Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:39 - ಕನ್ನಡ ಸಮಕಾಲಿಕ ಅನುವಾದ

39 ಮೃಗಗಳಿಂದ ಘಾಯವಾದವುಗಳನ್ನು ನಿನ್ನ ಬಳಿಗೆ ತಾರದೆ, ಅವುಗಳ ನಷ್ಟವನ್ನು ನಾನೇ ಹೊತ್ತೆನು. ಹಗಲಲ್ಲಿ ಕದ್ದದ್ದನ್ನೂ, ರಾತ್ರಿಯಲ್ಲಿ ಕದ್ದದ್ದನ್ನೂ ನನ್ನಿಂದಲೇ ತೆಗೆದುಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಕಾಡುಮೃಗಗಳಿಂದ ಕೊಲ್ಲಲ್ಪಟ್ಟ ಕುರಿ, ಆಡುಗಳನ್ನು ನಿನ್ನ ಭಾಗಕ್ಕೆ ಹಾಕದೆ ನಾನೇ ನಷ್ಟವನ್ನು ಹೊತ್ತೆನು. ಹಗಲಿನಲ್ಲಿ, ಇರುಳಿನಲ್ಲಿ ಕಳೆದು ಹೋದದ್ದರ ಲೆಕ್ಕವನ್ನು ನನ್ನಿಂದ ತೆಗೆದುಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಕಾಡುಮೃಗಗಳು ಕೊಂದ ಆಡುಕುರಿಗಳ ಅಳಿದುಳಿಕೆಗಳನ್ನು ನಿಮಗೆ ತಂದುತೋರಿಸದೆ, ನಾನೇ ಈಡು ತೆತ್ತಿದ್ದೇನೆ. ಹಗಲಲ್ಲಾಗಲಿ ರಾತ್ರಿಯಲ್ಲಾಗಲಿ ಕದ್ದುಹೋದ ಜಾನುವಾರುಗಳಿಗೆ ಪರಿಹಾರವನ್ನು ನನ್ನ ಕೈಯಿಂದಲೆ ಕಿತ್ತುಕೊಂಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಕಾಡುಮೃಗಗಳು ಕೊಂದ ಪಶುಗಳನ್ನು ನಿನ್ನ ಭಾಗಕ್ಕೆ ಹಾಕದೆ ನಾನೇ ಬದಲುಕೊಟ್ಟೆನು; ಹಗಲಾಗಲಿ ಇರುಳಾಗಲಿ ಕದ್ದುಹೋದದ್ದರ ಲೆಕ್ಕವನ್ನು ನನ್ನಿಂದಲೇ ತೆಗೆದುಕೊಂಡಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಕ್ರೂರ ಮೃಗಗಳು ಕುರಿಯನ್ನು ಕೊಂದಾಗಲೆಲ್ಲಾ ಅದಕ್ಕೆ ಬದಲಾಗಿ ನನ್ನ ಕುರಿಯನ್ನು ನಿನಗೆ ಕೊಟ್ಟೆನು. ಸತ್ತುಹೋದ ಪಶುವನ್ನು ನಿನ್ನ ಮುಂದೆ ತಂದು, ‘ಇದು ನನ್ನ ತಪ್ಪಲ್ಲ’ ಎಂದು ನಿನಗೆ ಹೇಳಲಿಲ್ಲ. ಕಳುವು ಹಗಲಲ್ಲಾಗಿದ್ದರೂ ರಾತ್ರಿಯಲ್ಲಾಗಿದ್ದರೂ ಕಳುವಾದ ಪಶುಗಳಿಗೆ ಪ್ರತಿಯಾಗಿ ಪಶುಗಳನ್ನು ನೀನು ನನ್ನಿಂದ ವಸೂಲಿ ಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:39
9 ತಿಳಿವುಗಳ ಹೋಲಿಕೆ  

ಅದೇ ಸೀಮೆಯಲ್ಲಿ ಕುರುಬರು ಹೊಲದಲ್ಲಿದ್ದು, ರಾತ್ರಿಯಲ್ಲಿ ತಮ್ಮ ಹಿಂಡನ್ನು ಕಾಯುತ್ತಿದ್ದರು.


ತನ್ನನ್ನು ಅಶುದ್ಧಮಾಡಿಕೊಳ್ಳದಂತೆ ತನ್ನಷ್ಟಕ್ಕೆ ತಾನೇ ಸತ್ತಿರುವುದನ್ನಾಗಲಿ ಇಲ್ಲವೆ ಕಾಡುಮೃಗಗಳಿಂದ ಕೊಂದದ್ದನ್ನಾಗಲಿ ತಿನ್ನಬಾರದು. ನಾನೇ ಯೆಹೋವ ದೇವರು.


“ನೀವು ನನಗೆ ಪರಿಶುದ್ಧ ಜನರಾಗಿರಬೇಕು. ಆದ್ದರಿಂದ ಹೊಲದಲ್ಲಿ ಕಾಡುಮೃಗ ಕೊಂದದ್ದನ್ನು ನೀವು ತಿನ್ನಬಾರದು, ಅದನ್ನು ನಾಯಿಗಳಿಗೆ ಹಾಕಬೇಕು.


“ಈ ಇಪ್ಪತ್ತು ವರ್ಷ ನಾನು ನಿನ್ನ ಸಂಗಡ ಇದ್ದೆನು. ನಿನ್ನ ಕುರಿಗಳೂ, ಮೇಕೆಗಳೂ ಮರಿ ಹಾಕಲಿಲ್ಲ. ನಿನ್ನ ಕುರಿ ಹೋತಗಳನ್ನು ನಾನು ತಿನ್ನಲಿಲ್ಲ.


ನನ್ನ ಸ್ಥಿತಿ ಹೀಗೆ ಇತ್ತು: ಹಗಲಲ್ಲಿ ಬಿಸಿಲಿನಿಂದಲೂ ಇರುಳಲ್ಲಿ ಚಳಿಯಿಂದಲೂ ಬಾಧೆಪಟ್ಟೆನು. ನನ್ನ ಕಣ್ಣುಗಳಿಗೆ ನಿದ್ರೆ ತಪ್ಪಿಹೋಯಿತು.


ಎತ್ತು, ಕತ್ತೆ, ಕುರಿ ವಸ್ತ್ರಗಳ ವಿಷಯವಾದ ಎಲ್ಲಾ ಅಪರಾಧಗಳಿಗೋಸ್ಕರ ಇಲ್ಲವೆ ಕಳೆದುಹೋದ ಯಾವ ತರದ ವಸ್ತುಗಳ ವಿಷಯದಲ್ಲಿ ಒಬ್ಬನು ಇನ್ನೊಬ್ಬನ ಬಳಿಯಲ್ಲಿ ಅದನ್ನು ಕಂಡು, ‘ಇದು ತನ್ನದೆಂದು,’ ಹೇಳಿದ ಪಕ್ಷಕ್ಕೆ ಆ ಇಬ್ಬರ ವ್ಯಾಜ್ಯವು ದೇವರ ಸನ್ನಿಧಿಗೆ ಬರಬೇಕು. ನ್ಯಾಯಾಧಿಪತಿಗಳು ಯಾರನ್ನು ಅಪರಾಧಿಯೆಂದು ನಿರ್ಣಯಿಸುವರೋ, ಅವನು ಎರಡರಷ್ಟು ತನ್ನ ನೆರೆಯವನಿಗೆ ಕೊಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು