Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 38:26 - ಕನ್ನಡ ಸಮಕಾಲಿಕ ಅನುವಾದ

26 ಆಗ ಯೆಹೂದನು ಅವುಗಳನ್ನು ಗುರುತಿಸಿ, “ಆಕೆಯು ನನಗಿಂತ ನೀತಿವಂತಳು, ಏಕೆಂದರೆ ನಾನು ನನ್ನ ಮಗ ಶೇಲಹನಿಗೆ ಅವಳನ್ನು ಕೊಡಲಿಲ್ಲ,” ಎಂದನು. ಅವನು ಮತ್ತೆ ಆಕೆಯೊಡನೆ ಸಂಸರ್ಗವಿಲ್ಲದೆ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಯೆಹೂದನು ಅವುಗಳ ಗುರುತನ್ನು ತಿಳಿದು, “ನಾನು, ನನ್ನ ಮಗನಾದ ಶೇಲಹನನ್ನು ಆಕೆಗೆ ಮದುವೆ ಮಾಡಿಸಲಿಲ್ಲ. ಆದುದರಿಂದ ಆಕೆಯು ನನಗಿಂತಲೂ ನೀತಿವಂತಳು” ಎಂದು ಹೇಳಿದನು. ಅವನು ಪುನಃ ಆಕೆಯ ಸಹವಾಸ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಯೆಹೂದನು ಅವುಗಳ ಗುರುತುಹಚ್ಚಿದನು. “ನಾನು ನನ್ನ ಮಗ ಶೇಲಹನನ್ನು ಆಕೆಗೆ ಮದುವೆ ಮಾಡದೆಹೋದೆ. ಈ ಕಾರಣ ನನಗಿಂತ ಆಕೆಯೇ ನೀತಿವಂತಳು,” ಎಂದುಕೊಂಡನು. ಇದಾದ ಬಳಿಕ ಅವನು ಆಕೆಯೊಡನೆ ಸಂಸರ್ಗವಿಲ್ಲದೆ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಯೆಹೂದನು ಅವುಗಳ ಗುರುತನ್ನು ತಿಳಿದು - ನಾನು ನನ್ನ ಮಗನಾದ ಶೇಲಹನನ್ನು ಆಕೆಗೆ ಮದುವೆಮಾಡಿಸಲಿಲ್ಲವಾದ್ದರಿಂದ ಆಕೆ ನನಗಿಂತಲೂ ನ್ಯಾಯವಾಗಿ ನಡೆದಳು ಎಂದು ಹೇಳಿದನು. ಅವನು ತಿರಿಗಿ ಆಕೆಯ ಸಹವಾಸ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಯೆಹೂದನು ಆ ವಸ್ತುಗಳನ್ನು ಗುರುತಿಸಿ, “ಆಕೆ ಸರಿಯಾದದ್ದನ್ನೇ ಮಾಡಿದ್ದಾಳೆ. ನಾನೇ ತಪ್ಪು ಮಾಡಿದೆ. ನಾನು ಆಕೆಗೆ ಮಾತುಕೊಟ್ಟಂತೆ ನನ್ನ ಮಗನಾದ ಶೇಲಹನನ್ನು ಆಕೆಗೆ ಕೊಡಬೇಕಿತ್ತು” ಎಂದು ಹೇಳಿದನು. ಆದರೆ ಯೆಹೂದನು ಆಕೆಯೊಡನೆ ಮತ್ತೆ ಮಲಗಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 38:26
19 ತಿಳಿವುಗಳ ಹೋಲಿಕೆ  

ಇದಲ್ಲದೆ ಅವನು ದಾವೀದನಿಗೆ, “ನೀನು ನನಗಿಂತ ನೀತಿವಂತನು. ನಾನು ನಿನಗೆ ಕೇಡನ್ನು ಮಾಡಿದರೂ, ನೀನು ನನಗೆ ಒಳ್ಳೆಯದನ್ನು ಮಾಡಿದೆ.


ಅದನ್ನು ಅವರು ಕೇಳಿ ಹಿರಿಯರು ಮೊದಲುಗೊಂಡು ಕಿರಿಯರವರೆಗೂ ಒಬ್ಬೊಬ್ಬರಾಗಿ ಹೊರಟು ಹೋದರು; ಆಗ ಯೇಸು ಒಬ್ಬರೇ ಉಳಿದರು. ಆ ಸ್ತ್ರೀಯು ಅಲ್ಲಿಯೇ ನಿಂತಿದ್ದಳು.


ರಾತ್ರಿಯು ಬಹಳಷ್ಟು ಕಳೆದು ಹಗಲು ಸಮೀಪಿಸಿದೆ. ಆದ್ದರಿಂದ ನಾವು ಕತ್ತಲೆಯ ಕೃತ್ಯಗಳನ್ನು ಎಸೆದು ಬೆಳಕಿನ ಆಯುಧಗಳನ್ನು ಧರಿಸಿಕೊಳ್ಳೋಣ.


ನಿಯಮವು ಏನೇ ಹೇಳುವುದಾದರೂ ಅದು ನಿಯಮಕ್ಕೆ ಒಳಪಟ್ಟಿರುವವರಿಗೇ ಅನ್ವಯವಾಗುವುದೆಂದು ನಾವು ಬಲ್ಲೆವು. ಹೀಗೆ ಎಲ್ಲರ ಬಾಯಿ ಮುಚ್ಚಿಹೋಗುವುದು ಮತ್ತು ಲೋಕವೆಲ್ಲಾ ದೇವರ ತೀರ್ಪಿಗೆ ಒಳಗಾಗಿರುವುದು.


ನಿಮ್ಮ ಮನಸ್ಸು ದೇವರ ಕಡೆಗೆ ತಿರುಗಿಕೊಂಡದ್ದಕ್ಕೆ ತಕ್ಕ ಫಲಗಳನ್ನು ತೋರಿಸಿರಿ.


ನೀನು ಕೆಟ್ಟದ್ದನ್ನು ನೋಡದ ಹಾಗೆ ಶುದ್ಧ ಕಣ್ಣುಗಳುಳ್ಳವರು. ನೀವು ಅನ್ಯಾಯವನ್ನು ದೃಷ್ಟಿಸಲಾರಿರಿ, ವಂಚಿಸುವವರನ್ನು ಏಕೆ ಸಹಿಸಿಕೊಳ್ಳುತ್ತೀರಿ? ದುಷ್ಟನು ತನಗಿಂತ ನೀತಿವಂತನನ್ನು ನುಂಗಿ ಬಿಡುವ ವೇಳೆಯಲ್ಲಿ ಏಕೆ ಸುಮ್ಮನಿರುತ್ತೀರಿ?


ನಿನ್ನ ದೋಷಗಳೇ ನಿನ್ನ ಅಕ್ಕ ತಂಗಿಯರ ಪಕ್ಷವಾಗಿ ನಿಂತಿದ್ದರಿಂದ ನೀನು ನಾಚಿಕೆಪಡು. ನೀನು ಅವರಿಗಿಂತ ಅಸಹ್ಯವಾಗಿ ಮಾಡಿದ ನಿನ್ನ ಪಾಪಗಳಿಗೆ ತಕ್ಕ ನಿಂದೆಯನ್ನು ಹೊತ್ತುಕೋ. ಅವರು ನಿನಗಿಂತ ನೀತಿವಂತರು. ಹೌದು, ನೀನು ನಿನ್ನ ಸಹೋದರಿಯರನ್ನು ನೀತಿವಂತರೆಂದು ತೋರ್ಪಡಿಸಿದ್ದರಿಂದ ನೀನೇ ನಾಚಿಕೆಪಟ್ಟು, ನಿನ್ನ ನಿಂದೆಯನ್ನು ಹೊತ್ತುಕೋ.


ಒಂದು ಸಾರಿ ಮಾತಾಡಿದೆ, ಈಗ ನನಗೆ ಕೊಡುವುದಕ್ಕೆ ಉತ್ತರ ಇಲ್ಲ; ಮತ್ತೆ ಮಾತಾಡುತ್ತಿದ್ದೇನೆ, ಆದರೆ ಮಾತಾಡಲು ನನಗೆ ಇನ್ನೇನೂ ಇಲ್ಲ,” ಎಂದನು.


ಈಗ ಆಪತ್ತು ನಿನ್ನ ಮೇಲೆ ಬಂದದ್ದರಿಂದ ನೀನು ದಣಿಯುತ್ತಿರುವೆ; ನಿನಗೂ ಕಡುಕಷ್ಟ ತಟ್ಟಿದ್ದರಿಂದ ಕಳವಳಪಡುತ್ತಿರುವೆ.


ದಾವೀದನು ಜನರನ್ನು ಹೊಡೆಯುವ ದೂತನನ್ನು ನೋಡಿದಾಗ, ಅವನು ಯೆಹೋವ ದೇವರಿಗೆ, “ಇಗೋ, ನಾನೇ ಪಾಪಮಾಡಿದೆನು. ಕುರುಬನಂತಿರುವ ನಾನೇ ಕೆಟ್ಟದ್ದನ್ನು ಮಾಡಿದೆನು. ಆದರೆ ಕುರಿಗಳಂತಿರುವ ಇವರು ಮಾಡಿದ್ದೇನು? ನಿಮ್ಮ ಹಸ್ತವು ನನಗೆ ವಿರೋಧವಾಗಿಯೂ ನನ್ನ ಕುಟುಂಬದ ವಿರೋಧವಾಗಿಯೂ ಇರಲಿ ಎಂದು ನಾನು ಬೇಡುತ್ತೇನೆ,” ಎಂದನು.


ದಾವೀದನು ಯೆರೂಸಲೇಮಿನಲ್ಲಿರುವ ತನ್ನ ಮನೆಗೆ ಬಂದನು. ಅರಸನು ಮನೆಯಲ್ಲಿ ಕಾಯಲು ಇಟ್ಟ ಉಪಪತ್ನಿಗಳಾದ ಹತ್ತು ಮಂದಿ ಸ್ತ್ರೀಯರನ್ನು ತೆಗೆದುಕೊಂಡು, ಅವರನ್ನು ಒಂದು ಕಾವಲಿನಲ್ಲಿರಿಸಿ ಸಾಕುತ್ತಿದ್ದನು. ಅವರಿಗೆ ಅನ್ನವಸ್ತ್ರ ಕೊಡುತ್ತಿದ್ದನು. ಅವರ ಸಂಪರ್ಕ ಮಾಡಲಿಲ್ಲ. ಹಾಗೆಯೇ ಅವರು ಸಾಯುವ ದಿವಸದವರೆಗೂ ವಿಧವೆಯರಂತೆ ಇದ್ದು ಕಾವಲಲ್ಲಿರಬೇಕಾಯಿತು.


ಹಾಗೆಯೇ ಅವರು ಅಬ್ಷಾಲೋಮನ ಮನೆಯ ಮೇಲೆ ಡೇರೆ ಹಾಕಿದರು. ಅಲ್ಲಿ ಅಬ್ಷಾಲೋಮನು ಸಮಸ್ತ ಇಸ್ರಾಯೇಲರ ಕಣ್ಣುಗಳ ಮುಂದೆ ತನ್ನ ತಂದೆಯ ಉಪಪತ್ನಿಗಳ ಸಂಗಡ ಮಲಗಿದನು.


ಆಕೆಯು ವಿಧವೆಯ ವಸ್ತ್ರಗಳನ್ನು ತೆಗೆದಿಟ್ಟು, ಮುಸುಕುಹಾಕಿ ಮುಚ್ಚಿಕೊಂಡು, ತಿಮ್ನಾ ಊರಿನ ಮಾರ್ಗದಲ್ಲಿರುವ ಏನಯಿಮೂರಿನ ಬಹಿರಂಗ ಸ್ಥಳದಲ್ಲಿ ಕೂತುಕೊಂಡಳು. ಏಕೆಂದರೆ ಶೇಲಹನು ದೊಡ್ಡವನಾಗಿದ್ದರೂ ತನ್ನನ್ನು ಅವನಿಗೆ ಹೆಂಡತಿಯಾಗಿ ಕೊಡಲಿಲ್ಲವೆಂದು ಹಾಗೆ ಮಾಡಿದಳು.


ಯಾಕೋಬನು ಅದನ್ನು ಗುರುತು ಹಿಡಿದು, “ಇದು ನನ್ನ ಮಗನ ಅಂಗಿ ಹೌದು, ದುಷ್ಟಮೃಗವು ಅವನನ್ನು ತಿಂದುಬಿಟ್ಟಿತು, ಯೋಸೇಫನನ್ನು ನಿಸ್ಸಂದೇಹವಾಗಿ ಸೀಳಿಹಾಕಿರಬೇಕು,” ಎಂದನು.


ಆದಾಮನು ತನ್ನ ಹೆಂಡತಿಯಾದ ಹವ್ವಳನ್ನು ಕೂಡಲು, ಆಕೆಯು ಗರ್ಭಿಣಿಯಾಗಿ, ಕಾಯಿನನನ್ನು ಹೆತ್ತು, “ನಾನು ಯೆಹೋವ ದೇವರ ಅನುಗ್ರಹದಿಂದ ಗಂಡು ಮಗುವನ್ನು ಪಡೆದಿದ್ದೇನೆ,” ಎಂದು ಹೇಳಿದಳು.


ಯೆಹೋವ ದೇವರು ನನ್ನನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಾಗ, ನೀನು ನನ್ನನ್ನು ಕೊಂದುಹಾಕದೆ ಇದ್ದುದರಿಂದ, ನೀನು ನನಗೆ ಉಪಕಾರ ಮಾಡಿದ್ದನ್ನು ಈ ಹೊತ್ತು ತೋರಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು