Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 32:7 - ಕನ್ನಡ ಸಮಕಾಲಿಕ ಅನುವಾದ

7 ಆಗ ಯಾಕೋಬನು ಬಹಳವಾಗಿ ಭಯಪಟ್ಟು, ತನ್ನ ಸಂಗಡ ಇದ್ದ ಜನರನ್ನೂ, ಕುರಿಗಳನ್ನೂ, ದನಗಳನ್ನೂ, ಒಂಟೆಗಳನ್ನೂ ಎರಡು ಗುಂಪುಗಳಾಗಿ ವಿಭಾಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯಾಕೋಬನಿಗೆ ಬಹು ಭಯವೂ ಕಳವಳವೂ ಉಂಟಾದವು. ಅವನು ತನ್ನೊಂದಿಗಿದ್ದ ಜನರನ್ನು, ಕುರಿದನಗಳನ್ನು ಹಾಗೂ ಒಂಟೆಗಳನ್ನು ಎರಡು ಗುಂಪುಗಳಾಗಿ ವಿಭಾಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಗ ಯಕೋಬನು ಬಹಳ ದಿಗಿಲುಗೊಂಡನು, ಕಳವಳಗೊಂಡನು; ತನ್ನ ಜನರನ್ನೂ ಕುರಿ, ದನ, ಒಂಟೆಗಳನ್ನೂ ಎರಡು ಪರಿವಾರಗಳಾಗಿ ವಿಂಗಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯಾಕೋಬನಿಗೆ ಬಹು ಭಯವೂ ಕಳವಳವೂ ಉಂಟಾದವು. ಅವನು ತನ್ನೊಂದಿಗಿದ್ದ ಜನರನ್ನೂ ಕುರಿ ದನ ಒಂಟೆಗಳನ್ನೂ ಎರಡು ಪಾಳೆಯ ಮಾಡಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯಾಕೋಬನಿಗೆ ಭಯವಾಯಿತು. ಅವನು ತನ್ನೊಡನೆ ಇದ್ದ ಜನರನ್ನು ಎರಡು ಗುಂಪುಗಳನ್ನಾಗಿ ವಿಂಗಡಿಸಿದನು. ಅವನು ಎಲ್ಲಾ ಆಡುಕುರಿಗಳನ್ನೂ ದನಕರುಗಳನ್ನೂ ಒಂಟೆಗಳನ್ನೂ ಎರಡು ಗುಂಪುಗಳನ್ನಾಗಿ ವಿಂಗಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 32:7
22 ತಿಳಿವುಗಳ ಹೋಲಿಕೆ  

ನಾವು ಇಲ್ಲಿಂದ ಹೊರಟು ಬೇತೇಲಿಗೆ ಹೋಗೋಣ. ಕಷ್ಟಕಾಲದಲ್ಲಿ ನನ್ನ ವಿಜ್ಞಾಪನೆಯನ್ನು ಆಲಿಸಿ, ನಾನು ಹೋದ ದಾರಿಯಲ್ಲಿ ನನ್ನ ಸಂಗಡ ಇದ್ದ ದೇವರಿಗೆ ಅಲ್ಲಿ ನಾನು ಬಲಿಪೀಠವನ್ನು ಕಟ್ಟುವೆನು,” ಎಂದನು.


ನಿಜವಾಗಿಯೂ ಕ್ರಿಸ್ತ ಯೇಸುವಿನಲ್ಲಿ ಭಕ್ತಿಯುಳ್ಳವರಾಗಿ ಜೀವಿಸುವುದಕ್ಕೆ ಮನಸ್ಸು ಮಾಡುವವರೆಲ್ಲರೂ ಹಿಂಸೆಗೊಳಗಾಗುವರು.


ದೇವರು ನಮಗಾಗುವ ಎಲ್ಲಾ ಬಾಧೆಗಳಲ್ಲಿ ನಮ್ಮನ್ನು ಸಂತೈಸುವವರಾಗಿದ್ದಾರೆ. ಇತರರು ಬಾಧೆಗಳನ್ನು ಅನುಭವಿಸುತ್ತಿರುವಾಗ, ನಾವು ಸಹ ದೇವರಿಂದ ಹೊಂದಿರುವ ಸಂತೈಸುವಿಕೆಯಿಂದ ಅವರನ್ನು ಸಂತೈಸಲು ನಮ್ಮನ್ನು ಶಕ್ತರನ್ನಾಗಿ ಮಾಡಿದ್ದಾರೆ.


ಅಲ್ಲಿದ್ದ ಶಿಷ್ಯರು ವಿಶ್ವಾಸದಲ್ಲಿ ಮುಂದುವರಿಯಲು, “ನಾವು ಅನೇಕ ಸಂಕಟಗಳಿಂದ ದೇವರ ರಾಜ್ಯದೊಳಗೆ ಸೇರಬೇಕು,” ಎಂದು ಹೇಳಿ ದೃಢಪಡಿಸಿದರು.


“ನನ್ನಲ್ಲಿ ನಿಮಗೆ ಸಮಾಧಾನ ಇರುವಂತೆ ಇವುಗಳನ್ನು ನಾನು ನಿಮ್ಮೊಂದಿಗೆ ಮಾತನಾಡಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟವಿರುವದು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ,” ಎಂದರು.


“ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದ್ದರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರಿ.


ಆಗ ಯೇಸು ಅವರಿಗೆ, “ಅಲ್ಪವಿಶ್ವಾಸವುಳ್ಳವರೇ, ನೀವು ಏಕೆ ಭಯಪಡುತ್ತೀರಿ?” ಎಂದು ಹೇಳಿ, ಎದ್ದು ಬಿರುಗಾಳಿಯನ್ನೂ ಸರೋವರವನ್ನೂ ಗದರಿಸಿದರು. ಆಗ ಎಲ್ಲವೂ ಪ್ರಶಾಂತವಾಯಿತು.


ಏಕೆಂದರೆ ಅವನ ದೇವರು ಅವನಿಗೆ ಸೂಚಿಸುತ್ತಾರೆ. ಮತ್ತು ಸರಿಯಾದ ಮಾರ್ಗವನ್ನು ಕಲಿಸುತ್ತಾರೆ.


ನಿನ್ನ ವಿವೇಚನೆಯು ನಿನ್ನನ್ನು ಭದ್ರವಾಗಿ ಕಾಯುವುದು; ತಿಳುವಳಿಕೆಯು ನಿನ್ನನ್ನು ಕಾಪಾಡುವುದು.


ನೋಡಿರಿ ನನ್ನ ಬಲಗಡೆಯಲ್ಲಿ, ನನ್ನ ಪರವಾಗಿ ಯಾರೂ ಇಲ್ಲ; ಆಶ್ರಯವು ನನಗೆ ಇಲ್ಲ; ನನಗಾಗಿ ಚಿಂತಿಸುವವರು ಯಾರೂ ಇಲ್ಲ.


ಆಗ ಅವರು ಇಕ್ಕಟ್ಟಿನಲ್ಲಿ ಯೆಹೋವ ದೇವರಿಗೆ ಮೊರೆ ಇಟ್ಟರು; ದೇವರು ಅವರ ಸಂಕಟಗಳೊಳಗಿಂದ ಅವರನ್ನು ಬಿಡಿಸಿದರು.


ನನ್ನ ಹೃದಯವು ಕುಂದಿ ಹೋಗಿರಲಾಗಿ ಭೂಮಿಯ ಅಂತ್ಯದಿಂದ ನಿಮಗೆ ಮೊರೆಯಿಡುತ್ತಿರುವೆನು. ನನಗಿಂತ ಎತ್ತರವಾದ ಬಂಡೆಗೆ ನನ್ನನ್ನು ನಡೆಸಿರಿ.


ಅನೇಕರು ಹೀಗೆ ಪಿಸುಗುಟ್ಟುವುದನ್ನು ಕೇಳಿದ್ದೇನೆ. ಸುತ್ತಲೂ ಅಂಜಿಕೆ ಇದೆ; ಅನೇಕರು ನನ್ನ ಪ್ರಾಣವನ್ನು ತೆಗೆಯಬೇಕೆಂದು ಒಳಸಂಚು ಮಾಡುತ್ತಿದ್ದಾರೆ.


ಫರೋಹನು ಸಮೀಪಕ್ಕೆ ಬರುವುದನ್ನು ಇಸ್ರಾಯೇಲರು ಕಣ್ಣೆತ್ತಿ ನೋಡಿದರು. ಈಜಿಪ್ಟಿನವರು ಅವರ ಹಿಂದೆ ಬರುತ್ತಿರುವುದನ್ನು ಕಂಡು ಇಸ್ರಾಯೇಲರು ಬಹಳ ಭಯಪಟ್ಟು ಯೆಹೋವ ದೇವರಿಗೆ ಮೊರೆಯಿಟ್ಟರು.


ನನ್ನ ಅಣ್ಣ ಏಸಾವನ ಕೈಯಿಂದ ನನ್ನನ್ನು ತಪ್ಪಿಸಿರಿ. ಏಕೆಂದರೆ ಅವನು ಬಂದು ನನ್ನನ್ನೂ, ಮಕ್ಕಳೊಂದಿಗೆ ತಾಯಂದಿರನ್ನೂ, ದಾಳಿಮಾಡುವನು ಎಂದು ನಾನು ಅವನಿಗೆ ಭಯಪಡುತ್ತೇನೆ.


ದಯೆತೋರಿಸಿ ಸಾಲಕೊಡುವವರಿಗೆ, ಒಳ್ಳೆಯದಾಗುವುದು; ಅವರು ತಮ್ಮ ಕಾರ್ಯಗಳನ್ನು ನ್ಯಾಯದಿಂದ ನಡೆಸುವರು.


ಯಾಕೋಬನು ಎದೋಮ್ಯರ ದೇಶವಾದ ಸೇಯೀರನ ಸೀಮೆಯಲ್ಲಿರುವ ತನ್ನ ಅಣ್ಣನಾದ ಏಸಾವನ ಬಳಿಗೆ ದೂತರನ್ನು ತನ್ನ ಮುಂದಾಗಿ ಕಳುಹಿಸಿದನು.


ಏಕೆಂದರೆ, “ಏಸಾವನು ಒಂದು ಗುಂಪಿನ ಮೇಲೆ ದಾಳಿಮಾಡಿದರೆ, ಉಳಿದ ಗುಂಪು ತಪ್ಪಿಸಿಕೊಂಡು ಹೋಗಬಹುದು,” ಎಂದುಕೊಂಡನು.


ಯಾಕೋಬನು ಕಣ್ಣೆತ್ತಿ ನೋಡಿದಾಗ, ಏಸಾವನು ನಾನೂರು ಮಂದಿ ಮನುಷ್ಯರ ಸಂಗಡ ಬರುತ್ತಿದ್ದನು. ಆಗ ಅವನು ಲೇಯಳಿಗೂ, ರಾಹೇಲಳಿಗೂ, ಇಬ್ಬರು ದಾಸಿಯರಿಗೂ ಅವರವರ ಮಕ್ಕಳನ್ನು ಒಪ್ಪಿಸಿ, ಅವರನ್ನು ಬೇರೆ ಬೇರೆ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು