Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 37:26 - ಕನ್ನಡ ಸಮಕಾಲಿಕ ಅನುವಾದ

26 ಆಗ ಯೆಹೂದನು ತನ್ನ ಸಹೋದರರಿಗೆ, “ನಾವು ನಮ್ಮ ಸಹೋದರನನ್ನು ಕೊಂದುಹಾಕಿ, ಅವನ ರಕ್ತವನ್ನು ಮರೆಮಾಡುವುದರಲ್ಲಿ ಲಾಭವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆಗ ಯೆಹೂದನು ತನ್ನ ಅಣ್ಣತಮ್ಮಂದಿರಿಗೆ, “ನಾವು ನಮ್ಮ ತಮ್ಮನನ್ನು ಕೊಂದು ಹಾಕಿ ಅವನ ರಕ್ತವನ್ನು ಮರೆಮಾಡಿದರೆ ಲಾಭವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಆಗ ಯೆಹೂದನು ತನ್ನ ಅಣ್ಣತಮ್ಮಂದಿರಿಗೆ, “ನಾವು ನಮ್ಮ ತಮ್ಮನನ್ನು ಕೊಂದು ಆ ಕೊಲೆಯನ್ನು ಮರೆಮಾಡಿದರೆ ಪ್ರಯೋಜನವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಯೆಹೂದನು ತನ್ನ ಅಣ್ಣತಮ್ಮಂದಿರಿಗೆ - ನಾವು ನಮ್ಮ ತಮ್ಮನನ್ನು ಕೊಂದು ಆ ಕೊಲೆಯನ್ನು ಮರೆಮಾಡಿದರೆ ಪ್ರಯೋಜನವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆದ್ದರಿಂದ ಯೆಹೂದನು ತನ್ನ ಸಹೋದರರಿಗೆ, “ನಾವು ನಮ್ಮ ತಮ್ಮನನ್ನು ಕೊಂದು ಅವನ ಮರಣವನ್ನು ಮರೆಮಾಡಿದರೆ ನಮಗಾಗುವ ಲಾಭವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 37:26
16 ತಿಳಿವುಗಳ ಹೋಲಿಕೆ  

ಬನ್ನಿರಿ, ಈಗ ಅವನನ್ನು ಕೊಂದು, ಯಾವುದೋ ಒಂದು ಕಾಡುಮೃಗವು ಅವನನ್ನು ತಿಂದುಬಿಟ್ಟಿತೆಂದು ಹೇಳೋಣ. ತರುವಾಯ ಅವನ ಕನಸುಗಳು ಏನಾಗುವವೋ ನೋಡೋಣ,” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.


ಅದಕ್ಕೆ ಯೆಹೋವ ದೇವರು, “ನೀನು ಏನು ಮಾಡಿದೆ? ನಿನ್ನ ತಮ್ಮನ ರಕ್ತವು ಭೂಮಿಯಿಂದ ನನ್ನನ್ನು ಕೂಗುತ್ತಿದೆ.


ಆದ್ದರಿಂದ ಈಗ ನೀವು ನಾಚಿಕೆ ಪಟ್ಟುಕೊಳ್ಳುತ್ತಿರುವ ಸಂಗತಿಗಳಿಂದ ನಿಮಗಾದ ಲಾಭವೇನು? ಅವು ಮರಣದಲ್ಲಿ ಸಮಾಪ್ತವಾಗುತ್ತವೆ!


ಒಬ್ಬ ವ್ಯಕ್ತಿ ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತಮ್ಮ ಸ್ವಂತ ಆತ್ಮವನ್ನೇ ನಷ್ಟಪಡಿಸಿಕೊಂಡರೆ ಅವರಿಗೆ ಲಾಭವೇನು? ಇಲ್ಲವೆ ತಮ್ಮ ಆತ್ಮಕ್ಕೆ ಬದಲಾಗಿ ಏನು ಕೊಡುವರು?


“ ‘ಅದರ ರಕ್ತವು ಅದರ ಮಧ್ಯದಲ್ಲಿದೆ; ಅದು ಅದನ್ನು ಬಂಡೆಯ ತುದಿಯಲ್ಲಿ ಇಟ್ಟಿದೆ. ಧೂಳು ಮುಚ್ಚುವ ಹಾಗೆ ನೆಲದ ಮೇಲೆ ಚೆಲ್ಲಲಿಲ್ಲ.


ಆದರೆ ಆ ಎಂಬತ್ತು ಮಂದಿಯಲ್ಲಿ ಹತ್ತು ಜನರು ಇಷ್ಮಾಯೇಲನಿಗೆ, “ನಮ್ಮನ್ನು ಕೊಂದು ಹಾಕಬೇಡ. ಏಕೆಂದರೆ ನಮಗೆ ಹೊಲದಲ್ಲಿ ಗೋಧಿ, ಜವೆಗೋಧಿ, ಎಣ್ಣೆ, ಜೇನು ಇವುಗಳನ್ನು ಬಚ್ಚಿಟ್ಟಿದ್ದೇವೆ” ಎಂದು ಬಿನ್ನವಿಸಿದರು. ಆದ್ದರಿಂದ ಅವನು ಹಿಂದೆಗೆದು ಅವರನ್ನು, ಅವರ ಸಹೋದರರ ಮಧ್ಯದಲ್ಲಿ ಕೊಂದುಹಾಕಲಿಲ್ಲ.


ನಾನು ಸಮಾಧಿಯಲ್ಲಿ ಇಳಿದು ಹೋಗಿ ನಾಶವಾದರೆ, ಅದರಿಂದ ನಿಮಗೆ ಆಗುವ ಲಾಭವೇನು? ಧೂಳು ನಿಮ್ಮನ್ನು ಸ್ತುತಿಸುವುದೋ? ಅದು ನಿಮ್ಮ ನಂಬಿಗಸ್ತಿಕೆಯನ್ನು ಪ್ರಕಟಿಸುವುದೋ?


“ಭೂಮಿಯೇ, ನನ್ನ ರಕ್ತವನ್ನು ಮುಚ್ಚಬೇಡ, ನನ್ನ ಕೂಗು ವಿಶ್ರಾಂತಿ ಹೊಂದದಿರಲಿ!


ದಾವೀದನು ಅವನಿಗೆ, “ಯೆಹೋವ ದೇವರ ಅಭಿಷಿಕ್ತನನ್ನು ಕೊಂದುಹಾಕಿದೆನೆಂದು ನಿನ್ನ ಬಾಯಿ ನಿನಗೆ ವಿರೋಧವಾಗಿ ಸಾಕ್ಷಿ ಹೇಳಿದ್ದರಿಂದ, ನಿನ್ನ ರಕ್ತವು ನಿನ್ನ ತಲೆಯ ಮೇಲೆ ಇರಲಿ,” ಎಂದನು.


ನಿಮ್ಮ ಊರುಗಳಲ್ಲಿ ಉಂಟಾದ ವಿವಾದಗಳ ವಿಷಯವಾಗಿ ಅಂದರೆ, ಕೊಲೆಯ ವ್ಯಾಜ್ಯವಾಗಲಿ, ವಾದಿ ಪ್ರತಿವಾದ ವ್ಯಾಜ್ಯವಾಗಲಿ, ಹೊಡೆದಾಟದ ವ್ಯಾಜ್ಯವಾಗಲಿ, ನಿಮಗೆ ನ್ಯಾಯತೀರಿಸುವುದು ಕಷ್ಟವಾದರೆ, ನಿಮ್ಮ ದೇವರಾದ ಯೆಹೋವ ದೇವರು ಆಯ್ದುಕೊಳ್ಳುವ ಸ್ಥಳಕ್ಕೆ ಹೋಗಿರಿ.


ಏಸಾವನು, “ಇಗೋ, ನಾನು ಸಾಯುತ್ತಿದ್ದೇನೆ, ಜೇಷ್ಠ ಪುತ್ರನ ಹಕ್ಕಿನಿಂದ ನನಗೇನು ಲಾಭ?” ಎಂದನು.


ಏಕೆಂದರೆ ನನ್ನನ್ನು ಹಿಬ್ರಿಯರ ದೇಶದೊಳಗಿಂದ ಹಿಡಿದು ತಂದಿದ್ದಾರೆ. ಇಲ್ಲಿಯೂ ಸಹ ನಾನು ಏನೂ ತಪ್ಪುಮಾಡದೆ ಇದ್ದರೂ ನನ್ನನ್ನು ಸೆರೆಯಲ್ಲಿ ಹಾಕಿದರು,” ಎಂದನು.


ಆಗ ಅವರು, “ನಿಶ್ಚಯವಾಗಿ ನಮ್ಮ ಸಹೋದರನ ಅಪರಾಧವು ನಮ್ಮ ಮೇಲೆ ಇದೆ. ಅವನು ನಮ್ಮನ್ನು ಬೇಡಿಕೊಂಡಾಗ, ಅವನ ಪ್ರಾಣಸಂಕಟವನ್ನು ಕಂಡರೂ ಕೇಳದೆ ಹೋದೆವು. ಆದಕಾರಣ ಈ ಸಂಕಟವು ನಮ್ಮ ಮೇಲೆ ಬಂದಿತು,” ಎಂದು ಮಾತಾಡಿಕೊಂಡರು.


ನೀವು ನನಗೆ ವಿರೋಧವಾಗಿ ಕೇಡನ್ನು ಕಲ್ಪಿಸಿದ್ದೀರಿ, ಆದರೆ ದೇವರು ಒಳ್ಳೆಯದಕ್ಕಾಗಿಯೇ ಸಂಕಲ್ಪಿಸಿದರು. ಈಗ ಬಹುಜನರ ಪ್ರಾಣ ಉಳಿಯುವಂತೆ ನಡೆಯುತ್ತಿದೆ.


ಹೀಗಾದರೂ ಎಲ್ನಾಥಾನನೂ, ದೆಲಾಯನೂ, ಗೆಮರೀಯನೂ ಆ ಸುರುಳಿಯನ್ನು ಸುಡಬಾರದೆಂದು ಅರಸನಿಗೆ ಬಿನ್ನಹ ಮಾಡಿದರು; ಆದರೆ ಅವನು ಅವರಿಗೆ ಕಿವಿಗೊಡಲಿಲ್ಲ.


ಯೆಹೋವ ದೇವರು ಕಾಯಿನನನ್ನು, “ನಿನ್ನ ತಮ್ಮ ಹೇಬೆಲನು ಎಲ್ಲಿ?” ಎಂದು ಕೇಳಲು, ಅವನು, “ನಾನರಿಯೆ. ನಾನು ನನ್ನ ತಮ್ಮನನ್ನು ಕಾಯುವವನೋ?” ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು