Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 37:7 - ಕನ್ನಡ ಸಮಕಾಲಿಕ ಅನುವಾದ

7 ನಾವು ಹೊಲದಲ್ಲಿ ಸಿವುಡುಗಳನ್ನು ಕಟ್ಟುತ್ತಾ ಇದ್ದೆವು. ನನ್ನ ಸಿವುಡು ಎದ್ದುನಿಂತಿತು. ಆಗ ನಿಮ್ಮ ಸಿವುಡುಗಳು ತಿರುಗಿ ನನ್ನ ಸಿವುಡಿಗೆ ಅಡ್ಡಬಿದ್ದವು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆ ಕನಸಿನಲ್ಲಿ ನಾವು ಹೊಲದಲ್ಲಿ ಸಿವುಡುಗಳನ್ನು ಕಟ್ಟುತ್ತಾ ಇದ್ದೆವು. ಆಗ ನನ್ನ ಸಿವುಡು ಎದ್ದು ನಿಂತಿತು. ನಿಮ್ಮ ಸಿವುಡುಗಳು ಸುತ್ತಲೂ ಬಂದು ನನ್ನ ಸಿವುಡಿಗೆ ಅಡ್ಡಬಿದ್ದದ್ದನ್ನು ಕಂಡೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಈ ಕನಸಿನಲ್ಲಿ ನಾವು ಹೊಲದಲ್ಲಿ ಬೆಳೆಕೊಯ್ದು ಕಂತೆಗಳನ್ನು ಕಟ್ಟುತ್ತಾ ಇದ್ದೆವು. ಆಗ ನನ್ನ ಕಂತೆ ಎದ್ದುನಿಂತಿತು. ನಿಮ್ಮ ಕಂತೆಗಳು ಸುತ್ತಲೂ ಬಂದು ನನ್ನ ಕಂತೆಗೆ ಅಡ್ಡಬಿದ್ದುದನ್ನು ಕಂಡೆ,” ಎಂದು ಹೇಳಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆ ಕನಸಿನಲ್ಲಿ ನಾವು ಹೊಲದಲ್ಲಿ ಸಿವುಡುಗಳನ್ನು ಕಟ್ಟುತ್ತಾ ಇದ್ದೆವು; ಆಗ ನನ್ನ ಸಿವುಡು ಎದ್ದು ನಿಲ್ಲಲು ನಿಮ್ಮ ಸಿವುಡುಗಳು ಸುತ್ತಲೂ ಬಂದು ನನ್ನ ಸಿವುಡಿಗೆ ಅಡ್ಡಬಿದ್ದದ್ದನ್ನು ಕಂಡೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಾವೆಲ್ಲರು ಹೊಲದಲ್ಲಿ ಗೋಧಿಯ ಸಿವುಡುಗಳನ್ನು ಕಟ್ಟುತ್ತಿದ್ದೆವು. ಆಗ ನನ್ನ ಸಿವುಡು ಎದ್ದುನಿಂತಿತು; ನನ್ನ ಸಿವುಡಿನ ಸುತ್ತಲೂ ನಿಮ್ಮ ಸಿವುಡುಗಳೆಲ್ಲಾ ಎದ್ದುನಿಂತುಕೊಂಡು ನನ್ನ ಸಿವುಡಿಗೆ ಅಡ್ಡಬಿದ್ದವು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 37:7
12 ತಿಳಿವುಗಳ ಹೋಲಿಕೆ  

ಯೆಹೂದನೂ ಅವನ ಸಹೋದರರೂ ಯೋಸೇಫನು ಇನ್ನೂ ಮನೆಯಲ್ಲಿದ್ದಾಗಲೇ, ಅವನ ಮನೆಗೆ ಬಂದು ಮುಂದೆ ಅಡ್ಡಬಿದ್ದರು.


ಆಗ ಯೋಸೇಫನು ದೇಶದ ಮೇಲೆಲ್ಲಾ ಅಧಿಪತಿಯಾಗಿದ್ದನು. ದೇಶದ ಜನರಿಗೆಲ್ಲಾ ಧಾನ್ಯವನ್ನು ಮಾರುವವನು ಅವನೇ ಆಗಿದ್ದನು. ಹೀಗಿರಲಾಗಿ ಯೋಸೇಫನ ಸಹೋದರರು ಬಂದು, ತಮ್ಮ ಮುಖಗಳನ್ನು ನೆಲದ ಮಟ್ಟಿಗೂ ತಗ್ಗಿಸಿ ಅವನಿಗೆ ಅಡ್ಡಬಿದ್ದರು.


ಯೋಸೇಫನು ಮನೆಗೆ ಬಂದ ಮೇಲೆ, ತಮ್ಮ ಕೈಗಳಲ್ಲಿದ್ದ ಕಾಣಿಕೆಯನ್ನು ಮನೆಯೊಳಗೆ ತೆಗೆದುಕೊಂಡು ಬಂದು, ಅವನಿಗೆ ನೆಲದವರೆಗೂ ಅಡ್ಡಬಿದ್ದರು.


ಆಗ ಯೋಸೇಫನು ತನ್ನ ಸಹೋದರರನ್ನು ನೋಡಿ ಅವರನ್ನು ಗುರುತಿಸಿದರೂ ಆಗ ಯೋಸೇಫನು ತಾನು ಅವರ ವಿಷಯದಲ್ಲಿ ಕಂಡ ಕನಸುಗಳನ್ನು ಜ್ಞಾಪಕಮಾಡಿಕೊಂಡು ಅವರಿಗೆ, “ನೀವು ಗೂಢಚಾರರು, ದೇಶದ ಒಳಗುಟ್ಟನ್ನು ನೋಡುವುದಕ್ಕೆ ಬಂದಿದ್ದೀರಿ,” ಎಂದನು.


ಕ್ರಿಸ್ತ ಯೇಸು ಸಭೆಯೆಂಬ ದೇಹಕ್ಕೆ ಶಿರಸ್ಸಾಗಿದ್ದಾರೆ. ಎಲ್ಲದರಲ್ಲಿಯೂ ಇವರೇ ಪ್ರಥಮ ಸ್ಥಾನಹೊಂದಿರುವಂತೆ, ಆರಂಭವೂ ಸತ್ತು ಎದ್ದು ಬಂದವರಲ್ಲಿ ಪ್ರಥಮವಾದವರು ಆಗಿದ್ದಾರೆ. ಹೀಗೆ ಇವರು ಎಲ್ಲದರಲ್ಲಿಯೂ ಸರ್ವಶ್ರೇಷ್ಠರಾಗಿದ್ದಾರೆ.


ಆದ್ದರಿಂದ ಪರಲೋಕ, ಭೂಲೋಕ, ಭೂಮಿಯ ಕೆಳಗಿರುವವರೆಲ್ಲರೂ ಯೇಸುವಿನ ಹೆಸರಿನಲ್ಲಿ ಮೊಣಕಾಲೂರಿ,


ನನ್ನ ಒಡೆಯನೇ, ‘ನಿಮಗೆ ತಂದೆಯೂ ಸಹೋದರರೂ ಇದ್ದಾರೋ,’ ಎಂದು ತನ್ನ ದಾಸರನ್ನು ಕೇಳಲು,


ಜನರು ನಿನಗೆ ಸೇವೆಮಾಡಲಿ, ಜನಾಂಗಗಳು ನಿನಗೆ ಅಡ್ಡಬೀಳಲಿ, ನಿನ್ನ ಸಹೋದರರಿಗೆ ನೀನು ದೊರೆಯಾಗಿರು. ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ. ನಿನ್ನನ್ನು ಶಪಿಸುವವರಿಗೆ ಶಾಪವೂ ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದವೂ ಆಗಲಿ.”


ಅವನು ಅವರಿಗೆ, “ನಾನು ಕಂಡ ಈ ಕನಸನ್ನು ಹೇಳುತ್ತೇನೆ ಕೇಳಿರಿ.


ಅದಕ್ಕವರು, “ನಿನ್ನ ದಾಸನಾದ ನಮ್ಮ ತಂದೆಯು ಕ್ಷೇಮದಿಂದಿದ್ದಾನೆ, ಅವನು ಇನ್ನೂ ಬದುಕಿದ್ದಾನೆ,” ಎಂದು ಹೇಳಿ ತಮ್ಮ ತಲೆಗಳನ್ನು ಮತ್ತೆ ಬಾಗಿಸಿ ವಂದಿಸಿದರು.


ಯೆಹೂದನು ಅವನ ಸಮೀಪಕ್ಕೆ ಬಂದು, “ನನ್ನ ಒಡೆಯನೇ, ನನ್ನ ಒಡೆಯನ ಕಿವಿಗಳಲ್ಲಿ ಒಂದು ಮಾತು ಹೇಳುವುದಕ್ಕೆ ನಿನ್ನ ದಾಸನಿಗೆ ಅಪ್ಪಣೆಯಾಗಬೇಕು. ನಿನ್ನ ದಾಸನ ಮೇಲೆ ನಿನ್ನ ಕೋಪವು ಉರಿಯದೆ ಇರಲಿ. ಏಕೆಂದರೆ ನೀನು ಫರೋಹನಿಗೆ ಸಮಾನನು.


ಆಮೇಲೆ ಅವನ ಸಹೋದರರು ಬಂದು ಅವನ ಮುಂದೆ ಅಡ್ಡಬಿದ್ದು, “ನಿನ್ನ ದಾಸರಾಗಿದ್ದೇವೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು