Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 35:5 - ಕನ್ನಡ ಸಮಕಾಲಿಕ ಅನುವಾದ

5 ತರುವಾಯ ಅವರು ಮುಂದೆ ಪ್ರಯಾಣಮಾಡಿದರು. ಆಗ ಸುತ್ತಲಿರುವ ಪಟ್ಟಣಗಳವರ ಮೇಲೆ ದೇವರ ಭಯವು ಇದ್ದುದರಿಂದ, ಅವರು ಯಾಕೋಬನ ಮಕ್ಕಳನ್ನು ಬೆನ್ನಟ್ಟಿ ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಮೇಲೆ ಅವರು ಪ್ರಯಾಣ ಮಾಡುತ್ತಿರುವಾಗ, ಸುತ್ತಲಿರುವ ಊರುಗಳಲ್ಲಿ ದೇವರ ಭಯವು ಇದ್ದುದರಿಂದ ಅವರು ಯಾಕೋಬನ ಮಕ್ಕಳನ್ನು ಬೆನ್ನಟ್ಟಿ ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅವರು ಪ್ರಯಾಣಮಾಡುತ್ತಿದ್ದಾಗ ದೇವರು ಸುತ್ತಮುತ್ತಣದ ಊರಿನವರಲ್ಲಿ ಭಯ ಹುಟ್ಟಿಸಿದರು. ಇದರಿಂದಾಗಿ ಆ ಊರಿವನರಾರೂ ಯಕೋಬನ ಮಕ್ಕಳನ್ನು ಹಿಂದಟ್ಟಿ ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಮೇಲೆ ಅವರು ಪ್ರಯಾಣ ಮಾಡುತ್ತಿರುವಾಗ ದೇವರು ಹುಟ್ಟಿಸಿದ ಭಯವು ಸುತ್ತುಮುತ್ತಣ ಊರುಗಳಲ್ಲಿ ಇದ್ದದರಿಂದ ಆ ಊರುಗಳವರು ಯಾಕೋಬನ ಮಕ್ಕಳನ್ನು ಹಿಂದಟ್ಟಿ ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯಾಕೋಬನು ಮತ್ತು ಅವನ ಗಂಡುಮಕ್ಕಳು ಆ ಸ್ಥಳದಿಂದ ಹೊರಟರು. ಆ ಪ್ರದೇಶದಲ್ಲಿದ್ದ ಜನರು ಅವರನ್ನು ಹಿಂಬಾಲಿಸಿ ಕೊಲ್ಲಬೇಕೆಂದಿದ್ದರು. ಆದರೆ ಅವರು ಭಯಪಟ್ಟು ಯಾಕೋಬನನ್ನು ಹಿಂಬಾಲಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 35:5
16 ತಿಳಿವುಗಳ ಹೋಲಿಕೆ  

“ನೀವು ಹೋಗುವ ಎಲ್ಲ ಜಾಗಗಳಲ್ಲಿಯೂ ನನ್ನ ಮೇಲಿನ ಭೀತಿಯನ್ನು ನಿಮ್ಮನ್ನು ಎದುರಿಸುವ ಜನರಲ್ಲಿ ಉಂಟುಮಾಡಿಸಿ, ಕಳವಳವನ್ನು ಉಂಟುಮಾಡುವೆನು ಮತ್ತು ನಿಮ್ಮನ್ನು ವಿರೋಧಿಸುವವರೆಲ್ಲಾ ನಿಮಗೆ ಬೆನ್ನು ತೋರಿಸುವಂತೆ ಮಾಡುವೆನು.


ಯೆಹೋವ ದೇವರ ಭಯವು ಯೆಹೂದದ ಸುತ್ತಲಿರುವ ದೇಶಗಳ ಸಮಸ್ತ ರಾಜ್ಯಗಳ ಮೇಲೆ ಇದ್ದುದರಿಂದ, ಅವರು ಯೆಹೋಷಾಫಾಟನ ಮೇಲೆ ಯುದ್ಧಮಾಡಲಿಲ್ಲ.


ದೇವರು ನೀತಿವಂತರ ಸಹವಾಸದಲ್ಲಿ ಇರುವುದರಿಂದ, ದುಷ್ಟತ್ವವನ್ನು ನಡೆಸುವವರು ಅತ್ಯಂತ ಭಯಭ್ರಾಂತರಾಗುವರು.


ಇದಾದ ಮೇಲೆ ಯೆಹೋವ ದೇವರು ಇಸ್ರಾಯೇಲರು ದಾಟಿಹೋಗುವವರೆಗೆ ಅವರ ಮುಂದೆ ಯೊರ್ದನ್ ನದಿಯನ್ನು ಒಣಗಿ ಹೋಗುವಂತೆ ಮಾಡಿದ್ದನ್ನು ಯೊರ್ದನ್ ನದಿ ಪಶ್ಚಿಮದ ಆಚೆದಡದಲ್ಲಿ ವಾಸಿಸಿದ್ದ ಅಮೋರಿಯರ ಸಕಲ ಅರಸರು ಮತ್ತು ಸಮುದ್ರದ ಆಚೆಯಲ್ಲಿ ವಾಸಿಸಿದ್ದ ಕಾನಾನ್ಯರ ಸಕಲ ಅರಸರು ಕೇಳಿದಾಗ ಅವರ ಹೃದಯವು ಕುಂದಿಹೋಯಿತು. ಇಸ್ರಾಯೇಲರ ನಿಮಿತ್ತವಾಗಿ ಅವರಿಗೆ ಪ್ರಾಣಹೋದಂತೆ ಆಯಿತು.


ಯಾರೂ ನಿಮ್ಮ ಮುಂದೆ ನಿಲ್ಲಲಾರರು. ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಹೇಳಿದ ಹಾಗೆ ನಿಮ್ಮ ಹೆದರಿಕೆಯನ್ನೂ, ದಿಗಿಲನ್ನೂ, ನೀವು ಸಂಚಾರ ಮಾಡುವ ಸಮಸ್ತ ದೇಶದ ಮೇಲೆ ಇಡುವರು.


ಏಕೆಂದರೆ ನಾನು ಜನಾಂಗಗಳನ್ನು ನಿಮ್ಮ ಸನ್ನಿಧಿಯಿಂದ ಹೊರಡಿಸಿಬಿಟ್ಟು, ನಿಮ್ಮ ಮೇರೆಗಳನ್ನು ವಿಸ್ತಾರ ಮಾಡುವೆನು. ವರ್ಷಕ್ಕೆ ಮೂರು ಸಾರಿ ನೀವು ನಿಮ್ಮ ಯೆಹೋವ ದೇವರ ಮುಂದೆ ಬರುವ ಸಮಯದಲ್ಲಿ ಯಾರೂ ನಿಮ್ಮ ಭೂಮಿಯನ್ನು ಅಪಹರಿಸಲು ಆಶೆಪಡುವುದಿಲ್ಲ.


ಇದಲ್ಲದೆ ಅವರು ಗೆರಾರಿನ ಸುತ್ತಲಿರುವ ಸಮಸ್ತ ಪಟ್ಟಣಗಳನ್ನು ವಶಪಡಿಸಿಕೊಂಡರು. ಯೆಹೋವ ದೇವರ ಭಯವು ಅವರ ಮೇಲೆ ಇತ್ತು. ಆ ಪಟ್ಟಣಗಳಲ್ಲಿ ಬಹು ಕೊಳ್ಳೆ ಇದ್ದುದರಿಂದ, ಅವುಗಳನ್ನೆಲ್ಲಾ ವಶಪಡಿಸಿಕೊಂಡರು.


ಆಗ ಪಾಳೆಯಲ್ಲಿಯ ಹೊಲದಲ್ಲಿ ಇದ್ದ ಸಕಲ ಜನರಲ್ಲಿಯೂ ಭಯದಿಂದ ನಡುಕ ಉಂಟಾಯಿತು. ಠಾಣ್ಯದವರೂ, ಕೊಳ್ಳೆಗಾರರೂ ಹೆದರಿಕೊಂಡರು. ಇದಲ್ಲದೆ, ದೇವರು ಭೂಕಂಪವನ್ನುಂಟುಮಾಡಿದರು. ಹೀಗೆ ಅಲ್ಲಿ ದೊಡ್ಡ ಕಳವಳವಾಯಿತು.


ಅವುಗಳನ್ನು ತುಂಡುತುಂಡಾಗಿ ಕತ್ತರಿಸಿ, ದೂತರ ಕೈಯಿಂದ ಇಸ್ರಾಯೇಲಿನ ಮೇರೆಗಳಿಗೆಲ್ಲಾ ಕಳುಹಿಸಿ, “ಯಾರು ಸೌಲ ಮತ್ತು ಸಮುಯೇಲರನ್ನು ಹಿಂಬಾಲಿಸುವುದಿಲ್ಲವೋ ಅವರ ಎತ್ತುಗಳಿಗೆ ಈ ಪ್ರಕಾರ ಮಾಡಲಾಗುವುದು,” ಎಂದು ಹೇಳಿದನು. ಯೆಹೋವ ದೇವರಿಂದ ಉಂಟಾದ ಭಯ ಜನರ ಮೇಲೆ ಬಿದ್ದದ್ದರಿಂದ, ಅವರು ಒಬ್ಬ ಮನುಷ್ಯನಂತೆ ಹೊರಟು ಬಂದರು.


ಆಗ ಯಾಕೋಬನು ಸಿಮೆಯೋನನಿಗೂ, ಲೇವಿಗೂ, “ನೀವು ನನ್ನನ್ನು ಈ ದೇಶದ ನಿವಾಸಿಗಳಾದ ಕಾನಾನ್ಯರಿಗೂ ಪೆರಿಜೀಯರಿಗೂ ಅಸಹ್ಯವಾಗುವಂತೆ ಮಾಡಿ, ನನ್ನನ್ನು ಕಳವಳಪಡಿಸಿದಿರಿ. ನಾವು ಸ್ವಲ್ಪ ಜನರು, ಹೀಗಿರುವಲ್ಲಿ ಅವರು ನನಗೆ ವಿರೋಧವಾಗಿ ಕೂಡಿಕೊಂಡು ನನ್ನನ್ನು ದಾಳಿಮಾಡುವರು. ಆಗ ನಾನೂ, ನನ್ನ ಮನೆಯವರೂ ನಾಶವಾಗುವೆವು,” ಎಂದನು.


ಆಗ ಅವರು ತಮ್ಮ ಬಳಿಯಲ್ಲಿದ್ದ ಎಲ್ಲಾ ಅನ್ಯದೇವರುಗಳನ್ನೂ, ತಮ್ಮ ಕಿವಿಗಳಲ್ಲಿದ್ದ ಮುರುವುಗಳನ್ನೂ ತೆಗೆದು, ಯಾಕೋಬನಿಗೆ ಕೊಟ್ಟರು. ಅವನು ಅವುಗಳನ್ನು ಶೆಕೆಮ್ ಊರಿಗೆ ಸಮೀಪವಾಗಿದ್ದ ಏಲಾ ಮರದ ಕೆಳಗೆ ಹೂಳಿಟ್ಟರು.


ಇದೇ ದಿವಸ ಆಕಾಶದ ಕೆಳಗಿರುವ ಜನಾಂಗಗಳ ಮೇಲೆ ನಿಮ್ಮ ಹೆದರಿಕೆಯೂ ಮತ್ತು ಭಯವೂ ಉಂಟಾಗುವಂತೆ ಮಾಡುತ್ತೇನೆ. ಅವರು ನಿಮ್ಮ ಸುದ್ದಿಯನ್ನು ಕೇಳಿ ನಡುಗಿ ಅಂಜುವರು,” ಎಂದರು.


ಜನರು ಅವರಿಗೆ ಕೇಡು ಮಾಡದಂತೆ ದೇವರು ತಡೆದರು. ಹೌದು, ಅವರಿಗೋಸ್ಕರ ದೇವರು ಅರಸರನ್ನು ಗದರಿಸಿ ಹೀಗೆ ಹೇಳಿದರು:


ಆಗ ಆಸನೂ, ಅವನ ಸಂಗಡ ಇದ್ದ ಜನರೂ ಅವರನ್ನು ಗೆರಾರಿನವರೆಗೂ ಹಿಂದಟ್ಟಿದರು. ಹೆಚ್ಚಿನ ಸಂಖ್ಯೆಯಲ್ಲಿ ಕೂಷ್ಯರು ಸೋತುಹೋದರು. ಅವರು ಯೆಹೋವ ದೇವರ ಮುಂದೆಯೂ, ಅವರ ಸೈನ್ಯದ ಮುಂದೆಯೂ ನಾಶವಾದರು. ಯೆಹೂದ್ಯರು ಬಹು ಕೊಳ್ಳೆಯನ್ನು ಒಯ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು