Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 33:14 - ಕನ್ನಡ ಸಮಕಾಲಿಕ ಅನುವಾದ

14 ಆದ್ದರಿಂದ ನನ್ನ ಒಡೆಯನೇ, ನೀನು ನಿನ್ನ ಸೇವಕನಿಗಿಂತಲೂ ಮುಂಚೆ ಹೋಗಬಹುದು. ನಾನು ನನ್ನ ಒಡೆಯನ ಬಳಿಗೆ ಸೇಯೀರಿಗೆ ಬರುವವರೆಗೆ, ನನ್ನ ಮುಂದಿರುವ ಮಂದೆಗಳ ನಡಿಗೆಗೂ, ಮಕ್ಕಳ ನಡಿಗೆಗೂ ತಕ್ಕ ಹಾಗೆ ಮೆಲ್ಲಗೆ ನಡೆದು ಬರುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ತಾವು ದಯವಿಟ್ಟು ಸೇವಕನಿಗಿಂತಲೂ ಮುಂಚೆ ಹೋಗಬಹುದು ನಾನು ನನ್ನ ಮುಂದಿರುವ ಆಡುಕುರಿಗಳ ನಡಿಗೆಗೂ ಮಕ್ಕಳ ಶಕ್ತಿಗೂ ಸರಿಯಾಗಿ ಮೆಲ್ಲಮೆಲ್ಲನೆ ನಡೆದು ನನ್ನ ಪ್ರಭುವಿನ ಸೀಮೆಯಾಗಿರುವ ಸೇಯೀರಿಗೆ ಬರುತ್ತೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ತಾವು ದಯವಿಟ್ಟು ದಾಸನಿಗಿಂತಲು ಮುಂಚೆ ಹೊರಡಬಹುದು, ನಾನು ನನ್ನ ಮುಂದಿರುವ ಆಡುಕುರಿಗಳ ಹಾಗೂ ಮಕ್ಕಳ ನಡಿಗೆಗೆ ತಕ್ಕ ಹಾಗೆ ಮೆಲ್ಲಮೆಲ್ಲನೆ ನಡೆದು ನನ್ನೊಡೆಯರ ನಾಡಾದ ಎದೋಮಿಗೆ ಬರುತ್ತೇನೆ,” ಎಂದನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ತಾವು ದಯವಿಟ್ಟು ಸೇವಕನಿಗಿಂತಲೂ ಮುಂಚೆ ಹೊರಡಬಹುದು. ನಾನು ನನ್ನ ಮುಂದಿರುವ ಆಡುಕುರಿಗಳ ನಡಿಗೆಗೂ ಮಕ್ಕಳ ಶಕ್ತಿಗೂ ಸರಿಯಾಗಿ ಮೆಲ್ಲಮೆಲ್ಲನೆ ನಡೆದು ನನ್ನ ಪ್ರಭುವಿನ ಸೀಮೆಯಾಗಿರುವ ಸೇಯೀರಿಗೆ ಬರುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದ್ದರಿಂದ ನೀನು ಮುಂದಾಗಿ ಹೋಗು. ನಾನು ನಿನ್ನನ್ನು ನಿಧಾನವಾಗಿ ಹಿಂಬಾಲಿಸುವೆನು. ದನಕುರಿಗಳು ಮತ್ತು ಇತರ ಪಶುಗಳು ಸುರಕ್ಷಿತವಾಗಿರುವಂತೆಯೂ ನನ್ನ ಮಕ್ಕಳು ತುಂಬ ಆಯಾಸಗೊಳ್ಳದಂತೆಯೂ ನಾನು ಸಾಕಷ್ಟು ನಿಧಾನವಾಗಿ ಬಂದು ನಿನ್ನನ್ನು ಸೇಯೀರ್‌ನಲ್ಲಿ ಭೇಟಿಯಾಗುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 33:14
13 ತಿಳಿವುಗಳ ಹೋಲಿಕೆ  

ಅವರು ತಮ್ಮ ಮಂದೆಯನ್ನು ಕುರುಬನಂತೆ ಮೇಯಿಸುವರು. ಕುರಿಮರಿಗಳನ್ನು ಕೂಡಿಸಿ, ಅವುಗಳನ್ನು ತಮ್ಮ ಎದೆಗಪ್ಪಿಕೊಳ್ಳುವರು, ಎಳೆಯ ಮರಿಗಳನ್ನು ಮೆಲ್ಲಗೆ ನಡಿಸುವರು.


ಯಾಕೋಬನು ಎದೋಮ್ಯರ ದೇಶವಾದ ಸೇಯೀರನ ಸೀಮೆಯಲ್ಲಿರುವ ತನ್ನ ಅಣ್ಣನಾದ ಏಸಾವನ ಬಳಿಗೆ ದೂತರನ್ನು ತನ್ನ ಮುಂದಾಗಿ ಕಳುಹಿಸಿದನು.


ವಿಶ್ವಾಸದಲ್ಲಿ ಬಲವುಳ್ಳವರಾದ ನಾವು ನಮ್ಮ ಸುಖವನ್ನು ನೋಡಿಕೊಳ್ಳದೆ, ಬಲಹೀನರ ಬಲಹೀನತೆಗಳನ್ನು ಸಹಿಸಿಕೊಳ್ಳಬೇಕು.


ಈ ರೀತಿಯ ಅನೇಕ ಸಾಮ್ಯಗಳಿಂದ ಅವರ ಗ್ರಹಿಕೆಗೆ ತಕ್ಕ ಹಾಗೆ ಯೇಸು ಅವರಿಗೆ ವಾಕ್ಯವನ್ನು ಉಪದೇಶಿಸುತ್ತಿದ್ದರು.


“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಮೋವಾಬು ಮತ್ತು ಸೇಯೀರು, “ಇಗೋ, ಯೆಹೂದನ ಮನೆಯು ಸಮಸ್ತ ಇತರ ಜನಾಂಗಗಳ ಹಾಗಿದೆ,” ಎಂದು ಹೇಳುವರು.


“ಈಗ, ಅಮ್ಮೋನ್ ಮೋವಾಬ್, ಸೇಯೀರ್ ಬೆಟ್ಟದ ಜನರು, ಇಸ್ರಾಯೇಲರು ಈಜಿಪ್ಟ್ ದೇಶದೊಳಗಿಂದ ಹೊರಟು ಬರುವಾಗ, ಅವರ ಕಡೆಗೆ ಹೋಗಲು ನೀವು ಇವರಿಗೆ ಅಪ್ಪಣೆ ಕೊಡದೆ ಇದ್ದುದರಿಂದ, ಇವರು ಅವರನ್ನು ಬಿಟ್ಟು ತೊಲಗಿ ಅವರನ್ನು ನಾಶಮಾಡದೆ ಹೋದರು.


“ಯೆಹೋವ ದೇವರೇ, ನೀವು ಸೇಯೀರಿನಿಂದ ಹೊರಟು, ಎದೋಮಿನ ಹೊಲದಿಂದ ಮುನ್ನಡೆಯುವಾಗ, ಭೂಮಿ ನಡುಗಿತು. ಆಕಾಶವು ಸಹ ಸುರಿಸಿತು. ಮೇಘಗಳು ಸಹ ನೀರು ಸುರಿಸಿದವು.


ಆಗ ಯೆಹೋವ ದೇವರು ನನಗೆ ಆಜ್ಞಾಪಿಸಿದ ಪ್ರಕಾರ ಮರುಭೂಮಿಗೆ ಹೊರಟು ಕೆಂಪುಸಮುದ್ರದ ಮಾರ್ಗದಲ್ಲಿ ಅನೇಕ ದಿನಗಳು ಸೇಯೀರ್ ಬೆಟ್ಟದ ಮಲೆನಾಡನ್ನು ಸುತ್ತುತ್ತಿದ್ದೆವು.


ನಾನು ನಿಮಗೆ ಹಾಲು ಕೊಟ್ಟೆನು. ಗಟ್ಟಿ ಆಹಾರವನ್ನು ಕೊಡಲಿಲ್ಲ, ಏಕೆಂದರೆ ನಿಮಗೆ ಶಕ್ತಿ ಇರಲಿಲ್ಲ, ಈಗಲಾದರೂ ನಿಮಗೆ ಶಕ್ತಿಯಿಲ್ಲ.


ಅದಕ್ಕೆ ಯಾಕೋಬನು ಅವನಿಗೆ, “ಮಕ್ಕಳು ಎಳೆಯ ಪ್ರಾಯದವರಿದ್ದಾರೆ, ಇದಲ್ಲದೆ ಎಳೆಯ ದನಕುರಿಗಳು ನನ್ನ ಬಳಿಯಲ್ಲಿರುವುದು ನನ್ನ ಒಡೆಯನಿಗೆ ತಿಳಿದಿದೆ. ಒಂದು ದಿನ ಹೆಚ್ಚಾಗಿ ಅವುಗಳನ್ನು ನಡೆಸಿದರೆ, ಎಲ್ಲಾ ಮಂದೆಯು ಸತ್ತು ಹೋದಾವು.


ಕಳುಹಿಸುವಾಗ ಅವರಿಗೆ, “ನನ್ನ ಯಜಮಾನನಾದ ಏಸಾವನಿಗೆ ನೀವು ಹೀಗೆ ಹೇಳಬೇಕು: ‘ನಿನ್ನ ದಾಸನಾದ ಯಾಕೋಬನು ಹೀಗೆ ಹೇಳುತ್ತಾನೆ: ಲಾಬಾನನ ಸಂಗಡ ನಾನು ಇಲ್ಲಿಯವರೆಗೆ ಪ್ರವಾಸಿಯಾಗಿದ್ದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು