Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:28 - ಕನ್ನಡ ಸಮಕಾಲಿಕ ಅನುವಾದ

28 ಆದರೆ ನೀನು ನನ್ನ ಮೊಮ್ಮಕ್ಕಳಿಗೂ, ನನ್ನ ಹೆಣ್ಣು ಮಕ್ಕಳಿಗೂ ಮುದ್ದು ಕೊಡುವುದಕ್ಕೂ ಬಿಡಲಿಲ್ಲ. ನೀನು ಮಾಡಿದ್ದು ಬುದ್ಧಿಹೀನ ಕೆಲಸವೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆದರೆ ನೀನು ನನ್ನ ಹೆಣ್ಣು ಮಕ್ಕಳಿಗೂ ಮೊಮ್ಮಕ್ಕಳಿಗೂ, ಮುದ್ದಿಡುವುದಕ್ಕಾದರೂ ಆಗದಂತೆ ಮಾಡಿದಿ. ನೀನು ಮಾಡಿದ್ದು ಹುಚ್ಚು ಕೆಲಸ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ನನ್ನ ಹೆಣ್ಣು ಮಕ್ಕಳಿಗೂ ಮೊಮ್ಮಕ್ಕಳಿಗೂ ಮುದ್ದಿಟ್ಟು ಬೀಳ್ಕೊಡಲೂ ಆಗದಂತೆ ಮಾಡಿದೆ. ನೀನು ಮಾಡಿದ್ದು ಎಂಥ ಹುಚ್ಚು ಕೆಲಸ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನನ್ನ ಹೆಣ್ಣುಮಕ್ಕಳಿಗೂ ಮೊಮ್ಮಕ್ಕಳಿಗೂ ಮುದ್ದಿಡುವದಕ್ಕಾದರೂ ಆಗದಂತೆ ಮಾಡಿದಿ. ನೀನು ಮಾಡಿದ್ದು ಹುಚ್ಚು ಕೆಲಸವೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ನಾನು ನನ್ನ ಮೊಮ್ಮಕ್ಕಳಿಗೆ ಮುದ್ದಿಡುವುದಕ್ಕೂ ನನ್ನ ಹೆಣ್ಣುಮಕ್ಕಳನ್ನು ಬೀಳ್ಕೊಡುವುದಕ್ಕೂ ನೀನು ನನಗೆ ಅವಕಾಶ ಕೊಡಲಿಲ್ಲ. ನಿನ್ನ ಮೂಢತನದಿಂದ ಹೀಗೆ ಮಾಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:28
15 ತಿಳಿವುಗಳ ಹೋಲಿಕೆ  

ಮುಂಜಾನೆ ಲಾಬಾನನು ಎದ್ದು ತನ್ನ ಪುತ್ರ ಪುತ್ರಿಯರಿಗೆ ಮುದ್ದಿಟ್ಟು ಅವರನ್ನು ಆಶೀರ್ವದಿಸಿದನು. ಲಾಬಾನನು ಹೊರಟು ತನ್ನ ಸ್ಥಳಕ್ಕೆ ಹಿಂದಿರುಗಿ ಹೋದನು.


ಅವರೆಲ್ಲರೂ ಪೌಲನ ಕೊರಳನ್ನು ಅಪ್ಪಿಕೊಂಡು ಕಣ್ಣೀರಿಡುತ್ತಾ ಅವನಿಗೆ ಮುದ್ದಿಟ್ಟರು.


ಆಗ ಅವನು ಎತ್ತುಗಳನ್ನು ಬಿಟ್ಟು, ಎಲೀಯನ ಹಿಂದೆ ಓಡಿಹೋಗಿ ಅವನಿಗೆ, “ಅಪ್ಪಣೆಯಾದರೆ, ನಾನು ನನ್ನ ತಂದೆತಾಯಿಗಳನ್ನು ಮುದ್ದಿಟ್ಟು ಬಂದು ನಿನ್ನನ್ನು ಹಿಂಬಾಲಿಸುವೆನು,” ಎಂದನು. ಎಲೀಯನು, “ಹೋಗು, ನಾನು ನಿನಗೆ ಏನು ಮಾಡಿದೆ?” ಎಂದನು.


ಆಗ ಅವರು ತಿರುಗಿ ಗಟ್ಟಿಯಾದ ಸ್ವರದಿಂದ ಅತ್ತರು. ಒರ್ಫಾ ತನ್ನ ಅತ್ತೆಯನ್ನು ಮುದ್ದಿಟ್ಟು ಹೊರಟು ಹೋದಳು; ಆದರೆ ರೂತಳು ಅತ್ತೆಯನ್ನು ಅಂಟಿಕೊಂಡಳು.


ಆದರೆ ಭೌತಿಕ ಮನುಷ್ಯನು ದೇವರಾತ್ಮರ ವಿಷಯಗಳನ್ನು ಸ್ವೀಕರಿಸುವುದಿಲ್ಲ. ಅವು ಅವನಿಗೆ ಬುದ್ಧಿಹೀನವಾಗಿ ತೋರುತ್ತವೆ. ಏಕೆಂದರೆ ಆತ್ಮಿಕ ವಿವೇಚನೆಯಿಂದ ತಿಳಿಯಬೇಕಾಗಿದ್ದ ಕಾರಣ ಅವನು ಅವುಗಳನ್ನು ತಿಳಿದುಕೊಳ್ಳಲಾರನು.


ಏಕೆಂದರೆ ಯೆಹೋವ ದೇವರಿಗೆ ಪೂರ್ಣವಾಗಿ ಸಮರ್ಪಿಸಿಕೊಂಡವರ ಹೃದಯವನ್ನು ಬಲಪಡಿಸುವುದಕ್ಕೆ ಅವರ ಕಣ್ಣುಗಳು ಭೂಲೋಕದ ಎಲ್ಲಾ ಕಡೆ ಇವೆ. ಆದರೆ ಈಗ ನೀನು ಬುದ್ಧಿಹೀನನಾಗಿ ನಡೆದುಕೊಂಡಿದ್ದೀಯೆ. ನಿಶ್ಚಯವಾಗಿ ಇಂದಿನಿಂದ ನಿನಗೆ ಯುದ್ಧಗಳು ಇದ್ದೇ ಇರುತ್ತವೆ,” ಎಂದನು.


ಸಮುಯೇಲನು ಸೌಲನಿಗೆ, “ನೀನು ಬುದ್ಧಿಹೀನವಾದ ಕೆಲಸಮಾಡಿದ್ದೀ; ನಿನ್ನ ದೇವರಾದ ಯೆಹೋವ ದೇವರು ನಿನಗೆ ಆಜ್ಞಾಪಿಸಿದ ಆಜ್ಞೆಯನ್ನು ಕೈಗೊಳ್ಳಲಿಲ್ಲ. ಯೆಹೋವ ದೇವರು ಇಸ್ರಾಯೇಲರಲ್ಲಿ ನಿನ್ನ ರಾಜ್ಯವನ್ನು ಎಂದೆಂದಿಗೂ ಸ್ಥಿರಪಡಿಸುವುದಕ್ಕೆ ಇದ್ದರು.


ನೀವು ಮದುವೆಯಾಗಿ ನಿಮ್ಮ ಗಂಡನ ಮನೆಯಲ್ಲಿ ವಿಶ್ರಾಂತಿ ಹೊಂದುವಂತೆ, ಯೆಹೋವ ದೇವರು ಆಶೀರ್ವದಿಸಲಿ,” ಎಂದು ಹೇಳಿದಳು. ನಂತರ ನೊವೊಮಿಯು ಅವರಿಗೆ ಮುದ್ದಿಟ್ಟಳು.


ಇದಲ್ಲದೆ ಯೆಹೋವ ದೇವರು ಆರೋನನಿಗೆ, “ಮೋಶೆಯನ್ನು ಎದುರುಗೊಳ್ಳುವದಕ್ಕೆ ಮರುಭೂಮಿಗೆ ಹೋಗು,” ಎಂದರು. ಆಗ ಅವನು ಹೋಗಿ ದೇವರ ಬೆಟ್ಟದಲ್ಲಿ ಮೋಶೆಯನ್ನು ಎದುರುಗೊಂಡು ಮುದ್ದಿಟ್ಟನು.


ಆ ರಾತ್ರಿ ದೇವರು ಸ್ವಪ್ನದಲ್ಲಿ ಅರಾಮಿನವನಾದ ಲಾಬಾನನ ಬಳಿಗೆ ಬಂದು ಅವನಿಗೆ, “ನೀನು ಯಾಕೋಬನ ಸಂಗಡ ಒಳ್ಳೆಯದನ್ನಾಗಲಿ, ಕೆಟ್ಟದ್ದನ್ನಾಗಲಿ ಮಾತನಾಡದಂತೆ ಎಚ್ಚರಿಕೆಯಾಗಿರು,” ಎಂದರು.


ನೀನು ಸ್ತಂಭವನ್ನು ಅಭಿಷೇಕಿಸಿ, ನನಗೆ ಪ್ರಮಾಣ ಮಾಡಿದ ಬೇತೇಲಿನ ದೇವರು ನಾನೇ. ಈಗ ಎದ್ದು ಈ ದೇಶದಿಂದ ಹೊರಟು, ನಿನ್ನ ಬಂಧುಗಳ ದೇಶಕ್ಕೆ ಹಿಂದಿರುಗಿ ಹೋಗು,’ ಎಂದು ಹೇಳಿದ್ದಾರೆ,” ಎಂದನು.


ಆಗ ಯೆಹೋವ ದೇವರು ಯಾಕೋಬನಿಗೆ, “ನಿನ್ನ ತಂದೆಗಳ ದೇಶಕ್ಕೂ, ನಿನ್ನ ಬಂಧುಗಳ ಬಳಿಗೂ ಹಿಂದಿರುಗಿ ಹೋಗು. ನಾನು ನಿನ್ನ ಸಂಗಡ ಇರುವೆನು,” ಎಂದರು.


ಲಾಬಾನನು ತನ್ನ ಸಹೋದರಿಯ ಮಗ ಯಾಕೋಬನ ಸುದ್ದಿಯನ್ನು ಕೇಳಿದಾಗ, ಅವನನ್ನು ಎದುರುಗೊಳ್ಳುವುದಕ್ಕೆ ಓಡಿಬಂದು ಅವನನ್ನು ಅಪ್ಪಿಕೊಂಡು ಮುದ್ದಿಟ್ಟನು. ಅವನನ್ನು ಮನೆಗೆ ಕರೆದುಕೊಂಡು ಬಂದನು. ಅವನು ಲಾಬಾನನಿಗೆ ಎಲ್ಲಾ ವಿಷಯಗಳನ್ನು ತಿಳಿಸಿದನು.


ನಿನಗೆ ಕೇಡು ಮಾಡುವುದಕ್ಕೆ ನನ್ನ ಕೈಯಲ್ಲಿ ಸಾಮರ್ಥ್ಯ ಇದೆ. ಆದರೆ ನಿನ್ನ ತಂದೆಯ ದೇವರು ನಿನ್ನೆ ರಾತ್ರಿ ನನ್ನ ಸಂಗಡ ಮಾತನಾಡಿ, ‘ನೀನು ಯಾಕೋಬನ ಸಂಗಡ ಒಳ್ಳೆಯದನ್ನಾಗಲಿ, ಕೆಟ್ಟದ್ದನ್ನಾಗಲಿ ಹೇಳದಂತೆ ಎಚ್ಚರವಾಗಿರು,’ ಎಂದು ಹೇಳಿದರು.


ಅನಂತರ ಯಾಕೋಬನು ತನ್ನ ಮಾರ್ಗವಾಗಿ ಹೋಗುತ್ತಿದ್ದಾಗ, ದೇವದೂತರು ಅವನ ಎದುರಿಗೆ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು