Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 34:25 - ಕನ್ನಡ ಸಮಕಾಲಿಕ ಅನುವಾದ

25 ಮೂರನೆಯ ದಿನದಲ್ಲಿ ಅವರಿಗೆ ನೋವುಂಟಾದಾಗ, ಯಾಕೋಬನ ಮಕ್ಕಳಲ್ಲಿ ಇಬ್ಬರು ಅಂದರೆ, ದೀನಳ ಸಹೋದರರಾದ ಸಿಮೆಯೋನನೂ, ಲೇವಿಯೂ ತಮ್ಮ ತಮ್ಮ ಖಡ್ಗಗಳನ್ನು ತೆಗೆದುಕೊಂಡು ಧೈರ್ಯವಾಗಿ ಪಟ್ಟಣಕ್ಕೆ ಬಂದು, ಗಂಡಸರನ್ನೆಲ್ಲಾ ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಮೂರನೆಯ ದಿನದಲ್ಲಿ ಅವರು ಗಾಯದಿಂದ ಬಹು ಬಾಧೆಪಡುತ್ತಿರುವಾಗ ಯಾಕೋಬನ ಮಕ್ಕಳೂ, ದೀನಳ ಅಣ್ಣಂದಿರಾದ ಸಿಮೆಯೋನ್, ಲೇವಿ ಎಂಬ ಇಬ್ಬರು ಕೈಯಲ್ಲಿ ಕತ್ತಿಯನ್ನು ತೆಗೆದುಕೊಂಡು ಧೈರ್ಯವಾಗಿ ಪಟ್ಟಣಕ್ಕೆ ಬಂದು ಗಂಡಸರನ್ನೆಲ್ಲಾ ಕೊಂದು ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಮೂರನೆಯ ದಿನ ಆ ಗಂಡಸರೆಲ್ಲರು ಗಾಯದಿಂದ ಇನ್ನು ಬಹಳ ಬಾಧೆಪಡುತ್ತಿದ್ದರು. ಆಗ, ಯಕೋಬನ ಮಕ್ಕಳಲ್ಲಿ ದೀನಳ ಸಹೋದರರಾದ ಸಿಮೆಯೋನ್ ಮತ್ತು ಲೇವಿ ಎಂಬ ಇಬ್ಬರು ಕೈಯಲ್ಲಿ ಕತ್ತಿಹಿಡಿದು ನಿಶ್ಚಿಂತೆ ಇಂದಿದ್ದ ಆ ಊರಿನವರ ಮೇಲೆ ಬಿದ್ದರು. ದಯೆದಾಕ್ಷಿಣ್ಯವಿಲ್ಲದೆ ಗಂಡಸರೆಲ್ಲರನ್ನು ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಮೂರನೆಯ ದಿನದಲ್ಲಿ ಅವರು ಗಾಯದಿಂದ ಬಹು ಬಾಧೆಪಡುತ್ತಿರುವಾಗ ಯಾಕೋಬನ ಮಕ್ಕಳಲ್ಲಿ ದೀನಳ ಅಣ್ಣಂದಿರಾದ ಸಿಮೆಯೋನ್, ಲೇವಿ ಎಂಬ ಇಬ್ಬರು ಕೈಯಲ್ಲಿ ಕತ್ತಿಹಿಡುಕೊಂಡು ನಿರ್ಭಯವಾಗಿದ್ದ ಆ ಊರಿನವರ ಮೇಲೆ ಬಿದ್ದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಮೂರು ದಿನಗದರೂ ಸುನ್ನತಿ ಮಾಡಿಸಿಕೊಂಡಿದ್ದ ಗಂಡಸರು ಇನ್ನೂ ಗಾಯದ ನೋವಿನಲ್ಲಿದ್ದರು. ಈ ಸಮಯದಲ್ಲಿ ಗಂಡಸರು ಬಲಹೀನರಾಗಿರುತ್ತಾರೆ ಎಂಬುದು ಯಾಕೋಬನ ಇಬ್ಬರು ಗಂಡುಮಕ್ಕಳಾದ ಸಿಮೆಯೋನ್ ಮತ್ತು ಲೇವಿಗೆ ತಿಳಿದಿತ್ತು. ಆದ್ದರಿಂದ ಅವರು ಪಟ್ಟಣಕ್ಕೆ ಹೋಗಿ ಅಲ್ಲಿದ್ದ ಎಲ್ಲಾ ಗಂಡಸರನ್ನು ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 34:25
10 ತಿಳಿವುಗಳ ಹೋಲಿಕೆ  

ಕೇಡು ಮಾಡದಿದ್ದರೆ ದುಷ್ಟರಿಗೆ ನಿದ್ರೆಬಾರದು; ಯಾರನ್ನಾದರೂ ಬೀಳಿಸದಿದ್ದರೆ, ಅವರಿಗೆ ನಿದ್ರೆ ಹತ್ತುವುದಿಲ್ಲ.


ಆದರೆ ಹಿಜ್ಕೀಯನು ತನಗೆ ಆದ ಉಪಕಾರಕ್ಕೆ ತಕ್ಕಂತೆ ನಡೆಯದೆ ಹೋದನು. ಏಕೆಂದರೆ ಅವನ ಹೃದಯವು ಅಹಂಕಾರದಿಂದ ತುಂಬಿತ್ತು. ಆದ್ದರಿಂದ ಅವನ ಮೇಲೆಯೂ, ಯೆಹೂದ ಮತ್ತು ಯೆರೂಸಲೇಮಿನ ಮೇಲೆಯೂ ಯೆಹೋವ ದೇವರ ರೌದ್ರ ಉಂಟಾಯಿತು.


ಜನರೆಲ್ಲರೂ ಸುನ್ನತಿ ಮಾಡಿಸಿಕೊಂಡ ತರುವಾಯ ಅವರು ವಾಸಿಯಾಗುವವರೆಗೂ ಪಾಳೆಯದೊಳಗೆ ತಮ್ಮ ತಮ್ಮ ಸ್ಥಳಗಳಲ್ಲಿ ಇದ್ದರು.


ಈಜಿಪ್ಟಿನಿಂದ ಹೊರಟ ಇಸ್ರಾಯೇಲರು ಯೆಹೋವ ದೇವರ ಸ್ವರಕ್ಕೆ ವಿಧೇಯರಾಗದಿದ್ದರಿಂದ ಅವರು, ತಮ್ಮ ಯುದ್ಧವೀರರೆಲ್ಲಾ ನಾಶವಾಗುವ ತನಕ ನಾಲ್ವತ್ತು ವರ್ಷಗಳವರೆಗೆ ಮರುಭೂಮಿಯಲ್ಲಿ ಅಲೆದಾಡುತ್ತಿದ್ದರು. ಏಕೆಂದರೆ ಯೆಹೋವ ದೇವರು ಅವರ ತಂದೆಗಳಿಗೆ ವಾಗ್ದಾನಮಾಡಿದ್ದ, ಹಾಲು ಜೇನು ಹರಿಯುವ ದೇಶವನ್ನು ಅವರು ಕಾಣುವುದಿಲ್ಲ ಎಂದು ಯೆಹೋವ ದೇವರು ಅವರಿಗೆ ಆಣೆಯಿಟ್ಟಿದ್ದರು.


ಆದಕಾರಣ ಈಗ ಬಾಲಕರನ್ನೂ, ಎಲ್ಲಾ ಪುರುಷನನ್ನು ಅರಿತಿರುವ ಎಲ್ಲಾ ಸ್ತ್ರೀಯರನ್ನು ಕೊಂದುಹಾಕಿರಿ.


ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವರು ಮಿದ್ಯಾನ್ಯರ ಮೇಲೆ ಯುದ್ಧಮಾಡಿ,


ಹಮೋರನನ್ನೂ, ಅವನ ಮಗನಾದ ಶೆಕೆಮನನ್ನೂ ಅವರು ಖಡ್ಗದಿಂದ ಕೊಂದುಹಾಕಿ, ದೀನಳನ್ನು ಶೆಕೆಮನ ಮನೆಯಿಂದ ಕರೆದುಕೊಂಡು ಹೊರಗೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು