Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 33:15 - ಕನ್ನಡ ಸಮಕಾಲಿಕ ಅನುವಾದ

15 ಅದಕ್ಕೆ ಏಸಾವನು, “ನನ್ನ ಬಳಿಯಲ್ಲಿರುವ ಜನರಲ್ಲಿ ಕೆಲವರನ್ನು ನಿನ್ನ ಬಳಿಯಲ್ಲಿ ಬಿಟ್ಟು ಹೋಗುತ್ತೇನೆ,” ಅನ್ನಲು. ಯಾಕೋಬನು, “ಅದರ ಅಗತ್ಯವೇನು? ನನ್ನ ಒಡೆಯನ ದೃಷ್ಟಿಯಲ್ಲಿ ನನಗೆ ದಯೆ ದೊರಕಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಏಸಾವನು, “ನನ್ನ ಆಳುಗಳಲ್ಲಿ ಕೆಲವರನ್ನು ನಿನ್ನ ಸಂಗಡ ಬಿಟ್ಟು ಹೋಗುತ್ತೇನೆ” ಎನ್ನಲು ಯಾಕೋಬನು, “ಅದರ ಅಗತ್ಯವೇನು? ಒಡೆಯನೇ, ತಮ್ಮ ದಯೆ ನನ್ನ ಮೇಲಿದ್ದರೆ ಸಾಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಏಸಾವನು, “ಹಾಗಾದರೆ, ನನ್ನ ಆಳುಗಳಲ್ಲಿ ಕೆಲವರನ್ನು ನಿನ್ನ ಸಂಗಡ ಬಿಟ್ಟುಹೋಗುತ್ತೇನೆ,” ಎಂದನು. ಯಕೋಬನು, “ಏತಕ್ಕೆ, ಬೇಡಿ, ನನ್ನೊಡೆಯರ ದಯೆ ನನ್ನ ಮೇಲಿದ್ದರೆ ಸಾಕು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಏಸಾವನು - ನನ್ನ ಆಳುಗಳಲ್ಲಿ ಕೆಲವರನ್ನು ನಿನ್ನ ಸಂಗಡ ಬಿಟ್ಟು ಹೋಗುತ್ತೇನೆ ಅನ್ನಲು ಯಾಕೋಬನು - ಅದೇಕೆ, ತಮ್ಮ ದಯೆ ನನ್ನ ಮೇಲಿದ್ದರೆ ಸಾಕು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅದಕ್ಕೆ ಏಸಾವನು, “ಹಾಗಾದರೆ ನನ್ನ ಜನರಲ್ಲಿ ಕೆಲವರನ್ನು ನಿನ್ನ ಸಹಾಯಕ್ಕಾಗಿ ಬಿಟ್ಟುಹೋಗುವೆನು” ಎಂದು ಹೇಳಿದನು. ಆದರೆ ಯಾಕೋಬನು, “ಅದು ನಿನ್ನ ದಯೆ. ಆದರೆ ಅಂಥ ಅಗತ್ಯವೇನೂ ಇಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 33:15
8 ತಿಳಿವುಗಳ ಹೋಲಿಕೆ  

ಅದಕ್ಕೆ ಅವಳು, “ನನ್ನ ಒಡೆಯನೇ, ನನಗೆ ನಿಮ್ಮ ದೃಷ್ಟಿಯಲ್ಲಿ ಉಪಕಾರವಾಗಲಿ. ಏಕೆಂದರೆ ನಾನು ನಿಮ್ಮ ದಾಸಿಯರಲ್ಲಿ ಒಬ್ಬಳಂತೆ ನಿಲ್ಲುವುದಕ್ಕೂ ಯೋಗ್ಯಳಲ್ಲ ಆದರೂ ದಯೆಯಿಂದ ಮಾತನಾಡಿಸಿದಿರಿ” ಎಂದಳು.


ಆಗ ಅವರು, “ನೀನೇ ನಮ್ಮನ್ನು ಬದುಕಿಸಿದ್ದೀ, ನಮ್ಮ ಒಡೆಯನ ಕಣ್ಣುಗಳ ಮುಂದೆ ನಮಗೆ ದಯೆ ದೊರಕಲಿ. ನಾವು ಫರೋಹನ ದಾಸರಾಗಿರುವೆವು,” ಎಂದರು.


ಬಳಿಕ ಶೆಕೆಮನು ಆಕೆಯ ತಂದೆಗೂ, ಆಕೆಯ ಸಹೋದರರಿಗೂ, “ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರಕಲಿ, ನೀವು ಕೇಳಿದ್ದನ್ನು ನಾನು ನಿಮಗೆ ಕೊಡುವೆನು.


ಆಗ ಅರಸನು ಚೀಬನಿಗೆ, “ಇಗೋ, ಮೆಫೀಬೋಶೆತನಿಗೆ ಉಂಟಾದದ್ದೆಲ್ಲವೂ ನಿನಗುಂಟಾಯಿತು,” ಎಂದನು. ಅದಕ್ಕೆ ಚೀಬನು, “ಅರಸನಾದ ನನ್ನ ಒಡೆಯನೇ, ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರಕಲಿ ಎಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ,” ಎಂದನು.


ನಿನ್ನ ಸೇವಕರನ್ನು ಕೇಳು. ಅವರು ನಿನಗೆ ಹೇಳುವರು. ಆದ್ದರಿಂದ ಈಗ ಈ ಯುವಕರಿಗೆ ನಿನ್ನ ದೃಷ್ಟಿಯಲ್ಲಿ ದಯೆ ದೊರಕಲಿ. ಏಕೆಂದರೆ ಒಳ್ಳೆಯ ದಿವಸದಲ್ಲಿ ಬಂದೆವು. ನಿನ್ನ ಕೈಯಲ್ಲಿ ದೊರಕುವುದನ್ನು ನಿನ್ನ ಸೇವಕರಿಗೂ, ನಿನ್ನ ಪುತ್ರನಾದ ದಾವೀದನಿಗೂ ದಯಪಾಲಿಸು ಎಂದು ಅವನಿಗೆ ಹೇಳಿರಿ,’ ” ಎಂದು ಅವರನ್ನು ಕಳುಹಿಸಿದನು.


ಹೀಗೆ ಏಸಾವನು ಆ ದಿನವೇ ತನ್ನ ಮಾರ್ಗವಾಗಿ ಸೇಯೀರಿಗೆ ಹಿಂದಿರುಗಿ ಹೋದನು.


ಅದಕ್ಕವಳು, “ನಿನ್ನ ಸೇವಕಿಗೆ ನಿನ್ನ ದೃಷ್ಟಿಯಲ್ಲಿ ದಯೆ ತೋರಲಿ,” ಎಂದಳು. ಆ ಸ್ತ್ರೀಯು ಹೊರಟುಹೋಗಿ ಊಟ ಮಾಡಿದಳು. ಆಮೇಲೆ ಅವಳ ಮುಖದಲ್ಲಿ ದುಃಖವು ಕಾಣಲಿಲ್ಲ.


ಆಗ ದೂತರು ಯಾಕೋಬನ ಬಳಿಗೆ ಹಿಂದಿರುಗಿ ಬಂದು, “ನಾವು ನಿನ್ನ ಸಹೋದರ ಏಸಾವನ ಬಳಿಗೆ ಹೋಗಿ ಬಂದಿದ್ದೇವೆ; ಅವನು ನಾನೂರು ಮಂದಿಯನ್ನು ಕರೆದುಕೊಂಡು ನಿನ್ನನ್ನು ಎದುರುಗೊಳ್ಳುವುದಕ್ಕೆ ಬರುತ್ತಿದ್ದಾನೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು