Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 39:9 - ಕನ್ನಡ ಸಮಕಾಲಿಕ ಅನುವಾದ

9 ಈ ಮನೆಯಲ್ಲಿ ನನಗಿಂತ ದೊಡ್ಡವನಾರೂ ಇಲ್ಲ. ನೀನು ಅವನ ಹೆಂಡತಿಯಾಗಿರುವುದರಿಂದ, ನಿನ್ನನ್ನು ಹೊರತುಪಡಿಸಿ ನನಗೆ ಮತ್ತೇನೂ ಮರೆಮಾಡಲಿಲ್ಲ. ಹಾಗಿರುವಲ್ಲಿ ನಾನು ಈ ಮಹಾ ದುಷ್ಕೃತ್ಯ ಮಾಡಿ, ದೇವರಿಗೆ ವಿರೋಧವಾಗಿ ಪಾಪ ಮಾಡುವುದು ಹೇಗೆ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಈ ಮನೆಯಲ್ಲಿ ನನಗಿಂತ ಯಾರೂ ದೊಡ್ಡವರಲ್ಲ. ನೀನು ಅವನ ಧರ್ಮಪತ್ನಿಯಾದುದರಿಂದ ನಿನ್ನನ್ನು ಮಾತ್ರ ನನಗೆ ಅಧೀನ ಮಾಡಲಿಲ್ಲ. ಹೀಗಿರುವಲ್ಲಿ ನಾನು ಇಂಥಾ ಮಹಾ ದುಷ್ಟ ಕಾರ್ಯವನ್ನು ಮಾಡಿ ದೇವರಿಗೆ ವಿರೋಧವಾಗಿ ಹೇಗೆ ಪಾಪ ಮಾಡಲಿ?” ಎಂದು ತನ್ನ ದಣಿಯ ಹೆಂಡತಿಗೆ ಉತ್ತರ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಈ ಮನೆಯಲ್ಲಿ ನನಗಿಂತ ಹೆಚ್ಚಿನ ಅಧಿಕಾರ ಪಡೆದವರು ಒಬ್ಬರೂ ಇಲ್ಲ; ನಿಮ್ಮನ್ನು ಬಿಟ್ಟು ಮಿಕ್ಕ ಎಲ್ಲವನ್ನು ನನಗೆ ಅಧೀನಮಾಡಿದ್ದಾರೆ. ನೀವು ಅವರ ಧರ್ಮಪತ್ನಿ ಅಲ್ಲವೆ? ಹೀಗಿರುವಲ್ಲಿ, ನಾನು ಇಂತಹ ಮಹಾದುಷ್ಕೃತ್ಯವೆಸಗಿ ದೇವರಿಗೆ ವಿರುದ್ಧ ಹೇಗೆ ಪಾಪಮಾಡಲಿ?” ಎಂದು ಆಕೆಗೆ ಉತ್ತರಕೊಟ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಈ ಮನೆಯಲ್ಲಿ ಅವನೂ ನನಗಿಂತ ದೊಡ್ಡವನಲ್ಲ; ನೀನು ಅವನ ಧರ್ಮಪತ್ನಿಯಾದದರಿಂದ ನಿನ್ನನ್ನು ಮಾತ್ರ ನನಗೆ ಅಧೀನಮಾಡಲಿಲ್ಲ; ಹೀಗಿರುವಲ್ಲಿ ನಾನು ಇಂಥಾ ಮಹಾದುಷ್ಕೃತ್ಯವನ್ನು ನಡಿಸಿ ದೇವರಿಗೆ ವಿರುದ್ಧವಾಗಿ ಹೇಗೆ ಪಾಪಮಾಡಲಿ ಎಂದು ತನ್ನ ದಣಿಯ ಹೆಂಡತಿಗೆ ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನನ್ನ ಧಣಿಯು ಈ ಮನೆಯ ಸರ್ವಾಧಿಕಾರವನ್ನು ನನಗೆ ಕೊಟ್ಟಿದ್ದರೂ ತನ್ನ ಧರ್ಮಪತ್ನಿಯಾದ ನಿನ್ನನ್ನು ನನಗೆ ಅಧೀನಪಡಿಸಿಲ್ಲ. ಹೀಗಿರಲು ಇಂಥಾ ಮಹಾ ದುಷ್ಕೃತ್ಯವನ್ನು ನಡೆಸಿ ದೇವರಿಗೆ ವಿರುದ್ಧವಾಗಿ ಹೇಗೆ ಪಾಪಮಾಡಲಿ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 39:9
34 ತಿಳಿವುಗಳ ಹೋಲಿಕೆ  

ಆಗ ದಾವೀದನು ನಾತಾನನಿಗೆ, “ನಾನು ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದೇನೆ,” ಎಂದನು. ನಾತಾನನು ದಾವೀದನಿಗೆ, “ನೀನು ಸಾಯದ ಹಾಗೆ ಯೆಹೋವ ದೇವರು ನಿನ್ನ ಪಾಪವನ್ನು ಪರಿಹರಿಸಿದರು.


ಮೂರನೆಯ ದಿನದಲ್ಲಿ ಯೋಸೇಫನು ಅವರಿಗೆ, “ನಾನು ದೇವರಿಗೆ ಭಯಪಡುವವನಾಗಿದ್ದೇನೆ.


ಅದಕ್ಕೆ ದೇವರು ಕನಸಿನಲ್ಲಿ ಅವನಿಗೆ, “ಹೌದು, ನೀನು ಇದನ್ನು ಯಥಾರ್ಥವಾದ ಹೃದಯದಿಂದಲೇ ಮಾಡಿದ್ದೀಯೆ ಎಂದು ನನಗೂ ತಿಳಿದಿದೆ. ಆದ್ದರಿಂದ ನೀನು ನನಗೆ ವಿರೋಧವಾಗಿ ಪಾಪಮಾಡದಂತೆ ನಾನು ನಿನ್ನನ್ನು ತಡೆದು, ಆಕೆಯನ್ನು ಮುಟ್ಟಗೊಡಿಸಲಿಲ್ಲ.


ದೇವರಿಂದ ಹುಟ್ಟಿದವನು ಪಾಪವನ್ನು ಅಭ್ಯಾಸ ಮಾಡಲಾರನು, ಏಕೆಂದರೆ ದೇವರ ಬೀಜವು ಅವನಲ್ಲಿ ನೆಲೆಗೊಂಡಿದೆ. ಅವನು ದೇವರಿಂದ ಹುಟ್ಟಿದ ಕಾರಣ ಪಾಪ ಅಭ್ಯಾಸ ಮಾಡುವುದು ಅವನಿಗೆ ಅಸಾಧ್ಯ.


ದಂಡನೆಗೆ ಯೋಗ್ಯವಾದದ್ದನ್ನು ತಿಳಿಯದೆ ಮಾಡಿದವನು ಸ್ವಲ್ಪ ಪೆಟ್ಟುಗಳಿಗೆ ಗುರಿಯಾಗುವನು. ಯಾವನಿಗೆ ಹೆಚ್ಚು ಕೊಡಲಾಗಿದೆಯೋ, ಅವನಿಂದ ಹೆಚ್ಚು ಕೇಳಲಾಗುವುದು; ಯಾವನಿಗೆ ಹೆಚ್ಚಾಗಿ ಒಪ್ಪಿಸಿರುವುದೋ, ಅವನಿಂದ ಹೆಚ್ಚಾಗಿಯೇ ಕೇಳಲಾಗುವುದು.”


ನಿಮಗೇ ನಿಮಗೊಬ್ಬರಿಗೆ ಮಾತ್ರ ವಿರೋಧವಾಗಿ ನಾನು ಪಾಪಮಾಡಿ, ನಿಮ್ಮ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವುದ್ದನ್ನೇ ಮಾಡಿದ್ದೇನೆ. ಹೀಗೆ ನೀವು ನ್ಯಾಯತೀರಿಸುವಾಗ ನೀತಿವಂತರಾಗಿಯೂ ನೀವು ತೀರ್ಪು ನಿರ್ಣಯಿಸುವಾಗ ನ್ಯಾಯವಂತರಾಗಿಯೂ ಇರುವಿರಿ.


ಹೀಗಿರುವುದರಿಂದ ನಂಬಿಗಸ್ತರಾಗಿರುವುದು ನಿರ್ವಾಹಕರಲ್ಲಿ ಅವಶ್ಯವಾಗಿ ಕಾಣತಕ್ಕ ಸದ್ಗುಣವಾಗಿದೆ.


ಅವರನ್ನು ಕಂಡವರೆಲ್ಲರು ಅವರನ್ನು ನುಂಗಿಬಿಟ್ಟಿದ್ದಾರೆ; ಅವರ ಎದುರಾಳಿಗಳು, ‘ನಾವು ಅವರನ್ನು ನುಂಗಿದ್ದು ದೋಷವಲ್ಲ; ಏಕೆಂದರೆ ನೀತಿಯ ನಿವಾಸವಾದ ಯೆಹೋವ ದೇವರಿಗೆ, ಹೌದು, ಅವರ ಪೂರ್ವಜರ ನಿರೀಕ್ಷೆಯಾದ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದಾರೆ,’ ಎಂದುಕೊಂಡರು.


ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಇಗೋ, ನಾನು ನಿನ್ನನ್ನು ಭೂಮಿಯ ಮೇಲಿನಿಂದ ಬಿಸಾಡಿಬಿಡುತ್ತೇನೆ. ಈ ವರ್ಷವೇ ನೀನು ಸಾಯುವೆ. ಏಕೆಂದರೆ ನೀನು ಯೆಹೋವ ದೇವರಿಗೆ ವಿರೋಧವಾಗಿ ದ್ರೋಹ ಬಗೆದಿದ್ದೀ,’ ” ಎಂದನು.


ಏಕೆಂದರೆ ದೇವರಿಂದ ಬರುವ ವಿಪತ್ತಿನ ಬಗ್ಗೆ ನನಗೆ ಹೆದರಿಕೆಯಾಯಿತು; ದೇವರ ಪ್ರಭಾವದ ಭಯದ ನಿಮಿತ್ತ ನಾನು ಇಂಥ ಕೃತ್ಯವನ್ನು ಮಾಡುವುದಕ್ಕೆ ಸಾಧ್ಯವಾಗಲಿಲ್ಲ.


ದುಃಖದ ದಿವಸಗಳು ತೀರಿದ ತರುವಾಯ, ದಾವೀದನು ಅವಳನ್ನು ತನ್ನ ಮನೆಗೆ ಕರೆಯಕಳುಹಿಸಿದನು. ಅವಳು ಅವನಿಗೆ ಹೆಂಡತಿಯಾಗಿ ಒಬ್ಬ ಮಗನನ್ನು ಹೆತ್ತಳು. ದಾವೀದನು ಮಾಡಿದ ಈ ಕಾರ್ಯವು ಯೆಹೋವ ದೇವರ ದೃಷ್ಟಿಗೆ ಕೆಟ್ಟದ್ದಾಗಿತ್ತು.


“ಆದರೆ ನೀವು ಈ ಪ್ರಕಾರ ಮಾಡದಿದ್ದರೆ ಇಗೋ, ಯೆಹೋವ ದೇವರ ವಿರೋಧವಾಗಿ ಪಾಪಮಾಡಿದವರಾಗುವಿರಿ, ನಿಮ್ಮ ಪಾಪ ನಿಮ್ಮನ್ನು ಹಿಡಿದುಕೊಳ್ಳುವುದೆಂದು ತಿಳಿದುಕೊಳ್ಳಿರಿ.


“ಯಾರಾದರೂ ಪಾಪಮಾಡಿದರೆ ಮತ್ತು ನೆರೆಯವರಿಗೆ ಮೋಸ ಮಾಡುವ ಮೂಲಕ ಯೆಹೋವ ದೇವರಿಗೆ ವಿಶ್ವಾಸದ್ರೋಹಿ ಆಗಿದ್ದರೆ ಅಥವಾ ಅವರ ಆರೈಕೆಯಲ್ಲಿ ಏನಾದರೂ ಉಳಿಸಿಕೊಂಡಿದ್ದರೆ ಅಥವಾ ಯಾವುದನ್ನಾದರೂ ಕದ್ದುಕೊಂಡಿದ್ದರೆ ಅಥವಾ ಅವರು ತಮ್ಮ ನೆರೆಹೊರೆಯವರಿಗೆ ಮೋಸ ಮಾಡಿದ್ದರೆ,


ವ್ಯಭಿಚಾರಿಯು ಬುದ್ಧಿಹೀನನಾಗಿದ್ದಾನೆ. ಹಾಗೆ ಮಾಡುವವನು ತನ್ನನ್ನೇ ನಾಶಮಾಡಿಕೊಳ್ಳುವನು.


ಆದರೆ ನನಗಿಂತ ಮುಂಚೆ ಇದ್ದ ಅಧಿಪತಿಗಳು ಜನರಿಗೆ ಭಾರವಾಗಿದ್ದು, ನಾಲ್ವತ್ತು ಬೆಳ್ಳಿನಾಣ್ಯ ಮೌಲ್ಯದ ರೊಟ್ಟಿಯನ್ನೂ, ದ್ರಾಕ್ಷಾರಸವನ್ನೂ ತೆಗೆದುಕೊಳ್ಳುತ್ತಿದ್ದರು. ಅವರ ಸೇವಕರು ಸಹ ಜನರ ಮೇಲೆ ದೊರೆತನ ನಡೆಸುತ್ತಾ ಇದ್ದರು. ಆದರೆ ದೇವರ ಭಯದ ನಿಮಿತ್ತ ನಾನು ಹಾಗೆ ಮಾಡಲಿಲ್ಲ.


ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆಗಾರರೂ ವಿಗ್ರಹಾರಾಧಕರೂ ಸುಳ್ಳನ್ನು ಪ್ರೀತಿಸಿ ಅನುಸರಿಸುವರೆಲ್ಲರೂ ಹೊರಗಿರುವರು.


ಎಲ್ಲರೂ ವಿವಾಹವನ್ನು ಗೌರವಿಸಬೇಕು ಮತ್ತು ದಾಂಪತ್ಯ ಜೀವನವು ಪರಿಶುದ್ಧವಾದದ್ದಾಗಿರಬೇಕು. ಏಕೆಂದರೆ ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವರು.


ಯಾವುದನ್ನೂ ಕದ್ದಿಟ್ಟುಕೊಳ್ಳದೆ, ನಮ್ಮ ರಕ್ಷಕರಾದ ದೇವರ ಉಪದೇಶವನ್ನು ಎಲ್ಲಾ ವಿಷಯಗಳಲ್ಲಿಯೂ ಅಲಂಕರಿಸುವಂತೆ, ಒಳ್ಳೆಯ ನಂಬಿಗಸ್ತರೆಂದು ಎಲ್ಲದರಲ್ಲಿಯೂ ತೋರಿಸಬೇಕೆಂದು ಅವರನ್ನು ಉಪದೇಶಿಸು.


ಪರನ ಹೆಂಡತಿಯನ್ನು ಕೂಡುವವನ ಗತಿಯು ಹೀಗೆಯೇ ಇರುವದು. ಅವಳನ್ನು ಮುಟ್ಟುವ ಯಾವನೂ ದಂಡನೆಯಿಂದ ತಪ್ಪಿಸಿಕೊಳ್ಳನು.


ಅದಕ್ಕೆ ನಾನು, “ನನ್ನಂಥಾ ಮನುಷ್ಯನು ಓಡಿ ಹೋಗುವನೋ? ನನ್ನಂಥವನು ಬದುಕಬೇಕೆಂದು ದೇವರ ಆಲಯದೊಳಗೆ ಹೋಗಬಹುದೇ? ನಾನು ಒಳಗೆ ಹೋಗುವುದಿಲ್ಲ,” ಎಂದೆನು.


“ ‘ಇದಲ್ಲದೆ ಒಬ್ಬನು ಮತ್ತೊಬ್ಬನ ಹೆಂಡತಿಯೊಡನೆ ವ್ಯಭಿಚಾರ ಮಾಡಿದರೆ, ವ್ಯಭಿಚಾರ ಮಾಡುವವನಿಗೂ ಮತ್ತು ವ್ಯಭಿಚಾರ ಮಾಡುವವಳಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು.


ನೀನೇ ನನ್ನ ಅರಮನೆಯ ಅಧಿಕಾರಿಯಾಗಿರಬೇಕು. ನಿನ್ನ ಮಾತಿನ ಪ್ರಕಾರ ನನ್ನ ಜನರೆಲ್ಲಾ ಅಧೀನವಾಗಿರಲಿ. ಸಿಂಹಾಸನದಲ್ಲಿ ಮಾತ್ರ ನಾನು ನಿನಗಿಂತ ದೊಡ್ಡವನಾಗಿರುವೆನು,” ಎಂದನು.


ಆದರೆ ಹೇಡಿಗಳು, ನಂಬದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ, ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು!” ಎಂದು ನನಗೆ ಹೇಳಿದರು.


ಅಬ್ರಹಾಮನು ತನಗೆ ಇದ್ದವುಗಳ ಮೇಲೆಲ್ಲಾ ಆಡಳಿತ ಮಾಡುವ ತನ್ನ ಮನೆಯ ಹಿರಿಯ ಸೇವಕನಿಗೆ, “ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಡು,


ಆದರೆ ದೇವರು ಅಬೀಮೆಲೆಕನಿಗೆ ರಾತ್ರಿಯ ಕನಸಿನಲ್ಲಿ ಬಂದು, “ನೀನು ಆ ಸ್ರೀಯನ್ನು ತೆಗೆದುಕೊಂಡ ಕಾರಣ ಸಾಯತಕ್ಕವನಾಗಿದ್ದಿ, ಏಕೆಂದರೆ ಆಕೆಯು ಆ ಮನುಷ್ಯನ ಹೆಂಡತಿ,” ಎಂದು ಅವನಿಗೆ ಹೇಳಿದರು.


ಸೊದೋಮಿನ ಜನರು ದುಷ್ಟರಾಗಿದ್ದರು ಮತ್ತು ಯೆಹೋವ ದೇವರ ವಿರುದ್ಧ ಬಹಳ ಪಾಪಮಾಡುತ್ತಿದ್ದರು.


ಅಬೀಮೆಲೆಕನು ಅಬ್ರಹಾಮನನ್ನು ಕರೆದು ಅವನಿಗೆ, “ನೀನು ನಮಗೆ ಮಾಡಿದ್ದೇನು? ನೀನು ನನ್ನ ಮೇಲೆಯೂ ನನ್ನ ರಾಜ್ಯದ ಮೇಲೆಯೂ ದೊಡ್ಡ ಪಾಪವನ್ನು ಬರಮಾಡುವಂತೆ ನಿನಗೆ ನಾನು ಏನು ಅಪರಾಧ ಮಾಡಿದ್ದೇನೆ? ನೀನು ನನಗೆ ಮಾಡಬಾರದ ಕೆಲಸಗಳನ್ನು ಮಾಡಿದ್ದೀಯೆ,” ಎಂದನು.


ಅವಳು ಪ್ರತಿದಿನ ಯೋಸೇಫನ ಸಂಗಡ ಮಾತನಾಡಿದರೂ, ಅವನು ಅವಳ ಕೂಡ ಮಲಗುವುದಕ್ಕಾಗಲಿ, ಅವಳ ಹತ್ತಿರ ಇರುವುದಕ್ಕಾಗಲಿ ಒಪ್ಪಲಿಲ್ಲ.


ಕೆಟ್ಟ ಹೆಂಗಸಿನ ಹೃದಯವು ಬೋನೂ ಬಲೆಯೂ ಆಗಿರುತ್ತದೆ. ಅವಳ ಕೈ ಸಂಕೋಲೆ ಆಗಿರುತ್ತದೆ. ಇದು ಮರಣಕ್ಕಿಂತಲೂ ಕಠೋರವಾದದ್ದು ಎಂದು ನಾನು ಕಂಡಿದ್ದೇನೆ. ದೇವರನ್ನು ಮೆಚ್ಚಿಸುವವನು, ಅವಳಿಂದ ತಪ್ಪಿಸಿಕೊಳ್ಳುವನು. ಆದರೆ ಪಾಪಿಯು ಅವಳ ಕೈಗೆ ಸಿಕ್ಕಿಬೀಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು