Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 4:23 - ಕನ್ನಡ ಸಮಕಾಲಿಕ ಅನುವಾದ

23 ಲೆಮೆಕನು ತನ್ನ ಹೆಂಡತಿಯರಿಗೆ ಹೀಗೆಂದನು: “ಆದಾ, ಚಿಲ್ಲಾ, ನನ್ನ ಮಾತನ್ನು ಕೇಳಿರಿ. ಲೆಮೆಕನ ಹೆಂಡತಿಯರೇ, ನಾನು ಹೇಳುವುದನ್ನು ಗಮನಿಸಿರಿ. ನನಗೆ ಗಾಯಮಾಡಿದ ಒಬ್ಬ ಮನುಷ್ಯನನ್ನು ಕೊಂದೆನು. ನನ್ನನ್ನು ಹೊಡೆದ ಯುವಕನನ್ನು ಹತ ಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಲೆಮೆಕನು ತನ್ನ ಹೆಂಡತಿಯರಿಗೆ ಹೀಗೆಂದನು; “ಆದಾ, ಚಿಲ್ಲಾ, ನನ್ನ ಮಾತಿಗೆ ಕಿವಿಕೊಡಿರಿ; ಲೆಮೆಕನ ಹೆಂಡತಿಯರೇ, ನಾನು ಹೇಳುವುದನ್ನು ಗಮನಿಸಿರಿ. ನನಗೆ ಗಾಯ ಮಾಡಿದ ಒಬ್ಬ ಮನುಷ್ಯನನ್ನು ಕೊಂದೆನು; ನನ್ನನ್ನು ಹೊಡೆದ ಒಬ್ಬ ಪ್ರಾಯಸ್ಥನನ್ನು ಹತಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಲೆಮೆಕನು ತನ್ನ ಹೆಂಡತಿಯರಿಗೆ ಹೀಗೆಂದನು: ಆದಾ, ಚಿಲ್ಲಾ, ಕೇಳಿ ನಾನು ಹೇಳುವುದನ್ನು ಲೆಮೆಕನ ಸತಿಯರೇ, ಆಲಿಸಿ ನನ್ನ ಮಾತನ್ನು ನಾ ಹತಮಾಡಿದೆ ನನಗೆ ಗಾಯ ಮಾಡಿದವನನ್ನು ನಾ ಕೊಂದೆ ನನ್ನನ್ನು ಹೊಡೆದಾ ಪ್ರಾಯದವನನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಲೆಮೆಕನು ತನ್ನ ಹೆಂಡತಿಯರಿಗೆ ಹೀಗೆಂದನು - ಆದಾ, ಚಿಲ್ಲಾ, ನನ್ನ ಮಾತಿಗೆ ಕಿವಿಗೊಡಿರಿ; ಲೆಮೆಕನ ಹೆಂಡತಿಯರೇ, ನಾನು ಹೇಳುವದನ್ನು ಕೇಳಿರಿ. ನನಗೆ ಗಾಯಮಾಡಿದ ಒಬ್ಬ ಮನುಷ್ಯನನ್ನು ಕೊಂದೆನು; ನನ್ನನ್ನು ಹೊಡೆದ ಒಬ್ಬ ಪ್ರಾಯಸ್ಥನನ್ನು ಹತಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಲೆಮೆಕನು ತನ್ನ ಹೆಂಡತಿಯರಿಗೆ ಹೀಗೆಂದನು: “ಆದಾ, ಚಿಲ್ಲಾ, ನನ್ನ ಮಾತನ್ನು ಕೇಳಿ! ಲೆಮೆಕನ ಹೆಂಡತಿಯರೇ, ನಾನು ಹೇಳುವುದನ್ನು ಕೇಳಿ. ಒಬ್ಬನು ನನಗೆ ಗಾಯ ಮಾಡಿದ, ಆದ್ದರಿಂದ ನಾನು ಅವನನ್ನು ಕೊಂದೆ, ಒಬ್ಬ ಯುವಕನು ನನ್ನನ್ನು ಹೊಡೆದ, ಆದ್ದರಿಂದ ನಾನು ಅವನನ್ನು ಕೊಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 4:23
7 ತಿಳಿವುಗಳ ಹೋಲಿಕೆ  

ಅವನು ಪದ್ಯರೂಪವಾಗಿ ಹೇಳಿದ್ದೇನೆಂದರೆ: “ಬಾಲಾಕನೇ, ಎದ್ದು ಕೇಳು; ಚಿಪ್ಪೋರನ ಮಗನೇ, ನನಗೆ ಕಿವಿಗೊಡು.


“ ‘ನಿನ್ನ ಜನರ ಮಕ್ಕಳ ಮೇಲೆ ಮುಯ್ಯಿಗೆ ಮುಯ್ಯಿ ತೀರಿಸದವನಾಗಿಯೂ, ಸೇಡು ತೀರಿಸದೆಯೂ ಇರು. ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು. ನಾನೇ ಯೆಹೋವ ದೇವರು.


ಯೋತಾಮನಿಗೆ ಇದನ್ನು ತಿಳಿಸಿದಾಗ, ಅವನು ಹೋಗಿ ಗೆರಿಜೀಮ್ ಬೆಟ್ಟದ ತುದಿಯಲ್ಲಿ ಏರಿ ನಿಂತು, ತನ್ನ ಸ್ವರವನ್ನೆತ್ತಿ ಕೂಗಿ ಅವರಿಗೆ, “ಶೆಕೆಮಿನ ಹಿರಿಯರೇ, ದೇವರು ನಿಮ್ಮನ್ನು ಕೇಳುವ ಹಾಗೆ ನನ್ನ ಮಾತನ್ನು ಕೇಳಿರಿ.


ಚಿಲ್ಲಾ ತೂಬಲ್ ಕಾಯಿನನನ್ನು ಪಡೆದಳು. ಅವನು ಕಂಚು ಮತ್ತು ಕಬ್ಬಿಣದ ಆಯುಧಗಳನ್ನು ಮಾಡುವವನಾಗಿದ್ದನು. ತೂಬಲ್ ಕಾಯಿನನ ತಂಗಿಯ ಹೆಸರು ನಯಮಾ.


ಮುಯ್ಯಿಗೆ ಮುಯ್ಯಿ ತೀರಿಸುವುದೂ, ಪ್ರತಿಫಲ ಕೊಡುವುದೂ ನನ್ನದೇ. ತಕ್ಕ ಕಾಲದಲ್ಲಿ ಅವರ ಕಾಲು ಜಾರುವುದು. ಅವರ ವಿನಾಶದ ದಿವಸ ಸಮೀಪವಾಗಿದೆ. ಅವರಿಗೆ ಸಿದ್ಧವಾದ ದುರ್ಗತಿಯ ಕಾಲ ಬೇಗ ಬರುತ್ತವೆ.”


ಯೆಹೋವ ದೇವರೇ, ನೀವು ಪ್ರತೀಕಾರ ಸಲ್ಲಿಸುವ ದೇವರಾಗಿದ್ದೀರಿ. ಮುಯ್ಯಿ ತೀರಿಸುವವರು ನೀವೇ; ದೇವರೇ, ನ್ಯಾಯ ತೀರಿಸುವಂತೆ ನಿಮ್ಮನ್ನು ಪ್ರಕಟಿಸಿಕೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು