Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:42 - ಕನ್ನಡ ಸಮಕಾಲಿಕ ಅನುವಾದ

42 ನನ್ನ ತಂದೆ ದೇವರೂ, ಅಬ್ರಹಾಮನ ದೇವರೂ, ಇಸಾಕನ ಭಯವೂ ನನ್ನೊಂದಿಗೆ ಇಲ್ಲದೆ ಹೋಗಿದ್ದರೆ, ನಿಶ್ಚಯವಾಗಿ ನೀನು ನನ್ನನ್ನು ಬರಿಗೈಯಿಂದ ಕಳುಹಿಸುತ್ತಿದ್ದೆ. ನನ್ನ ಬಾಧೆಯನ್ನೂ, ನನ್ನ ಕಷ್ಟವನ್ನೂ ದೇವರು ಕಂಡು, ನಿನ್ನೆ ರಾತ್ರಿ ನಿನ್ನನ್ನು ಗದರಿಸಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ನನ್ನ ತಂದೆಯ ದೇವರೂ, ಅಬ್ರಹಾಮನ ದೇವರೂ, ಇಸಾಕನು ಭಯಭಕ್ತಿಯಿಂದ ಸೇವಿಸಿದ ದೇವರು ನನ್ನೊಂದಿಗೆ ಇಲ್ಲದೆ ಹೋಗಿದ್ದರೆ, ನಿಶ್ಚಯವಾಗಿ ನೀನು ನನ್ನನ್ನು ಬರಿಗೈಯಿಂದ ಕಳುಹಿಸಿಬಿಡುತ್ತಿದ್ದೆ, ದೇವರು ನನ್ನ ಕಷ್ಟವನ್ನೂ ನಾನು ಪಟ್ಟ ಪ್ರಯಾಸ ಗೊತ್ತಿದ್ದರಿಂದಲೇ ನಿನ್ನೆಯ ರಾತ್ರಿ ನಿನ್ನನ್ನು ಗದರಿಸಿದನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ನನ್ನ ತಂದೆಯ ದೇವರು, ಅಬ್ರಹಾಮನ ದೇವರು, ಇಸಾಕನು ಭಯಭಕ್ತಿಯಿಂದ ಸೇವಿಸಿದ ದೇವರು ಆಗಿರುವಂಥವರು ನನ್ನ ಕಡೆ ಇಲ್ಲದೆ ಹೋಗಿದ್ದರೆ, ನಿಶ್ಚಯವಾಗಿ ನೀವು ನನ್ನನ್ನು ಬರಿಗೈಯಾಗಿ ಕಳುಹಿಸುತ್ತಿದ್ದಿರಿ. ದೇವರು ನನ್ನ ಕಷ್ಟದುಃಖವನ್ನೂ ನಾನು ಪಟ್ಟ ಪ್ರಯಾಸವನ್ನೂ ಗಮನಿಸಿದ್ದಾರೆ. ಆದ್ದರಿಂದಲೇ ನಿನ್ನೆಯ ರಾತ್ರಿ ನಿಮಗೆ ಎಚ್ಚರಿಕೆ ನೀಡಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ನನ್ನ ಹಿರಿಯರ ದೇವರು, ಅಂದರೆ ಅಬ್ರಹಾಮನ ದೇವರೂ ಇಸಾಕನು ಭಯಭಕ್ತಿಯಿಂದ ಸೇವಿಸುವ ದೇವರೂ ಆಗಿರುವಾತನು, ನನ್ನ ಪಕ್ಷದಲ್ಲಿ ಇರದಿದ್ದರೆ ನಿಶ್ಚಯವಾಗಿ ನೀನು ನನ್ನನ್ನು ಬರಿಗೈಯಾಗಿ ಕಳುಹಿಸುತ್ತಿದ್ದಿ. ದೇವರು ನನ್ನ ಕಷ್ಟವನ್ನೂ ನಾನು ಪಟ್ಟ ಪ್ರಯಾಸವನ್ನೂ ನೋಡಿದ್ದರಿಂದಲೇ ನಿನ್ನೆಯ ರಾತ್ರಿ ನಿನ್ನನ್ನು ಗದರಿಸಿದನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಆದರೆ ನನ್ನ ಪೂರ್ವಿಕರ ದೇವರೂ ಅಬ್ರಹಾಮನ ದೇವರೂ ಇಸಾಕನು ಭಯಪಡುವ ದೇವರೂ ನನ್ನ ಸಂಗಡವಿದ್ದನು. ದೇವರು ನನ್ನ ಜೊತೆಯಲ್ಲಿ ಇಲ್ಲದಿದ್ದರೆ ನೀನು ನನ್ನನ್ನು ಬರಿಗೈಲಿ ಕಳುಹಿಸಿಬಿಡುತ್ತಿದ್ದೆ. ಆದರೆ ನನ್ನ ಕಷ್ಟವನ್ನೂ ನಾನು ಮಾಡಿದ ಕೆಲಸವನ್ನೂ ದೇವರು ನೋಡಿದನು. ನಿನ್ನೆಯ ರಾತ್ರಿ ನಾನು ತಪ್ಪಿತಸ್ಥನಲ್ಲವೆಂದು ದೇವರು ನಿನಗೆ ತೋರಿಸಿಕೊಟ್ಟಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:42
22 ತಿಳಿವುಗಳ ಹೋಲಿಕೆ  

ನಿಮ್ಮ ಒಡಂಬಡಿಕೆಯ ಪ್ರೀತಿಯಲ್ಲಿ ಉಲ್ಲಾಸಿಸಿ ಸಂತೋಷ ಪಡುವೆನು; ಏಕೆಂದರೆ ನೀವು ನನ್ನ ಕಷ್ಟಗಳನ್ನು ಲಕ್ಷ್ಯಕ್ಕೆ ತಂದು, ನನ್ನ ಪ್ರಾಣದ ಸಂಕಟಗಳನ್ನು ಅರಿತಿದ್ದೀರಿ.


ನಿನಗೆ ಕೇಡು ಮಾಡುವುದಕ್ಕೆ ನನ್ನ ಕೈಯಲ್ಲಿ ಸಾಮರ್ಥ್ಯ ಇದೆ. ಆದರೆ ನಿನ್ನ ತಂದೆಯ ದೇವರು ನಿನ್ನೆ ರಾತ್ರಿ ನನ್ನ ಸಂಗಡ ಮಾತನಾಡಿ, ‘ನೀನು ಯಾಕೋಬನ ಸಂಗಡ ಒಳ್ಳೆಯದನ್ನಾಗಲಿ, ಕೆಟ್ಟದ್ದನ್ನಾಗಲಿ ಹೇಳದಂತೆ ಎಚ್ಚರವಾಗಿರು,’ ಎಂದು ಹೇಳಿದರು.


ಅಬ್ರಹಾಮನ ದೇವರು, ನಾಹೋರನ ದೇವರು, ಅವರ ತಂದೆಯ ದೇವರು ನಮ್ಮ ಮಧ್ಯದಲ್ಲಿ ನ್ಯಾಯತೀರಿಸಲಿ,” ಎಂದನು. ಆಗ ಯಾಕೋಬನು ತನ್ನ ತಂದೆ ಇಸಾಕನ ಭಯದ ಮೇಲೆ ಪ್ರಮಾಣ ಮಾಡಿದನು.


ಲೇಯಳು ಗರ್ಭಿಣಿಯಾಗಿ ಮಗನನ್ನು ಹೆತ್ತು, “ನಿಜವಾಗಿ ಯೆಹೋವ ದೇವರು ನನ್ನ ಬಾಧೆಯನ್ನು ನೋಡಿದ್ದಾರೆ. ಆದ್ದರಿಂದ ನನ್ನ ಗಂಡನು ನನ್ನನ್ನು ಪ್ರೀತಿ ಮಾಡುವನು,” ಎಂದು ಹೇಳಿ ಮಗುವಿಗೆ ರೂಬೇನ್ ಎಂದು ಹೆಸರಿಟ್ಟಳು.


ಸೇನಾಧೀಶ್ವರ ಯೆಹೋವ ದೇವರನ್ನೇ ಪ್ರತಿಷ್ಠೆ ಪಡಿಸಿಕೊಳ್ಳಿರಿ; ನೀವು ಭಯಪಡಬೇಕಾದುದು ಅವರಿಗೇ, ನೀವು ಹೆದರಬೇಕಾಗಿರುವುದು ಅವರಿಗೇ.


ಆ ರಾತ್ರಿ ದೇವರು ಸ್ವಪ್ನದಲ್ಲಿ ಅರಾಮಿನವನಾದ ಲಾಬಾನನ ಬಳಿಗೆ ಬಂದು ಅವನಿಗೆ, “ನೀನು ಯಾಕೋಬನ ಸಂಗಡ ಒಳ್ಳೆಯದನ್ನಾಗಲಿ, ಕೆಟ್ಟದ್ದನ್ನಾಗಲಿ ಮಾತನಾಡದಂತೆ ಎಚ್ಚರಿಕೆಯಾಗಿರು,” ಎಂದರು.


ಆದರೂ ಪ್ರಧಾನ ದೇವದೂತನಾದ ಮೀಕಾಯೇಲನು, ಮೋಶೆಯ ಶವದ ವಿಷಯದಲ್ಲಿ ಸೈತಾನನೊಂದಿಗೆ ವ್ಯಾಜ್ಯವಾಡಿ ವಾಗ್ವಾದ ಮಾಡಿದಾಗ, ಅವನು ಸೈತಾನನನ್ನು ದೂಷಿಸುವುದಕ್ಕೆ ಧೈರ್ಯಗೊಳ್ಳದೆ, “ಕರ್ತದೇವರು ನಿನ್ನನ್ನು ಗದರಿಸಲಿ!” ಎಂದನು.


ಆಗ ದಾವೀದನು ಅವರನ್ನು ಎದುರುಗೊಳ್ಳಲು ಹೊರಟುಹೋಗಿ ಅವರಿಗೆ ಉತ್ತರವಾಗಿ, “ನನಗೆ ಸಹಾಯವಾಗಿ ನನ್ನ ಬಳಿಗೆ ನೀವು ಸಮಾಧಾನವಾಗಿ ಬಂದರೆ, ನನ್ನ ಹೃದಯವು ನಿಮ್ಮ ಸಂಗಡ ಒಂದಾಗಿರುವುದು. ಆದರೆ ದೋಷವು ನನ್ನ ಕೈಯಲ್ಲಿ ಇಲ್ಲದಿರುವಾಗ, ನೀವು ನನ್ನ ವೈರಿಗಳಿಗೆ ನನ್ನನ್ನು ಮೋಸದಿಂದ ಒಪ್ಪಿಸಿಕೊಡಲು ಬಂದರೆ, ನಮ್ಮ ಪಿತೃಗಳ ದೇವರು ನೋಡಿ ನ್ಯಾಯತೀರಿಸಲಿ,” ಎಂದನು.


ಆಗ ಯೆಹೋವ ದೇವರು, “ಈಜಿಪ್ಟಿನಲ್ಲಿರುವ ನನ್ನ ಜನರ ವ್ಯಥೆಯನ್ನು ವಾಸ್ತವವಾಗಿಯೂ ಕಂಡಿದ್ದೇನೆ. ಬಿಟ್ಟೀ ಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನು ಬಲ್ಲೆನು.


ಅವನು ನನಗೆ, ‘ನಿನ್ನ ಕಣ್ಣುಗಳನ್ನೆತ್ತಿ ಕುರಿಗಳನ್ನೇರುವ ಎಲ್ಲಾ ಟಗರುಗಳನ್ನು ನೋಡು. ಅವು ಚುಕ್ಕೆ, ಮಚ್ಚೆ, ರೇಖೆಯೂ ಉಳ್ಳವುಗಳಾಗಿವೆ. ಏಕೆಂದರೆ ಲಾಬಾನನು ನಿನಗೆ ಮಾಡಿದ್ದನ್ನೆಲ್ಲಾ ಕಂಡಿದ್ದೇನೆ.


ಅವರಿಗೆ, “ನಿಮ್ಮ ತಂದೆಯ ಮುಖವು ಮೊದಲು ನನ್ನ ಕಡೆಗೆ ಇದ್ದ ಹಾಗೆ ಈಗ ಇಲ್ಲದಿರುವುದನ್ನು ನಾನು ನೋಡಿದ್ದೇನೆ. ಆದರೆ ನನ್ನ ತಂದೆಯ ದೇವರು ನನ್ನ ಕಡೆಗೆ ಇದ್ದಾರೆ.


ಆಗ ಇಸಾಕನು ಬಹಳವಾಗಿ ನಡುಗುತ್ತಾ, “ನೀನು ಬರುವುದಕ್ಕಿಂತ ಮೊದಲು ಬೇಟೆಯಾಡಿ ನನಗೆ ಊಟ ತಂದವನು ಯಾರು? ಅವನು ಎಲ್ಲಿದ್ದಾನೆ? ನೀನು ಬರುವುದರೊಳಗಾಗಿ ನಾನು ಎಲ್ಲವನ್ನೂ ಊಟಮಾಡಿ ಅವನನ್ನು ಆಶೀರ್ವದಿಸಿದೆನು. ಅವನು ಆಶೀರ್ವಾದ ಹೊಂದಿರುವನು,” ಎಂದನು.


ಆಮೇಲೆ ಆಕೆಯು ತನ್ನ ಸಂಗಡ ಮಾತನಾಡಿದ ಯೆಹೋವ ದೇವರಿಗೆ, “ನೀವು ನನ್ನನ್ನು ನೋಡುವ ದೇವರು,” ಎಂದು ಹೆಸರಿಟ್ಟಳು. ಏಕೆಂದರೆ, “ನನ್ನನ್ನು ನೋಡುವ ದೇವರನ್ನು ನಾನು ಇಲ್ಲಿ ನೋಡಿದೆ,” ಎಂದುಕೊಂಡಳು.


ಅನಂತರ ಯೆಹೋವ ದೇವರ ದೂತನು ಆಕೆಗೆ ಹೀಗೆ ಹೇಳಿದನು: “ನೀನು ಈಗ ಗರ್ಭಿಣಿಯಾಗಿರುವೆ, ಒಬ್ಬ ಮಗನನ್ನು ಹೆರುವೆ. ಅವನಿಗೆ, ಇಷ್ಮಾಯೇಲ್ ಎಂದು ಹೆಸರಿಡಬೇಕು. ಏಕೆಂದರೆ ಯೆಹೋವ ದೇವರು ನಿನ್ನ ವ್ಯಥೆಗೆ ಕಿವಿಗೊಟ್ಟಿದ್ದಾರೆ.


ಜನರು ಕಟ್ಟುತ್ತಿದ್ದ ಪಟ್ಟಣವನ್ನೂ ಗೋಪುರವನ್ನೂ ನೋಡುವುದಕ್ಕೆ ಯೆಹೋವ ದೇವರು ಇಳಿದು ಬಂದರು.


ಇದಲ್ಲದೆ ಯಾಕೋಬನು, “ನನ್ನ ತಂದೆ ಅಬ್ರಹಾಮನ ದೇವರೇ, ನನ್ನ ತಂದೆ ಇಸಾಕನ ದೇವರೇ, ನಿಮ್ಮ ದೇಶಕ್ಕೂ, ನಿನ್ನ ಬಂಧುಗಳ ಬಳಿಗೂ ಹಿಂದಿರುಗಿ ಹೋಗು. ಆಗ ನಾನು ನಿನಗೆ ಒಳ್ಳೆಯದನ್ನು ಮಾಡುವೆನು ಎಂದು ನನಗೆ ಹೇಳಿದ ಯೆಹೋವ ದೇವರೇ,


ನಾವು ಇಲ್ಲಿಂದ ಹೊರಟು ಬೇತೇಲಿಗೆ ಹೋಗೋಣ. ಕಷ್ಟಕಾಲದಲ್ಲಿ ನನ್ನ ವಿಜ್ಞಾಪನೆಯನ್ನು ಆಲಿಸಿ, ನಾನು ಹೋದ ದಾರಿಯಲ್ಲಿ ನನ್ನ ಸಂಗಡ ಇದ್ದ ದೇವರಿಗೆ ಅಲ್ಲಿ ನಾನು ಬಲಿಪೀಠವನ್ನು ಕಟ್ಟುವೆನು,” ಎಂದನು.


ಇಸ್ರಾಯೇಲನು ತನಗಿದ್ದದ್ದನ್ನೆಲ್ಲಾ ತೆಗೆದುಕೊಂಡು ಬೇರ್ಷೆಬಕ್ಕೆ ಬಂದು, ತನ್ನ ತಂದೆ ಇಸಾಕನ ದೇವರಿಗೆ ಬಲಿಗಳನ್ನು ಅರ್ಪಿಸಿದನು.


ನನ್ನ ಪಿತೃಗಳ ದೇವರೇ, ನಾನು ನಿಮ್ಮನ್ನು ಕೊಂಡಾಡಿ, ನಿಮಗೆ ಕೃತಜ್ಞತೆ ಸಲ್ಲಿಸುತ್ತೇನೆ. ಏಕೆಂದರೆ ನೀವು ನನಗೆ ಜ್ಞಾನವನ್ನೂ, ಬಲವನ್ನೂ ಕೊಟ್ಟು; ನಾವು ನಿನ್ನಿಂದ ಅಪೇಕ್ಷಿಸಿಕೊಂಡದ್ದನ್ನು ನಮಗೆ ತಿಳಿಯಪಡಿಸಿದ್ದೀರಿ; ನೀವು ಈಗ ನಮಗೆ ಅರಸನ ಕನಸನ್ನು ತಿಳಿಯಪಡಿಸಿದ್ದೀರಿ.”


ಹಾಗೆ ಬಿಟ್ಟುಬಿಡುವಾಗ ಬರೀ ಕೈಯಲ್ಲಿ ಕಳುಹಿಸಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು