Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 40:8 - ಕನ್ನಡ ಸಮಕಾಲಿಕ ಅನುವಾದ

8 ಅವರು ಯೋಸೇಫನಿಗೆ, “ನಾವು ಕನಸನ್ನು ಕಂಡಿದ್ದೇವೆ, ಆದರೆ ಅದರ ಅರ್ಥವನ್ನು ನಮಗೆ ಹೇಳುವವರಿಲ್ಲ,” ಎಂದರು. ಯೋಸೇಫನು ಅವರಿಗೆ, “ಅರ್ಥ ಹೇಳುವುದು ದೇವರದಲ್ಲವೋ? ಎಂದು ಹೇಳಿ, ಅವುಗಳನ್ನು ನನಗೆ ಹೇಳಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವರು ಅವನಿಗೆ, “ನಮಗೆ ಕನಸುಬಿತ್ತು. ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ” ಎಂದು ಹೇಳಲು ಯೋಸೇಫನು ಅವರಿಗೆ, “ಕನಸುಗಳ ಅರ್ಥವು ದೇವರಿಂದ ದೊರಕಬಹುದಲ್ಲವೇ? ದಯಮಾಡಿ ನಿಮ್ಮ ಕನಸನ್ನು ನನಗೆ ತಿಳಿಸಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವರು, “ನಮಗೆ ಸ್ವಪ್ನಬಿತ್ತು; ಅದರ ಅರ್ಥ ಹೇಳುವವರು ಯಾರೂ ಇಲ್ಲ,” ಎಂದರು. ಜೋಸೆಫನು ಅವರಿಗೆ, “ಸ್ವಪ್ನಗಳ ಅರ್ಥ ದೇವರಿಂದ ದೊರಕಬಹುದಲ್ಲವೆ? ದಯವಿಟ್ಟು ನಿಮ್ಮ ಸ್ವಪ್ನಗಳನ್ನು ನನಗೆ ತಿಳಿಸಿ,” ಎಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವರು ಅವನಿಗೆ - ನಮಗೆ ಸ್ವಪ್ನಬಿತ್ತು; ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ ಎಂದು ಹೇಳಲು ಯೋಸೇಫನು ಅವರಿಗೆ - ಸ್ವಪ್ನಗಳ ಅರ್ಥವು ದೇವರಿಂದ ದೊರಕಬಹುದಲ್ಲವೇ; ದಯಮಾಡಿ ನಿಮ್ಮ ಸ್ವಪ್ನವನ್ನು ನನಗೆ ತಿಳಿಸಿರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆ ಇಬ್ಬರು, “ನಾವು ಕಳೆದ ರಾತ್ರಿ ಕನಸನ್ನು ಕಂಡೆವು; ಆದರೆ ನಾವು ಕಂಡ ಕನಸು ನಮಗೆ ಅರ್ಥವಾಗುತ್ತಿಲ್ಲ. ನಮಗೆ ಕನಸುಗಳ ಅರ್ಥವನ್ನು ತಿಳಿಸುವವರಾಗಲಿ ವಿವರಿಸುವವರಾಗಲಿ ಯಾರೂ ಇಲ್ಲ” ಎಂದು ಹೇಳಿದರು. ಯೋಸೇಫನು ಅವರಿಗೆ, “ದೇವರೊಬ್ಬನು ಮಾತ್ರ ಕನಸುಗಳನ್ನು ಅರ್ಥಮಾಡಿಕೊಳ್ಳಬಲ್ಲನು ಮತ್ತು ಕನಸುಗಳ ಅರ್ಥವನ್ನು ಹೇಳಬಲ್ಲನು. ಆದ್ದರಿಂದ ದಯಮಾಡಿ ನಿಮ್ಮ ಕನಸುಗಳನ್ನು ನನಗೆ ತಿಳಿಸಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 40:8
17 ತಿಳಿವುಗಳ ಹೋಲಿಕೆ  

ಅರಸನು ದಾನಿಯೇಲನಿಗೆ ಉತ್ತರವಾಗಿ, “ನೀನು ಈ ರಹಸ್ಯವನ್ನು ಪ್ರಕಟಮಾಡಲು ಸಮರ್ಥನಾದ್ದರಿಂದ ನಿಶ್ಚಯವಾಗಿ ನಿಮ್ಮ ದೇವರು ದೇವರುಗಳಿಗೆ ದೇವರಾಗಿಯೂ, ಅರಸುಗಳ ಒಡೆಯರಾಗಿಯೂ, ರಹಸ್ಯಗಳನ್ನು ಪ್ರಕಟ ಮಾಡುವವರಾಗಿಯೂ ಇದ್ದಾರೆ,” ಎಂದನು.


ಆದರೆ ಈ ರಹಸ್ಯಗಳನ್ನು ಪ್ರಕಟಪಡಿಸುವಂತಹ ದೇವರು ಪರಲೋಕದಲ್ಲಿ ಇದ್ದಾರೆ. ಅವರು ಮುಂಬರುವ ದಿವಸಗಳಲ್ಲಿ ಸಂಭವಿಸುವಂಥವುಗಳನ್ನು ಅರಸನಾದ ನೆಬೂಕದ್ನೆಚ್ಚರನಿಗೆ ತಿಳಿಯಪಡಿಸುತ್ತಾರೆ. ನಿನ್ನ ಕನಸಿನಲ್ಲಿ ನಿನ್ನ ಹಾಸಿಗೆಯಲ್ಲಿ ನೀನು ಮಲಗಿದಾಗ, ನಿನ್ನ ಮನಸ್ಸಿನಲ್ಲಿ ಹಾದುಹೋದ ದರ್ಶನಗಳು ಇವೇ ಆಗಿವೆ.


ನಿಶ್ಚಯವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಯೋಜನೆಗಳನ್ನು ತಿಳಿಸದೆ, ಸಾರ್ವಭೌಮ ಯೆಹೋವ ದೇವರು ಏನನ್ನೂ ಮಾಡುವುದಿಲ್ಲ.


ಕೊನೆಗೆ ದಾನಿಯೇಲನು ನನ್ನ ಬಳಿಗೆ ಬಂದನು. ಅವನು ನನ್ನ ದೇವರ ಹೆಸರು ಸೇರಿರುವ ಬೇಲ್ತೆಶಚ್ಚರ್ ಎಂಬ ಅಡ್ಡಹೆಸರನ್ನು ಹೊಂದಿದ್ದನು. ಪರಿಶುದ್ಧ ದೇವರುಗಳ ಆತ್ಮವು ಅವನಲ್ಲಿತ್ತು. ಅವನಿಗೆ ನನ್ನ ಕನಸನ್ನು ಹೀಗೆ ತಿಳಿಸಿದೆ.


ಅರಸನು ಕೇಳುವ ಸಂಗತಿಯು ಕಷ್ಟಕರವಾದದ್ದು. ಮಾನವರ ಮಧ್ಯದಲ್ಲಿ ವಾಸಿಸದ ದೇವರುಗಳೇ ಹೊರತು, ಬೇರಾರೂ ಇದನ್ನು ಅರಸನ ಸನ್ನಿಧಿಯಲ್ಲಿ ತಿಳಿಸಲಾರರು.”


ಲೊಚಗುಟ್ಟುವ, ಪಿಸುಮಾತಾಡುವ ಮಂತ್ರಗಾರರನ್ನೂ; ಕಣಿಹೇಳುವವರನ್ನೂ ಹುಡುಕಿರಿ ಎಂದು ಅವರು ನಿಮಗೆ ಹೇಳುವಾಗ, ಜನರು ತಮ್ಮ ದೇವರನ್ನೇ ಹುಡುಕುವುದಿಲ್ಲವೋ? ಜೀವಿತರಿಗಾಗಿ ಸತ್ತವರಲ್ಲಿ ಹೋಗುವುದುಂಟೋ?


ಯೆಹೋವ ದೇವರ ರಹಸ್ಯವು ಅವರಿಗೆ ಭಯಪಡುವವರೊಂದಿಗೆ ಇರುವುದು; ತಮ್ಮ ಒಡಂಬಡಿಕೆಯನ್ನು ಅವರು ಅಂಥವರಿಗೇ ತಿಳಿಸುವರು.


ಆಗ ಮುಖ್ಯ ಪಾನದಾಯಕನು ತನ್ನ ಕನಸನ್ನು ಯೋಸೇಫನಿಗೆ ತಿಳಿಸುತ್ತಾ, “ಕನಸಿನಲ್ಲಿ ನನ್ನ ಮುಂದೆ ದ್ರಾಕ್ಷಿಬಳ್ಳಿ ಇತ್ತು.


ಆಗ ಸಹಸ್ರ ದೂತರಲ್ಲಿ ಒಬ್ಬನು ಮಧ್ಯಸ್ಥನಾಗಿ ಆ ಮನುಷ್ಯನ ಯಥಾರ್ಥತೆಯನ್ನು ತಿಳಿಸುವುದಕ್ಕೆ ಅವನ ಬಳಿಯಲ್ಲಿದ್ದರೆ,


ಆಗ ಅರಸನು ಅವರಿಗೆ, “ನಾನು ಒಂದು ಕನಸು ಕಂಡಿದ್ದೇನೆ. ಅದರ ಅರ್ಥವೇನೋ ಎಂದು ತಿಳಿಯಲು ನನ್ನ ಮನಸ್ಸು ತತ್ತರಗೊಂಡಿದೆ,” ಎಂದನು.


ದಾನಿಯೇಲನು ಅರಸನ ಸನ್ನಿಧಿಯಲ್ಲಿ ಉತ್ತರವಾಗಿ, “ಅರಸನು ಕೇಳುವ ರಹಸ್ಯವನ್ನು ಜ್ಞಾನಿಗಳೂ, ಜ್ಯೋತಿಷ್ಯರೂ, ಮಂತ್ರಗಾರರೂ, ಶಕುನ ಹೇಳುವವರೂ ಅರಸನಿಗೆ ತಿಳಿಸಲಾರರು.


ಈಗ ನೀನು ಅರ್ಥಗಳನ್ನು ವಿವರಿಸಿ, ಕಷ್ಟಕರವಾದ ಸಮಸ್ಯೆಗಳನ್ನು ಬಗೆಹರಿಸಲು ಸಮರ್ಥನೆಂದು ನಾನು ನಿನ್ನ ವಿಷಯವಾಗಿ ಕೇಳಿದ್ದೇನೆ. ಹೀಗಾದರೆ ಈ ಬರಹವನ್ನು ಓದುವುದಕ್ಕೂ, ಅದರ ಅರ್ಥವನ್ನು ತಿಳಿಸುವುದಕ್ಕೂ ನಿನ್ನಿಂದ ಸಾಧ್ಯವಾದರೆ, ನಿನಗೆ ಧೂಮ್ರವಸ್ತ್ರವನ್ನು ಹೊದಿಸಿ, ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ರಾಜ್ಯದ ಮೂರನೆಯ ಅಧಿಕಾರಿಯನ್ನಾಗಿ ನೇಮಿಸುವೆನು,” ಎಂದು ಹೇಳಿದನು.


ಆಗ ಯೋಸೇಫನು ಫರೋಹನಿಗೆ, “ಫರೋಹನ ಎರಡು ಕನಸುಗಳ ವಿಷಯ ಒಂದೇ, ದೇವರು ಮಾಡಲಿರುವುದನ್ನು ಫರೋಹನಿಗೆ ತಿಳಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು