Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 41:26 - ಕನ್ನಡ ಸಮಕಾಲಿಕ ಅನುವಾದ

26 ಆ ಏಳು ಒಳ್ಳೆಯ ಹಸುಗಳು ಏಳು ವರ್ಷಗಳು; ಏಳು ಒಳ್ಳೆಯ ತೆನೆಗಳೂ, ಏಳು ವರ್ಷಗಳೇ. ಇವೆರಡು ಕನಸುಗಳ ಅರ್ಥ ಒಂದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆ ಏಳು ಒಳ್ಳೆ ಆಕಳುಗಳು ಏಳು ವರ್ಷಗಳು ಆ ಏಳು ಒಳ್ಳೆ ತೆನೆಗಳು ಏಳು ವರ್ಷಗಳು. ಎರಡು ಕನಸುಗಳ ಅರ್ಥ ಒಂದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಆ ಏಳು ಒಳ್ಳೆಯ ಹಸುಗಳೇ ಏಳು ವರ್ಷಗಳು; ಆ ಏಳು ಒಳ್ಳೆಯತೆನೆಗಳೂ ಏಳು ವರ್ಷಗಳು; ಎರಡು ಕನಸುಗಳ ಅರ್ಥ ಒಂದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆ ಏಳು ಒಳ್ಳೆಯ ಆಕಳುಗಳೇ ಆ ಏಳು ವರುಷಗಳು; ಏಳು ಒಳ್ಳೆಯ ತೆನೆಗಳೂ ಏಳು ವರುಷಗಳು; ಎರಡು ಕನಸುಗಳ ಅರ್ಥವೊಂದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಒಳ್ಳೆಯ ಏಳು ಹಸುಗಳೇ ಏಳು ವರ್ಷಗಳು. ಒಳ್ಳೆಯ ಏಳು ತೆನೆಗಳೇ ಏಳು ವರ್ಷಗಳು. ಎರಡು ಕನಸುಗಳೂ ಒಂದೇ ಅರ್ಥವನ್ನು ಹೊಂದಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 41:26
15 ತಿಳಿವುಗಳ ಹೋಲಿಕೆ  

ಆ ದೇಶವು ಸುಭಿಕ್ಷದ ಏಳು ವರ್ಷಗಳಲ್ಲಿ ರಾಶಿರಾಶಿಯಾಗಿ ಫಲಕೊಟ್ಟಿತು.


ಲಕ್ಷಣವಾದ ಮತ್ತು ಕೊಬ್ಬಿದ ಏಳು ಹಸುಗಳು ನೈಲ್ ನದಿಯೊಳಗಿಂದ ಏರಿಬಂದು, ಆಪುಹುಲ್ಲುಗಾವಲಲ್ಲಿ ಮೇಯುತ್ತಿದ್ದವು.


ಇದಲ್ಲದೆ ಸಾಕ್ಷಿಕೊಡುವವರು ಮೂವರಿದ್ದಾರೆ.


ಅವರೆಲ್ಲರೂ ಒಂದೇ ಆತ್ಮಿಕವಾದ ಪಾನವನ್ನು ಕುಡಿದರು. ಅವರು ತಮ್ಮೊಂದಿಗೆ ಬಂದ ದೈವಿಕವಾದ ಬಂಡೆಯೊಳಗಿಂದ ಬಂದ ನೀರನ್ನು ಕುಡಿದರು. ಕ್ರಿಸ್ತ ಯೇಸುವೇ ಆ ಬಂಡೆ.


ನೀವು ಅದನ್ನು ತಿನ್ನತಕ್ಕ ರೀತಿ ಇದೇ: ನೀವು ನಿಮ್ಮ ನಡುಕಟ್ಟಿಕೊಂಡು, ಕೆರಮೆಟ್ಟಿಕೊಂಡು ಊರುಗೋಲನ್ನು ಹಿಡಿದುಕೊಂಡು ತ್ವರೆಯಾಗಿ ಅದನ್ನು ತಿನ್ನಬೇಕು, ಅದು ಯೆಹೋವ ದೇವರ ಪಸ್ಕವಾಗಿದೆ.


ಈಜಿಪ್ಟ್ ದೇಶದಲ್ಲಿದ್ದ ಸುಭಿಕ್ಷದ ಏಳು ವರ್ಷಗಳು ಮುಗಿದ ತರುವಾಯ,


ಈಜಿಪ್ಟ್ ದೇಶದಲ್ಲೆಲ್ಲಾ ಬಹುಸಮೃದ್ಧಿಯ ಸುಭಿಕ್ಷ ವರ್ಷಗಳು ಬರುತ್ತವೆ.


ಅವನು ತಿರುಗಿ ನಿದ್ರೆ ಮಾಡಿದಾಗ, ಎರಡನೆಯ ಸಾರಿ ಕನಸನ್ನು ಕಂಡನು. ಒಂದೇ ದಂಟಿನಲ್ಲಿ ಏಳು ಒಳ್ಳೆಯ ಪುಷ್ಟಿಯಾದ ತೆನೆಗಳು ಎದ್ದವು.


ಅದಕ್ಕೆ ಯೋಸೇಫನು ಉತ್ತರವಾಗಿ, “ಅದರ ಅರ್ಥವು ಇದೇ: ಆ ಮೂರು ಪುಟ್ಟಿಗಳು, ಮೂರು ದಿನಗಳು.


ಅದಕ್ಕೆ ಯೋಸೇಫನು, “ಅದರ ಅರ್ಥ ಏನೆಂದರೆ, ಆ ಮೂರು ಕೊಂಬೆಗಳು ಮೂರು ದಿನಗಳಾಗಿವೆ.


ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು, ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರೂ ಒಂದೇ ಶರೀರವಾಗಿರುವರು.


ಬಂಗಾರದ ಐವತ್ತು ಕೊಂಡಿಗಳನ್ನು ಮಾಡಿ, ಅವುಗಳಿಂದ ಪರದೆಗಳನ್ನು ಒಂದಕ್ಕೊಂದು ಜೋಡಿಸಬೇಕು. ಹೀಗೆ ಅದು ಒಂದೇ ಗುಡಾರವಾಗಬೇಕು.


ಆಗ ಯೋಸೇಫನು ಫರೋಹನಿಗೆ, “ಫರೋಹನ ಎರಡು ಕನಸುಗಳ ವಿಷಯ ಒಂದೇ, ದೇವರು ಮಾಡಲಿರುವುದನ್ನು ಫರೋಹನಿಗೆ ತಿಳಿಸಿದ್ದಾರೆ.


ಅವುಗಳ ತರುವಾಯ ಏರಿ ಬಂದ ಬಡಕಲಾದ ಕೆಟ್ಟ ಏಳು ಹಸುಗಳು ಮತ್ತು ಪೂರ್ವದಿಕ್ಕಿನ ಗಾಳಿಯಿಂದ ಒಣಗಿ ಬತ್ತಿ ಹೋಗಿದ್ದ ಏಳು ತೆನೆಗಳು, ಬರಲಿರುವ ಏಳು ವರ್ಷಗಳು.


ಮಾನವ ಹಸ್ತಗಳಿಲ್ಲದೆ, ಆದರೆ ಬೆಟ್ಟದೊಳಗಿಂದ ಕಡಿದು ತೆಗೆದ ಗುಂಡು ಬಂಡೆಯು ಕಬ್ಬಿಣವನ್ನೂ, ಕಂಚನ್ನೂ, ಮಣ್ಣನ್ನೂ, ಬೆಳ್ಳಿಯನ್ನೂ ಹಾಗೂ ಬಂಗಾರವನ್ನೂ ತುಂಡುತುಂಡಾಗಿ ಮಾಡಿದ ಆ ಗುಂಡು ಕಲ್ಲಿನ ದರ್ಶನವು ಇದೆ. “ಇದರಿಂದ ಭವಿಷ್ಯದಲ್ಲಿ ಏನಾಗುತ್ತದೆ ಎಂಬುದನ್ನು ಮಹಾ ದೇವರು ಅರಸನಿಗೆ ತೋರಿಸಿದ್ದಾರೆ. ಕನಸು ನಿಜವಾದದ್ದು, ಅದರ ಅರ್ಥವು ನಂಬತಕ್ಕದ್ದು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು