Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 32:4 - ಕನ್ನಡ ಸಮಕಾಲಿಕ ಅನುವಾದ

4 ಕಳುಹಿಸುವಾಗ ಅವರಿಗೆ, “ನನ್ನ ಯಜಮಾನನಾದ ಏಸಾವನಿಗೆ ನೀವು ಹೀಗೆ ಹೇಳಬೇಕು: ‘ನಿನ್ನ ದಾಸನಾದ ಯಾಕೋಬನು ಹೀಗೆ ಹೇಳುತ್ತಾನೆ: ಲಾಬಾನನ ಸಂಗಡ ನಾನು ಇಲ್ಲಿಯವರೆಗೆ ಪ್ರವಾಸಿಯಾಗಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಕಳುಹಿಸುವಾಗ ಅವರಿಗೆ “ನೀವು ನನ್ನ ಪ್ರಭುವಾದ ಏಸಾವನ ಬಳಿಗೆ ಹೋಗಿ ಅವನಿಗೆ, ‘ನಿನ್ನ ಸೇವಕನಾದ ಯಾಕೋಬನು ಇಷ್ಟು ದಿನ ಲಾಬಾನನ ಬಳಿಯಲ್ಲಿ ವಾಸವಾಗಿದ್ದನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಕಳುಹಿಸುವಾಗ ಅವರಿಗೆ, “ನೀವು ನನ್ನೊಡೆಯ ಏಸಾವನ ಬಳಿಗೆ ಹೋಗಿ ಈ ಸಮಾಚಾರವನ್ನು ಕೊಡಿ: ‘ನಿಮ್ಮ ದಾಸ ಯಕೋಬನಾದ ನಾನು ಇಷ್ಟು ದಿನ ಲಾಬಾನನ ಬಳಿ ವಾಸಮಾಡಬೇಕಾಗಿ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಕಳುಹಿಸುವಾಗ ಅವರಿಗೆ - ನೀವು ನನ್ನ ಪ್ರಭುವಾದ ಏಸಾವನ ಬಳಿಗೆ ಹೋಗಿ ಅವನಿಗೆ - ನಿನ್ನ ಸೇವಕನಾದ ಯಾಕೋಬನು ಇಷ್ಟು ದಿವಸ ಲಾಬಾನನ ಬಳಿಯಲ್ಲಿ ವಾಸವಾಗಿದ್ದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಏಸಾವನಿಗೆ ಈ ಸಂಗತಿಗಳನ್ನು ತಿಳಿಸಿದನು: “ನಿನ್ನ ಸೇವಕನಾದ ಯಾಕೋಬನು ಹೇಳುವುದೇನೆಂದರೆ, ‘ನಾನು ಕಳೆದ ವರ್ಷಗಳೆಲ್ಲಾ ಲಾಬಾನನೊಡನೆ ಜೀವಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 32:4
23 ತಿಳಿವುಗಳ ಹೋಲಿಕೆ  

ಹಾಗೆಯೇ ಸಾರಳು ಅಬ್ರಹಾಮನಿಗೆ ವಿಧೇಯಳಾಗಿದ್ದು ಅವನನ್ನು “ಯಜಮಾನ” ಎಂದು ಕರೆದಳು. ನೀವು ಸಾರಳ ಪುತ್ರಿಯರಾಗಿದ್ದೀರಲ್ಲಾ. ನೀವು ಒಳ್ಳೆಯದು ಯಾವುದೋ ಅದನ್ನು ಮಾಡುವುದಾದರೆ ಯಾವುದಕ್ಕೂ ಭಯಪಡಬೇಕಾಗಿರುವುದಿಲ್ಲ.


ಏಕೆಂದರೆ, ಯಾರಾದರೂ ತಮ್ಮನ್ನು ತಾವೇ ಹೆಚ್ಚಿಸಿಕೊಳ್ಳುವರೋ ಅವರು ತಗ್ಗಿಸಲಾಗುವರು ಮತ್ತು ತಮ್ಮನ್ನು ತಾವೇ ತಗ್ಗಿಸಿಕೊಳ್ಳುವವರು ಹೆಚ್ಚಿಸಲಾಗುವರು,” ಎಂದರು.


ಅಧಿಕಾರಿಯು ನಿನಗೆ ವಿರುದ್ಧವಾಗಿ ಸಿಟ್ಟುಗೊಂಡರೆ, ನಿನ್ನ ಉದ್ಯೋಗವನ್ನು ಬಿಟ್ಟುಬಿಡಬೇಡ. ಏಕೆಂದರೆ ತಾಳ್ಮೆಯು ದೊಡ್ಡ ಅಪರಾಧಗಳನ್ನು ಶಾಂತಪಡಿಸುತ್ತದೆ.


ಮೃದುವಾದ ಉತ್ತರವು ಕೋಪವನ್ನು ತಿರುಗಿಸಿಬಿಡುತ್ತದೆ. ಆದರೆ ಬಿರುಸಾದ ಮಾತುಗಳು ಕೋಪವನ್ನು ಎಬ್ಬಿಸುತ್ತದೆ.


ಮಗನೇ, ನೀನು ನಿನ್ನ ನೆರೆಯವನ ಕೈಗೆ ಸಿಕ್ಕಿಕೊಂಡದರಿಂದ, ನಿನ್ನನ್ನು ನೀನು ತಪ್ಪಿಸಿಕೊಳ್ಳಲು ಇದನ್ನು ಮಾಡು: ಹೋಗಿ ನಿನ್ನನ್ನು ನೀನು ತಗ್ಗಿಸಿಕೋ, ನಿನ್ನ ನೆರೆಯವನಿಗೆ ವಿಶ್ರಾಂತಿಯನ್ನು ಕೊಡಬೇಡ.


ಹಾಗೆಯೇ ಅವರು ಗೋಣಿಯನ್ನು ತಮ್ಮ ನಡುವುಗಳಿಗೆ ಕಟ್ಟಿಕೊಂಡು, ಹಗ್ಗಗಳನ್ನು ತಮ್ಮ ತಲೆಗಳಿಗೆ ಸುತ್ತಿಕೊಂಡು ಇಸ್ರಾಯೇಲಿನ ಅರಸನ ಬಳಿಗೆ ಬಂದು, “ನನ್ನ ಪ್ರಾಣ ಬದುಕಲೆಂದು ನಿನ್ನ ಸೇವಕನಾದ ಬೆನ್ಹದದನು ಹೇಳುತ್ತಾನೆ,” ಎಂದರು. ಅದಕ್ಕೆ ಅರಸನು, “ಅವನು ಇನ್ನೂ ಬದುಕಿದ್ದಾನೋ? ಅವನು ನನ್ನ ಸಹೋದರನು,” ಎಂದನು.


ಆಗ ಸೌಲನು ದಾವೀದನ ಸ್ವರವನ್ನು ತಿಳಿದುಕೊಂಡು, “ನನ್ನ ಪುತ್ರನಾದ ದಾವೀದನೇ, ಇದು ನಿನ್ನ ಸ್ವರವಲ್ಲವೋ?” ಎಂದನು. ದಾವೀದನು, “ಅರಸನಾದ ನನ್ನ ಒಡೆಯನೇ, ನನ್ನ ಧ್ವನಿಯೇ ಹೌದು,” ಎಂದನು.


ಅದಕ್ಕೆ ಆರೋನನು, “ನನ್ನ ಒಡೆಯನೇ ಕೋಪಗೊಳ್ಳಬೇಡಿ ಈ ಜನರು ಕೆಡುಕಿನ ಮನಸ್ಸಿನವರಾಗಿದ್ದಾರೆಂದು ನೀವು ಬಲ್ಲಿರಿ.


ಆಗ ಏಸಾವನು, “ನಾನು ದಾರಿಯಲ್ಲಿ ಕಂಡ ಪಶುಗಳ ಮಂದೆಗಳೆಲ್ಲಾ ಏತಕ್ಕೆ?” ಎಂದು ಕೇಳಿದನು. ಯಾಕೋಬನು, “ನನ್ನ ಒಡೆಯನ ದೃಷ್ಟಿಯಲ್ಲಿ ನನಗೆ ದಯೆ ದೊರಕುವುದಕ್ಕೋಸ್ಕರ,” ಎಂದನು.


ನೀನು ಅವನಿಗೆ, ‘ಇವು ನಿನ್ನ ದಾಸನಾದ ಯಾಕೋಬನವುಗಳೇ, ಇದು ನನ್ನ ಯಜಮಾನನಾದ ಏಸಾವನಿಗೆ ಕಳುಹಿಸಲಾದ ಕಾಣಿಕೆ, ಅವನೂ ನಮ್ಮ ಹಿಂದೆ ಇದ್ದಾನೆ,’ ಎಂದು ಅವನಿಗೆ ಹೇಳಬೇಕು,” ಎಂದು ಆಜ್ಞಾಪಿಸಿದನು.


ಈಗ ನನಗೆ ಎತ್ತು, ಕತ್ತೆ, ಕುರಿಗಳು, ದಾಸದಾಸಿಯರು ಇದ್ದಾರೆ. ನಾನು ನಿನ್ನ ದೃಷ್ಟಿಯಲ್ಲಿ ದಯೆ ಹೊಂದುವಂತೆ ನಾನು ಈ ಸಂದೇಶವನ್ನು ನನ್ನ ಯಜಮಾನನಾದ ನಿಮಗೆ ತಿಳಿಸುವುದಕ್ಕಾಗಿ ಕಳುಹಿಸಿದ್ದೇನೆ,’ ಎಂದು ಹೇಳಿರಿ,” ಎಂದನು.


ಇಸಾಕನು ಉತ್ತರವಾಗಿ ಏಸಾವನಿಗೆ, “ಅವನನ್ನು ನಿನಗೆ ದೊರೆಯನನ್ನಾಗಿ ನೇಮಿಸಿದ್ದೇನೆ, ಅವನ ಸಹೋದರರೆಲ್ಲರನ್ನೂ ಅವನಿಗೆ ಸೇವಕರನ್ನಾಗಿ ಕೊಟ್ಟು, ಧಾನ್ಯದಿಂದಲೂ ಹೊಸ ದ್ರಾಕ್ಷಾರಸದಿಂದಲೂ ಅವನನ್ನು ಪೋಷಿಸಿದ್ದೇನೆ. ಈಗ ನನ್ನ ಮಗನೇ, ನಿನಗೆ ನಾನು ಏನು ಮಾಡಲಿ?” ಎಂದನು.


ಜನರು ನಿನಗೆ ಸೇವೆಮಾಡಲಿ, ಜನಾಂಗಗಳು ನಿನಗೆ ಅಡ್ಡಬೀಳಲಿ, ನಿನ್ನ ಸಹೋದರರಿಗೆ ನೀನು ದೊರೆಯಾಗಿರು. ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ. ನಿನ್ನನ್ನು ಶಪಿಸುವವರಿಗೆ ಶಾಪವೂ ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದವೂ ಆಗಲಿ.”


“ಒಡೆಯಾ, ನಮ್ಮ ಮಾತನ್ನು ಕೇಳು, ನೀನು ನಮ್ಮ ಮಧ್ಯದಲ್ಲಿ ಮಹಾಪ್ರಭುವಾಗಿದ್ದೀ. ನಮ್ಮ ಸಮಾಧಿಗಳೊಳಗೆ ಉತ್ತಮವಾದದ್ದರಲ್ಲಿ ನಿನ್ನ ಹೆಂಡತಿಯ ಶವವನ್ನು ಹೂಳಿಡು. ನಮ್ಮಲ್ಲಿ ಯಾರೂ ನಿನಗೆ ಸಮಾಧಿಯನ್ನು ಕೊಡುವುದಿಲ್ಲ ಎಂದು ಹೇಳಲಾರರು,” ಎಂದರು.


ನೀನು ಒಳ್ಳೆಯದನ್ನು ಮಾಡಿದರೆ, ನೀನು ಸ್ವೀಕಾರವಾಗುತ್ತಿದ್ದೆ ಅಲ್ಲವೇ? ನೀನು ಒಳ್ಳೆಯದನ್ನು ಮಾಡದೆ ಹೋದರೆ, ಬಾಗಿಲಲ್ಲಿ ಪಾಪವು ಹೊಂಚಿಕೊಂಡಿರುವುದು ಮತ್ತು ಅದು ನಿನ್ನನ್ನು ನುಂಗಲು ಬಯಸುತ್ತದೆ. ಆದರೂ ನೀನು ಅದರ ಮೇಲೆ ಅಧಿಕಾರ ಮಾಡಬೇಕು,” ಎಂದು ಹೇಳಿದರು.


ನಿನ್ನ ಇಬ್ಬರು ಪುತ್ರಿಯರಿಗಾಗಿ ಹದಿನಾಲ್ಕು ವರ್ಷ, ನಿನ್ನ ಮಂದೆಗಳಿಗೋಸ್ಕರ ಆರು ವರ್ಷ, ಈ ಪ್ರಕಾರ ಇಪ್ಪತ್ತು ವರ್ಷ ನಿನ್ನ ಮನೆಯಲ್ಲಿದ್ದು, ನಿನ್ನ ಸೇವೆ ಮಾಡಿದೆನು. ಆದರೆ ನೀನು ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿದೆ.


ತಾಳ್ಮೆಯ ಮೂಲಕ ಪ್ರಭುವನ್ನು ಒಲಿಸಿಕೊಳ್ಳಬಹುದು; ಮೃದುವಾದ ಮಾತು ಎಲುಬನ್ನು ಮುರಿಯುತ್ತದೆ.


ಏಸಾವನು ಯಾಕೋಬನಿಗೆ, “ಆ ಕೆಂಪಾದ ಪದಾರ್ಥವನ್ನು ತಿನ್ನುವುದಕ್ಕೆ ನನಗೆ ಕೊಡು, ನಾನು ದಣಿದಿದ್ದೇನೆ,” ಎಂದನು. ಆದ್ದರಿಂದ ಅವನಿಗೆ, ಎದೋಮ್, ಎಂದು ಹೆಸರಾಯಿತು.


ಆದ್ದರಿಂದ ನನ್ನ ಒಡೆಯನೇ, ನೀನು ನಿನ್ನ ಸೇವಕನಿಗಿಂತಲೂ ಮುಂಚೆ ಹೋಗಬಹುದು. ನಾನು ನನ್ನ ಒಡೆಯನ ಬಳಿಗೆ ಸೇಯೀರಿಗೆ ಬರುವವರೆಗೆ, ನನ್ನ ಮುಂದಿರುವ ಮಂದೆಗಳ ನಡಿಗೆಗೂ, ಮಕ್ಕಳ ನಡಿಗೆಗೂ ತಕ್ಕ ಹಾಗೆ ಮೆಲ್ಲಗೆ ನಡೆದು ಬರುವೆನು,” ಎಂದನು.


ಹೀಗೆ ಎದೋಮನು ಎಂಬ ಏಸಾವನು ಸೇಯೀರ್ ಪರ್ವತದಲ್ಲಿ ವಾಸವಾಗಿದ್ದನು.


ಸೇಯೀರ್ ಪರ್ವತದಲ್ಲಿರುವ ಎದೋಮ್ಯರ ತಂದೆ ಏಸಾವನ ವಂಶಾವಳಿಗಳು ಇವೇ:


“ಯೆಹೋವ ದೇವರೇ, ನೀವು ಸೇಯೀರಿನಿಂದ ಹೊರಟು, ಎದೋಮಿನ ಹೊಲದಿಂದ ಮುನ್ನಡೆಯುವಾಗ, ಭೂಮಿ ನಡುಗಿತು. ಆಕಾಶವು ಸಹ ಸುರಿಸಿತು. ಮೇಘಗಳು ಸಹ ನೀರು ಸುರಿಸಿದವು.


ದೂಮ ವಿಷಯವಾದ ಪ್ರವಾದನೆ: ಸೇಯೀರಿನಿಂದ ನನ್ನನ್ನು ಯಾರೋ ಹೀಗೆ ಕರೆಯುತ್ತಿದ್ದಾರೆ, “ಕಾವಲುಗಾರನೇ, ಈಗ ರಾತ್ರಿ ಎಷ್ಟು ಕಳೆಯಿತು? ಕಾವಲುಗಾರನೇ, ರಾತ್ರಿ ಎಷ್ಟು ಕಳೆಯಿತು?”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು