Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:48 - ಕನ್ನಡ ಸಮಕಾಲಿಕ ಅನುವಾದ

48 ಆಗ ಲಾಬಾನನು, “ಈ ಕುಪ್ಪೆಯು ಈ ಹೊತ್ತು ನಿನಗೂ ನನಗೂ ಸಾಕ್ಷಿಯಾಗಿದೆ,” ಎಂದನು. ಆದ್ದರಿಂದ ಅದಕ್ಕೆ ಗಲೇದ್ ಎಂದೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ಆಗ ಲಾಬಾನನು, “ಈ ಹೊತ್ತು ನಿನಗೂ ನನಗೂ ಆದ ಒಡಂಬಡಿಕೆಗೆ ಈ ಗುಡ್ಡೆಯೇ ಸಾಕ್ಷಿ” ಎಂದು ಹೇಳಿದುದರಿಂದ ಅದಕ್ಕೆ ಗಲೇದ್ ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

48 ಲಾಬಾನನು ಯಕೋಬನಿಗೆ, “ಈ ದಿನ ನಿನಗೂ ನನಗೂ ಆದ ಒಪ್ಪಂದಕ್ಕೆ ಈ ಕುಪ್ಪೆಯೇ ಸಾಕ್ಷಿ” ಎಂದು ಹೇಳಿದ ಕಾರಣ ಅದಕ್ಕೆ ‘ಗೆಲೇದ್’ ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

48 ಈ ಹೊತ್ತು ನಿನಗೂ ನನಗೂ ಆದ ಒಡಂಬಡಿಕೆಗೆ ಈ ಕುಪ್ಪೆಯೇ ಸಾಕ್ಷಿ ಎಂದು ಹೇಳಿದ್ದರಿಂದ ಅದಕ್ಕೆ ಗಲೇದೆಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

48 ಲಾಬಾನನು ಯಾಕೋಬನಿಗೆ, “ಈ ಕಲ್ಲುಗಳ ಕುಪ್ಪೆಯು ನಮ್ಮಿಬ್ಬರಿಗೂ ನಮ್ಮ ಒಪ್ಪಂದವನ್ನು ಜ್ಞಾಪಕಕ್ಕೆ ತರುತ್ತದೆ” ಎಂದು ಹೇಳಿದನು. ಆದಕಾರಣ ಯಾಕೋಬನು ಆ ಸ್ಥಳಕ್ಕೆ ಗಲೀದ್ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:48
10 ತಿಳಿವುಗಳ ಹೋಲಿಕೆ  

ಯೆಹೋಶುವನು ಜನರಿಗೆ, “ಇಗೋ, ಈ ಕಲ್ಲು ನಿಮ್ಮ ಮಧ್ಯದಲ್ಲಿ ಸಾಕ್ಷಿಯಾಗಿರಲಿ. ಏಕೆಂದರೆ ಇದು ಯೆಹೋವ ದೇವರು ನಮ್ಮ ಸಂಗಡ ಹೇಳಿದ ಎಲ್ಲಾ ವಚನಗಳನ್ನು ಕೇಳಿದೆ. ಆದ್ದರಿಂದ ನೀವು ನಿಮ್ಮ ದೇವರನ್ನು ಅಲ್ಲಗಳೆಯದ ಹಾಗೆ ಇದೇ ನಿಮಗೆ ಸಾಕ್ಷಿಯಾಗಿರಲಿ,” ಎಂದು ಹೇಳಿದನು.


ಗಿಲ್ಯಾದ್ ಮೊದಲುಗೊಂಡು ಅರ್ನೋನ್ ತಗ್ಗಿನವರೆಗೂ ಯಬ್ಬೋಕ್ ಹೊಳೆಯವರೆಗೂ ಇರುವ ಪ್ರದೇಶವನ್ನು ರೂಬೇನ್ಯರಿಗೂ ಗಾದ್ಯರಿಗೂ ಕೊಟ್ಟೆನು. ಅರ್ನೋನ್ ತಗ್ಗಿನ ಮಧ್ಯಭಾಗವೇ ಅವರ ಮೇರೆ. ಅವರಿಗೂ ಅಮ್ಮೋನಿಯರಿಗೂ ನಡುವೆ ಇರುವ ಯಬ್ಬೋಕ್ ಹೊಳೆಯು ಅವರ ಮೇರೆ.


ಅರ್ನೋನಿನ ತೀರದಲ್ಲಿರುವ ಅರೋಯೇರ್ ಹಳ್ಳದ ಪಟ್ಟಣವು ಮೊದಲ್ಗೊಂಡು ಗಿಲ್ಯಾದಿನವರೆಗೂ ಒಂದು ಪಟ್ಟಣವಾದರೂ ನಮಗೆ ಅಸಾಧ್ಯವಾಗಿರಲಿಲ್ಲ. ನಮ್ಮ ದೇವರಾದ ಯೆಹೋವ ದೇವರು ಅವುಗಳನ್ನೆಲ್ಲಾ ನಮ್ಮ ಕೈಗೆ ಒಪ್ಪಿಸಿದರು.


ಆಗ ಅವನು ತನ್ನ ಬಂಧುಗಳನ್ನು ಕರೆದುಕೊಂಡು, ಅವನನ್ನು ಬೆನ್ನಟ್ಟಿ, ಏಳು ದಿನ ಪ್ರಯಾಣಮಾಡಿ, ಗಿಲ್ಯಾದ್ ಪರ್ವತದಲ್ಲಿ ಅವನನ್ನು ಸಂಧಿಸಿದನು.


ಅದಕ್ಕೆ ಅಬ್ರಹಾಮನು, “ನಾನೇ ಆ ಬಾವಿಯನ್ನು ಅಗೆದಿದ್ದೇನೆಂಬುದಕ್ಕೆ ಸಾಕ್ಷಿಯಾಗಿ ಆ ಏಳು ಹೆಣ್ಣು ಕುರಿಮರಿಗಳನ್ನು ನೀನು ನನ್ನ ಕೈಯಿಂದ ತೆಗೆದುಕೊಳ್ಳಬೇಕು,” ಎಂದನು.


ನಮಗೂ ನಿಮಗೂ ನಮ್ಮ ತರುವಾಯ ನಮ್ಮ ಸಂತತಿಯವರಿಗೂ ಮಧ್ಯದಲ್ಲಿ ಒಂದು ಸಾಕ್ಷಿ ಉಂಟಾಗಿರುವಂತೆಯೂ ನಾವು ಯೆಹೋವ ದೇವರ ಸನ್ನಿಧಿಯಲ್ಲಿ ದಹನಬಲಿ, ಸಮಾಧಾನದ ಬಲಿ ಮುಂತಾದವುಗಳನ್ನು ಅರ್ಪಿಸಿ ಆರಾಧಿಸುವುದಕ್ಕೆ ನಿಮಗೆ ಗುರುತಾಗಿರುವಂತೆಯೂ, ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ, ‘ಯೆಹೋವ ದೇವರಲ್ಲಿ ನಿಮಗೆ ಭಾಗವಿಲ್ಲ,’ ಎಂದು ಹೇಳದೆ ಇರುವಂತೆಯೂ ಸಾಕ್ಷಿಗಾಗಿ ಕಟ್ಟಿದ್ದೇವೆ ಅಷ್ಟೇ.


“ಇದಲ್ಲದೆ ನಾವು, ‘ಒಂದು ವೇಳೆ ಅವರು ಮುಂದೆ ನಮಗಾಗಲಿ, ನಮ್ಮ ಸಂತತಿಯವರಿಗಾಗಲಿ ಈ ಪ್ರಕಾರ ಹೇಳಿದ್ದೇ ಆದರೆ ನಾವು ಅವರಿಗೆ: ಯೆಹೋವ ದೇವರ ಬಲಿಪೀಠವನ್ನು ಹೋಲುವ ಈ ವೇದಿಕೆಯನ್ನು ನೋಡಿರಿ, ನಮ್ಮ ಪೂರ್ವಜರು ಇದನ್ನು ದಹನಬಲಿ, ಸಮರ್ಪಣ ಬಲಿಗಳನ್ನು ಅರ್ಪಿಸುವುದಕ್ಕಾಗಿ ಕಟ್ಟಲಿಲ್ಲ. ಇದು ನಮಗೂ ನಿಮಗೂ ಮಧ್ಯೆ ಸಾಕ್ಷಿಯಾಗಿದೆಯಷ್ಟೆ,’ ಎಂದು ಹೇಳುವೆವು.


ರೂಬೇನ್ಯರೂ ಗಾದ್ಯರೂ ಆ ಬಲಿಪೀಠಕ್ಕೆ, “ನಮ್ಮ ನಡುವೆ ಯೆಹೋವ ದೇವರೇ ದೇವರಾಗಿದ್ದಾರೆ ಎಂಬುದಕ್ಕೆ ಸಾಕ್ಷಿ,” ಎಂದು ಹೆಸರಿಟ್ಟರು.


ಅವನ ತರುವಾಯ ಗಿಲ್ಯಾದ್ಯನಾದ ಯಾಯೀರನು ಎದ್ದು ಇಸ್ರಾಯೇಲರನ್ನು ಇಪ್ಪತ್ತೆರಡು ವರುಷ ನ್ಯಾಯತೀರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು