Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 35:16 - ಕನ್ನಡ ಸಮಕಾಲಿಕ ಅನುವಾದ

16 ಬೇತೇಲಿನಿಂದ ಅವರು ಪ್ರಯಾಣಮಾಡಿ, ಎಫ್ರಾತೂರಿಗೆ ಇನ್ನೂ ಸ್ವಲ್ಪ ದೂರ ಇರುವಾಗ, ರಾಹೇಲಳು ಪ್ರಸವವೇದನೆಯಿಂದ ಕಷ್ಟಪಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅವರು ಬೇತೇಲಿನಿಂದ ಪ್ರಯಾಣಮಾಡುತ್ತಿರಲು ಎಫ್ರಾತಿಗೆ ಸೇರುವುದಕ್ಕೆ ಇನ್ನೂ ಸ್ವಲ್ಪ ದೂರವಿದ್ದಾಗ ರಾಹೇಲಳು ಪ್ರಸವ ವೇದನೆಯಿಂದ ನರಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆ ಬಳಿಕ ಅವರು ಬೇತೇಲನ್ನು ಬಿಟ್ಟು ಹೊರಟರು. ಎಫ್ರಾತೂರಿಗೆ ಸೇರುವುದಕ್ಕೆ ಇನ್ನು ಸ್ವಲ್ಪ ದೂರವಿದ್ದಾಗ ರಾಖೇಲಳಿಗೆ ಹೆರಿಗೆಯ ಕಾಲ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅವರು ಬೇತೇಲಿನಿಂದ ಪ್ರಯಾಣ ಮಾಡುತ್ತಿರಲು ಎಫ್ರಾತೂರಿಗೆ ಸೇರುವದಕ್ಕೆ ಇನ್ನೂ ಸ್ವಲ್ಪ ದೂರವಿದ್ದಾಗ ರಾಹೇಲಳಿಗೆ ಹೆರಿಗೇ ಕಾಲಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯಾಕೋಬನು ಮತ್ತು ಅವನ ಜನರು ಬೇತೇಲಿನಿಂದ ಹೊರಟು ಬೆತ್ಲೆಹೇಮೆಂಬ ಎಫ್ರಾತೂರಿಗೆ ಬರುವುದಕ್ಕಿಂತ ಸ್ವಲ್ಪಮುಂಚೆ ರಾಹೇಲಳಿಗೆ ಹೆರಿಗೆ ಕಾಲ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 35:16
15 ತಿಳಿವುಗಳ ಹೋಲಿಕೆ  

ಆದರೆ ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗೋತ್ರಗಳಲ್ಲಿ ಸಣ್ಣದಾಗಿದ್ದರೂ ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು. ಆತನ ಮೂಲವು ಪೂರ್ವದಿಂದಲೂ ಅನಾದಿ ಕಾಲದಿಂದಲೂ ಆದದ್ದು.


“ರಾಮದಲ್ಲಿ ರೋದನೆಯು ಕೇಳಿಸಿತು, ಗೋಳಾಟವೂ ಮಹಾ ಪ್ರಲಾಪವೂ ಕೇಳಿಬಂತು. ರಾಹೇಲಳು ತನ್ನ ಮಕ್ಕಳಿಗಾಗಿ ಗೋಳಾಡುತ್ತಾ, ಆದರಣೆ ಹೊಂದದೆ ಹೋಗಿದ್ದಾಳೆ. ಏಕೆಂದರೆ ಅವಳ ಮಕ್ಕಳು ಇನ್ನಿಲ್ಲ.”


ನಾನು ಪದ್ದನ್ ಅರಾಮಿನಿಂದ ಬಂದಾಗ, ಕಾನಾನ್ ದೇಶದಲ್ಲಿ ಎಫ್ರಾತಿನಿಂದ ಸ್ವಲ್ಪ ದೂರವಾಗಿರುವಾಗ, ರಾಹೇಲಳು ಸತ್ತುಹೋದಳು. ಅಲ್ಲಿ ಅಂದರೆ, ಬೇತ್ಲೆಹೇಮ್ ಎಂಬ ಎಫ್ರಾತಿಗೆ ಹೋಗುವ ಮಾರ್ಗದಲ್ಲಿ ಆಕೆಯನ್ನು ಸಮಾಧಿಮಾಡಿದೆನು,” ಎಂದನು.


ಆದರೂ ಸ್ತ್ರೀಯರು ಸ್ವಸ್ಥಬುದ್ಧಿಯಿಂದ ನಂಬಿಕೆ, ಪ್ರೀತಿ ಹಾಗೂ ಪರಿಶುದ್ಧತೆಯಲ್ಲಿ ನೆಲೆಗೊಂಡಿದ್ದರೆ ಅವರು ಮಗುವನ್ನು ಹೆರುವುದರ ಮೂಲಕ ರಕ್ಷಣೆಹೊಂದುವರು.


ಜ್ಞಾನಿಗಳು ತನಗೆ ಮೋಸಮಾಡಿದರೆಂದು ತಿಳಿದ ಹೆರೋದನು ಬಹಳ ಕೋಪಗೊಂಡನು, ಜ್ಞಾನಿಗಳಿಂದ ಸೂಕ್ಷ್ಮವಾಗಿ ವಿಚಾರಿಸಿಕೊಂಡ ಪ್ರಕಾರವೇ, ಬೇತ್ಲೆಹೇಮ್ ಮತ್ತು ಅದರ ಸುತ್ತಮುತ್ತಲ ಪ್ರದೇಶದಲ್ಲಿದ್ದ ಎರಡು ವರ್ಷದೊಳಗಿನ ಎಲ್ಲಾ ಗಂಡು ಮಕ್ಕಳನ್ನು ಕೊಂದುಹಾಕಿಸಿದನು.


ಹೆರೋದ ರಾಜನ ಕಾಲದಲ್ಲಿ, ಯೂದಾಯದ ಬೇತ್ಲೆಹೇಮಿನಲ್ಲಿ ಯೇಸು ಜನಿಸಿದಾಗ, ಪೂರ್ವ ದೇಶದಿಂದ ಜ್ಞಾನಿಗಳು ಯೆರೂಸಲೇಮಿಗೆ ಬಂದು,


ನಾವು ಎಫ್ರಾತದಲ್ಲಿ ಇದನ್ನು ಕೇಳಿದೆವು; ಯಹಾರ್ ಅಡವಿಯ ಬಯಲುಗಳಲ್ಲಿ ಇದನ್ನು ಕಂಡು ಹೀಗೆಂದು ಕೇಳಿಸಿಕೊಂಡೆವು:


ಅಜೂಬಳ ಮರಣದ ನಂತರ, ಕಾಲೇಬನು ಎಫ್ರಾತಳನ್ನು ಮದುವೆಯಾದನು. ಅವಳು ಅವನಿಗೆ ಹೂರನನ್ನು ಹೆತ್ತಳು.


ಅದಕ್ಕೆ ಎಲೀಷನು, “ಸಮಾಧಾನದಿಂದ ಹೋಗು,” ಎಂದನು. ನಾಮಾನನು ಸ್ವಲ್ಪ ದೂರ ಹೋದನು.


ಆ ಮನುಷ್ಯನ ಹೆಸರು ಎಲೀಮೆಲೆಕನು. ಅವನ ಹೆಂಡತಿಯ ಹೆಸರು ನೊವೊಮಿ. ಅವನ ಪುತ್ರರಲ್ಲಿ ಒಬ್ಬನ ಹೆಸರು ಮಹ್ಲೋನನು, ಮತ್ತೊಬ್ಬನ ಹೆಸರು ಕಿಲ್ಯೋನನು. ಯೆಹೂದ ದೇಶಕ್ಕೆ ಸೇರಿದ ಎಫ್ರಾತದಲ್ಲಿರುವ ಬೇತ್ಲೆಹೇಮಿನವರಾದ ಇವರು ಬಂದು ಮೋವಾಬ್ ದೇಶದಲ್ಲಿ ವಾಸವಾಗಿದ್ದರು.


ಸತ್ತು ಹೋದ ರಾಹೇಲಳನ್ನು ಬೇತ್ಲೆಹೇಮ್ ಎಂಬ ಎಫ್ರಾತಿಗೆ ಹೋಗುವ ಮಾರ್ಗದಲ್ಲಿ ಹೂಳಿಟ್ಟರು.


ಬಳಿಕ ದೇವರು ಸ್ತ್ರೀಗೆ ಹೀಗೆ ಹೇಳಿದರು, “ನಾನು ನಿನ್ನ ಗರ್ಭ ವೇದನೆಯನ್ನು ಅಧಿಕವಾಗಿ ಹೆಚ್ಚಿಸುವೆನು. ನೀನು ನೋವಿನಿಂದ ಮಕ್ಕಳನ್ನು ಹೆರುವಿ. ನಿನ್ನ ಗಂಡನ ಮೇಲೆ ನಿನ್ನ ಬಯಕೆ ಇರುವುದು. ಅವನು ನಿನ್ನನ್ನು ಆಳುವನು.”


ಆಗ ಊರುಬಾಗಿಲಲ್ಲಿ ಕೂಡಿದ್ದ ಸಮಸ್ತ ಜನರೂ ಹಿರಿಯರೂ, “ನಾವು ಸಾಕ್ಷಿಗಳೇ, ನಿನ್ನ ಮನೆಯಲ್ಲಿ ಬಂದ ಸ್ತ್ರೀಯನ್ನು ಯೆಹೋವ ದೇವರು ಇಸ್ರಾಯೇಲ್ ಮನೆಯನ್ನು ಕಟ್ಟಿದ ಇಬ್ಬರಾದ ರಾಹೇಲಳ ಹಾಗೆಯೂ ಲೇಯಳ ಹಾಗೆಯೂ ಮಾಡಲಿ. ಎಫ್ರಾತದಲ್ಲಿ ಧನವಂತನಾಗಿರು, ಬೇತ್ಲೆಹೇಮಿನಲ್ಲಿ ಘನವಂತನಾಗಿರು.


ಅವಳು ಸಾಯುವ ವೇಳೆಯಲ್ಲಿ, ಅವಳ ಬಳಿಯಲ್ಲಿ ನಿಂತಿರುವ ಸ್ತ್ರೀಯರು, “ಭಯಪಡಬೇಡ. ಗಂಡು ಮಗುವನ್ನು ಹೆತ್ತಿದ್ದೀ,” ಎಂದು ಅವಳಿಗೆ ಹೇಳಿದರು. ಆಕೆ ಅವರ ಮಾತಿಗೆ ಲಕ್ಷ್ಯವನ್ನೂ ಕೊಡಲಿಲ್ಲ, ಪ್ರತ್ಯುತ್ತರವನ್ನೂ ಕೊಡಲಿಲ್ಲ.


ನೀನು ಈ ಹೊತ್ತು ನನ್ನನ್ನು ಬಿಟ್ಟುಹೋದಾಗ, ಬೆನ್ಯಾಮೀನ್ಯರ ಮೇರೆಯಾದ ಚೆಲ್ಚಹಿನಲ್ಲಿರುವ ರಾಹೇಲಳ ಸಮಾಧಿಯ ಬಳಿಯಲ್ಲಿ ಇಬ್ಬರು ಮನುಷ್ಯರನ್ನು ಕಂಡುಕೊಳ್ಳುವೆ. ಅವರು ನಿನಗೆ, ‘ನೀನು ಹುಡುಕಲು ಹೋದ ಕತ್ತೆಗಳು ಸಿಕ್ಕಿದವು, ನಿನ್ನ ತಂದೆಯು ಕತ್ತೆಗಳ ಚಿಂತೆ ಬಿಟ್ಟು, ನಿನಗೋಸ್ಕರ ಚಿಂತೆಪಟ್ಟು, ತನ್ನ ಮಗನಿಗೋಸ್ಕರ ಏನು ಮಾಡಲಿ? ಎನ್ನುತ್ತಾನೆ,’ ಎಂದು ಹೇಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು