Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 39:21 - ಕನ್ನಡ ಸಮಕಾಲಿಕ ಅನುವಾದ

21 ಆದರೆ ಯೆಹೋವ ದೇವರು ಯೋಸೇಫನ ಸಂಗಡ ಇದ್ದು, ಅವನ ಮೇಲೆ ಕರುಣೆಯಿಟ್ಟು, ಸೆರೆಮನೆಯ ಯಜಮಾನನು ಅವನ ಮೇಲೆ ದಯೆ ತೋರಿಸುವಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆದರೆ ಯೆಹೋವನು ಯೋಸೇಫನ ಸಂಗಡ ಇದ್ದು ಅವನ ಮೇಲೆ ಕರುಣೆಯನ್ನಿಟ್ಟು ಸೆರೆಮನೆಯ ಯಜಮಾನನಿಂದ ದಯೆ ದೊರಕುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆದರೂ ಸರ್ವೇಶ್ವರ, ಜೋಸೆಫನ ಸಂಗಡ ಇದ್ದರು. ಅವನಿಗೆ ಅಪಾರ ಪ್ರೀತಿ ತೋರಿಸಿ, ಅವನಿಗೆ ಸೆರೆಯಜಮಾನನ ದಯೆ ದೊರಕುವಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆದರೂ ಯೆಹೋವನು ಯೋಸೇಫನ ಸಂಗಡ ಇದ್ದು ಅವನ ಮೇಲೆ ಕೃಪೆಯನ್ನಿಟ್ಟು ಅವನಿಗೆ ಸೆರೆಯಜಮಾನನ ಬಳಿಯಲ್ಲಿ ದಯೆದೊರಕುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆದರೆ ಯೆಹೋವನು ಯೋಸೇಫನ ಸಂಗಡವಿದ್ದು ಕರುಣೆತೋರಿದನು. ಸ್ವಲ್ಪಕಾಲವಾದ ಮೇಲೆ ಸೆರೆಮನೆಯ ಮುಖ್ಯಾಧಿಕಾರಿಯು ಯೋಸೇಫನನ್ನು ಪ್ರೀತಿಸತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 39:21
23 ತಿಳಿವುಗಳ ಹೋಲಿಕೆ  

“ಇದಲ್ಲದೆ ಈ ಜನರಿಗೆ ಈಜಿಪ್ಟಿನವರ ಕಣ್ಣೆದುರಿನಲ್ಲಿ ದಯೆ ದೊರಕುವಂತೆ ಮಾಡುವೆನು. ನೀವು ಹೋಗುವಾಗ ಬರಿಗೈಯಲ್ಲಿ ಹೋಗುವುದಿಲ್ಲ.


ನೀನಂತೂ ಹೆದರಬೇಡ, ಏಕೆಂದರೆ ನಾನೇ ನಿನ್ನ ದೇವರು, ನಾನು ನಿನ್ನನ್ನು ಬಲಪಡಿಸುತ್ತೇನೆ. ನಾನು ನಿನಗೆ ಸಹಾಯ ಮಾಡುತ್ತೇನೆ. ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿಹಿಡಿಯುತ್ತೇನೆ.


ಕೆಟ್ಟನಡತೆಯುಳ್ಳವರಾಗಿ ಬಾಧೆಪಡುವುದಕ್ಕಿಂತ ಒಳ್ಳೆಯ ನಡತೆಯುಳ್ಳವರಾಗಿಯೇ ದೇವರ ಚಿತ್ತವಿದ್ದರೆ ಬಾಧೆಪಡುವುದು ಲೇಸು.


ಆಗ ದೇವರು ದಾನಿಯೇಲನ ಮೇಲೆ ಕಂಚುಕಿಯರ ಯಜಮಾನನ ದಯೆ, ಕನಿಕರ ತೋರುವಂತೆ ಮಾಡಿದರು.


ಯೆಹೋವ ದೇವರು ಈಜಿಪ್ಟಿನವರ ಎದುರಿನಲ್ಲಿ ಜನರ ಮೇಲೆ ದಯೆ ತೋರಿಸಿದ್ದರಿಂದ, ಅವರು ಕೇಳಿದ್ದನ್ನು ಕೊಟ್ಟರು. ಹೀಗೆ ಅವರು ಈಜಿಪ್ಟಿನವರ ಸೊತ್ತನ್ನು ಸುಲಿದುಕೊಂಡರು.


ನೀನು ಜಲರಾಶಿಯನ್ನು ದಾಟಿಹೋಗುವಾಗ, ನಾನು ನಿನ್ನೊಂದಿಗಿರುವೆನು; ನದಿಗಳನ್ನು ನೀನು ದಾಟುವಾಗ, ಅವು ನಿನ್ನನ್ನು ಮುಳುಗಿಸುವುದಿಲ್ಲ; ಬೆಂಕಿಯಲ್ಲಿ ನಡೆಯುವಾಗ, ನೀನು ಸುಟ್ಟುಹೋಗುವುದಿಲ್ಲ; ಜ್ವಾಲೆಯು ನಿನ್ನನ್ನು ದಹಿಸದು.


ಯೆಹೋವ ದೇವರ ಮುಂತಿಳಿಸಿದ ವಾಕ್ಯವು ನೆರವೇರುವವರೆಗೆ ಅವನು ದೇವರ ಮಾತಿನಿಂದ ಪರಿಶೋಧಿತನಾದನು.


ಇದಲ್ಲದೆ ಯೆಹೋವ ದೇವರು ಈಜಿಪ್ಟಿನವರ ದೃಷ್ಟಿಯಲ್ಲಿ ಜನರಿಗೆ ದಯೆ ದೊರಕುವಂತೆ ಮಾಡಿದರು. ಇದಲ್ಲದೆ ಮೋಶೆಯು ಈಜಿಪ್ಟ್ ದೇಶದಲ್ಲಿಯೂ ಫರೋಹನ ಅಧಿಕಾರಿಗಳ ದೃಷ್ಟಿಯಲ್ಲಿಯೂ ಜನರ ದೃಷ್ಟಿಯಲ್ಲಿಯೂ ಬಹಳ ಗೌರವ ಹೊಂದಿದನು.


ಯೆಹೋವ ದೇವರು ಯೋಸೇಫನ ಸಂಗಡ ಇದ್ದುದರಿಂದ, ಅವನು ಏಳಿಗೆಯಾಗಿ ಈಜಿಪ್ಟಿನವನಾದ ತನ್ನ ಯಜಮಾನನ ಮನೆಯಲ್ಲಿ ಇದ್ದನು.


ಆ ಕಾಲದಲ್ಲಿ ಅಬೀಮೆಲೆಕನೂ, ಅವನ ಮುಖ್ಯ ಸೈನ್ಯಾಧಿಪತಿಯಾದ ಫೀಕೋಲನೂ ಅಬ್ರಹಾಮನಿಗೆ, “ನೀನು ಮಾಡುವ ಎಲ್ಲಾ ಕೆಲಸಕಾರ್ಯಗಳಲ್ಲಿಯೂ ದೇವರು ನಿನ್ನ ಸಂಗಡ ಇದ್ದಾರೆ.


ಮನುಷ್ಯನ ಮಾರ್ಗಗಳು ಯೆಹೋವ ದೇವರನ್ನು ಮೆಚ್ಚಿಸಿದಾಗ, ಅವರು ಅವನ ಶತ್ರುಗಳನ್ನು ಸಹ ಅವನೊಂದಿಗೆ ಸಮಾಧಾನದಲ್ಲಿರುವಂತೆ ಮಾಡುತ್ತಾರೆ.


ಅವರನ್ನು ಮೈಗಾವಲಿನವರ ದಳಪತಿಯ ಮನೆಯೊಳಗೆ ಕಾವಲಿರಿಸಿದನು. ಅದು ಯೋಸೇಫನು ಬಂಧಿಯಾಗಿದ್ದ ಸ್ಥಳವಾಗಿತ್ತು.


ಇವೆಲ್ಲವುಗಳಲ್ಲಿಯೂ ನಾವು ನಮ್ಮನ್ನು ಪ್ರೀತಿಸಿದಾತನ ಮೂಲಕ ಜಯ ಹೊಂದಿದವರಿಗಿಂತಲೂ ಹೆಚ್ಚಿನವರಾಗಿದ್ದೇವೆ.


ನನ್ನ ದೇವರು ತಮ್ಮ ದೂತನನ್ನು ಕಳುಹಿಸಿ, ನನಗೆ ಯಾವ ಹಾನಿಯೂ ಆಗದಂತೆ ಸಿಂಹಗಳ ಬಾಯಿಗಳನ್ನು ಮುಚ್ಚಿಹಾಕಿದ್ದಾರೆ. ಏಕೆಂದರೆ ಅವರ ಮುಂದೆ ನಾನು ಯಥಾರ್ಥನೆಂದು ಗೋಚರವಾಗಿದ್ದೇನೆ. ಅರಸನೇ, ನಿನ್ನ ಮುಂದೆಯೂ ಸಹ ನಾನು ಯಾರಿಗೂ ತಪ್ಪನ್ನು ಮಾಡಲಿಲ್ಲ,” ಎಂದು ಹೇಳಿದನು.


ಅವರನ್ನು ಸೆರೆಹಿಡಿದವರ ಕರುಣೆ ತೋರುವಂತೆ ಮಾಡಿದರು.


ತನ್ನ ಪ್ರಧಾನರಿಗೆ ತನ್ನ ಇಷ್ಟ ಪ್ರಕಾರ ಶಿಕ್ಷಣ ಕೊಡುವುದಕ್ಕೂ, ತನ್ನ ಜ್ಞಾನವನ್ನು ಮಂತ್ರಿಗಳಿಗೆ ಬೋಧಿಸುವುದಕ್ಕೂ ಯೋಸೇಫನನ್ನು ನೇಮಿಸಿದನು.


ಯೆಹೋವ ದೇವರು ಅವನ ಸಂಗಡ ಇದ್ದಾನೆಂದೂ ಅವನು ಮಾಡಿದ್ದನ್ನೆಲ್ಲಾ ಯೆಹೋವ ದೇವರು ಅವನ ಕೈಯಿಂದ ಅಭಿವೃದ್ಧಿಮಾಡಿದನೆಂದೂ ಅವನ ಯಜಮಾನನಿಗೆ ತಿಳಿಯಿತು.


ಆದ್ದರಿಂದ ಯೋಸೇಫನು ಪೋಟೀಫರನ ದೃಷ್ಟಿಯಲ್ಲಿ ದಯೆಹೊಂದಿ ಅವನ ಸೇವೆ ಮಾಡಿದನು. ಪೋಟೀಫರನು ಅವನನ್ನು ತನ್ನ ಮನೆಯ ಮೇಲೆ ಮೇಲ್ವಿಚಾರಕನನ್ನಾಗಿ ಮಾಡಿ, ತನಗಿದ್ದದ್ದನ್ನೆಲ್ಲಾ ಅವನ ಕೈಗೆ ಒಪ್ಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು