Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 4:15 - ಕನ್ನಡ ಸಮಕಾಲಿಕ ಅನುವಾದ

15 ಆದ್ದರಿಂದ ಯೆಹೋವ ದೇವರು ಅವನಿಗೆ, “ಹಾಗಲ್ಲ, ಕಾಯಿನನನ್ನು ಕೊಲ್ಲುವವನ ಮೇಲೆ ಏಳರಷ್ಟು ಪ್ರತೀಕಾರವಿರುವುದು,” ಎಂದು ಹೇಳಿದರು. ಕಾಯಿನನನ್ನು ಕಂಡವರು ಕೊಲ್ಲದ ಹಾಗೆ ಯೆಹೋವ ದೇವರು ಅವನ ಮೇಲೆ ಒಂದು ಗುರುತನ್ನು ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅದಕ್ಕೆ ಯೆಹೋವನು, “ಕಾಯಿನನ ಪ್ರಾಣವನ್ನು ತೆಗೆದವನಿಗೆ ಏಳರಷ್ಟು ಪ್ರತಿದಂಡನೆಯಾಗುವುದು” ಎಂದು ಹೇಳಿದನು. ಕಾಯಿನನನ್ನು ಕಂಡವರು ಕೊಲ್ಲದ ಹಾಗೆ ಯೆಹೋವನು ಅವನ ಮೇಲೆ ಒಂದು ಗುರುತನ್ನು ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅದಕ್ಕೆ ಸರ್ವೇಶ್ವರ, “ಇಲ್ಲ, ಕಾಯಿನನ ಪ್ರಾಣವನ್ನು ತೆಗೆದವನಿಗೆ ಏಳ್ಮಡಿ ದಂಡನೆ ಆಗುವುದು,"ಎಂದು ಹೇಳಿ, ಅವನನ್ನು ಕಂಡವರು ಕೊಲ್ಲದಂತೆ ಅವನ ಮೇಲೆ ಒಂದು ಗುರುತನ್ನು ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅದಕ್ಕೆ ಯೆಹೋವನು - ಕಾಯಿನನ ಪ್ರಾಣವನ್ನು ತೆಗೆದವನಿಗೆ ಏಳರಷ್ಟು ಪ್ರತಿದಂಡನೆಯಾಗುವದು ಎಂದು ಹೇಳಿ ಅವನನ್ನು ಕಂಡವರು ಕೊಲ್ಲಕೂಡದಂತೆ ಅವನ ಮೇಲೆ ಒಂದು ಗುರುತಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅದಕ್ಕೆ ಯೆಹೋವನು ಕಾಯಿನನಿಗೆ, “ಆ ರೀತಿ ಆಗದಂತೆ ನಾನು ನೋಡಿಕೊಳ್ಳುವೆ! ಕಾಯಿನನೇ, ನಿನ್ನನ್ನು ಯಾವನಾದರೂ ಕೊಂದರೆ, ನಾನು ಅವನನ್ನು ಏಳರಷ್ಟು ಶಿಕ್ಷಿಸುವೆನು” ಎಂದು ಹೇಳಿದನು. ಆಮೇಲೆ ಯೆಹೋವನು ಕಾಯಿನನ ಮೇಲೆ ಒಂದು ಗುರುತಿಟ್ಟನು. ಅವನನ್ನು ಯಾರೂ ಕೊಲ್ಲಕೂಡದೆಂದು ಆ ಗುರುತು ಸೂಚಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 4:15
15 ತಿಳಿವುಗಳ ಹೋಲಿಕೆ  

“ಯೆರೂಸಲೇಮಿನ ಪಟ್ಟಣದ ಮಧ್ಯೆ ಹಾದು ಹೋಗಿ, ಅವರ ಮಧ್ಯೆ ನಡೆಯುವ ಎಲ್ಲಾ ಅಸಹ್ಯವಾದವುಗಳ ನಿಮಿತ್ತ ನಿಟ್ಟುಸಿರು ಬಿಡುತ್ತಾ ಅಳುತ್ತಿರುವವರೆಲ್ಲರ ಹಣೆಯ ಮೇಲೆ ಗುರುತು ಹಾಕು,” ಎಂದರು.


ಯೆಹೋವ ದೇವರೇ, ನಿಮ್ಮನ್ನು ನಿಂದಿಸಿದ ನಮ್ಮ ನೆರೆಯವರಿಗೆ ಏಳರಷ್ಟು ಪ್ರತಿದಂಡನೆಯನ್ನು ಅವರ ಮಡಿಲಿಗೆ ಕೊಡಿರಿ.


ವೃದ್ಧ, ಯುವಕ, ಯುವತಿಯರನ್ನು ಮತ್ತು ಎಳೆಗೂಸುಗಳನ್ನು ಮತ್ತು ಹೆಂಗಸರನ್ನು ಕೊಂದುಹಾಕಿರಿ. ಆದರೆ ಗುರುತು ಯಾವನ ಮೇಲೆ ಇದೆಯೋ, ಅವನನ್ನು ಮುಟ್ಟಬೇಡಿರಿ. ನನ್ನ ಪರಿಶುದ್ಧ ಸ್ಥಳದಿಂದಲೇ ಪ್ರಾರಂಭಿಸಿರಿ” ಎಂದಾಗ, ಅವರು ಆಲಯದ ಮುಂದೆ ಇದ್ದ ಹಿರಿಯರಿಂದ ಪ್ರಾರಂಭಿಸಿದರು.


ಕಾಯಿನನನ್ನು ಕೊಂದವನಿಗೆ ಏಳರಷ್ಟು ಪ್ರತೀಕಾರವಾದರೆ, ಲೆಮೆಕನನ್ನು ಹೊಡೆಯುವವನಿಗೆ, ಎಪ್ಪತ್ತೇಳರಷ್ಟಾಗುವುದು.”


ಅಂಥವರ ಯಾತನೆಯ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರುತ್ತಾ ಹೋಗುತ್ತದೆ. ಮೃಗವನ್ನು ಮತ್ತು ಅದರ ವಿಗ್ರಹವನ್ನು ಆರಾಧಿಸುವವರಿಗಾಗಲಿ, ಅದರ ಹೆಸರಿನ ಗುರುತನ್ನು ಹೊಂದಿದವರು ಹಗಲಿರುಳೂ ವಿಶ್ರಾಂತಿ ಪಡುವುದಿಲ್ಲಾ!” ಎಂದು ಮಹಾಶಬ್ದದಿಂದ ಹೇಳಿದನು.


ಅವರ ಹಿಂದೆ ಮೂರನೆಯವನಾದ ಒಬ್ಬ ದೇವದೂತನು ಬಂದು, “ಯಾವುದಾದರೂ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸಿ ತನ್ನ ಹಣೆಯ ಮೇಲಾಗಲಿ, ಕೈಯ ಮೇಲಾಗಲಿ ಗುರುತು ಹಾಕಿಸಿಕೊಂಡರೆ,


ಆಗ ಯೇಸು ಅವನಿಗೆ, “ನಿನ್ನ ಖಡ್ಗವನ್ನು ತಿರುಗಿ ಅದರ ಒರೆಯಲ್ಲಿ ಹಾಕು. ಖಡ್ಗವನ್ನು ಹಿಡಿದವರೆಲ್ಲರೂ ಖಡ್ಗದಿಂದ ನಾಶವಾಗುವರು.


ಆಗ ಯೆಹೋವ ದೇವರು ಹೋಶೇಯನಿಗೆ, “ಈ ಮಗುವಿಗೆ ಇಜ್ರೆಯೇಲ್ ಎಂದು ಹೆಸರಿಡು. ಏಕೆಂದರೆ ಶೀಘ್ರದಲ್ಲಿಯೇ ನಾನು ಇಜ್ರೆಯೇಲ್ ಕಣಿವೆಯಲ್ಲಿ ರಕ್ತವನ್ನು ಸುರಿಸಿದ ಯೇಹುವಿನ ಮನೆತನದವರ ಮೇಲೆ ಮುಯ್ಯಿತೀರಿಸಿಕೊಳ್ಳುವೆನು. ಇಸ್ರಾಯೇಲ್ ರಾಜ್ಯವನ್ನು ಅಂತ್ಯಗೊಳಿಸುವೆನು.


ನಮ್ಮ ಗುರಾಣಿಯಾಗಿರುವ ಯೆಹೋವ ದೇವರೇ, ನನ್ನ ಜನರು ಮರೆಯದ ಹಾಗೆ ಅವರು ಉಳಿದಿರಲಿ. ನಿಮ್ಮ ಪರಾಕ್ರಮದಿಂದ ಅವರನ್ನು ದಂಡಿಸಿರಿ.


ಬಾಷನು ಯಾರೊಬ್ಬಾಮನ ಮನೆಯವರ ಹಾಗಿದ್ದು, ಅವರನ್ನು ಸಂಹರಿಸಿದ್ದರಿಂದ ಯೆಹೋವ ದೇವರಿಗೆ ಕೋಪವನ್ನು ಎಬ್ಬಿಸಿ, ಯೆಹೋವ ದೇವರ ಸಮ್ಮುಖದಲ್ಲಿ ತಾನು ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತ ಅವನಿಗೆ ವಿರೋಧವಾಗಿಯೂ, ಅವನ ಮನೆಗೆ ವಿರೋಧವಾಗಿಯೂ ಹನಾನೀಯ ಮಗನಾಗಿರುವ ಪ್ರವಾದಿ ಯೇಹುವಿನ ಮುಖಾಂತರ ಯೆಹೋವ ದೇವರ ವಾಕ್ಯ ಬಂತು.


ನಾನು ಕೋಪದಿಂದ ನಿಮಗೆ ವಿರೋಧವಾಗಿ ನಡೆದು, ನಿಮ್ಮ ಪಾಪಗಳ ನಿಮಿತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಶಿಕ್ಷಿಸುವೆನು.


ನಾನು ಸಹ ನಿಮಗೆ ವಿರೋಧವಾಗಿ ನಡೆದು, ಇನ್ನೂ ಹೆಚ್ಚಾಗಿ ನಿಮ್ಮ ಪಾಪಗಳ ನಿಮಿತ್ತ, ಏಳರಷ್ಟು ಶಿಕ್ಷಿಸುವೆನು.


“ ‘ನನ್ನ ಮಾತನ್ನು ಕೇಳಲೊಲ್ಲದೆ ನನಗೆ ವಿರೋಧವಾಗಿ ನಡೆದರೆ, ನಾನು ನಿಮ್ಮ ಪಾಪಗಳಿಗೆ ತಕ್ಕಂತೆ ನಿಮ್ಮನ್ನು ಏಳರಷ್ಟು ಹೆಚ್ಚಾಗಿ ಬಾಧಿಸುವೆನು.


“ ‘ಹೀಗೂ ನನ್ನ ಮಾತನ್ನು ಕೇಳದೆ ಹೋದರೆ, ನಾನು ನಿಮ್ಮನ್ನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ಹೆಚ್ಚಾಗಿ ಶಿಕ್ಷಿಸುವೆನು.


ಅವನು ಸಿಕ್ಕಿಕೊಂಡರೆ ಏಳರಷ್ಟು ಹಿಂದಕ್ಕೆ ಕೊಡಬೇಕಾಗುವುದು. ತನ್ನ ಮನೆಯ ಆಸ್ತಿಯನ್ನೆಲ್ಲಾ ಸಹ ಅವನು ಕೊಡಬೇಕಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು