Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 37:35 - ಕನ್ನಡ ಸಮಕಾಲಿಕ ಅನುವಾದ

35 ಅವನ ಪುತ್ರಪುತ್ರಿಯರೆಲ್ಲಾ ಅವನನ್ನು ಆದರಿಸಿದರೂ ಅವನು ಆದರಣೆ ಹೊಂದಲೊಲ್ಲದೆ, “ನನ್ನ ಮಗನಿರುವ ಸಮಾಧಿಗೆ ದುಃಖದಿಂದಲೇ ಇಳಿದು ಹೋಗುವೆನು,” ಎಂದನು. ಹೀಗೆ ಅವನ ತಂದೆ ಅವನಿಗೋಸ್ಕರ ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಅವನ ಗಂಡುಮಕ್ಕಳೂ ಮತ್ತು ಹೆಣ್ಣುಮಕ್ಕಳೂ ಎಲ್ಲರೂ ಅವನ ದುಃಖ ಶಮನಮಾಡುವುದಕ್ಕೆ ಪ್ರಯತ್ನಿಸಿದ್ದಾಗ್ಯೂ ಅವನು ಸಮಾಧಾನ ಆದರಣೆ ಹೊಂದಲಾರದೇ, “ನಾನು ಹೀಗೆ ದುಃಖಪಡುತ್ತಾ ನನ್ನ ಮಗನೊಂದಿಗೆ ಸಮಾಧಿ ಸೇರುವೆನು” ಎಂದನು. ಹೀಗೆ ತಂದೆಯು ಮಗನಿಗೋಸ್ಕರ ದುಃಖಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ದುಃಖಶಮನಮಾಡಲು ಪುತ್ರಪುತ್ರಿಯರೆಲ್ಲರು ಎಷ್ಟು ಪ್ರಯತ್ನಿಸಿದರೂ ಅವನು ಸಾಂತ್ವನಗೊಳ್ಳಲಿಲ್ಲ; "ನಾನು ಹೀಗೆಯೇ ಹಂಬಲಿಸುತ್ತಾ ನನ್ನ ಮಗನಿರುವ ಮೃತ್ಯುಲೋಕವನ್ನು ಸೇರುತ್ತೇನೆ,” ಎಂದು ಮಗನಿಗಾಗಿ ದುಃಖಿಸುತ್ತಲೇ ಇದ್ದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಅವನ ಗಂಡುಮಕ್ಕಳೂ ಹೆಣ್ಣು ಮಕ್ಕಳೂ ಎಲ್ಲರೂ ದುಃಖಶಮನ ಮಾಡುವದಕ್ಕೆ ಪ್ರಯತ್ನಿಸಿದಾಗ್ಯೂ ಅವನು ಶಾಂತಿಯನ್ನು ಹೊಂದಲೊಲ್ಲದೆ - ನಾನು ಹೀಗೇ ಹಂಬಲಿಸುತ್ತಾ ನನ್ನ ಮಗನಿರುವ ಪಾತಾಳವನ್ನು ಸೇರುವೆನು ಅಂದನು. ಹೀಗೆ ತಂದೆಯು ಮಗನಿಗೋಸ್ಕರ ಅಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಯಾಕೋಬನ ಗಂಡುಮಕ್ಕಳು ಮತ್ತು ಹೆಣ್ಣುಮಕ್ಕಳು ಎಷ್ಟೇ ಸಂತೈಸಿದರೂ ಯಾಕೋಬನಿಗೆ ಆದರಣೆಯಾಗಲಿಲ್ಲ. ಯಾಕೋಬನು ಅವರಿಗೆ, “ನಾನು ಸಾಯುವ ತನಕ ನನ್ನ ಮಗನಿಗಾಗಿ ದುಃಖಪಡುವೆ” ಎಂದು ಹೇಳಿ ದುಃಖಿಸುತ್ತಲೇ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 37:35
18 ತಿಳಿವುಗಳ ಹೋಲಿಕೆ  

ಯೋಬನ ಮೂವರು ಸ್ನೇಹಿತರು, ತೇಮಾನ್ಯನಾದ ಎಲೀಫಜನು, ಶೂಹ್ಯನಾದ ಬಿಲ್ದದನು, ನಾಮಾಥ್ಯನಾದ ಚೋಫರನು ಅವನಿಗೆ ಬಂದ ಈ ಎಲ್ಲಾ ಕಷ್ಟನಷ್ಟವನ್ನು ಕುರಿತು ಕೇಳಿ, ಯೋಬನಿಗೆ ಸಂತಾಪವನ್ನು ತೋರ್ಪಡಿಸಿ ಅವನನ್ನು ಸಂತೈಸುವುದಕ್ಕೆ ಹೋಗಬೇಕೆಂದು ತಮ್ಮಲ್ಲಿ ಆಲೋಚನೆ ಮಾಡಿಕೊಂಡು, ತಮ್ಮ ತಮ್ಮ ಸ್ಥಳಗಳಿಂದ ಅವನ ಬಳಿಗೆ ಬಂದರು.


ಅವನನ್ನು ಎಬ್ಬಿಸುವುದಕ್ಕೆ ಅವನ ಮನೆಯ ಹಿರಿಯರು ಅವನ ಬಳಿಗೆ ಬಂದರು. ಆದರೆ ಅವನಿಗೆ ಮನಸ್ಸಿಲ್ಲದೆ ಇತ್ತು. ಅವರ ಸಂಗಡ ಭೋಜನ ಮಾಡದೆ ಇದ್ದನು.


ಆದರೆ ಯಾಕೋಬನು, “ನನ್ನ ಮಗನು ನಿಮ್ಮ ಸಂಗಡ ಹೋಗಬಾರದು, ಅವನ ಅಣ್ಣ ಸತ್ತು ಹೋಗಿ, ಇವನೊಬ್ಬನೇ ಉಳಿದಿದ್ದಾನೆ. ನೀವು ಹೋಗುವ ಮಾರ್ಗದಲ್ಲಿ ಇವನಿಗೆ ಕೇಡು ಬಂದರೆ, ನನ್ನ ಮುದಿ ತಲೆಯನ್ನು ದುಃಖದಿಂದ ಸಮಾಧಿಗೆ ಇಳಿಸುವಿರಿ,” ಎಂದನು.


ಯೆಹೋವ ದೇವರು ಮತ್ತೆ ಹೀಗೆ ಹೇಳುತ್ತಾರೆ: “ರಾಮದಲ್ಲಿ ರೋದನೆಯೂ, ಗೋಳಾಟವೂ ಅಘೋರವಾದ ಅಳುವಿಕೆಯೂ ಕೇಳಿಸುತ್ತಿದೆ. ರಾಹೇಲಳು ತನ್ನ ಮಕ್ಕಳಿಗಾಗಿ ಗೋಳಾಡುತ್ತಾ, ಆದರಣೆ ಹೊಂದದೆ ಹೋಗಿದ್ದಾಳೆ. ಏಕೆಂದರೆ ಅವಳ ಮಕ್ಕಳು ಇನ್ನಿಲ್ಲ.”


ನನ್ನ ಇಕ್ಕಟ್ಟಿನ ದಿವಸದಲ್ಲಿ ಯೆಹೋವ ದೇವರನ್ನು ಹುಡುಕಿದೆನು. ನಾನು ರಾತ್ರಿಯೆಲ್ಲಾ ಬೇಸರವಿಲ್ಲದೆ ಕೈಚಾಚಿದೆ. ನನ್ನ ಮನಸ್ಸಿಗೆ ಶಾಂತಿ ಇರಲಿಲ್ಲ.


ಕೊನೆಗೆ ಇಸ್ರಾಯೇಲನು, “ನನ್ನ ಮಗ ಯೋಸೇಫನು ಇನ್ನೂ ಜೀವಂತವಾಗಿದ್ದಾನೆ, ಅಷ್ಟೇ ಸಾಕು! ನಾನು ಸಾಯುವುದಕ್ಕಿಂತ ಮುಂಚೆ ಹೋಗಿ ಅವನನ್ನು ನೋಡುತ್ತೇನೆ,” ಎಂದನು.


ನಾವು ಅವನಿಗೆ, “ನಾವು ಗೂಢಚಾರರಲ್ಲ, ಸತ್ಯವಂತರೇ.


ಲಾಬಾನನು ಅದಕ್ಕೆ ಉತ್ತರವಾಗಿ ಯಾಕೋಬನಿಗೆ, “ಈ ಪುತ್ರಿಯರು ನನ್ನ ಪುತ್ರಿಯರೇ, ಈ ಮಕ್ಕಳು ನನ್ನ ಮಕ್ಕಳೇ, ಈ ಮಂದೆಯು ನನ್ನ ಮಂದೆಯೇ, ಅಂತು ನೀನು ಕಾಣುವುದೆಲ್ಲಾ ನನ್ನದೇ. ಹಾಗಾದರೆ ನನ್ನ ಪುತ್ರಿಯರಿಗಾಗಲಿ, ಅವರು ಹೆತ್ತ ಮಕ್ಕಳಿಗಾಗಲಿ ನಾನು ಈ ಹೊತ್ತು ಏನು ಮಾಡಲಿ?


ಅವನು ಪೂರ್ಣಾಯುಷ್ಯನಾಗಿ ತುಂಬಾ ಮುದುಕನಾಗಿ ಮರಣಹೊಂದಿ ತನ್ನ ಪಿತೃಗಳ ಬಳಿಗೆ ಸೇರಿದನು.


ಇಸಾಕನು ಮುದುಕನಾಗಿಯೂ, ತುಂಬಾ ಆಯುಷ್ಯವುಳ್ಳವನಾಗಿಯೂ ಮರಣಹೊಂದಿ ತನ್ನ ಪಿತೃಗಳೊಂದಿಗೆ ಸೇರಿದನು. ಅವನ ಮಕ್ಕಳಾದ ಏಸಾವನೂ, ಯಾಕೋಬನೂ ಅವನನ್ನು ಸಮಾಧಿಮಾಡಿದರು.


ಆದರೆ ಈಗ ಸತ್ತಿದೆಯಲ್ಲಾ. ನಾನು ಉಪವಾಸ ಮಾಡುವುದು ಏಕೆ? ನಾನು ಅದನ್ನು ತಿರುಗಿ ಬರಮಾಡಬಲ್ಲೆನೋ? ನಾನು ಅದರ ಬಳಿಗೆ ಹೋಗುವೆನು. ಆದರೆ ಅದು ನನ್ನ ಬಳಿಗೆ ತಿರುಗಿ ಬರುವುದಿಲ್ಲ,” ಎಂದನು.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಹೋಗಲಿರುವ ಸಮಾಧಿಯಲ್ಲಿ, ಕೆಲಸವೂ ಯೋಜನೆಯೂ ತಿಳುವಳಿಕೆಯೂ ಜ್ಞಾನವೂ ಇರುವುದಿಲ್ಲ.


ಇಸ್ರಾಯೇಲನು ಯೋಸೇಫನಿಗೆ, “ನಿನ್ನ ಮುಖವನ್ನು ಕಾಣುವೆನೆಂದು ನಾನು ನೆನಸಿರಲಿಲ್ಲ. ಆದರೆ ನಿನ್ನ ಸಂತಾನವನ್ನು ಸಹ ದೇವರು ನನಗೆ ಕಾಣುವಂತೆ ಅನುಗ್ರಹಿಸಿದ್ದಾನೆ,” ಎಂದನು.


“ಅರಸನು ಅಬ್ಷಾಲೋಮನಿಗೋಸ್ಕರ ಅತ್ತು ದುಃಖ ಪಡುತ್ತಾ ಇದ್ದಾನೆ,” ಎಂದು ಯೋವಾಬನಿಗೆ ತಿಳಿಸಲಾಯಿತು.


ಅವರ ತಂದೆಯಾದ ಎಫ್ರಾಯೀಮನು ಅನೇಕ ದಿವಸಗಳು ದುಃಖಪಟ್ಟದ್ದರಿಂದ, ಅವನ ಸಹೋದರರು ಅವನನ್ನು ಆದರಿಸಲು ಬಂದರು.


ನಾನು ವ್ಯಥೆಪಡುತ್ತಿರುವಾಗ, ದೇವರನ್ನು ಜ್ಞಾಪಕಮಾಡಿಕೊಂಡೆನು. ನಾನು ಚಿಂತಿಸುವುದರಿಂದ ನನ್ನ ಆತ್ಮವು ಬಳಲಿ ಹೋಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು