Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 34:27 - ಕನ್ನಡ ಸಮಕಾಲಿಕ ಅನುವಾದ

27 ಅವರು ತಮ್ಮ ಸಹೋದರಿಯನ್ನು ಕೆಡಿಸಿದ್ದರಿಂದ ಯಾಕೋಬನ ಮಕ್ಕಳು ಬಂದು ಆ ಊರನ್ನೇ ಕೊಳ್ಳೆಹೊಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅವರು ಹತವಾದ ನಂತರ ಯಾಕೋಬನ ಮಕ್ಕಳು ಬಂದು, ಇವರು ನಮ್ಮ ತಂಗಿಯನ್ನು ಮಾನಭಂಗಪಡಿಸಿದ್ದಾರೆ ಎಂದು ಹೇಳಿ ಊರನ್ನು ಸೂರೆಮಾಡಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಯಕೋಬನ ಇತರ ಮಕ್ಕಳು ಹತರಾದವರ ಬಳಿಗೆ ಬಂದು, ‘ತಂಗಿಯನ್ನು ಅವಮಾನ ಪಡಿಸಿದವರು ಇವರೇ ಅಲ್ಲವೆ’, ಎಂದುಕೊಂಡು ಆ ಊರನ್ನೇ ಸೂರೆಮಾಡಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅವರು ಹತವಾದನಂತರ ಯಾಕೋಬನ ಮಕ್ಕಳು ಬಂದು - ಇವರು ನಮ್ಮ ತಂಗಿಯನ್ನು ಅವಮಾನಪಡಿಸಿದರಲ್ಲಾ ಎಂದು ಹೇಳಿ ಊರನ್ನು ಸೂರೆಮಾಡಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಯಾಕೋಬನ ಗಂಡುಮಕ್ಕಳು ಪಟ್ಟಣದೊಳಗೆ ಹೋಗಿ ಅಲ್ಲಿದ್ದ ಪ್ರತಿಯೊಂದನ್ನು ತೆಗೆದುಕೊಂಡರು. ತಮ್ಮ ತಂಗಿಗೆ ಶೆಕೆಮನು ಮಾಡಿದ ಮಾನಭಂಗದಿಂದ ಅವರು ಇನ್ನೂ ಕೋಪದಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 34:27
13 ತಿಳಿವುಗಳ ಹೋಲಿಕೆ  

ಹಣದ ಪ್ರೀತಿಯು ಸಕಲ ವಿಧವಾದ ಕೆಟ್ಟತನಕ್ಕೆ ಬೇರಾಗಿದೆ. ಕೆಲವರು ಹಣಕ್ಕಾಗಿ ಆತುರಪಟ್ಟು ನಂಬಿಕೆಯಿಂದ ದೂರಹೋಗಿ ಅನೇಕ ದುಃಖಗಳಿಂದ ತಮ್ಮನ್ನು ತಿವಿಸಿಕೊಳ್ಳುತ್ತಾರೆ.


ಅರಸನ ಪ್ರಾಂತಗಳಲ್ಲಿರುವ ಮಿಕ್ಕ ಯೆಹೂದ್ಯರು ತಮ್ಮ ಪ್ರಾಣ ರಕ್ಷಣೆಗಾಗಿ ಎದ್ದು ನಿಂತು, ತಮ್ಮ ಶತ್ರುಗಳ ಕಾಟದಿಂದ ವಿಶ್ರಾಂತಿ ಪಡೆಯುವಂತೆ ಒಟ್ಟಾಗಿ ಸೇರಿದರು. ಅವರು ತಮ್ಮ ವೈರಿಗಳಲ್ಲಿ 75,000 ಮಂದಿಗೆ ಮರಣದಂಡನೆ ವಿಧಿಸಿದರು. ಆದರೆ ಅವರ ಸುಲಿಗೆಯನ್ನು ತೆಗೆದುಕೊಳ್ಳಲಿಲ್ಲ.


ಇವರು ಯೆಹೂದ್ಯರ ವೈರಿಯಾದ ಹಮ್ಮೆದಾತನ ಮಗ ಹಾಮಾನನ ಹತ್ತು ಮಂದಿ ಪುತ್ರರು. ಆದರೆ ಅವರು ಇವರ ಸುಲಿಗೆಯನ್ನು ತೆಗೆದುಕೊಳ್ಳಲಿಲ್ಲ.


ನಾನು ಕೊಳ್ಳೆಯಲ್ಲಿ ಒಂದು ಶಿನಾರ್ ದೇಶದ ಒಳ್ಳೆಯ ವಸ್ತ್ರವನ್ನೂ ಎರಡು ಕಿಲೋಗ್ರಾಂ ತೂಕದ ಬೆಳ್ಳಿಯನ್ನೂ ಅರ್ಧ ಕಿಲೋಗ್ರಾಂ ತೂಕದ ಒಂದು ಬಂಗಾರದ ಗಟ್ಟಿಯನ್ನು ಕಂಡು ಅವುಗಳನ್ನು ಆಶಿಸಿ ತೆಗೆದುಕೊಂಡೆನು. ಅವುಗಳನ್ನು ನನ್ನ ಗುಡಾರದ ಮಧ್ಯದಲ್ಲಿ ನೆಲದೊಳಗೆ ಬಚ್ಚಿಟ್ಟಿದ್ದೇನೆ, ಬೆಳ್ಳಿಯೂ ಅದರ ಕೆಳಗೆ ಇದೆ,” ಎಂದನು.


“ನೀನು ಎದ್ದು ಜನರನ್ನು ಶುದ್ಧೀಕರಿಸಿ, ನಾಳೆಗೆ ನಿಮ್ಮನ್ನು ಪರಿಶುದ್ಧ ಮಾಡಿಕೊಳ್ಳಿರಿ, ಏಕೆಂದರೆ, ‘ಇಸ್ರಾಯೇಲೇ, ನಿನ್ನ ಮಧ್ಯದಲ್ಲಿ ಶಾಪಕ್ಕೆ ಕಾರಣವಾದದ್ದು ಉಂಟು, ಅದನ್ನು ನಿಮ್ಮಲ್ಲಿಂದ ತೆಗೆದುಹಾಕುವವರೆಗೂ ನೀನು ನಿನ್ನ ಶತ್ರುಗಳ ಮುಂದೆ ನಿಲ್ಲಲಾರೆ,’ ಎಂದು ಇಸ್ರಾಯೇಲರ ದೇವರಾದ ಯೆಹೋವ ದೇವರು ಹೇಳುತ್ತಾರೆ.


ಆದರೆ ಇಸ್ರಾಯೇಲರು ಅರ್ಪಿತವಾದ ವಸ್ತುಗಳ ವಿಷಯದಲ್ಲಿ ಅಪನಂಬಿಕೆಯಿಂದ ನಡೆದುಕೊಂಡರು. ಯೆಹೂದ ಗೋತ್ರದ ಜೆರಹನ ಮೊಮ್ಮಗನೂ, ಜಿಮ್ರಿಯ ಮಗನೂ ಆದ ಕರ್ಮೀಯ ಮಗನಾದ ಆಕಾನನು ಅರ್ಪಿತವಾದ ವಸ್ತುಗಳಲ್ಲಿ ಕೆಲವನ್ನು ಕದ್ದುಕೊಂಡನು. ಇದರಿಂದ ಇಸ್ರಾಯೇಲರ ಮೇಲೆ ಯೆಹೋವ ದೇವರ ಕೋಪವು ಉರಿಯಿತು.


ಅದಕ್ಕವನು, “ಯಾರು ನಿನ್ನನ್ನು ನಮ್ಮ ಮೇಲೆ ಪ್ರಭುವನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ನೇಮಿಸಿದ್ದಾರೆ? ಆ ಈಜಿಪ್ಟಿನವನನ್ನು ಕೊಂದುಹಾಕಿದಂತೆ ನನ್ನನ್ನೂ ಕೊಂದು ಹಾಕಬೇಕೆಂದಿದ್ದೀಯೋ?” ಎಂದನು. ಆಗ ಮೋಶೆಯು ಭಯಪಟ್ಟು, “ನಿಶ್ಚಯವಾಗಿ ನಾನು ಮಾಡಿದ ಕಾರ್ಯವು ತಿಳಿದಿರಬೇಕು,” ಎಂದುಕೊಂಡನು.


ಆದರೆ ಅವರು, “ಅವನು ನಮ್ಮ ತಂಗಿಯನ್ನು ವೇಶ್ಯೆಯಂತೆ ನಡೆಸಬಹುದೋ?” ಎಂದರು.


ದೇಶದ ಪ್ರಭುವಾಗಿದ್ದ ಹಿವ್ವಿಯನಾದ ಹಮೋರನ ಮಗ ಶೆಕೆಮನು ಆಕೆಯನ್ನು ತೆಗೆದುಕೊಂಡುಹೋಗಿ ಮಾನಭಂಗ ಮಾಡಿದನು.


ಹಮೋರನನ್ನೂ, ಅವನ ಮಗನಾದ ಶೆಕೆಮನನ್ನೂ ಅವರು ಖಡ್ಗದಿಂದ ಕೊಂದುಹಾಕಿ, ದೀನಳನ್ನು ಶೆಕೆಮನ ಮನೆಯಿಂದ ಕರೆದುಕೊಂಡು ಹೊರಗೆ ಹೋದರು.


ಪಟ್ಟಣದಲ್ಲಿಯೂ, ಹೊಲದಲ್ಲಿಯೂ ಇದ್ದ ಅವರ ಕುರಿ, ದನ, ಕತ್ತೆಗಳನ್ನು ತೆಗೆದುಕೊಂಡರು.


ಅದಕ್ಕಾಗಿ ಅವರು ಬಯಲಿನಿಂದ ಮರಗಳನ್ನು ತೆಗೆದುಕೊಳ್ಳುವುದಿಲ್ಲ ಅಥವಾ ಅರಣ್ಯಗಳಲ್ಲಿ ಯಾವುದನ್ನೂ ಕತ್ತರಿಸಿಕೊಳ್ಳುವುದೂ ಇಲ್ಲ, ಅವರು ಆಯುಧಗಳನ್ನು ಬೆಂಕಿಗೆ ಸೌದೆಯಾಗಿ ಉಪಯೋಗಿಸುವರು. ಅವರು ಸೂರೆಯಾದವುಗಳನ್ನು ಸೂರೆ ಮಾಡುವರು ಮತ್ತು ಕೊಳ್ಳೆ ಹೊಡೆದವರನ್ನು ತಾವು ಕೊಳ್ಳೆಹೊಡೆಯುವರು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ವಿರೋಧಿಯು ದೇಶದ ಸುತ್ತಲೂ ಇರುವನು. ನಿನ್ನ ಬಲವನ್ನು ತಗ್ಗಿಸುವನು. ನಿನ್ನ ಅರಮನೆಗಳು ಸೂರೆಯಾಗುವುವು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು