Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 34:14 - ಕನ್ನಡ ಸಮಕಾಲಿಕ ಅನುವಾದ

14 ಯಾಕೋಬನ ಮಕ್ಕಳು ಅವರಿಗೆ, “ನಾವು ಈ ಕಾರ್ಯವನ್ನು ಮಾಡಲಾರೆವು. ಸುನ್ನತಿ ಇಲ್ಲದ ಮನುಷ್ಯನಿಗೆ ನಮ್ಮ ತಂಗಿಯನ್ನು ಕೊಡಲಾರೆವು. ಅದು ನಮಗೆ ಅವಮಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯಾಕೋಬನ ಮಕ್ಕಳು ಅವರಿಗೆ, “ನಾವು ಈ ಕಾರ್ಯವನ್ನು ಮಾಡಲಾರೆವು. ಸುನ್ನತಿಯಿಲ್ಲದವನಿಗೆ ನಮ್ಮ ತಂಗಿಯನ್ನು ಕೊಡುವುದಕ್ಕಾಗುವುದಿಲ್ಲ, ಹಾಗೆ ಕೊಡುವುದು ನಮಗೆ ಅವಮಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 “ಸುನ್ನತಿ ಇಲ್ಲದವರಿಗೆ ನಮ್ಮ ತಂಗಿಯನ್ನು ಕೊಡುವುದಕ್ಕೆ ಆಗುವುದಿಲ್ಲ. ಹಾಗೆ ಕೊಡುವುದು ನಮಗೆ ಅವಮಾನಕರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಸುನ್ನತಿಯಿಲ್ಲದವನಿಗೆ ನಮ್ಮ ತಂಗಿಯನ್ನು ಕೊಡುವದಕ್ಕಾಗುವದಿಲ್ಲ; ಹಾಗೆ ಕೊಡುವದು ನಮಗೆ ಅಪಮಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದ್ದರಿಂದ ಆಕೆಯ ಅಣ್ಣಂದಿರು ಅವನಿಗೆ, “ನೀನು ನಮ್ಮ ತಂಗಿಯನ್ನು ಮದುವೆಯಾಗಲು ನಾವು ಅವಕಾಶ ಕೊಡುವಂತಿಲ್ಲ; ಯಾಕೆಂದರೆ ನಿನಗಿನ್ನೂ ಸುನ್ನತಿಯಾಗಿಲ್ಲ. ನಮ್ಮ ತಂಗಿಯು ನಿನ್ನನ್ನು ಮದುವೆಯಾಗುವುದು ತಪ್ಪಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 34:14
16 ತಿಳಿವುಗಳ ಹೋಲಿಕೆ  

ಹೌದು, ಸುನ್ನತಿಯಾಗುವ ಮೊದಲೇ ಅಬ್ರಹಾಮನಿಗಿದ್ದ ನಂಬಿಕೆಯಿಂದ ಅವನು ನೀತಿಯ ಮುದ್ರೆಯನ್ನು ಹೊಂದಿದನು. ಹೀಗಿರುವಲ್ಲಿ, ಸುನ್ನತಿಯಿಲ್ಲದೆ ನಂಬುವವರೆಲ್ಲರಿಗೂ ಅಬ್ರಹಾಮನು ತಂದೆಯಾಗಿರುತ್ತಾನೆ. ಹೀಗೆ ಅವರಿಗೆ ನೀತಿಯು ಎಣಿಕೆಯಾಗುವುದು.


ಆ ಜ್ಞಾನಿಗಳು ಹೊರಟುಹೋದ ಮೇಲೆ, ಕರ್ತನ ದೂತನು ಯೋಸೇಫನಿಗೆ ಕನಸಿನಲ್ಲಿ ಪ್ರತ್ಯಕ್ಷನಾಗಿ, “ಎದ್ದೇಳು, ಮಗುವನ್ನೂ ತಾಯಿಯನ್ನೂ ಕರೆದುಕೊಂಡು ಈಜಿಪ್ಟಿಗೆ ಓಡಿಹೋಗು. ನಾನು ನಿನಗೆ ತಿಳಿಸುವವರೆಗೆ ಅಲ್ಲಿಯೇ ಇರು, ಏಕೆಂದರೆ ಹೆರೋದನು ಮಗುವನ್ನು ಹುಡುಕಿ ಕೊಲ್ಲಬೇಕೆಂದಿದ್ದಾನೆ,” ಎಂದನು.


“ನೀವು ಹೋಗಿ ಆ ಮಗುವಿನ ವಿಷಯ ಜಾಗರೂಕತೆಯಿಂದ ವಿಚಾರಿಸಿ. ಆ ಮಗು ಸಿಕ್ಕಿದ ಮೇಲೆ ನನಗೆ ತಿಳಿಸಿರಿ, ಆಗ ನಾನೂ ಬಂದು ಅದನ್ನು ಆರಾಧಿಸುವೆನು,” ಎಂದು ಹೇಳಿ ಅವರನ್ನು ಬೇತ್ಲೆಹೇಮಿಗೆ ಕಳುಹಿಸಿದನು.


ಅವಳು ಪತ್ರಗಳಲ್ಲಿ, “ನೀವು ಉಪವಾಸವನ್ನು ಪ್ರಕಟಮಾಡಿ ನಾಬೋತನನ್ನು ಜನರೊಳಗೆ ಎತ್ತರದ ಸ್ಥಳದಲ್ಲಿ ಕೂರಿಸಿ,


ನಾಲ್ಕು ವರ್ಷಗಳಾದ ತರುವಾಯ ಅಬ್ಷಾಲೋಮನು ಅರಸನಿಗೆ, “ನಾನು ಯೆಹೋವ ದೇವರಿಗೆ ಮಾಡಿಕೊಂಡಿದ್ದ ನನ್ನ ಹರಕೆಯನ್ನು ಹೆಬ್ರೋನಿನಲ್ಲಿ ಸಲ್ಲಿಸಲು ಹೋಗುವುದಕ್ಕೆ ಅಪ್ಪಣೆಕೊಡಬೇಕು.


“ಗತ್ ಊರಿನಲ್ಲಿ ಇದನ್ನು ತಿಳಿಸಬೇಡಿರಿ. ಅಷ್ಕೆಲೋನಿನ ಬೀದಿಗಳಲ್ಲಿ ಸಾರಬೇಡಿರಿ. ಫಿಲಿಷ್ಟಿಯರ ಪುತ್ರಿಯರು ಸಂತೋಷಪಡಬಾರದು; ಸುನ್ನತಿ ಇಲ್ಲದವರ ಪುತ್ರಿಯರು ಉತ್ಸಾಹಪಡಬಾರದು.


ಹೀಗೆಯೇ ನಿನ್ನ ಸೇವಕನು ಆ ಸಿಂಹವನ್ನೂ, ಆ ಕರಡಿಯನ್ನೂ ಕೊಂದುಬಿಟ್ಟೆನು. ಸುನ್ನತಿ ಇಲ್ಲದ ಈ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ದೂಷಿಸಿದ್ದರಿಂದ, ಅವುಗಳಲ್ಲಿ ಒಂದರ ಹಾಗೆ ಇರುವನು,” ಎಂದನು.


ಆಗ ದಾವೀದನು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರಿಗೆ, “ಈ ಫಿಲಿಷ್ಟಿಯನನ್ನು ಕೊಂದು, ಇಸ್ರಾಯೇಲಿನ ಮೇಲಿಂದ ನಿಂದೆಯನ್ನು ತೆಗೆದುಬಿಡುವ ಆ ಮನುಷ್ಯನಿಗೆ ಏನು ಸಿಕ್ಕುವುದು? ಏಕೆಂದರೆ ಸುನ್ನತಿ ಇಲ್ಲದ ಆ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ದೂಷಿಸುವುದಕ್ಕೆ ಎಷ್ಟರವನು,” ಎಂದನು.


ಆಗ ಯೋನಾತಾನನು ತನ್ನ ಆಯುಧಗಳನ್ನು ಹಿಡಿಯುವ ಯುವಕನಿಗೆ, “ನಾವು ಈ ಸುನ್ನತಿ ಇಲ್ಲದವರ ಠಾಣಕ್ಕೆ ದಾಟಿ ಹೋಗೋಣ ಬಾ; ಒಂದು ವೇಳೆ ಯೆಹೋವ ದೇವರು ನಮಗೋಸ್ಕರ ಕಾರ್ಯವನ್ನು ನಡೆಸುವರು. ಏಕೆಂದರೆ ಅನೇಕ ಜನರಿಂದಲಾದರೂ, ಸ್ವಲ್ಪ ಜನರಿಂದಲಾದರೂ ರಕ್ಷಿಸುವುದಕ್ಕೆ ಯೆಹೋವ ದೇವರಿಗೆ ಅಸಾಧ್ಯವಲ್ಲ,” ಎಂದನು.


ಸುನ್ನತಿ ಮಾಡಿಸಿಕೊಳ್ಳದವನು ನನ್ನ ಒಡಂಬಡಿಕೆಯನ್ನು ಮೀರಿದ ಕಾರಣ, ಅವನನ್ನು ಜನರೊಳಗಿಂದ ಬಹಿಷ್ಕರಿಸಬೇಕು,” ಎಂದರು.


ನೀವು ಸುನ್ನತಿ ಮಾಡಿಸಿಕೊಳ್ಳುವುದು, ನಿಮಗೂ ನನಗೂ ಉಂಟಾದ ಒಡಂಬಡಿಕೆಗೆ ಗುರುತಾಗಿ ಇರುವುದು.


ಆಗ ಯಾಕೋಬನ ಮಕ್ಕಳು ಶೆಕೆಮನಿಗೂ, ಅವನ ತಂದೆ ಹಮೋರನಿಗೂ ವಂಚನೆಯ ಉತ್ತರವನ್ನು ಕೊಟ್ಟರು. ಏಕೆಂದರೆ ಅವನು ತಮ್ಮ ತಂಗಿ ದೀನಳನ್ನು ಕೆಡಿಸಿದ್ದನು.


ಆದರೆ ನೀವು ನಮ್ಮ ಹಾಗಿದ್ದು, ನಿಮ್ಮಲ್ಲಿರುವ ಗಂಡಸರೆಲ್ಲಾ ಸುನ್ನತಿ ಮಾಡಿಸಿಕೊಂಡರೆ ಮಾತ್ರ ನಾವು ನಿಮಗೆ ಒಪ್ಪುವೆವು.


ಆಗ ಅವನ ತಂದೆಯೂ, ತಾಯಿಯೂ ಅವನಿಗೆ, “ನಿನಗೆ ಸುನ್ನತಿಯಾಗದ ಫಿಲಿಷ್ಟಿಯರಲ್ಲಿ ಹೆಂಡತಿಯನ್ನು ತೆಗೆದುಕೊಳ್ಳುವುದಕ್ಕೆ ನಿನ್ನ ಸಹೋದರರ ಪುತ್ರಿಯರಲ್ಲಿಯೂ, ನಮ್ಮ ಎಲ್ಲಾ ಜನರಲ್ಲಿಯೂ ಸ್ತ್ರೀ ಇಲ್ಲವೋ?” ಎಂದರು. ಆದರೆ ಸಂಸೋನನು ತನ್ನ ತಂದೆಗೆ, “ಅವಳನ್ನು ನನಗೆ ತೆಗೆದುಕೋ. ಏಕೆಂದರೆ ಅವಳು ನನ್ನ ಮನಸ್ಸಿಗೆ ಒಪ್ಪಿದ್ದಾಳೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು