Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 37:27 - ಕನ್ನಡ ಸಮಕಾಲಿಕ ಅನುವಾದ

27 ಬನ್ನಿರಿ, ಇಷ್ಮಾಯೇಲರಿಗೆ ಅವನನ್ನು ಮಾರೋಣ. ನಾವು ಅವನ ಮೇಲೆ ಕೈಹಾಕಬಾರದು. ಏಕೆಂದರೆ ಅವನು ನಮ್ಮ ಸಹೋದರನೂ ನಮ್ಮ ದೇಹವೂ ರಕ್ತವೂ ಆಗಿದ್ದಾನೆ,” ಎಂದನು. ಅದಕ್ಕೆ ಅವನ ಸಹೋದರರು ಒಪ್ಪಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಬನ್ನಿರಿ, ಅವನನ್ನು ಆ ಇಷ್ಮಾಯೇಲ್ಯರಿಗೆ ಮಾರಿಬಿಡೋಣ. ನಾವು ಅವನ ಮೇಲೆ ಕೈಹಾಕಬಾರದು. ಅವನು ನಮ್ಮ ಒಡಹುಟ್ಟಿದ ತಮ್ಮನಲ್ಲವೇ” ಎಂದು ಹೇಳಿದನು. ಆ ಮಾತಿಗೆ ಅವನ ಅಣ್ಣಂದಿರು ಒಪ್ಪಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಅವನನ್ನು ಆ ಇಷ್ಮಾಯೇಲರಿಗೆ ಮಾರಿಬಿಡೋಣ, ಬನ್ನಿ; ನಾವು ಅವನ ಮೇಲೆ ಕೈ ಹಾಕಬಾರದು, ಅವನು ನಮ್ಮ ತಮ್ಮನಲ್ಲವೆ? ರಕ್ತಸಂಬಂಧಿಯಲ್ಲವೆ?” ಎಂದು ಹೇಳಿದ. ಅವನ ಆ ಮಾತಿಗೆ ಅಣ್ಣತಮ್ಮಂದಿರು ಒಪ್ಪಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅವನನ್ನು ಆ ಇಷ್ಮಾಯೇಲ್ಯರಿಗೆ ಮಾರಿಬಿಡೋಣ ಬನ್ನಿ; ನಾವು ಅವನ ಮೇಲೆ ಕೈಹಾಕಬಾರದು; ಅವನು ನಮ್ಮ ಒಡಹುಟ್ಟಿದ ತಮ್ಮನಲ್ಲವೇ ಎಂದು ಹೇಳಿದನು. ಆ ಮಾತಿಗೆ ಅವನ ಅಣ್ಣಂದಿರು ಒಪ್ಪಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಈ ವ್ಯಾಪಾರಿಗಳಿಗೆ ನಾವು ಅವನನ್ನು ಮಾರಿದರೆ ನಮಗೆ ಹೆಚ್ಚು ಲಾಭವಾಗುವುದು; ಆಮೇಲೆ ನಮ್ಮ ತಮ್ಮನನ್ನು ಕೊಂದ ಅಪರಾಧವೂ ನಮ್ಮ ಮೇಲಿರುವುದಿಲ್ಲ” ಎಂದು ಹೇಳಿದನು. ಅದಕ್ಕೆ ಉಳಿದ ಸಹೋದರರೆಲ್ಲ ಒಪ್ಪಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 37:27
15 ತಿಳಿವುಗಳ ಹೋಲಿಕೆ  

ಒಬ್ಬ ವ್ಯಕ್ತಿ ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತಮ್ಮ ಸ್ವಂತ ಆತ್ಮವನ್ನೇ ನಷ್ಟಪಡಿಸಿಕೊಂಡರೆ ಅವರಿಗೆ ಲಾಭವೇನು? ಇಲ್ಲವೆ ತಮ್ಮ ಆತ್ಮಕ್ಕೆ ಬದಲಾಗಿ ಏನು ಕೊಡುವರು?


ಆಗ ಅವರು, “ನಿಶ್ಚಯವಾಗಿ ನಮ್ಮ ಸಹೋದರನ ಅಪರಾಧವು ನಮ್ಮ ಮೇಲೆ ಇದೆ. ಅವನು ನಮ್ಮನ್ನು ಬೇಡಿಕೊಂಡಾಗ, ಅವನ ಪ್ರಾಣಸಂಕಟವನ್ನು ಕಂಡರೂ ಕೇಳದೆ ಹೋದೆವು. ಆದಕಾರಣ ಈ ಸಂಕಟವು ನಮ್ಮ ಮೇಲೆ ಬಂದಿತು,” ಎಂದು ಮಾತಾಡಿಕೊಂಡರು.


ಆಗ ಸೌಲನು, “ನಾನು ಅವನ ಮೇಲೆ ವಿರೋಧವಾಗಿ ಕೈಯೆತ್ತಬಾರದು. ಫಿಲಿಷ್ಟಿಯರು ಅದನ್ನು ಮಾಡಲಿ,” ಎಂದು ತನ್ನಷ್ಟಕ್ಕೆ ಅಂದುಕೊಂಡು ದಾವೀದನಿಗೆ, “ನನ್ನ ಹಿರಿಯ ಮಗಳಾದ ಮೇರಬಳನ್ನು ನಿನಗೆ ಹೆಂಡತಿಯಾಗಿ ಕೊಡುವೆನು, ನೀನು ನನಗೋಸ್ಕರ ಪರಾಕ್ರಮಶಾಲಿಯಾಗಿದ್ದು ಯೆಹೋವ ದೇವರ ಯುದ್ಧಗಳನ್ನು ನಡೆಸು,” ಎಂದನು.


ಸರಕುಗಳಾದ ದಾಲ್ಚಿನ್ನಿ ಮತ್ತು ಮಸಾಲೆ, ಧೂಪ, ಸುಗಂಧ ತೈಲ, ರಕ್ತಬೋಳ, ದ್ರಾಕ್ಷಾರಸ ಮತ್ತು ಓಲಿವ್ ಎಣ್ಣೆ, ನಯವಾದ ಹಿಟ್ಟು, ಗೋಧಿ, ದನಕರು ಮತ್ತು ಕುರಿಗಳು, ಕುದುರೆಗಳು, ವಾಹನಗಳು, ಗುಲಾಮರು ಹಾಗೂ ಮನುಷ್ಯರು ಇವುಗಳನ್ನೆಲ್ಲಾ ಆ ವರ್ತಕರು ಅವಳಿಗೆ ಮಾರುತ್ತಿದ್ದರು.


ಜಾರರಿಗೆ, ಸಲಿಂಗಕಾಮಿಗಳಿಗೆ, ನರಚೋರರಿಗೆ, ಸುಳ್ಳುಗಾರರಿಗೆ, ಸುಳ್ಳಾಣೆಯಿಡುವವರಿಗೆ, ಸ್ವಸ್ಥಬೋಧನೆಯನ್ನು ವಿರೋಧಿಸುವ ಬೇರೆ ಏನಾದರೂ ಇದ್ದರೆ ಮೋಶೆಯ ನಿಯಮವು ಇಂಥವವರಿಗಾಗಿ ಕೊಡಲಾಗಿದೆ ಎಂದು ನಮಗೆ ತಿಳಿದಿದೆ.


“ನಾನು ಆತನನ್ನು ನಿಮಗೆ ಒಪ್ಪಿಸಿಕೊಟ್ಟರೆ ನೀವು ನನಗೆ ಏನು ಕೊಡುತ್ತೀರಿ?” ಎಂದನು. ಆಗ ಅವರು ಅವನಿಗೆ ಮೂವತ್ತು ಬೆಳ್ಳಿಯ ನಾಣ್ಯಗಳನ್ನು ಎಣಿಸಿ ಕೊಟ್ಟರು.


“ಇತರ ಜನರಿಗೆ ಗುಲಾಮರಾಗಿ ಮಾರಟವಾಗಿರುವ ಯೆಹೂದ್ಯರಾದ ನಮ್ಮ ಸಹೋದರರನ್ನು ನಾವು ನಮಗೆ ಶಕ್ತಿಯಿದ್ದಷ್ಟು ಬಿಡಿಸುತ್ತಿದ್ದೆವು. ಆದರೆ ಈಗ ನೀವು ನಿಮ್ಮ ಸಹೋದರರನ್ನೇ ಮಾರಿಬಿಡುತ್ತಿದ್ದೀರಿ. ಆಮೇಲೆ ಅವರನ್ನು ನಾವು ಕೊಂಡುಕೊಳ್ಳಬೇಕೇನು?” ಎಂದೆನು. ಆಗ ಅವರು ಹೇಳಲು ಏನೂ ಸಿಗದ ಕಾರಣ ಅವರು ಮೌನವಾಗಿದ್ದರು.


ನೀನು ಯೆಹೋವ ದೇವರ ದೃಷ್ಟಿಗೆ ಈ ಕೆಟ್ಟ ಕಾರ್ಯವನ್ನು ಮಾಡುವಂತೆ ಅವರ ವಾಕ್ಯವನ್ನು ತಿರಸ್ಕರಿಸಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಖಡ್ಗದಿಂದ ಹೊಡೆದು ಹಾಕಿ, ಅವನ ಹೆಂಡತಿಯನ್ನು ನಿನ್ನ ಹೆಂಡತಿಯಾಗಿ ತೆಗೆದುಕೊಂಡೆ. ಇದಲ್ಲದೆ ಅವನನ್ನು ಅಮ್ಮೋನಿಯರ ಖಡ್ಗದಿಂದ ಕೊಂದು ಹಾಕಿಸಿದೆ.


ದಾಸದಾಸಿಯರು ಒಂದೆರಡು ದಿನಗಳ ನಂತರ ಉಳಿದರೆ ಶಿಕ್ಷೆಯಾಗಬಾರದು. ಏಕೆಂದರೆ ಅವರು ಅವನ ಸೊತ್ತು.


“ಒಬ್ಬನು ಮತ್ತೊಬ್ಬನನ್ನು ಅಪಹರಿಸಿಕೊಂಡು ಹೋಗಿ ಮಾರಿದರೆ, ಇಲ್ಲವೆ ಅವನು ಬಂಧನಕ್ಕೊಳಗಾದಾಗ ಅಪಹರಿಸಲಾದವನು ಅವನೊಂದಿಗಿದ್ದರೆ, ಅವನನ್ನು ಮರಣದಂಡನೆಗೆ ಗುರಿಮಾಡಬೇಕು.


ರೂಬೇನನು ಅವನನ್ನು ಅವರ ಕೈಗಳಿಂದ ತಪ್ಪಿಸಿ, ತನ್ನ ತಂದೆಯ ಬಳಿಗೆ ತಿರುಗಿ ಕರೆದುಕೊಂಡುಹೋಗುವ ಉದ್ದೇಶದಿಂದ ಅವರಿಗೆ, “ರಕ್ತ ಚೆಲ್ಲಬೇಡಿರಿ, ಕಾಡಿನಲ್ಲಿರುವ ಈ ಗುಂಡಿಯಲ್ಲಿ ಹಾಕಿರಿ, ಆದರೆ ಅವನ ಮೇಲೆ ಕೈಹಾಕಬೇಡಿರಿ,” ಎಂದನು.


ಆಗ ಲಾಬಾನನು ಅವನಿಗೆ, “ನಿಶ್ಚಯವಾಗಿ ನೀನು ನನ್ನ ರಕ್ತಸಂಬಂಧಿಯಾಗಿದ್ದೀ,” ಎಂದನು. ಯಾಕೋಬನು ಅವನ ಸಂಗಡ ಒಂದು ತಿಂಗಳು ವಾಸವಾಗಿದ್ದನು.


ನೀವು ನನಗೆ ವಿರೋಧವಾಗಿ ಕೇಡನ್ನು ಕಲ್ಪಿಸಿದ್ದೀರಿ, ಆದರೆ ದೇವರು ಒಳ್ಳೆಯದಕ್ಕಾಗಿಯೇ ಸಂಕಲ್ಪಿಸಿದರು. ಈಗ ಬಹುಜನರ ಪ್ರಾಣ ಉಳಿಯುವಂತೆ ನಡೆಯುತ್ತಿದೆ.


ನಾವು ನಮ್ಮ ಸಹೋದರರ ಹಾಗೆಯೇ ಒಂದೇ ರಕ್ತಮಾಂಸದವರಾಗಿದ್ದೇವೆ; ನಮ್ಮ ಮಕ್ಕಳು ಅವರ ಮಕ್ಕಳ ಹಾಗೆಯೇ ಕ್ಷೇಮವಾಗಿದ್ದಾರೆ; ಆದರೂ ನಮ್ಮ ಪುತ್ರಪುತ್ರಿಯರನ್ನೂ ಗುಲಾಮರಾಗುವುದಕ್ಕೆ ತಂದಿದ್ದೇವೆ. ನಮ್ಮ ಪುತ್ರಿಯರಲ್ಲಿ ಕೆಲವರು ಆಗಲೇ ಗುಲಾಮರಾಗಿದ್ದಾರೆ. ಅವರನ್ನು ಬಿಡಿಸಲು ನಮಗೆ ಶಕ್ತಿ ಇಲ್ಲ. ಏಕೆಂದರೆ ನಮ್ಮ ಹೊಲಗಳೂ, ದ್ರಾಕ್ಷಿ ತೋಟಗಳೂ ಪರರ ಪಾಲಾಗಿವೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು