Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 35:4 - ಕನ್ನಡ ಸಮಕಾಲಿಕ ಅನುವಾದ

4 ಆಗ ಅವರು ತಮ್ಮ ಬಳಿಯಲ್ಲಿದ್ದ ಎಲ್ಲಾ ಅನ್ಯದೇವರುಗಳನ್ನೂ, ತಮ್ಮ ಕಿವಿಗಳಲ್ಲಿದ್ದ ಮುರುವುಗಳನ್ನೂ ತೆಗೆದು, ಯಾಕೋಬನಿಗೆ ಕೊಟ್ಟರು. ಅವನು ಅವುಗಳನ್ನು ಶೆಕೆಮ್ ಊರಿಗೆ ಸಮೀಪವಾಗಿದ್ದ ಏಲಾ ಮರದ ಕೆಳಗೆ ಹೂಳಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಗ ಅವರು ತಮ್ಮಲ್ಲಿದ್ದ ಎಲ್ಲಾ ಅನ್ಯ ದೇವರುಗಳನ್ನು, ತಮ್ಮ ಕಿವಿಯಲ್ಲಿದ್ದ ಓಲೆಗಳನ್ನು ಯಾಕೋಬನಿಗೆ ಕೊಟ್ಟರು. ಅವನು ಅವುಗಳನ್ನು ಶೆಕೆಮ್ ಪಟ್ಟಣದ ಹತ್ತಿರವಿರುವ ಏಲಾ ಮರದ ಕೆಳಗೆ ಹೂಣಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅಂತೆಯೆ ಅವರು ತಮ್ಮಲ್ಲಿದ್ದ ಎಲ್ಲ ಅನ್ಯದೇವರುಗಳನ್ನೂ ತಮ್ಮ ಕಿವಿಗಳಲ್ಲಿದ್ದ ಮುರುವುಗಳನ್ನೂ ಯಕೋಬನಿಗೆ ಒಪ್ಪಿಸಿಬಿಟ್ಟರು. ಅವನು ಅವುಗಳನ್ನು ಶೆಕೆಮ್ ಪಟ್ಟಣದ ಹತ್ತಿರ ಇದ್ದ ಒಂದು ಓಕ್ ಮರದ ಬುಡದಡಿಯಲ್ಲಿ ಹೂಳಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆಗ ಅವರು ತಮ್ಮಲ್ಲಿದ್ದ ಎಲ್ಲಾ ಅನ್ಯದೇವರುಗಳನ್ನೂ ತಮ್ಮ ಕಿವಿಗಳಲ್ಲಿದ್ದ ಮುರುವುಗಳನ್ನೂ ಯಾಕೋಬನಿಗೆ ಒಪ್ಪಿಸಲು ಅವನು ಅವುಗಳನ್ನು ಶೆಕೆಮ್ ಪಟ್ಟಣದ ಹತ್ತಿರವಿರುವ ಏಲಾವೃಕ್ಷದ ಬುಡದಲ್ಲಿ ಹೂಳಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದ್ದರಿಂದ ಅವರು ತಮ್ಮಲ್ಲಿದ್ದ ಎಲ್ಲಾ ಅನ್ಯದೇವರುಗಳನ್ನೂ ತಮ್ಮ ಕಿವಿಗಳಲ್ಲಿದ್ದ ವಾಲೆಗಳನ್ನೂ ಯಾಕೋಬನಿಗೆ ಕೊಟ್ಟರು. ಯಾಕೋಬನು ಅವುಗಳನ್ನೆಲ್ಲಾ ಶೆಕೆಮ್ ಪಟ್ಟಣದ ಸಮೀಪದಲ್ಲಿರುವ ಏಲಾವೃಕ್ಷದ ಬುಡದಲ್ಲಿ ಹೂಳಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 35:4
13 ತಿಳಿವುಗಳ ಹೋಲಿಕೆ  

ಶೆಕೆಮಿನ ಜನರೆಲ್ಲರೂ, ಮಿಲ್ಲೋನಿನ ಮನೆಯವರೆಲ್ಲರೂ ಕೂಡಿಕೊಂಡು ಹೋಗಿ, ಶೆಕೆಮಿನ ಬಯಲಲ್ಲಿ ಇರುವ ಸ್ತಂಭದ ಬಳಿ ಇರುವ ಅಲ್ಲೋನ್ ಮರದ ಹತ್ತಿರ ಸೇರಿ ಅಬೀಮೆಲೆಕನನ್ನು ಅರಸನನ್ನಾಗಿ ನೇಮಿಸಿದರು.


ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನೂ, ಎರಕದ ನಿಮ್ಮ ವಿಗ್ರಹಗಳ ಬಂಗಾರದ ಹೊದಿಕೆಯನ್ನೂ ನೀವು ಹೊಲಸ್ಸಾಗಿ ಭಾವಿಸಿ, ಆ ವಿಗ್ರಹಕ್ಕೆ, “ತೊಲಗಿಹೋಗು,” ಎಂದು ಹೇಳಿ, ಅದನ್ನು ಹೊಲೆಯ ಬಟ್ಟೆಯಂತೆ ಬಿಸಾಡಿ ಬಿಡುವಿರಿ.


ಅವರ ದೇವರುಗಳ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು. ಅವುಗಳ ಮೇಲಿರುವ ಬೆಳ್ಳಿಬಂಗಾರವನ್ನು ಆಶಿಸಿ ನೀವು ತೆಗೆದುಕೊಳ್ಳಬಾರದು. ಅದು ನಿಮಗೆ ಉರುಲಾದೀತು. ಏಕೆಂದರೆ ಅದು ನಿಮ್ಮ ದೇವರಾದ ಯೆಹೋವ ದೇವರಿಗೆ ಅಸಹ್ಯವೇ.


ಅವರು ಮಾಡಿದ ಕರುವನ್ನು ಅವನು ತೆಗೆದುಕೊಂಡು, ಅದನ್ನು ಬೆಂಕಿಯಿಂದ ಸುಟ್ಟು ಪುಡಿಯಾಗುವವರೆಗೆ ಅರೆದು ನೀರಿನ ಮೇಲೆ ಚೆಲ್ಲಿ, ಆ ನೀರನ್ನು ಇಸ್ರಾಯೇಲರು ಕುಡಿಯುವಂತೆ ಮಾಡಿದನು.


ತರುವಾಯ ಅವಳು ನನ್ನನ್ನು ಮರೆತು ಕಿವಿಯೋಲೆ ಮೊದಲಾದ ಒಡವೆಗಳಿಂದ ಸಿಂಗರಿಸಿಕೊಂಡು, ಅವಳ ಪ್ರೇಮಿಗಳ ಹಿಂದೆ ಹೋಗಿ, ಬಾಳ್ ದೇವತೆಗಳಿಗೆ ಧೂಪ ಸುಟ್ಟ ದಿವಸಗಳಿಗಾಗಿ ನಾನು ಅವಳನ್ನು ದಂಡಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ಆ ದಿನದಲ್ಲಿ ಮನುಷ್ಯರು ಪೂಜಿಸುವುದಕ್ಕೋಸ್ಕರ ಮಾಡಿಕೊಂಡ ಬೆಳ್ಳಿಯ ಬೊಂಬೆಗಳನ್ನೂ ಚಿನ್ನದ ವಿಗ್ರಹಗಳನ್ನೂ ಇಲಿ ಬಾವಲಿಗಳಿಗಾಗಿ ಬಿಸಾಡಿಬಿಡುವರು.


ಅವರ ಬಲಿಪೀಠಗಳನ್ನು ಒಡೆದುಹಾಕಬೇಕು. ಅವರ ಪವಿತ್ರ ಕಲ್ಲುಕಂಬಗಳನ್ನು ಒಡೆದು, ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದುಹಾಕಬೇಕು. ಅವರ ಕೆತ್ತಿದ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು. ನೀವು ಅವರಿಗೆ ಹೀಗೆ ಮಾಡತಕ್ಕದ್ದು.


ಅಬ್ರಾಮನು ಆ ದೇಶದಲ್ಲಿ ಶೆಕೆಮ್ ಎಂಬ ಸ್ಥಳದ ಮೋರೆ ಎಂಬ ಮಹಾವೃಕ್ಷದವರೆಗೆ ಪ್ರಯಾಣಮಾಡಿದನು. ಆಗ ಕಾನಾನ್ಯರು ಆ ದೇಶದಲ್ಲಿ ಇದ್ದರು.


ನಾವು ಇಲ್ಲಿಂದ ಹೊರಟು ಬೇತೇಲಿಗೆ ಹೋಗೋಣ. ಕಷ್ಟಕಾಲದಲ್ಲಿ ನನ್ನ ವಿಜ್ಞಾಪನೆಯನ್ನು ಆಲಿಸಿ, ನಾನು ಹೋದ ದಾರಿಯಲ್ಲಿ ನನ್ನ ಸಂಗಡ ಇದ್ದ ದೇವರಿಗೆ ಅಲ್ಲಿ ನಾನು ಬಲಿಪೀಠವನ್ನು ಕಟ್ಟುವೆನು,” ಎಂದನು.


ತರುವಾಯ ಅವರು ಮುಂದೆ ಪ್ರಯಾಣಮಾಡಿದರು. ಆಗ ಸುತ್ತಲಿರುವ ಪಟ್ಟಣಗಳವರ ಮೇಲೆ ದೇವರ ಭಯವು ಇದ್ದುದರಿಂದ, ಅವರು ಯಾಕೋಬನ ಮಕ್ಕಳನ್ನು ಬೆನ್ನಟ್ಟಿ ಬರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು