Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 33:10 - ಕನ್ನಡ ಸಮಕಾಲಿಕ ಅನುವಾದ

10 ಆಗ ಯಾಕೋಬನು, “ಹಾಗಲ್ಲ, ಈಗ ನಿನ್ನ ದೃಷ್ಟಿಯಲ್ಲಿ ನಾನು ದಯೆ ಹೊಂದಿದ್ದೆನಾದರೆ, ನನ್ನ ಕಾಣಿಕೆಯನ್ನು ನನ್ನ ಕೈಯಿಂದ ತೆಗೆದುಕೊಳ್ಳಬೇಕು. ಏಕೆಂದರೆ ನಾನು ದೇವರ ಮುಖವನ್ನು ಕಂಡಂತೆ, ನಿನ್ನ ಮುಖವನ್ನು ಕಂಡದ್ದಕ್ಕಾಗಿಯೂ, ನೀನು ನನ್ನನ್ನು ಮೆಚ್ಚಿದ್ದಕ್ಕಾಗಿಯೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯಾಕೋಬನು, “ಹಾಗಲ್ಲ, ನಿನಗೆ ನನ್ನ ಮೇಲೆ ದಯೆಯಿದ್ದರೆ, ನಾನು ಸಮರ್ಪಿಸುವ ಕಾಣಿಕೆಯನ್ನು ಅಂಗೀಕರಿಸಬೇಕು. ನಿನ್ನನ್ನು ನೋಡಿದ್ದು ದೇವರನ್ನು ನೋಡಿದ ಹಾಗಾಯಿತು, ನನ್ನನ್ನು ಪ್ರೀತಿಯಿಂದ ಅಂಗೀಕರಿಸಿದ್ದೇ ವಿಶೇಷ ಸಂಗತಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅದಕ್ಕೆ ಯಕೋಬನು, “ಇಲ್ಲ, ಹಾಗೆನ್ನಬಾರದು. ನಿಮಗೆ ನನ್ನ ಮೇಲೆ ದಯೆಯಿರುವುದು ನಿಜವಾಗಿದ್ದಲ್ಲಿ ನಾನು ಸಮರ್ಪಿಸುವ ಕಾಣಿಕೆಯನ್ನು ಅಂಗೀಕರಿಸಲೇಬೇಕು. ನಿಮ್ಮನ್ನು ನೋಡಿದ್ದು ದೇವರನ್ನು ನೋಡಿದ ಹಾಗಾಯಿತು. ನನ್ನನ್ನು ಪ್ರೀತಿಯಿಂದ ಸ್ವಾಗತಿಸಿದ್ದೇ ಸಾಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯಾಕೋಬನು - ಹಾಗೆ ಅಪ್ಪಣೆಕೊಡಕೂಡದು; ನೀನು ನನ್ನ ಮೇಲೆ ಕಟಾಕ್ಷವಿಟ್ಟು ನಾನು ಸಮರ್ಪಿಸುವ ಕಾಣಿಕೆಯನ್ನು ಅಂಗೀಕರಿಸಬೇಕು. ನಿನ್ನನ್ನು ನೋಡಿದ್ದು ದೇವರನ್ನು ನೋಡಿದ ಹಾಗಾಯಿತು. ನನ್ನನ್ನು ಪ್ರೀತಿಯಿಂದ ಅಂಗೀಕರಿಸಿದ್ದೇ ವಿಶೇಷ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯಾಕೋಬನು, “ಇಲ್ಲ! ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ; ನೀನು ನನ್ನನ್ನು ನಿಜವಾಗಿಯೂ ಸ್ವೀಕರಿಸಿಕೊಳ್ಳುವುದಾದರೆ, ನಾನು ಕೊಡುವ ಉಡುಗೊರೆಗಳನ್ನು ದಯವಿಟ್ಟು ಸ್ವೀಕರಿಸಬೇಕು. ನಿನ್ನ ಮುಖವನ್ನು ಮತ್ತೆ ನೋಡಿ ನನಗೆ ತುಂಬ ಸಂತೋಷವಾಗಿದೆ. ದೇವರ ಮುಖವನ್ನೇ ನೋಡಿದಂತಾಯಿತು. ನೀನು ನನ್ನನ್ನು ಸ್ವೀಕರಿಸಿಕೊಂಡದ್ದರಿಂದ ನನಗೆ ತುಂಬ ಸಂತೋಷವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 33:10
19 ತಿಳಿವುಗಳ ಹೋಲಿಕೆ  

ಆಗ ಆ ಮನುಷ್ಯನು ದೇವರಿಗೆ ಪ್ರಾರ್ಥನೆಮಾಡುವನು; ದೇವರು ಅವನಿಗೆ ತಮ್ಮ ಮೆಚ್ಚುಗೆಯನ್ನು ನೀಡುವರು; ಅವನು ಆನಂದ ಧ್ವನಿಯಿಂದ ದೇವರ ಮುಖವನ್ನು ನೋಡುವನು; ದೇವರು ಅವನನ್ನು ನೀತಿವಂತನೆಂದು ಪುನಃಸ್ಥಾಪಿಸುವರು.


ದೇವರ ಮುಖವನ್ನು ಅವರು ಕಾಣುವರು. ಅವರ ಹಣೆಗಳ ಮೇಲೆ ದೇವರ ಹೆಸರು ಇರುವುದು.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಾನು ಅವರಿಗೆ ವಿಶ್ರಾಂತಿ ಕೊಡುವುದಕ್ಕೆ ಹೋಗಲಾಗಿ, ಖಡ್ಗಕ್ಕೆ ತಪ್ಪಿಸಿಕೊಂಡ ಇಸ್ರಾಯೇಲಿನ ಜನರಿಗೆ ಮರುಭೂಮಿಯಲ್ಲಿ ದಯೆ ದೊರಕಿತು.”


ಆಗ ಯಾಕೋಬನು, “ನಾನು ದೇವರನ್ನು ಮುಖಾಮುಖಿಯಾಗಿ ನೋಡಿದರೂ, ನನ್ನ ಪ್ರಾಣ ಉಳಿಯಿತು,” ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು.


ನನ್ನ ಶತ್ರು ನನ್ನ ಮೇಲೆ ಜಯ ಹೊಂದದೆ ಇರುವುದರಿಂದಲೇ, ನೀವು ನನ್ನನ್ನು ಮೆಚ್ಚಿದ್ದೀರಿ ಎಂದು ನಾನು ತಿಳಿದುಕೊಳ್ಳುವೆ.


ಅಬ್ಷಾಲೋಮನು ಯೋವಾಬನಿಗೆ, “ನಾನು ಗೆಷೂರಿನಿಂದ ಏಕೆ ಬಂದೆನೆಂದು ಅರಸನಿಗೆ ಹೇಳುವುದಕ್ಕೆ ನಿನ್ನನ್ನು ಕಳುಹಿಸುವ ಹಾಗೆ ‘ಇಲ್ಲಿಗೆ ಬಾ’ ಎಂದು ನಿನ್ನನ್ನು ಕರೆಕಳುಹಿಸಿದೆನು. ನಾನು ಇನ್ನೂ ಅಲ್ಲಿಯೇ ಇದ್ದಿದ್ದರೆ ನನಗೆ ಉತ್ತಮವಾಗಿತ್ತು. ಈಗ ನಾನು ಅರಸನ ಮುಖವನ್ನು ನೋಡಬೇಕು. ನನ್ನಲ್ಲಿ ಅಕ್ರಮ ಇದ್ದರೆ, ಅವನು ನನ್ನನ್ನು ಕೊಂದು ಹಾಕಲಿ,” ಎಂದನು.


ಅಬ್ಷಾಲೋಮನು ಅರಸನ ಮುಖವನ್ನು ಕಾಣದೆ, ಪೂರ್ಣವಾಗಿ ಎರಡು ವರ್ಷ ಯೆರೂಸಲೇಮಿನಲ್ಲಿ ವಾಸವಾಗಿದ್ದನು.


ಆದರೆ ಅರಸನು, “ಅವನು ತನ್ನ ಮನೆಗೆ ತಿರುಗಿ ಹೋಗಲಿ. ಅವನು ನನ್ನ ಮುಖವನ್ನು ನೋಡಬಾರದು,” ಎಂದನು. ಆದ್ದರಿಂದ ಅಬ್ಷಾಲೋಮನು ಅರಸನ ಮುಖವನ್ನು ನೋಡದೆ ತನ್ನ ಮನೆಗೆ ತಿರುಗಿಹೋದನು.


ಅದಕ್ಕೆ ದಾವೀದನು, “ಒಳ್ಳೆಯದು, ನಾನು ನಿನ್ನ ಸಂಗಡ ಒಡಂಬಡಿಕೆಯನ್ನು ಮಾಡುವೆನು. ಆದರೆ ನಾನು ನಿನ್ನಲ್ಲಿ ಒಂದನ್ನು ಕೇಳುತ್ತೇನೆ.” ಏನೆಂದರೆ, “ನೀನು ನನ್ನನ್ನು ನೋಡುವುದಕ್ಕೆ ಬರುವಾಗ, ಸೌಲನ ಮಗಳಾದ ಮೀಕಲಳನ್ನು ನೀನು ಕರೆದುಕೊಂಡು ಬಾರದೆ ಹೋದರೆ, ನೀನು ನನ್ನ ಮುಖವನ್ನು ಕಾಣಬಾರದು,” ಎಂದನು.


ದಾವೀದನು ಪ್ರಮಾಣಮಾಡಿ, “ನಿನ್ನ ಕಣ್ಣು ಮುಂದೆ ನನಗೆ ದಯೆ ದೊರಕಿತೆಂದು ನಿನ್ನ ತಂದೆಯು ನಿಶ್ಚಲವಾಗಿ ಬಲ್ಲನು. ಆದಕಾರಣ ಅವನು ಯೋನಾತಾನನು ವ್ಯಥೆಪಡದ ಹಾಗೆ, ‘ಅವನು ಇದನ್ನು ತಿಳಿಯಬಾರದು,’ ಎಂದು ಹೇಳುತ್ತಾನೆ. ನಿಶ್ಚಯವಾಗಿ ಯೆಹೋವ ದೇವರಾಣೆ, ನನ್ನ ಪ್ರಾಣದಾಣೆ, ನನಗೂ ಮರಣಕ್ಕೂ ಒಂದು ಹೆಜ್ಜೆ ಮಾತ್ರ ದೂರ ಇದೆ,” ಎಂದನು.


ಆಗ ಅವಳು ಅವನಿಗೆ ಸಾಷ್ಟಾಂಗಬಿದ್ದು ವಂದಿಸಿ ಅವನಿಗೆ, “ಪರದೇಶಿಯಾದ ನನ್ನನ್ನು ಕಂಡು ನನ್ನ ಮೇಲೆ ನಿಮ್ಮ ದಯೆಯನ್ನು ತೋರಿಸಿದ್ದು ಏಕೆ?” ಎಂದಳು.


ಅವನಿಗಾಗಿ ದುಃಖಿಸುವ ದಿನಗಳು ಮುಗಿದ ಮೇಲೆ ಯೋಸೇಫನು ಫರೋಹನ ಆಸ್ಥಾನದವರಿಗೆ, “ನಾನು ನಿಮ್ಮ ಕಣ್ಣುಗಳ ಮುಂದೆ ದಯೆ ಹೊಂದಿದ್ದೇಯಾದರೆ, ಫರೋಹನ ಕಿವಿಗಳಲ್ಲಿ ಈ ಮಾತು ಹೇಳಬೇಕು.


ಇಸ್ರಾಯೇಲನ ಮರಣದ ಸಮಯವು ಸಮೀಪಿಸಿದಾಗ, ಅವನು ತನ್ನ ಮಗ ಯೋಸೇಫನನ್ನು ಕರೆಯಿಸಿ ಅವನಿಗೆ, “ಈಗ ನಿನ್ನ ಸಮ್ಮುಖದಲ್ಲಿ ನಾನು ದಯೆ ಹೊಂದಿದ್ದೇಯಾದರೆ, ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಟ್ಟು, ನನಗೆ ಉಪಕಾರವನ್ನೂ, ನಂಬಿಗಸ್ತಿಕೆಯನ್ನೂ ತೋರಿಸು. ಈಜಿಪ್ಟಿನಲ್ಲಿ ನನ್ನನ್ನು ಹೂಳಿಡಬೇಡ.


ಈಗ ನಿನ್ನ ದಾಸನಿಗೆ ನಿನ್ನ ದೃಷ್ಟಿಯಲ್ಲಿ ದಯೆ ದೊರಕಿದೆ. ನನ್ನ ಪ್ರಾಣವನ್ನು ಉಳಿಸುವ ಹಾಗೆ ನೀನು ನನಗೆ ಮಾಡಿದ ದಯೆ ದೊಡ್ಡದು. ಆದರೆ ನಾನು ತಪ್ಪಿಸಿಕೊಂಡು ಬೆಟ್ಟಕ್ಕೆ ಓಡಿಹೋಗಲಾರೆನು, ನನಗೆ ವಿಪತ್ತು ಉಂಟಾಗಿ ಸತ್ತೇನು.


“ಚಿಕ್ಕವರಲ್ಲಿ ಒಬ್ಬನನ್ನಾದರೂ ನೀವು ಹೀನೈಸದಂತೆ ನೋಡಿಕೊಳ್ಳಿರಿ. ಪರಲೋಕದಲ್ಲಿರುವ ಅವರ ದೂತರು ಪರಲೋಕದ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಿದ್ದಾರೆ.


ಆಗ ಯೆಹೂದನು ಅವನಿಗೆ, “ಆ ಮನುಷ್ಯನು ನಮಗೆ ನಿಮ್ಮ ಸಹೋದರನು ನಿಮ್ಮ ಸಂಗಡ ಇದ್ದ ಹೊರತು, ನೀವು ನನ್ನ ಮುಖವನ್ನು ನೋಡಬಾರದೆಂದು, ನಮಗೆ ದೃಢವಾಗಿ ನಿರ್ಣಯಿಸಿ ಹೇಳಿದ್ದಾನೆ.


ಅದಕ್ಕೆ ಏಸಾವನು, “ನನ್ನ ಸಹೋದರನೇ, ನನಗೆ ಸಾಕಷ್ಟು ಇದೆ. ನಿನಗೆ ಇದ್ದದ್ದು ನೀನೇ ಇಟ್ಟುಕೋ,” ಎಂದನು.


ನಿನಗೋಸ್ಕರ ತಂದಿರುವ ನನ್ನ ಕಾಣಿಕೆಯನ್ನು ಸ್ವೀಕರಿಸಬೇಕೆಂದು ಬೇಡುತ್ತೇನೆ. ದೇವರು ನನ್ನೊಂದಿಗೆ ಕೃಪೆಯಿಂದ ವರ್ತಿಸಿದ್ದರಿಂದ ನನಗೆ ಬೇಕಾದಷ್ಟು ಇವೆ,” ಎಂದು ಹೇಳಿ, ಅವನನ್ನು ಬಲವಂತ ಮಾಡಿದ್ದರಿಂದ ಏಸಾವನು ಅದನ್ನು ತೆಗೆದುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು