Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 38:25 - ಕನ್ನಡ ಸಮಕಾಲಿಕ ಅನುವಾದ

25 ಆಕೆಯನ್ನು ಹೊರಗೆ ತಂದಾಗ, ಆಕೆಯು ತನ್ನ ಮಾವನಿಗೆ, “ಈ ಒತ್ತೆಯ ಸಾಮಾನುಗಳನ್ನು ಕೊಟ್ಟ ಆ ಮನುಷ್ಯನಿಂದಲೇ ನಾನು ಗರ್ಭಿಣಿಯಾಗಿದ್ದೇನೆ. ಆದ್ದರಿಂದ ಈ ಮುದ್ರೆಯೂ ದಾರವೂ ಕೋಲೂ ಯಾರವೆಂದು ತಿಳಿದುಕೋ,” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆಕೆಯನ್ನು ಹೊರಕ್ಕೆ ತಂದಾಗ, ಆಕೆಯು ತನ್ನ ಮಾವನಿಗೆ, “ಈ ಸಾಮಾನುಗಳನ್ನು ಕಳುಹಿಸಿ, ಇವು ಯಾವ ಮನುಷ್ಯನದೋ, ಅವನಿಂದಲೇ ನಾನು ಗರ್ಭಿಣಿಯಾಗಿದ್ದೇನೆ. ಮುದ್ರೆ, ದಾರ, ಕೋಲು ಇವುಗಳ ಗುರುತನ್ನು ತಿಳಿಯಬಹುದು” ಎಂದು ಕೇಳಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅಂತೆಯೇ ಎಳೆದು ತರುವಾಗ ಆಕೆ ತನ್ನ ಮಾವನಿಗೆ ಒತ್ತೆಯ ವಸ್ತುಗಳನ್ನು ಕಳುಹಿಸುತ್ತಾ, “ಇವು ಯಾವನವೊ ಅವನಿಂದಲೇ ನಾನು ಗರ್ಭಿಣಿಯಾದುದು; ಮುದ್ರೆಯುಂಗುರ, ಅದರ ದಾರ ಮತ್ತು ಕೈಗೋಲು ಇವುಗಳನ್ನು ಗುರುತಿಸಿ ತಿಳಿದುಕೊಳ್ಳಬಹುದು,” ಎಂದು ಹೇಳಿಕಳಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅವರು ಆಕೆಯನ್ನು ಹೊರಕ್ಕೆ ತಂದಾಗ ಆಕೆ ತನ್ನ ಮಾವನಿಗೆ ಆ ಒತ್ತೆಯ ಸಾಮಾನುಗಳನ್ನು ಕಳುಹಿಸಿ - ಇವು ಯಾವನವೋ ಆ ಮನುಷ್ಯನಿಂದಲೇ ನಾನು ಬಸುರಾಗಿದ್ದೇನೆ; ಮುದ್ರೆ, ದಾರ, ಕೋಲು ಇವುಗಳ ಗುರುತನ್ನು ತಿಳಿಯಬಹುದು ಎಂದು ಹೇಳಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆ ಗಂಡಸರು ತಾಮಾರಳನ್ನು ಕೊಲ್ಲಲು ಆಕೆಯ ಬಳಿಗೆ ಹೋದರು. ಆದರೆ ಆಕೆ ತನ್ನ ಮಾವನಿಗೆ, “ನನ್ನನ್ನು ಗರ್ಭಿಣಿ ಮಾಡಿದವನು ಈ ವಸ್ತುಗಳ ಒಡೆಯ. ಈ ವಸ್ತುಗಳನ್ನು ನೋಡು! ಇವು ಯಾರವು? ಈ ಮುದ್ರೆಯೂ ದಾರವೂ ಯಾರವು? ಇದು ಯಾರ ಕೈಕೋಲು?” ಎಂಬ ಸಂದೇಶವನ್ನು ಹೇಳಿ ಕಳುಹಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 38:25
7 ತಿಳಿವುಗಳ ಹೋಲಿಕೆ  

ಅದಕ್ಕೆ ಅವನು, “ನಿನಗೆ ಕೊಡತಕ್ಕ ಈಡು ಏನು?” ಎಂದಾಗ. ಅವಳು, “ನಿನ್ನ ಮುದ್ರೆಯೂ ನಿನ್ನ ದಾರವೂ ನಿನ್ನ ಕೈಯಲ್ಲಿರುವ ಕೋಲೂ,” ಎಂದಳು. ಆಗ ಅವನು ಅವುಗಳನ್ನು ಆಕೆಗೆ ಕೊಟ್ಟು, ಆಕೆಯನ್ನು ಕೂಡಿದನು. ಹೀಗೆ ಅವಳು ಅವನಿಂದ ಗರ್ಭಿಣಿಯಾದಳು.


ಆ ಬಣ್ಣದ ಅಂಗಿಯನ್ನು ಅವರು ತಮ್ಮ ತಂದೆಯ ಬಳಿಗೆ ತಂದು, “ಇದು ನಮಗೆ ಸಿಕ್ಕಿತು, ಇದು ನಿನ್ನ ಮಗನ ಅಂಗಿಯೋ ಏನೋ ನೋಡು,” ಎಂದು ಹೇಳಿದರು.


ಇದಲ್ಲದೆ ಸತ್ತವರಾದ ಹಿರಿಯರೂ ಕಿರಿಯರೂ ಸಿಂಹಾಸನದ ಎದುರಿಗೆ ನಿಂತಿರುವುದನ್ನೂ ಕಂಡೆನು. ಆಗ ಪುಸ್ತಕಗಳನ್ನು ತೆರೆಯಲಾಯಿತು. ನಿತ್ಯಜೀವ ಪುಸ್ತಕವೆಂಬ ಇನ್ನೊಂದು ಪುಸ್ತಕವನ್ನು ತೆರೆಯಲಾಯಿತು. ಆ ಪುಸ್ತಕಗಳಲ್ಲಿ ಬರೆದಿದ್ದರ ಪ್ರಕಾರ, ಅವರವರ ಕ್ರಿಯೆಗಳಿಗೆ ತಕ್ಕಂತೆ ಸತ್ತವರಿಗೆ ನ್ಯಾಯತೀರ್ಪಾಯಿತು.


ಆದುದರಿಂದ ನೀವು ಕಾಲಕ್ಕೆ ಮೊದಲು ಯಾವುದನ್ನು ಕುರಿತೂ ತೀರ್ಪುಮಾಡದೆ, ಕರ್ತದೇವರ ಬರುವಿಕೆಗಾಗಿ ಕಾಯಿರಿ. ಅವರು ಕತ್ತಲಲ್ಲಿರುವ ಗುಪ್ತ ಕಾರ್ಯಗಳನ್ನು ಬೆಳಕಿಗೆ ತಂದು ಮನುಷ್ಯನ ಹೃದಯದ ಉದ್ದೇಶಗಳನ್ನು ಪ್ರತ್ಯಕ್ಷಪಡಿಸುವರು. ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ಬರುವುದು.


“ಕಳ್ಳನು ಸಿಕ್ಕಿದ ಮೇಲೆ ನಾಚಿಕೆಪಡುವ ಪ್ರಕಾರ ಇಸ್ರಾಯೇಲ್ ಜನರಿಗೆ ನಾಚಿಕೆ ಆಯಿತು. ಅವರ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು, ಇವರೆಲ್ಲರೂ ನಾಚಿಕೆಗೆ ಈಡಾಗುವರು.


ಇವುಗಳನ್ನೆಲ್ಲಾ ನೀವು ಮಾಡಿದ್ದೀರಿ, ಆದರೂ ನಾನು ಮೌನವಾಗಿದ್ದೆನು. ಆದ್ದರಿಂದ ನಾನೂ ಸಹ ನಿಮ್ಮ ಹಾಗೆ ಒಬ್ಬನೆಂದು ನೀವು ನೆನಸಿಕೊಂಡಿದ್ದೀರಿ. ಆದರೆ ಈಗ ನಾನು ನಿಮ್ಮನ್ನು ಗದರಿಸಿ ನಿಮ್ಮ ಕಣ್ಣು ಮುಂದೆಯೇ ನಿಮ್ಮ ಅಪರಾಧ ಪ್ರಕಟಿಸುವೆನು.


ನಾನು ಸಾರುವ ಸುವಾರ್ತೆಯ ಪ್ರಕಾರ ದೇವರು ಕ್ರಿಸ್ತ ಯೇಸುವಿನ ಮೂಲಕವಾಗಿ ಮನುಷ್ಯರ ಗುಟ್ಟುಗಳನ್ನು ವಿಚಾರಿಸುವ ದಿನದಲ್ಲಿ ಇವೆಲ್ಲಾ ಸಂಭವಿಸುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು