ ಸಹೋದರ ಅರಾಮಿನವನಾದ ಬೆತೂಯೇಲನ ಮಗನಾಗಿದ್ದ ಲಾಬಾನನ ಬಳಿಗೆ ಹೋದನು.


ಅನಂತರ ಅವರು ಕನಸಿನಲ್ಲಿ ಹೆರೋದನ ಬಳಿಗೆ ಹಿಂತಿರುಗಬಾರದೆಂಬ ಎಚ್ಚರಿಕೆಯನ್ನು ಹೊಂದಿದ್ದರಿಂದ, ಬೇರೆ ದಾರಿಯಿಂದ ತಮ್ಮ ದೇಶಕ್ಕೆ ಹೊರಟು ಹೋದರು.


ಅದಕ್ಕೆ ದೇವರು ಕನಸಿನಲ್ಲಿ ಅವನಿಗೆ, “ಹೌದು, ನೀನು ಇದನ್ನು ಯಥಾರ್ಥವಾದ ಹೃದಯದಿಂದಲೇ ಮಾಡಿದ್ದೀಯೆ ಎಂದು ನನಗೂ ತಿಳಿದಿದೆ. ಆದ್ದರಿಂದ ನೀನು ನನಗೆ ವಿರೋಧವಾಗಿ ಪಾಪಮಾಡದಂತೆ ನಾನು ನಿನ್ನನ್ನು ತಡೆದು, ಆಕೆಯನ್ನು ಮುಟ್ಟಗೊಡಿಸಲಿಲ್ಲ.


ಆದರೆ ನಿಮ್ಮ ತಂದೆಯು ನನಗೆ ವಂಚನೆಮಾಡಿ, ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿದನು. ಆದಾಗ್ಯೂ ದೇವರು ಅವನಿಂದ ನನಗೆ ಕೇಡು ಮಾಡಗೊಡಿಸಲಿಲ್ಲ.


ದೇವದೂತನು ಸ್ವಪ್ನದಲ್ಲಿ ನನಗೆ, ‘ಯಾಕೋಬನೇ’ ಎಂದನು. ಅದಕ್ಕೆ ನಾನು, ‘ಇಲ್ಲಿ ಇದ್ದೇನೆ,’ ಎಂದೆನು.


ಆಗ ಅವನು ತನ್ನ ಬಂಧುಗಳನ್ನು ಕರೆದುಕೊಂಡು, ಅವನನ್ನು ಬೆನ್ನಟ್ಟಿ, ಏಳು ದಿನ ಪ್ರಯಾಣಮಾಡಿ, ಗಿಲ್ಯಾದ್ ಪರ್ವತದಲ್ಲಿ ಅವನನ್ನು ಸಂಧಿಸಿದನು.


ತರುವಾಯ ಲಾಬಾನನು ಯಾಕೋಬನನ್ನು ಸಂಧಿಸಿದಾಗ, ಯಾಕೋಬನು ಗಿಲ್ಯಾದ್ ಪರ್ವತದಲ್ಲಿ ತನ್ನ ಗುಡಾರವನ್ನು ಹಾಕಿಕೊಂಡಿದ್ದನು. ಲಾಬಾನನು ಸಹ ಅಲ್ಲಿಯೇ ಗುಡಾರವನ್ನು ಹಾಕಿಸಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು