Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 4:10 - ಕನ್ನಡ ಸಮಕಾಲಿಕ ಅನುವಾದ

10 ಅದಕ್ಕೆ ಯೆಹೋವ ದೇವರು, “ನೀನು ಏನು ಮಾಡಿದೆ? ನಿನ್ನ ತಮ್ಮನ ರಕ್ತವು ಭೂಮಿಯಿಂದ ನನ್ನನ್ನು ಕೂಗುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅದಕ್ಕೆ ಯೆಹೋವನು, “ನೀನು ಏನು ಮಾಡಿದೆ? ನಿನ್ನ ತಮ್ಮನ ರಕ್ತವು ಭೂಮಿಯ ಕಡೆಯಿಂದ ಕೂಗಿ ನನಗೆ ಮೊರೆಯಿಡುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆಗ ಸರ್ವೇಶ್ವರ, “ನೀನು ಎಂಥ ಕೃತ್ಯ ಎಸಗಿದೆ? ಪ್ರತೀಕಾರಕ್ಕಾಗಿ ನೆಲದಿಂದ ನಿನ್ನ ತಮ್ಮನ ರಕ್ತ ಕೂಗಿ ನನಗೆ ಮೊರೆಯಿಡುತ್ತಿದೆ, ಕೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅದಕ್ಕೆ ಯೆಹೋವನು - ನೀನು ಏನು ಮಾಡಿದಿ? ನಿನ್ನ ತಮ್ಮನ ರಕ್ತವು ಭೂವಿುಯ ಕಡೆಯಿಂದ ನನ್ನನ್ನು ಕೂಗುತ್ತದೆ, ಕೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅದಕ್ಕೆ ಯೆಹೋವನು, “ನೀನು ಮಾಡಿದ್ದೇನು? ನೀನು ನಿನ್ನ ತಮ್ಮನನ್ನೇ ಕೊಲೆಮಾಡಿದೆ! ಅವನ ರಕ್ತವು ಭೂಮಿಯ ಕಡೆಯಿಂದ ನನ್ನನ್ನು ಕೂಗುತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 4:10
24 ತಿಳಿವುಗಳ ಹೋಲಿಕೆ  

ಹೊಸ ಒಡಂಬಡಿಕೆಗೆ ಮಧ್ಯಸ್ಥರಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಉತ್ತಮವಾಗಿ ಮಾತನಾಡುವ, ಪ್ರೋಕ್ಷಿಸಿದ ರಕ್ತದ ಬಳಿಗೂ ಬಂದಿದ್ದೀರಿ.


ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞಕ್ಕಿಂತ ಉತ್ತಮ ಯಜ್ಞವನ್ನು ದೇವರಿಗೆ ಸಮರ್ಪಿಸಿದನು. ಅದರ ಮೂಲಕ ಅವನು ನೀತಿವಂತನೆಂದು ಸಾಕ್ಷಿಹೊಂದಿದನು. ದೇವರು ಸಹ ಅವನ ಕಾಣಿಕೆಗಳನ್ನು ಸ್ವೀಕಾರಮಾಡಿದರು. ಅವನು ಸತ್ತು ಹೋಗಿದ್ದರೂ ನಂಬಿಕೆಯ ಮೂಲಕ ಇನ್ನೂ ಮಾತನಾಡುತ್ತಿದ್ದಾನೆ.


ಸೇನಾಧೀಶ್ವರ ಯೆಹೋವ ದೇವರ ದ್ರಾಕ್ಷಿತೋಟವು ಇಸ್ರಾಯೇಲಿನ ಮನೆತನವು. ಯೆಹೂದದ ಜನವೋ ದೇವರ ಇಷ್ಟದ ಗಿಡವು. ಅವರು ನ್ಯಾಯವನ್ನು ನಿರೀಕ್ಷಿಸಲು, ಹಿಂಸೆಯೂ, ನೀತಿಯನ್ನು ನಿರೀಕ್ಷಿಸಲು ಗೋಳಾಟವು ಸಿಕ್ಕಿತು.


ಮೋಸ ದಬ್ಬಾಳಿಕೆಯಿಂದ ಜನರನ್ನು ಬಿಡುಗಡೆ ಮಾಡುವನು. ಜನರ ಜೀವವು ಆತನ ದೃಷ್ಟಿಯಲ್ಲಿ ಅಮೂಲ್ಯವಾಗಿರುವುದು.


ಇಗೋ ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿದ್ದೀರಿ. ಆ ಕೂಲಿ ಕೂಗಿಕೊಳ್ಳುತ್ತದೆ. ಕೊಯಿದವರ ಕೂಗು ಸೈನ್ಯಗಳ ಅಧಿಪತಿ ಆಗಿರುವ ಕರ್ತದೇವರ ಕಿವಿಗಳಲ್ಲಿ ಬಿದ್ದಿದೆ.


ಅವರು ಪ್ರಾಣಹತ್ಯೆ ಮಾಡುವವರನ್ನು ಮುಯ್ಯಿತೀರಿಸಲು ಜ್ಞಾಪಕಮಾಡಿಕೊಳ್ಳುವರು; ಬಾಧೆಗೆ ಒಳಗಾಗಿರುವ ದೀನರ ಕೂಗನ್ನು ಅವರು ಅಲಕ್ಷ್ಯಮಾಡುವುದಿಲ್ಲ.


“ ‘ಹೀಗೆ ನೀವು ವಾಸಿಸುವ ದೇಶವನ್ನು ನೀವು ಅಪವಿತ್ರ ಮಾಡಬೇಡಿರಿ. ಏಕೆಂದರೆ ದೇಶವನ್ನು ಅಪವಿತ್ರ ಮಾಡುವಂಥಾದ್ದು ರಕ್ತವೇ. ಹತರಾದವರ ರಕ್ತಕ್ಕಾಗಿ ಕೊಂದವನ ರಕ್ತದಿಂದಲೇ ಹೊರತು ಬೇರೆ ಪ್ರಾಯಶ್ಚಿತ್ತವಿಲ್ಲ.


“ಭೂಮಿಯೇ, ನನ್ನ ರಕ್ತವನ್ನು ಮುಚ್ಚಬೇಡ, ನನ್ನ ಕೂಗು ವಿಶ್ರಾಂತಿ ಹೊಂದದಿರಲಿ!


ನಿಮ್ಮ ರಕ್ತ ಸುರಿಸಿ, ಪ್ರಾಣ ತೆಗೆಯುವವರಿಗೆ, ಮುಯ್ಯಿತೀರಿಸುವೆನು, ಮೃಗವಾಗಿದ್ದರೆ ಅದಕ್ಕೂ ಮುಯ್ಯಿತೀರಿಸುವೆನು. ಮನುಷ್ಯನಾಗಿದ್ದರೆ, ಹತನಾದವನು ಇನ್ನೊಬ್ಬ ಮನುಷ್ಯನಾದುದರಿಂದ ಹತಿಸಿದವನಿಗೂ ಮುಯ್ಯಿತೀರಿಸುವೆನು.


ಇವುಗಳನ್ನೆಲ್ಲಾ ನೀವು ಮಾಡಿದ್ದೀರಿ, ಆದರೂ ನಾನು ಮೌನವಾಗಿದ್ದೆನು. ಆದ್ದರಿಂದ ನಾನೂ ಸಹ ನಿಮ್ಮ ಹಾಗೆ ಒಬ್ಬನೆಂದು ನೀವು ನೆನಸಿಕೊಂಡಿದ್ದೀರಿ. ಆದರೆ ಈಗ ನಾನು ನಿಮ್ಮನ್ನು ಗದರಿಸಿ ನಿಮ್ಮ ಕಣ್ಣು ಮುಂದೆಯೇ ನಿಮ್ಮ ಅಪರಾಧ ಪ್ರಕಟಿಸುವೆನು.


ಆಗ ಯೆಹೋವ ದೇವರು, “ಈಜಿಪ್ಟಿನಲ್ಲಿರುವ ನನ್ನ ಜನರ ವ್ಯಥೆಯನ್ನು ವಾಸ್ತವವಾಗಿಯೂ ಕಂಡಿದ್ದೇನೆ. ಬಿಟ್ಟೀ ಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನು ಬಲ್ಲೆನು.


ಪಟ್ಟಣದೊಳಗಿಂದ ಮನುಷ್ಯರ ನರಳುವಿಕೆಯು ಜೋರಾಗುತ್ತದೆ; ಗಾಯಪಟ್ಟವರ ಪ್ರಾಣವು ಸಹಾಯಕ್ಕಾಗಿ ಕೂಗುತ್ತದೆ; ಆದರೂ ದೇವರು ಯಾರ ಮೇಲೆಯೂ ತಪ್ಪು ಹೊರಿಸುವುದಿಲ್ಲ.


ನಾಬೋತನ ರಕ್ತವನ್ನೂ, ಅವನ ಪುತ್ರರ ರಕ್ತವನ್ನೂ ನಿನ್ನೆ ನಾನು ನಿಶ್ಚಯವಾಗಿ ನೋಡಿದೆನಲ್ಲಾ, ಎಂದು ಯೆಹೋವ ದೇವರು ಹೇಳುತ್ತಾರೆ. ಇದಲ್ಲದೆ ಇದೇ ಹೊಲದಲ್ಲಿ ನಿನಗೆ ಮುಯ್ಯಿಗೆ ಮುಯ್ಯಿ ಕೊಡುವೆನೆಂದು ಯೆಹೋವ ದೇವರು ಹೇಳುತ್ತಾರೆ. ಆದ್ದರಿಂದ ಯೆಹೋವ ದೇವರ ವಾಕ್ಯದ ಪ್ರಕಾರ ಎತ್ತಿಕೊಂಡು ಆ ಹೊಲದಲ್ಲಿ ಅವನನ್ನು ಹಾಕಿಬಿಡು,” ಎಂದನು.


ಆಗ ಯೆಹೋಶುವನು ಆಕಾನನಿಗೆ, “ನನ್ನ ಮಗನೇ, ನೀನು ಈಗ ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ಘನಪಡಿಸಿ, ಅವರಿಗೆ ಸ್ತೋತ್ರ ಸಲ್ಲಿಸು. ಏನು ಮಾಡಿದೆಯೋ ಅದನ್ನು ನನಗೆ ತಿಳಿಸು, ನನಗೆ ಮರೆಮಾಡಬೇಡ,” ಎಂದನು.


ಇದಲ್ಲದೆ ಯೆಹೋವ ದೇವರು, “ಸೊದೋಮ್ ಗೊಮೋರಗಳ ಕೂಗು ದೊಡ್ಡದಾಗಿದೆ. ಅವರ ಪಾಪವೂ ಘೋರವಾಗಿದೆ.


ಯೆಹೋವ ದೇವರು ಸ್ತ್ರೀಗೆ, “ಇದೇನು ನೀನು ಮಾಡಿದ್ದು?” ಎಂದು ಕೇಳಲು, ಅದಕ್ಕೆ ಸ್ತ್ರೀಯು, “ಸರ್ಪವು ನನ್ನನ್ನು ವಂಚಿಸಿತು. ನಾನು ತಿಂದೆನು,” ಎಂದು ಉತ್ತರಕೊಟ್ಟಳು.


“ನೀವಿಬ್ಬರೂ ಕರ್ತದೇವರ ಆತ್ಮವನ್ನು ಪರೀಕ್ಷಿಸಲು ಒಪ್ಪಿಕೊಂಡದ್ದೇಕೆ? ಇಗೋ! ನಿನ್ನ ಗಂಡನ ಶವವನ್ನು ಹೂಣಿಟ್ಟು ಬಂದವರು ಬಾಗಿಲ ಬಳಿಯಲ್ಲೇ ಇದ್ದಾರೆ. ಅವರು ನಿನ್ನನ್ನೂ ಹೊತ್ತುಕೊಂಡು ಹೋಗುವರು,” ಎಂದು ಆಕೆಗೆ ಪೇತ್ರನು ಹೇಳಿದನು.


ಆದರೆ ಪೇತ್ರನು, “ಅನನೀಯಾ, ಪವಿತ್ರಾತ್ಮ ದೇವರಿಗೆ ಸುಳ್ಳು ಹೇಳುವಂತೆ ಸೈತಾನನು ನಿನ್ನ ಹೃದಯವನ್ನು ತುಂಬಿಸಿದ್ದು ಏಕೆ? ಆಸ್ತಿಯನ್ನು ಮಾರಿ ಬಂದ ಹಣದಲ್ಲಿ ಒಂದು ಭಾಗವನ್ನು ಇಟ್ಟುಕೊಂಡದ್ದೇಕೆ?


ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಡುವ ದೇಶದಲ್ಲಿ ಹತನಾದ ಒಬ್ಬ ವ್ಯಕ್ತಿಯ ಶವವು ಹೊಲದಲ್ಲಿ ಬಿದ್ದಿರುವುದನ್ನು ನೀವು ಕಂಡಾಗ ಮತ್ತು ಅವನನ್ನು ಯಾರು ಹೊಡೆದರೆಂದು ತಿಳಿಯದೆ ಹೋದರೆ,


ಆದರೆ ಸಮುಯೇಲನು, “ನೀನೇನು ಮಾಡಿದಿ?” ಎಂದು ಸೌಲನನ್ನು ಕೇಳಿದನು. ಸೌಲನು, “ಸೈನಿಕರು ನನ್ನನ್ನು ಬಿಟ್ಟು ಹೋಗುತ್ತಿರುವುದನ್ನು, ನೀನು ನೇಮಿಸಿದ ದಿವಸಗಳ ಪ್ರಕಾರ ಬಾರದಿರುವುದನ್ನು ಮತ್ತು ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ಕೂಡಿಕೊಂಡಿರುವುದನ್ನು ಕಂಡೆನು.


ಯೆಹೋವ ದೇವರ ಪ್ರವಾದಿ ಒಬ್ಬನು ಅಲ್ಲಿ ಇದ್ದನು. ಅವನ ಹೆಸರು ಓದೇದನು. ಅವನು ಸಮಾರ್ಯಕ್ಕೆ ಬಂದ ಸೈನ್ಯಕ್ಕೆದುರಾಗಿ ಹೊರಟುಹೋಗಿ ಅವರಿಗೆ, “ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರು ಯೆಹೂದದ ಮೇಲೆ ಕೋಪಗೊಂಡದ್ದರಿಂದ, ದೇವರು ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿದ್ದಾರೆ. ನೀವು ಆಕಾಶಕ್ಕೆ ಮುಟ್ಟುವ ಉಗ್ರತೆಯಿಂದ ಅವರನ್ನು ಕೊಂದುಹಾಕಿದ್ದೀರಿ.


ಯೆಹೋವ ದೇವರೇ, ನನ್ನ ವೈರಿಗಳು ನನ್ನನ್ನು ಹಿಂಸಿಸುವುದನ್ನು ನೋಡಿರಿ. ನನ್ನನ್ನು ಕರುಣಿಸಿ, ಮರಣ ದ್ವಾರದಿಂದ ನನ್ನನ್ನು ಮೇಲಕ್ಕೆತ್ತಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು