Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 34:20 - ಕನ್ನಡ ಸಮಕಾಲಿಕ ಅನುವಾದ

20 ಆಗ ಹಮೋರನೂ, ಅವನ ಮಗ ಶೆಕೆಮನೂ ತಮ್ಮ ಪಟ್ಟಣ ದ್ವಾರದ ಬಳಿಗೆ ಬಂದು, ತಮ್ಮ ಪಟ್ಟಣದ ಜನರ ಸಂಗಡ ಮಾತನಾಡಿ ಅವರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆಗ ಹಮೋರನೂ ಅವನ ಮಗನಾದ ಶೆಕೆಮನೂ ಊರ ಬಾಗಿಲಿಗೆ ಬಂದು ಊರಿನವರೆಲ್ಲರ ಸಂಗಡ ಮಾತನಾಡಿ ಅವರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಎಂತಲೆ ಹಮೋರನು ಮತ್ತು ಅವನ ಮಗ ಶೆಕೆಮನು ಊರಬಾಗಿಲಿಗೆ ಬಂದರು. ಊರಿನವರನ್ನೆಲ್ಲಾ ಸಂಬೋಧಿಸುತ್ತಾ, ಹೀಗೆಂದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಹಮೋರನೂ ಅವನ ಮಗನಾದ ಶೆಕೆಮನೂ ಊರುಬಾಗಿಲಿಗೆ ಹೋಗಿ ಊರಿನವರೆಲ್ಲರ ಸಂಗಡ ಮಾತಾಡಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಹಮೋರನು ಮತ್ತು ಶೆಕೆಮನು ತಮ್ಮ ನಗರದ ಸಭಾಸ್ಥಳಕ್ಕೆ ಹೋದರು. ಅವರು ಪಟ್ಟಣದ ಗಂಡಸರೊಂದಿಗೆ ಮಾತಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 34:20
14 ತಿಳಿವುಗಳ ಹೋಲಿಕೆ  

ಬೋವಜನು ಪಟ್ಟಣದ ಬಾಗಿಲ ಬಳಿ ಹೋಗಿ ಕುಳಿತುಕೊಂಡನು. ಆಗ ಬೋವಜನು ಹೇಳಿದ್ದ ಆ ವಿಮೋಚಕ ಬಂಧುವು ಹಾದುಹೋಗುತ್ತಿದ್ದನು. ಬೋವಜನು ಅವನಿಗೆ, “ನನ್ನ ಸ್ನೇಹಿತನೇ, ಈ ಕಡೆಗೆ ಬಂದು ಇಲ್ಲಿ ಕುಳಿತುಕೋ,” ಎಂದನು. ಅವನು ಬಂದು ಕುಳಿತುಕೊಂಡನು.


ನೀವು ಮಾಡತಕ್ಕ ಕಾರ್ಯಗಳು ಇವೇ: ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಮಾತನಾಡಲಿ. ನಿಮ್ಮ ನ್ಯಾಯಾಲಯಗಳಲ್ಲಿ ಸತ್ಯವೂ ನ್ಯಾಯವೂ ಶಾಂತಿಯ ಸಾಧನವಾಗಿರಲಿ.


ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ, ಬಾಗಿಲಲ್ಲಿ ನ್ಯಾಯವನ್ನು ಸ್ಥಾಪಿಸಿರಿ. ಒಂದು ವೇಳೆ ಸರ್ವಶಕ್ತರಾದ ಯೆಹೋವ ದೇವರು ಯೋಸೇಫನ ಗೋತ್ರದಲ್ಲಿ ಉಳಿದವರಿಗೆ ಕನಿಕರಿಸಬಹುದು.


ಏಕೆಂದರೆ ನಿಮ್ಮ ಅನೇಕ ಅಪರಾಧಗಳನ್ನೂ, ನಿಮ್ಮ ಘೋರವಾದ ಪಾಪಗಳನ್ನೂ ನಾನು ಬಲ್ಲೆನು. ಅವರು ನಿರಪರಾಧಿಯನ್ನು ಬಾಧೆಪಡಿಸಿ, ಲಂಚವನ್ನು ತೆಗೆದುಕೊಂಡರು ಮತ್ತು ಬಾಗಿಲ ಬಳಿಯಲ್ಲಿರುವ ಬಡವರ ನ್ಯಾಯವನ್ನು ತೀರಿಸದೇ ಕಳುಹಿಸಿಬಿಟ್ಟಿರಿ.


ಸಭೆಯಲ್ಲಿ ದೋಷವನ್ನು ಎತ್ತಿ ತೋರಿಸುವವನನ್ನು ನೀವು ದ್ವೇಷಿಸುತ್ತೀರಿ. ನಿಮ್ಮ ವಿಷಯವಾಗಿ ಸತ್ಯವನ್ನು ಹೇಳುವವನನ್ನೇ ಹೀನೈಸುತ್ತೀರಿ.


ಆಕೆಯ ಪತಿಯು ಪಟ್ಟಣದಲ್ಲಿ ಸನ್ಮಾನಿತ. ದೇಶದ ಹಿರಿಯರ ಮಧ್ಯದಲ್ಲಿ ಪ್ರಸಿದ್ಧನಾಗಿ ಕುಳಿತಿರುವನು.


“ನಾನು ಪಟ್ಟಣದ ಮುಂಬಾಗಿಲಿಗೆ ಹೋದಾಗ, ಬೀದಿಯಲ್ಲಿ ನನ್ನ ಪೀಠದ ಮೇಲೆ ಕುಳಿತುಕೊಂಡಾಗ,


ಇದಲ್ಲದೆ ಅಬ್ಷಾಲೋಮನು ಬೆಳಿಗ್ಗೆ ಎದ್ದು ಬಾಗಿಲ ಬಳಿಯಲ್ಲಿ ನಿಂತುಕೊಂಡು, ವ್ಯಾಜ್ಯ ಉಂಟಾದವನು ಯಾವನಾದರೂ ನ್ಯಾಯಕ್ಕೋಸ್ಕರ ಅರಸನ ಬಳಿಗೆ ಬರುವವನಾಗಿದ್ದರೆ ಅವನನ್ನು ಕರೆದು, “ನೀನು ಯಾವ ಪಟ್ಟಣದವನು?” ಎಂದು ಕೇಳಿದನು. ಅದಕ್ಕವನು, “ನಿನ್ನ ಸೇವಕರಾದ ನಾವು ಇಸ್ರಾಯೇಲರ ಇಂಥ ಕುಲಕ್ಕೆ ಸೇರಿದವರು,” ಎಂದು ಉತ್ತರ ಕೊಡುವನು.


ಆಗ ನೀವು ಆ ಪುರುಷನನ್ನಾಗಲಿ, ಸ್ತ್ರೀಯನ್ನಾಗಲಿ ಊರ ಹೊರಗೆ ತಂದು, ಅವರು ಸಾಯುವಂತೆ ಅವರ ಮೇಲೆ ಕಲ್ಲೆಸೆಯಬೇಕು.


ಆಗ ಅವರ ಮಧ್ಯದಲ್ಲಿ ಕುಳಿತುಕೊಂಡಿದ್ದ ಹಿತ್ತಿಯನಾದ ಎಫ್ರೋನನು ಪಟ್ಟಣದ ದ್ವಾರದ ಬಳಿಯಲ್ಲಿ ಕೂತಿದ್ದ ಎಲ್ಲಾ ಹಿತ್ತಿಯರು ಕೇಳುವಂತೆ ಅಬ್ರಹಾಮನಿಗೆ,


ನಿಶ್ಚಯವಾಗಿ ನಾನು ನಿನ್ನನ್ನು ಆಶೀರ್ವದಿಸೇ ಆಶೀರ್ವದಿಸುವೆನು. ನಿನ್ನ ಸಂತಾನವನ್ನು ಆಕಾಶದ ನಕ್ಷತ್ರಗಳ ಹಾಗೆಯೂ ಸಮುದ್ರದ ತೀರದಲ್ಲಿರುವ ಮರಳಿನ ಹಾಗೆಯೂ ಹೆಚ್ಚಿಸುವೆನು. ನಿನ್ನ ಸಂತಾನದವರು ತಮ್ಮ ಶತ್ರುಗಳ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು.


ಆ ಯೌವನಸ್ಥನು ಯಾಕೋಬನ ಮಗಳನ್ನು ಮೆಚ್ಚಿದ್ದರಿಂದ, ಆ ಕಾರ್ಯವನ್ನು ಮಾಡುವುದಕ್ಕೆ ಹಿಂಜರಿಯಲಿಲ್ಲ. ಅವನು ತನ್ನ ತಂದೆಯ ಮನೆಯವರೆಲ್ಲರಿಗಿಂತ ಗೌರವವುಳ್ಳವನಾಗಿದ್ದನು.


“ಈ ಜನರು ನಮ್ಮ ಸಂಗಡ ಸಮಾಧಾನವಾಗಿದ್ದಾರೆ, ಆದ್ದರಿಂದ ಅವರು ದೇಶದಲ್ಲಿ ವಾಸಮಾಡಿ, ಅದರಲ್ಲಿ ವ್ಯಾಪಾರಮಾಡಲಿ. ದೇಶವು ಅವರಿಗಾಗಿ ಸಾಕಷ್ಟು ವಿಸ್ತಾರವಾಗಿದೆ. ಅವರ ಪುತ್ರಿಯರನ್ನು ನಮಗೆ ಹೆಂಡತಿಯರನ್ನಾಗಿ ಮಾಡಿಕೊಳ್ಳೋಣ ಮತ್ತು ನಮ್ಮ ಪುತ್ರಿಯರನ್ನು ಅವರಿಗೆ ಕೊಡೋಣ.


ಬಾಣಗಳನ್ನು ಬತ್ತಳಿಕೆಯಿಂದ ತುಂಬಿಸಿಕೊಂಡಿರುವವರು ಧನ್ಯರು, ಶತ್ರುಗಳ ಸಂಗಡ ನ್ಯಾಯಾಲಯದಲ್ಲಿ ವಾದಿಸುವಾಗ ಅವರು ನಾಚಿಕೆಪಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು