Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 40:5 - ಕನ್ನಡ ಸಮಕಾಲಿಕ ಅನುವಾದ

5 ಅವರಿಬ್ಬರಿಗೂ ಅಂದರೆ, ಈಜಿಪ್ಟ್ ದೇಶದ ಅರಸನು ಸೆರೆಯಲ್ಲಿ ಹಾಕಿಸಿದ್ದ ಪಾನದಾಯಕನಿಗೂ, ರೊಟ್ಟಿಗಾರನಿಗೂ ಒಂದೇ ರಾತ್ರಿ ಕನಸು ಬಿತ್ತು. ಅವರವರ ಕನಸಿಗೆ ಅದರದೇ ಆದ ಅರ್ಥವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಐಗುಪ್ತ ಅರಸನು ಸೆರೆಯಲ್ಲಿ ಹಾಕಿಸಿದ್ದ ಪಾನದಾಯಕನಿಗೂ, ಅಡಿಗೆ ಭಟ್ಟನಿಗೂ, ಒಂದೇ ರಾತ್ರಿ ಕನಸುಬಿತ್ತು. ಅವರವರ ಕನಸಿಗೆ ಬೇರೆ ಬೇರೆ ಅರ್ಥವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಕೆಲವು ಕಾಲವದ ಮೇಲೆ, ಆ ಇಬ್ಬರು ನೌಕರರಿಗೂ ಅಂದರೆ, ಈಜಿಪ್ಟಿನ ಅರಸ ಸೆರೆಗೆ ಹಾಕಿಸಿದ್ದ ಪಾನಸೇವಕನಿಗೂ ಅಡಿಗೆಭಟ್ಟನಿಗೂ, ಒಂದೇ ರಾತ್ರಿ ಕನಸುಬಿತ್ತು. ಅವರ ಕನಸುಗಳಿಗೆ ಬೇರೆಬೇರೆ ಅರ್ಥವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಹೀಗೆ ಅವರು ಕೆಲವು ಕಾಲ ಕಾವಲಲ್ಲಿದ್ದ ಮೇಲೆ ಅವರಿಬ್ಬರಿಗೂ, ಅಂದರೆ ಐಗುಪ್ತದೇಶದ ಅರಸನು ಸೆರೆಯಲ್ಲಿ ಹಾಕಿಸಿದ್ದ ಪಾನದಾಯಕನಿಗೂ ಭಕ್ಷ್ಯಕಾರನಿಗೂ, ಒಂದೇ ರಾತ್ರಿ ಕನಸುಬಿತ್ತು; ಅವರವರ ಕನಸಿಗೆ ಬೇರೆ ಬೇರೆ ಅರ್ಥವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಒಂದು ರಾತ್ರಿ ಆ ಇಬ್ಬರು ಕೈದಿಗಳಿಗೆ ಅಂದರೆ ಭಕ್ಷ್ಯಗಾರನಿಗೂ ಪಾನದಾಯಕನಿಗೂ ಒಂದೊಂದು ಕನಸು ಬಿತ್ತು. ಮತ್ತು ಅವರಿಬ್ಬರ ಕನಸುಗಳು ತಮ್ಮದೇ ಆದ ಅರ್ಥವನ್ನು ಹೊಂದಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 40:5
18 ತಿಳಿವುಗಳ ಹೋಲಿಕೆ  

ನಾವು ಒಂದು ರಾತ್ರಿಯಲ್ಲಿ ಕನಸನ್ನು ಕಂಡೆವು. ಒಬ್ಬೊಬ್ಬನ ಕನಸಿಗೆ ಬೇರೆ ಬೇರೆ ಅರ್ಥವಿತ್ತು.


ಆಗ ಬೇಲ್ತೆಶಚ್ಚರನೆಂಬ ಹೆಸರುಳ್ಳ ದಾನಿಯೇಲನು ಒಂದು ಗಳಿಗೆ ವಿಸ್ಮಿತನಾಗಿ ತನ್ನ ಆಲೋಚನೆಗಳಲ್ಲಿ ಕಳವಳಗೊಂಡನು. ಆಗ ಅರಸನು ಮಾತನಾಡಿ, “ಬೇಲ್ತೆಶಚ್ಚರನೇ, ಕನಸಾದರೂ, ಅದರ ಅರ್ಥವಾದರೂ ನಿನ್ನನ್ನು ಕಳವಳಪಡಿಸದಿರಲಿ,” ಎಂದನು. ಬೇಲ್ತೆಶಚ್ಚರನು ಉತ್ತರವಾಗಿ, “ನನ್ನ ಒಡೆಯನೇ, ಆ ಕನಸು ನಿನ್ನ ವೈರಿಗಳಿಗೂ, ಅದರ ಅರ್ಥವು ನಿನ್ನ ಶತ್ರುಗಳಿಗೂ ಆಗಲಿ.


“ಮಂತ್ರಗಾರರಲ್ಲಿ ಪ್ರಾಮುಖ್ಯನಾದ ಬೇಲ್ತೆಶಚ್ಚರನೇ, ನಿನ್ನಲ್ಲಿ ಪರಿಶುದ್ಧ ದೇವರುಗಳ ಆತ್ಮವಿರುವುದೆಂದು ನಾನು ಬಲ್ಲೆನು. ಯಾವುದೇ ರಹಸ್ಯವು ನಿನಗೆ ಅಸಾಧ್ಯವಾದದ್ದಲ್ಲ. ಆದ್ದರಿಂದ ನಾನು ಕಂಡ ಕನಸಿನ ದರ್ಶನ, ಅದರ ಅರ್ಥವನ್ನೂ ನೀನು ನನಗೆ ಹೇಳು.


ನನ್ನನ್ನು ಭಯಪಡಿಸುವಂಥಹ ಒಂದು ಕನಸನ್ನು ಕಂಡೆನು. ನನ್ನ ಹಾಸಿಗೆಯ ಮೇಲೆ ಮಲಗಿದ್ದಾಗ, ನನ್ನ ಮನಸ್ಸಿನಲ್ಲಿ ಹಾದುಹೋದ ಚಿತ್ರಗಳು ಮತ್ತು ದರ್ಶನಗಳು ನನ್ನನ್ನು ಭಯಭೀತಗೊಳಿಸಿದವು.


ಆ ರಾತ್ರಿ ಅರಸನಿಗೆ ನಿದ್ರೆ ಬರಲಿಲ್ಲ. ಆದ್ದರಿಂದ ಅರಸನು ಇತಿಹಾಸ ಘಟನೆಗಳನ್ನು ಬರೆದಿಟ್ಟಿದ್ದ ಗ್ರಂಥವನ್ನು ತೆಗೆದುಕೊಂಡು ಬರಲು ಹೇಳಿದನು.


ಯೆಹೋವ ದೇವರು ಅವರಿಗೆ ಹೀಗೆ ಹೇಳಿದನು, “ನನ್ನ ಮಾತುಗಳನ್ನು ಈಗ ಕೇಳಿರಿ: “ನಿಮ್ಮಲ್ಲಿ ಒಬ್ಬ ಪ್ರವಾದಿ ಇದ್ದರೆ ಯೆಹೋವ ದೇವರಾದ ನಾನು ದರ್ಶನದಲ್ಲಿ ಪ್ರಕಟಿಸುವೆನು, ಇಲ್ಲವೆ ಕನಸಿನಲ್ಲಿಯೂ ನಾನು ಅವನೊಡನೆ ಮಾತನಾಡುವೆನು.


ಅವರು ಯೋಸೇಫನಿಗೆ, “ನಾವು ಕನಸನ್ನು ಕಂಡಿದ್ದೇವೆ, ಆದರೆ ಅದರ ಅರ್ಥವನ್ನು ನಮಗೆ ಹೇಳುವವರಿಲ್ಲ,” ಎಂದರು. ಯೋಸೇಫನು ಅವರಿಗೆ, “ಅರ್ಥ ಹೇಳುವುದು ದೇವರದಲ್ಲವೋ? ಎಂದು ಹೇಳಿ, ಅವುಗಳನ್ನು ನನಗೆ ಹೇಳಿರಿ,” ಎಂದನು.


ಆದರೆ ದೇವರು ಅಬೀಮೆಲೆಕನಿಗೆ ರಾತ್ರಿಯ ಕನಸಿನಲ್ಲಿ ಬಂದು, “ನೀನು ಆ ಸ್ರೀಯನ್ನು ತೆಗೆದುಕೊಂಡ ಕಾರಣ ಸಾಯತಕ್ಕವನಾಗಿದ್ದಿ, ಏಕೆಂದರೆ ಆಕೆಯು ಆ ಮನುಷ್ಯನ ಹೆಂಡತಿ,” ಎಂದು ಅವನಿಗೆ ಹೇಳಿದರು.


ಕೆಲವು ಸಮಯದ ನಂತರ ಈಜಿಪ್ಟಿನ ಅರಸನ ಪಾನದಾಯಕನೂ, ರೊಟ್ಟಿಗಾರನೂ ತಮ್ಮ ಅರಸನಿಗೆ ಎದುರಾಗಿ ಅಪರಾಧ ಮಾಡಿದರು.


ಮೈಗಾವಲಿನ ದಳಪತಿಯು ಅವರನ್ನೂ ನೋಡಿಕೊಳ್ಳುವದಕ್ಕೆ ಯೋಸೇಫನನ್ನು ನೇಮಿಸಿದ್ದರಿಂದ, ಅವನು ಅವರನ್ನು ನೋಡಿಕೊಳ್ಳುತ್ತಿದ್ದನು. ಅವರು ಕೆಲವು ಕಾಲ ಸೆರೆಯಲ್ಲಿದ್ದರು.


ಆಗ ಯೋಸೇಫನು ಬೆಳಿಗ್ಗೆ ಅವರ ಬಳಿಗೆ ಬಂದು ಅವರನ್ನು ನೋಡಿದಾಗ, ಅವರು ಚಿಂತೆಯುಳ್ಳವರಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು