Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:35 - ಕನ್ನಡ ಸಮಕಾಲಿಕ ಅನುವಾದ

35 ರಾಹೇಲಳು ತನ್ನ ತಂದೆಗೆ, “ಅಪ್ಪಾ, ನಾನು ನಿನ್ನ ಮುಂದೆ ಎದ್ದು ನಿಂತುಕೊಳ್ಳದೇ ಇರುವುದರಿಂದ, ನನ್ನ ಮೇಲೆ ಕೋಪಬಾರದೆ ಇರಲಿ. ಏಕೆಂದರೆ ನಾನು ಮುಟ್ಟಾಗಿದ್ದೇನೆ,” ಎಂದಳು. ಅವನು ಹುಡುಕಿ ಆ ವಿಗ್ರಹಗಳನ್ನು ಕಂಡುಕೊಳ್ಳದೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ರಾಹೇಲಳು ತನ್ನ ತಂದೆಗೆ, “ಅಪ್ಪಾ, ನಾನು ನಿನ್ನ ಮುಂದೆ ಎದ್ದು ನಿಂತುಕೊಳ್ಳದೆ ಹೋದರೂ ಕೋಪಿಸಿಕೊಳ್ಳಬೇಡ, ನಾನು ಮೈಲಿಗೆಯಾಗಿದ್ದೇನೆ” ಎಂದು ಹೇಳಿದಳು. ಅವನು ಚೆನ್ನಾಗಿ ಹುಡುಕಿದರೂ ಆ ವಿಗ್ರಹಗಳನ್ನು ಕಂಡುಕೊಳ್ಳದೆ ಹೊರಟು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ರಾಖೇಲಳು ತನ್ನ ತಂದೆಗೆ, “ಅಪ್ಪಾ, ನಾನು ನಿಮ್ಮ ಮುಂದೆ ಎದ್ದು ನಿಂತುಕೊಳ್ಳಲಾಗದೆ ಇದ್ದೇನೆ, ಕೋಪಿಸಿಕೊಳ್ಳಬೇಡಿ, ನಾನು ಮುಟ್ಟಾಗಿದ್ದೇನೆ,” ಎಂದು ಹೇಳಿದಳು. ಎಂದೇ ಲಾಬಾನನು ಎಷ್ಟು ಹುಡುಕಿ ನೋಡಿದರೂ ಆ ವಿಗ್ರಹಗಳನ್ನು ಕಂಡುಹಿಡಿಯಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ರಾಹೇಲಳು ತನ್ನ ತಂದೆಗೆ - ಅಪ್ಪಾ, ನಾನು ನಿನ್ನ ಮುಂದೆ ಎದ್ದು ನಿಂತುಕೊಳ್ಳದೆ ಹೋದರೂ ಕೋಪಿಸಿಕೊಳ್ಳಬೇಡ; ನಾನು ಮುಟ್ಟಾಗಿದ್ದೇನೆ ಎಂದು ಹೇಳಿದ್ದರಿಂದ ಅವನು ಚೆನ್ನಾಗಿ ಹುಡುಕಿದರೂ ಆ ವಿಗ್ರಹಗಳನ್ನು ಕಂಡುಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಆಗ ರಾಹೇಲಳು ತನ್ನ ತಂದೆಗೆ, “ಅಪ್ಪಾ, ನನ್ನ ಮೇಲೆ ಕೋಪಗೊಳ್ಳಬೇಡ. ನಿನ್ನ ಮುಂದೆ ನಿಂತುಕೊಳ್ಳಲು ನನಗೆ ಸಾಧ್ಯವಿಲ್ಲ. ಯಾಕೆಂದರೆ ನಾನು ಮುಟ್ಟಾಗಿದ್ದೇನೆ” ಎಂದು ಹೇಳಿದಳು. ಲಾಬಾನನು ಪಾಳೆಯದಲ್ಲೆಲ್ಲಾ ಹುಡುಕಿದರೂ ತನ್ನ ವಿಗ್ರಹಗಳನ್ನು ಕಂಡುಕೊಳ್ಳಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:35
12 ತಿಳಿವುಗಳ ಹೋಲಿಕೆ  

“ ‘ತಲೆ ನೆರೆತ ವೃದ್ಧರ ಮುಂದೆ ಎದ್ದು ನಿಂತುಕೊಳ್ಳಬೇಕು, ಅವರ ಸಮ್ಮುಖವನ್ನು ಗೌರವಿಸು. ನಿನ್ನ ದೇವರಿಗೆ ಭಯಪಡಬೇಕು. ನಾನೇ ಯೆಹೋವ ದೇವರು.


ನಿನ್ನ ದೇವರಾದ ಯೆಹೋವ ದೇವರು ನಿನಗೆ ಕೊಡುವ ದೇಶದಲ್ಲಿ ನೀನು ಬಹುಕಾಲ ಬಾಳುವಂತೆ ನಿನ್ನ ತಂದೆತಾಯಿಗಳನ್ನು ಗೌರವಿಸು.


ಹಾಗೆಯೇ ಸಾರಳು ಅಬ್ರಹಾಮನಿಗೆ ವಿಧೇಯಳಾಗಿದ್ದು ಅವನನ್ನು “ಯಜಮಾನ” ಎಂದು ಕರೆದಳು. ನೀವು ಸಾರಳ ಪುತ್ರಿಯರಾಗಿದ್ದೀರಲ್ಲಾ. ನೀವು ಒಳ್ಳೆಯದು ಯಾವುದೋ ಅದನ್ನು ಮಾಡುವುದಾದರೆ ಯಾವುದಕ್ಕೂ ಭಯಪಡಬೇಕಾಗಿರುವುದಿಲ್ಲ.


ದಾಸರೇ, ಯಜಮಾನರಿಗೆ ಅಧೀನರಾಗಿರಿ. ನೀವು ಅವರಲ್ಲಿ ಒಳ್ಳೆಯ ಯಜಮಾನರಿಗೆ ಮಾತ್ರವಲ್ಲ, ಕ್ರೂರ ಯಜಮಾನರಿಗೂ ಪೂರ್ಣಭಯಭಕ್ತಿಯಿಂದ ಅಧೀನರಾಗಿರಿ.


ಮಕ್ಕಳೇ, ನೀವು ಕರ್ತನಲ್ಲಿ ನಿಮ್ಮ ತಂದೆತಾಯಿಗಳಿಗೆ ವಿಧೇಯರಾಗಿರಿ, ಇದು ಸೂಕ್ತವಾದದ್ದು.


ಆದ್ದರಿಂದ ಬತ್ಷೆಬೆಳು ಅದೋನೀಯನಿಗೋಸ್ಕರ ಮಾತನಾಡುವುದಕ್ಕೆ ಅರಸನಾದ ಸೊಲೊಮೋನನ ಬಳಿಗೆ ಹೋದಳು. ಅರಸನು ಅವಳನ್ನು ಎದುರುಗೊಳ್ಳಲು ಎದ್ದು, ಅವಳಿಗೆ ಅಡ್ಡಬಿದ್ದು, ತಾನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡು ರಾಜಮಾತೆಗೋಸ್ಕರ ಆಸನವನ್ನು ಹಾಕಿಸಿದನು. ಅವಳು ಅವನ ಬಲಗಡೆಯಲ್ಲಿ ಕುಳಿತುಕೊಂಡಳು.


“ ‘ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತಾಯಿಗೂ ತನ್ನ ತಂದೆಗೂ ಭಯಪಟ್ಟು, ನನ್ನ ವಿಶ್ರಾಂತಿಯ ದಿನಗಳನ್ನು ಕೈಗೊಳ್ಳಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.


“ ‘ಒಬ್ಬ ಸ್ತ್ರೀಗೆ ತನ್ನ ಶರೀರದಲ್ಲಿ ರಕ್ತ ಸ್ರಾವವಿದ್ದರೆ, ಅವಳು ಏಳು ದಿವಸಗಳವರೆಗೆ ಪ್ರತ್ಯೇಕವಾಗಿರಬೇಕು, ಅವಳನ್ನು ಯಾರಾದರೂ ಮುಟ್ಟಿದರೆ, ಅವರು ಸಂಜೆಯವರೆಗೆ ಅಶುದ್ಧರಾಗಿರುವರು.


ಲಾಬಾನನು ತನ್ನ ಕುರಿಗಳ ಉಣ್ಣೆ ಕತ್ತರಿಸುವುದಕ್ಕೆ ಹೋಗಿದ್ದನು. ಆಗ ರಾಹೇಲಳು ತನ್ನ ತಂದೆಯ ವಿಗ್ರಹಗಳನ್ನು ಕದ್ದುಕೊಂಡಳು.


ಆದರೆ ರಾಹೇಲಳು ವಿಗ್ರಹಗಳನ್ನು ತೆಗೆದುಕೊಂಡು ಒಂಟೆಯ ಸಾಮಗ್ರಿಯಲ್ಲಿಟ್ಟು, ಅದರ ಮೇಲೆ ಕುಳಿತುಕೊಂಡಳು. ಲಾಬಾನನು ಗುಡಾರವನ್ನೆಲ್ಲಾ ಹುಡುಕಿದರೂ, ಅವನು ಅವುಗಳನ್ನು ಕಾಣಲಿಲ್ಲ.


ಆಗ ಯಾಕೋಬನು ಕೋಪಗೊಂಡು ಲಾಬಾನನೊಂದಿಗೆ ವಾದಿಸಿದನು. ಯಾಕೋಬನು ಉತ್ತರವಾಗಿ ಲಾಬಾನನಿಗೆ, “ನೀನು ನನ್ನನ್ನು ಬೆನ್ನಟ್ಟಿ ಬರುವುದಕ್ಕೆ ನನ್ನ ಅಪರಾಧವೇನು?” ನನ್ನ ಪಾಪವೇನು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು