Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 38:10 - ಕನ್ನಡ ಸಮಕಾಲಿಕ ಅನುವಾದ

10 ಅವನು ಮಾಡಿದ್ದು ಯೆಹೋವ ದೇವರ ದೃಷ್ಟಿಯಲ್ಲಿ ಮೆಚ್ಚಿಗೆಯಾಗಿರಲಿಲ್ಲ. ಆದ್ದರಿಂದ ಅವರು ಇವನನ್ನೂ ಸಾವಿಗೀಡುಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಈ ನಡತೆ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿದ್ದುದರಿಂದ ಆತನು ಅವನನ್ನೂ ಸಾಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಈ ನಡತೆ ಸರ್ವೇಶ್ವರ ಸ್ವಾಮಿಯ ದೃಷ್ಟಿಯಲ್ಲಿ ಕೆಟ್ಟದಾಗಿತ್ತು. ಆದ್ದರಿಂದ ಸರ್ವೇಶ್ವರ ಅವನನ್ನೂ ಸಾವಿಗೀಡುಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಈ ನಡತೆ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿದ್ದದರಿಂದ ಆತನು ಅವನನ್ನೂ ಸಾಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಇದು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿದ್ದರಿಂದ ಆತನು ಓನಾನನನ್ನು ಸಹ ಸಾಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 38:10
13 ತಿಳಿವುಗಳ ಹೋಲಿಕೆ  

ಯೆಹೂದನ ಮಕ್ಕಳು: ಏರ್, ಓನಾನ್, ಶೇಲಹ, ಪೆರೆಚ್ ಮತ್ತು ಜೆರಹ. ಆದರೆ ಏರನೂ, ಓನಾನನೂ ಕಾನಾನ್ ದೇಶದಲ್ಲಿ ಸತ್ತರು. ಪೆರೆಚನ ಮಕ್ಕಳು: ಹೆಚ್ರೋನ್ ಮತ್ತು ಹಾಮೂಲ್ ಎಂಬುವರು.


ಯೆಹೂದನ ಪುತ್ರರು: ಏರ್, ಓನಾನನೂ. ಆದರೆ ಏರನೂ ಓನಾನನೂ ಕಾನಾನ್ ದೇಶದಲ್ಲಿ ಸತ್ತರು.


ಇಸ್ರಾಯೇಲ್ ಜನರು ತಮಗೆ ಕಷ್ಟವಾಯಿತೆಂದು ಗೊಣಗುಟ್ಟಿದಾಗ, ಯೆಹೋವ ದೇವರು ಅದನ್ನು ಕೇಳಿ ಕೋಪಗೊಂಡು ಅವರ ಮಧ್ಯದಲ್ಲಿ ಬೆಂಕಿ ಬೀಳುವಂತೆ ಮಾಡಿದ್ದರಿಂದ ಅವರ ಪಾಳೆಯದ ಕಟ್ಟಕಡೆಯ ಭಾಗದಲ್ಲಿದ್ದವರು ಸುಟ್ಟುಹೋದರು.


ಆಗ ಯೆಹೋವ ದೇವರ ಸೇವಕನಾದ ಹಗ್ಗಾಯನು, ಯೆಹೋವ ದೇವರ ಜನರಿಗೆ, “ನಾನು ನಿಮ್ಮ ಸಂಗಡ ಇದ್ದೇನೆ” ಎಂದು ಯೆಹೋವ ದೇವರು ಹೇಳುತ್ತಾರೆ.


ಆದರೂ ನಾನು ನಿಮ್ಮ ಬಳಿಗೆ ನನ್ನ ಸೇವಕರಾದ ಪ್ರವಾದಿಗಳೆಲ್ಲರನ್ನು ಪುನಃ ಕಳುಹಿಸಿ, ‘ನಾನು ಹಗೆ ಮಾಡುವ ಈ ಅಸಹ್ಯವಾದ ಕಾರ್ಯವನ್ನು ಮಾಡಲೇಬೇಡಿರಿ!’ ಎಂದು ಹೇಳಿದೆನು.


ಯೆಹೋವ ದೇವರು ಅದನ್ನು ಕಂಡು, ಅದು ಅವರಿಗೆ ಇಷ್ಟವಿಲ್ಲದ್ದರಿಂದ, ಅವರು ಅವನ ಕಡೆಯಿಂದ ತನ್ನ ಕೋಪವನ್ನು ತಿರುಗಿಸಿಬಿಟ್ಟಾರು.


ದುಷ್ಟನು ತನ್ನ ಆಪತ್ಕಾಲದಲ್ಲಿ ಹಾಳಾಗುತ್ತಾನೆ, ಆದರೆ ನೀತಿವಂತನಿಗೆ ಮರಣದಲ್ಲಿಯೂ ಆಶ್ರಯ ಇದೆ.


ಇದಲ್ಲದೆ ಈ ಕಾರ್ಯವು ದೇವರ ಸಮ್ಮುಖದಲ್ಲಿ ಕೆಟ್ಟದ್ದಾದದ್ದರಿಂದ, ದೇವರು ಇಸ್ರಾಯೇಲನ್ನು ಶಿಕ್ಷಿಸಿದರು.


ದುಃಖದ ದಿವಸಗಳು ತೀರಿದ ತರುವಾಯ, ದಾವೀದನು ಅವಳನ್ನು ತನ್ನ ಮನೆಗೆ ಕರೆಯಕಳುಹಿಸಿದನು. ಅವಳು ಅವನಿಗೆ ಹೆಂಡತಿಯಾಗಿ ಒಬ್ಬ ಮಗನನ್ನು ಹೆತ್ತಳು. ದಾವೀದನು ಮಾಡಿದ ಈ ಕಾರ್ಯವು ಯೆಹೋವ ದೇವರ ದೃಷ್ಟಿಗೆ ಕೆಟ್ಟದ್ದಾಗಿತ್ತು.


ಆಗ ಬಿಳಾಮನು ಯೆಹೋವ ದೇವರ ದೂತನಿಗೆ, “ನಾನು ಪಾಪಮಾಡಿದ್ದೇನೆ. ನೀನು ನನಗೆದುರಾಗಿ ಮಾರ್ಗದಲ್ಲಿ ನಿಂತಿದ್ದಿ ಎಂದು ನನಗೆ ತಿಳಿಯಲಿಲ್ಲ. ಹೀಗಿರಲಾಗಿ ಅದು ನಿನ್ನ ದೃಷ್ಟಿಯಲ್ಲಿ ಕೆಟ್ಟದ್ದಾದರೆ, ನಾನು ತಿರುಗಿ ಹಿಂದಕ್ಕೆ ಹೋಗುತ್ತೇನೆ,” ಎಂದನು.


ಮನುಷ್ಯನಿಗೆ ವಿರೋಧವಾಗಿ ಮನುಷ್ಯನು ಪಾಪಮಾಡಿದರೆ, ದೇವರು ಅಪರಾಧಿಗಾಗಿ ಮಧ್ಯಸ್ಥಿಕೆಯನ್ನು ವಹಿಸುವರು. ಆದರೆ ಒಬ್ಬನು ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದರೆ, ಅವನಿಗೋಸ್ಕರ ವಿಜ್ಞಾಪನೆ ಮಾಡತಕ್ಕವರು ಯಾರು?” ಎಂದನು. ಆದರೂ ಅವರು ತಮ್ಮ ತಂದೆಯ ಮಾತನ್ನು ಕೇಳದೆ ಹೋದರು. ಯೆಹೋವ ದೇವರು ಅವರನ್ನು ಮರಣದಂಡನೆಗೆ ಒಪ್ಪಿಸಬೇಕೆಂದಿದ್ದರು.


“ನನ್ನ ದೇವರಾದ ಯೆಹೋವ ದೇವರೇ, ವಿಧವೆಯ ಮಗನನ್ನು ಕೊಂದುಹಾಕುವ ಈ ದುರಂತ ಅವಳ ಮೇಲೆ ಬರಮಾಡಿದಿಯಲ್ಲಾ?” ಎಂದು ಯೆಹೋವ ದೇವರನ್ನು ಕೂಗಿ ಬೇಡಿದನು.


ಯೆಹೂದನ ಪುತ್ರರು: ಏರ್, ಓನಾನ್, ಶೇಲಹ. ಈ ಮೂವರು ಅವನಿಗೆ ಶೂನನ ಮಗಳಾದ ಕಾನಾನ್ ದೇಶದವಳಿಂದ ಹುಟ್ಟಿದರು. ಯೆಹೂದನ ಚೊಚ್ಚಲಮಗನಾದ ಏರನು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟವನಾದ್ದರಿಂದ, ದೇವರು ಅವನನ್ನು ಮರಣಕ್ಕೆ ಒಪ್ಪಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು