Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 37:28 - ಕನ್ನಡ ಸಮಕಾಲಿಕ ಅನುವಾದ

28 ಈ ಪ್ರಕಾರ ಮಿದ್ಯಾನ್ಯರ ವರ್ತಕರು ಹಾದುಹೋಗುತ್ತಿದ್ದಾಗ, ಅವರು ಯೋಸೇಫನನ್ನು ಗುಂಡಿಯಿಂದ ಮೇಲೆತ್ತಿ, ಇಷ್ಮಾಯೇಲರಿಗೆ ಅವನನ್ನು ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಮಾರಿದರು. ಅವರು ಯೋಸೇಫನನ್ನು ಈಜಿಪ್ಟಿಗೆ ಕರೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅಷ್ಟರಲ್ಲಿ ಮಿದ್ಯಾನ್ಯರಾದ ವರ್ತಕರು ಹಾದುಹೋಗುತ್ತಿದ್ದರು. ಅವರು ಯೋಸೇಫನನ್ನು ಗುಂಡಿಯೊಳಗಿಂದ ಮೇಲೆ ಎತ್ತಿ ಆ ಇಷ್ಮಾಯೇಲ್ಯರಿಗೆ ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಅವನನ್ನು ಮಾರಿದರು. ಅವರು ಅವನನ್ನು ಐಗುಪ್ತ ದೇಶಕ್ಕೆ ಕರೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಅಷ್ಟರಲ್ಲಿ, ಮಿದ್ಯಾನಿನ ವರ್ತಕರು ಹಾದುಹೋಗುತ್ತಿದ್ದರು. ಅವರು ಜೋಸೆಫನನ್ನು ಬಾವಿಯೊಳಗಿಂದ ಎತ್ತಿ ಈ ಇಷ್ಮಾಯೇಲರಿಗೆ ಇಪ್ಪತ್ತು ಬೆಳ್ಳಿನಾಣ್ಯಗಳಿಗೆ ಮಾರಿಬಿಟ್ಟರು. ಇವರು ಅವನನ್ನು ಈಜಿಪ್ಟ್ ದೇಶಕ್ಕೆ ತೆಗೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 (ಅಷ್ಟರಲ್ಲಿ ವಿುದ್ಯಾನ್ಯರಾದ ವರ್ತಕರು ಹಾದುಹೋಗುತ್ತಿದ್ದರು.) ಅವರು ಯೋಸೇಫನನ್ನು ಗುಂಡಿಯೊಳಗಿಂದ ಎತ್ತಿ ಆ ಇಷ್ಮಾಯೇಲ್ಯರಿಗೆ ಇಪ್ಪತ್ತು ರೂಪಾಯಿಗಳಿಗೆ ಮಾರಿಬಿಟ್ಟರು. ಇವರು ಅವನನ್ನು ಐಗುಪ್ತದೇಶಕ್ಕೆ ತೆಗೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಮಿದ್ಯಾನಿನ ವ್ಯಾಪಾರಿಗಳು ಸಮೀಪಿಸಿದಾಗ, ಅಣ್ಣಂದಿರು ಯೋಸೇಫನನ್ನು ಬಾವಿಯೊಳಗಿಂದ ಹೊರತೆಗೆದು ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಮಾರಿದರು. ವ್ಯಾಪಾರಿಗಳು ಯೋಸೇಫನನ್ನು ಈಜಿಪ್ಟಿಗೆ ಕೊಂಡೊಯ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 37:28
25 ತಿಳಿವುಗಳ ಹೋಲಿಕೆ  

“ಈ ಪಿತೃಗಳು ಯೋಸೇಫನ ಮೇಲೆ ಮತ್ಸರ ತಾಳಿ ಅವನನ್ನು ಈಜಿಪ್ಟಿನವರಿಗೆ ಗುಲಾಮನನ್ನಾಗಿ ಮಾರಿದರು. ಆದರೆ ದೇವರು ಅವನೊಂದಿಗಿದ್ದು,


ಆಗ ದೇವರು ಅವರ ಮುಂದೆ ಒಬ್ಬ ಮನುಷ್ಯನನ್ನು ಕಳುಹಿಸಿದರು. ಅವನೇ ದಾಸನಾಗಿ ಮಾರಲಾದ ಯೋಸೇಫನು.


ಆಕೆಯು ಜಿಮ್ರಾನ್, ಯೊಕ್ಷಾನ್, ಮೆದಾನ್, ಮಿದ್ಯಾನ್, ಇಷ್ಬಾಕ್, ಶೂಹ ಇವರನ್ನು ಹೆತ್ತಳು.


“ನಾನು ಆತನನ್ನು ನಿಮಗೆ ಒಪ್ಪಿಸಿಕೊಟ್ಟರೆ ನೀವು ನನಗೆ ಏನು ಕೊಡುತ್ತೀರಿ?” ಎಂದನು. ಆಗ ಅವರು ಅವನಿಗೆ ಮೂವತ್ತು ಬೆಳ್ಳಿಯ ನಾಣ್ಯಗಳನ್ನು ಎಣಿಸಿ ಕೊಟ್ಟರು.


ಇದರೊಂದಿಗೆ, ಆ ಮಿದ್ಯಾನ್ಯರು ಯೋಸೇಫನನ್ನು ಈಜಿಪ್ಟ್ ದೇಶಕ್ಕೆ ತೆಗೆದುಕೊಂಡುಹೋಗಿ ಪೋಟೀಫರನಿಗೆ ಮಾರಿದರು. ಇವನು ಫರೋಹನ ಉದ್ಯೋಗಸ್ಥನೂ ಮೈಗಾವಲಿನ ದಳಪತಿಯೂ ಆಗಿದ್ದನು.


ಅವರು ಊಟಕ್ಕೆ ಕುಳಿತುಕೊಂಡಾಗ, ತಮ್ಮ ಕಣ್ಣುಗಳನ್ನೆತ್ತಿ ನೋಡಲಾಗಿ, ಇಷ್ಮಾಯೇಲರ ಗುಂಪು ಗಿಲ್ಯಾದಿನಿಂದ ಬರುತ್ತಿತ್ತು. ಅವರ ಒಂಟೆಗಳು ಸಾಂಬ್ರಾಣಿ, ಸುಗಂಧ ತೈಲ, ರಕ್ತಬೋಳಗಳನ್ನು ಹೊರುತ್ತಿದ್ದವು. ಅವರು ಅವುಗಳನ್ನು ಈಜಿಪ್ಟಿಗೆ ತೆಗೆದುಕೊಂಡು ಹೋಗುತ್ತಿದ್ದರು.


ಹೀಗೆ ಪ್ರವಾದಿ ಯೆರೆಮೀಯನು ಹೇಳಿದ ಮಾತು ನೆರವೇರಿತು. ಅದೇನೆಂದರೆ, “ಇಸ್ರಾಯೇಲಿನ ಮಕ್ಕಳಲ್ಲಿ ಅವರು ಬೆಲೆ ಕಟ್ಟಿದವನ ಬೆಲೆಯಾದ ಮೂವತ್ತು ಬೆಳ್ಳಿ ನಾಣ್ಯಗಳನ್ನು ತೆಗೆದುಕೊಂಡು,


ಒಂಟೆಗಳ ಸಮೂಹವು ನಿನ್ನ ದೇಶದಲ್ಲಿ ತುಂಬಿಕೊಳ್ಳುವುದು. ಮಿದ್ಯಾನಿನ ಏಫಾದ ವೇಗವುಳ್ಳ ಒಂಟೆಗಳು ಅವೆಲ್ಲಾ ಶೆಬದಿಂದಲೂ ಬರುವುವು. ಬಂಗಾರವನ್ನೂ, ಧೂಪವನ್ನೂ ತರುವುವು. ಯೆಹೋವ ದೇವರ ಸ್ತೋತ್ರಗಳನ್ನು ಸಾರುವುವು.


ಮಿದ್ಯಾನಿಗೂ ಸೀಸೆರನಿಗೂ ಯಾಬೀನನಿಗೂ ಕೀಷೋನ್ ಹಳ್ಳದಲ್ಲಿ ಮಾಡಿದ ಹಾಗೆ ಅವರಿಗೆ ಮಾಡಿರಿ.


ಮತ್ತು ಗಿದ್ಯೋನನು ಅವರಿಗೆ, “ಒಂದು ಬಿನ್ನಹವನ್ನು ನಾನು ನಿಮಗೆ ಮಾಡುತ್ತೇನೆ. ಪ್ರತಿಯೊಬ್ಬನು ಕೊಳ್ಳೆಹೊಡೆದ ಬಂಗಾರದ ಓಲೆಗಳನ್ನು ನನಗೆ ಕೊಡಿರಿ,” ಎಂದನು. ಏಕೆಂದರೆ ಮಿದ್ಯಾನರು ಇಷ್ಮಾಯೇಲರಾಗಿದ್ದದರಿಂದ ಅವರು ಬಂಗಾರದ ಮುರುವುಗಳನ್ನು ಹಾಕಿಕೊಳ್ಳುತ್ತಿದ್ದರು.


ಆಗ ಇಸ್ರಾಯೇಲ್ ಜನರು ಗಿದ್ಯೋನನಿಗೆ, “ನೀನು ನಮ್ಮನ್ನು ಮಿದ್ಯಾನರ ಕೈಯಿಂದ ತಪ್ಪಿಸಿ ರಕ್ಷಿಸಿದ್ದರಿಂದ, ನೀನೂ, ನಿನ್ನ ಪುತ್ರನೂ, ನಿನ್ನ ಪುತ್ರನ ಪುತ್ರನೂ ನಮ್ಮನ್ನು ಆಳಬೇಕು,” ಎಂದರು.


“ಮಿದ್ಯಾನ್ಯರನ್ನು ವೈರಿ ಎಂದು ತಿಳಿದು ಹೊಡೆಯಬೇಕು.


ಹತಳಾದ ಆ ಮಿದ್ಯಾನ್ ಸ್ತ್ರೀಯ ಹೆಸರು ಕೊಜ್ಬೀ, ಅವಳು ಮಿದ್ಯಾನ್ಯರ ಪ್ರಜೆಯ ಮುಖ್ಯಸ್ಥನೂ ಮನೆಗೆ ಯಜಮಾನನೂ ಆಗಿರುವ ಚೂರ್ ಎಂಬವನ ಮಗಳಾಗಿದ್ದಳು.


ಮಿದ್ಯಾನಿನ ಯಾಜಕನಿಗೆ ಏಳುಮಂದಿ ಪುತ್ರಿಯರಿದ್ದರು. ಇವರು ಬಂದು ತಮ್ಮ ತಂದೆಯ ಕುರಿಮಂದೆಗಳಿಗೆ ನೀರು ಕುಡಿಸುವದಕ್ಕಾಗಿ ನೀರು ಸೇದಿ, ದೋಣಿಗಳನ್ನು ತುಂಬಿಸುತ್ತಿದ್ದರು.


ಯೋಸೇಫನನ್ನು ಕರೆದುಕೊಂಡುಹೋದ ಇಷ್ಮಾಯೇಲರು ಈಜಿಪ್ಟಿಗೆ ಸೇರಿದಾಗ ಅವನನ್ನು ಈಜಿಪ್ಟಿನ ಪೋಟೀಫರ್ ಎಂಬವನಿಗೆ ಮಾರಿಬಿಟ್ಟರು. ಪೋಟೀಫರನು ಫರೋಹನ ಉದ್ಯೋಗಸ್ಥನೂ ಮೈಗಾವಲಿನ ದಳಪತಿಯೂ ಆಗಿದ್ದನು.


ತಮ್ಮ ತಂದೆ ಸತ್ತು ಹೋದ ಮೇಲೆ ಯೋಸೇಫನ ಸಹೋದರರು, “ಒಂದು ವೇಳೆ ಯೋಸೇಫನು ನಮ್ಮನ್ನು ಹಗೆಮಾಡಿ, ನಾವು ಅವನಿಗೆ ಮಾಡಿದ್ದ ಎಲ್ಲಾ ಕೇಡಿಗಾಗಿ ನಿಶ್ಚಯವಾಗಿ ಪ್ರತೀಕಾರಮಾಡಬಹುದು,” ಎಂದುಕೊಂಡು,


ಏಕೆಂದರೆ ನನ್ನನ್ನು ಹಿಬ್ರಿಯರ ದೇಶದೊಳಗಿಂದ ಹಿಡಿದು ತಂದಿದ್ದಾರೆ. ಇಲ್ಲಿಯೂ ಸಹ ನಾನು ಏನೂ ತಪ್ಪುಮಾಡದೆ ಇದ್ದರೂ ನನ್ನನ್ನು ಸೆರೆಯಲ್ಲಿ ಹಾಕಿದರು,” ಎಂದನು.


“ಒಬ್ಬನು ಮತ್ತೊಬ್ಬನನ್ನು ಅಪಹರಿಸಿಕೊಂಡು ಹೋಗಿ ಮಾರಿದರೆ, ಇಲ್ಲವೆ ಅವನು ಬಂಧನಕ್ಕೊಳಗಾದಾಗ ಅಪಹರಿಸಲಾದವನು ಅವನೊಂದಿಗಿದ್ದರೆ, ಅವನನ್ನು ಮರಣದಂಡನೆಗೆ ಗುರಿಮಾಡಬೇಕು.


ಐದರಿಂದ ಇಪ್ಪತ್ತು ವಯಸ್ಸುಳ್ಳ ಪುರುಷನ ಕ್ರಯವು ಇಪ್ಪತ್ತು ಶೆಕೆಲ್, ಸ್ತ್ರೀ ಕ್ರಯವು ಹತ್ತು ಶೆಕೆಲ್ ಆಗಿರಬೇಕು.


ಹೀಗೆ ಹಗ್ಗಗಳಿಂದ ಯೆರೆಮೀಯನನ್ನು ಎಳೆದು, ಅವನನ್ನು ಬಾವಿಯೊಳಗಿಂದ ಎತ್ತಿದನು. ಆಮೇಲೆ ಯೆರೆಮೀಯನು ಸೆರೆಮನೆಯ ಅಂಗಳದಲ್ಲಿ ಉಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು