Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 41:34 - ಕನ್ನಡ ಸಮಕಾಲಿಕ ಅನುವಾದ

34 ಫರೋಹನು ಅಧಿಕಾರಿಗಳನ್ನು ನೇಮಿಸಿ, ದೇಶದ ಮೇಲಿಟ್ಟು, ಸುಭಿಕ್ಷದ ಏಳು ವರ್ಷಗಳಲ್ಲಿ ಈಜಿಪ್ಟ್ ದೇಶದ ಐದರಲ್ಲಿ ಒಂದು ಭಾಗ ಬೆಳೆಯನ್ನು ಕಂದಾಯವಾಗಿ ತೆಗೆದುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಫರೋಹನು ಐಗುಪ್ತ ದೇಶದ ಎಲ್ಲಾ ಭಾಗಗಳಲ್ಲಿಯೂ ಅಧಿಕಾರಿಗಳನ್ನು ನೇಮಿಸಿ ಅವರ ಕೈಯಿಂದ ಸುಭಿಕ್ಷವಾದ ಏಳು ವರ್ಷಗಳಲ್ಲಿ ದೇಶದ ಬೆಳೆಯೊಳಗೆ ಐದರಲ್ಲಿ ಒಂದು ಪಾಲನ್ನು ಕಂದಾಯವಾಗಿ ಎತ್ತಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಅದೂ ಅಲ್ಲದೆ, ದೇಶದ ಎಲ್ಲ ಭಾಗಗಳಲ್ಲೂ ಗುಮಾಸ್ತರನ್ನು ನೇಮಿಸಿ ಅವರ ಮೂಲಕ ಸುಭಿಕ್ಷವಾದ ಏಳು ವರ್ಷಗಳಲ್ಲಿ ದೇಶದ ಬೆಳೆಯಲ್ಲಿ ಐದನೆಯ ಒಂದು ಪಾಲನ್ನು ಕಂದಾಯವಾಗಿ ಎತ್ತಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಮತ್ತು ತಾವು ಒಂದು ಕೆಲಸ ಮಾಡಬೇಕು; ದೇಶದ ಎಲ್ಲಾ ಭಾಗಗಳಲ್ಲಿಯೂ ಕರಣೀಕರನ್ನು ನೇವಿುಸಿ ಅವರ ಕೈಯಿಂದ ಸುಭಿಕ್ಷವಾದ ಏಳು ವರುಷಗಳಲ್ಲಿ ದೇಶದ ಬೆಳೆಯೊಳಗೆ ಐದನೆಯ ಪಾಲನ್ನು ಕಂದಾಯವಾಗಿ ಎತ್ತಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಅಲ್ಲದೆ ಜನರಿಂದ ಆಹಾರವನ್ನು ಶೇಖರಿಸುವುದಕ್ಕಾಗಿ ತಾವು ಸಂಗ್ರಹಕರನ್ನು ನೇಮಿಸಿ ಒಳ್ಳೆಯ ಏಳು ವರ್ಷಗಳಲ್ಲಿ ಪ್ರತಿಯೊಬ್ಬ ಬೆಳೆಗಾರನಿಂದಲೂ ಬೆಳೆಯ ಐದನೆ ಒಂದು ಭಾಗವನ್ನು ಕಂದಾಯ ರೂಪದಲ್ಲಿ ವಸೂಲಿ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 41:34
14 ತಿಳಿವುಗಳ ಹೋಲಿಕೆ  

“ಹೀಗೆ ಅವನು ತನ್ನ ಯಜಮಾನನ ಸಾಲಗಾರರಲ್ಲಿ ಪ್ರತಿಯೊಬ್ಬನನ್ನು ಕರೆದು ಮೊದಲನೆಯವನಿಗೆ, ‘ನೀನು ನನ್ನ ಯಜಮಾನನಿಗೆ ತೀರಿಸಬೇಕಾದ ಸಾಲವೆಷ್ಟು?’ ಎಂದು ಕೇಳಲು,


ಜಾಣನು ಕೇಡನ್ನು ಮುಂದಾಗಿ ಕಂಡು ಅಡಗಿಕೊಳ್ಳುತ್ತಾನೆ; ಆದರೆ ಮುಗ್ಧನು ಮುಂದೆ ಹೋಗಿ ಹಾನಿಗೆ ಈಡಾಗುತ್ತಾನೆ.


ಜಾಣನು ಕೇಡನ್ನು ಮುಂದಾಗಿ ಕಂಡು ತಾನು ಅಡಗಿಕೊಳ್ಳುತ್ತಾನೆ; ಆದರೆ ಮುಗ್ಧನು ಮುಂದೆ ಹೋಗಿ ಶಿಕ್ಷೆಯನ್ನು ಹೊಂದುತ್ತಾನೆ.


ಇದರಿಂದ ದೇವರು ಅವರ ಪ್ರಾಣವನ್ನು ಮರಣದಿಂದ ಬಿಡಿಸಿ, ಬರಗಾಲದಲ್ಲಿ ಅವರ ಜೀವವನ್ನು ಕಾಪಾಡುತ್ತಾರೆ.


ಬರದಲ್ಲಿ ನಿನ್ನನ್ನು ಮರಣದೊಳಗಿಂದಲೂ, ಯುದ್ಧದಲ್ಲಿ ಖಡ್ಗದ ಬಲದಿಂದಲೂ ದೇವರು ವಿಮೋಚಿಸುವರು.


ಜಿಕ್ರಿಯ ಮಗ, ಯೋಯೇಲನು ಅವರಿಗೆ ಮೇಲ್ವಿಚಾರಕನಾಗಿದ್ದನು. ಹಸ್ಸೆನುವಾಹನ ಮಗ ಯೆಹೂದನು ಪಟ್ಟಣದ ಹೊಸ ಭಾಗದ ಮೇಲೆ ಮೇಲ್ವಿಚಾರಕನಾಗಿದ್ದನು.


ಈ ಮನುಷ್ಯರು ಕೆಲಸವನ್ನು ನಂಬಿಕೆಯಿಂದ ಮಾಡಿದರು. ಅವರ ವಿಚಾರಣೆಯ ಮೇಲ್ವಿಚಾರಕರು ಯಾರೆಂದರೆ ಮೆರಾರೀಯ ಪುತ್ರರಲ್ಲಿ ಲೇವಿಯರಾದ ಯಹಾತನೂ, ಓಬದ್ಯನೂ; ಕೊಹಾತ್ಯರ ಮಕ್ಕಳಲ್ಲಿ ಜೆಕರ್ಯನೂ, ಮೆಷುಲ್ಲಾಮನೂ; ಗೀತವಾದ್ಯಗಳಲ್ಲಿ ಬುದ್ಧಿಯುಳ್ಳವರಾದ ಲೇವಿಯರೆಲ್ಲರೂ ಅದನ್ನು ನಡೆಸುತ್ತಾ ಇದ್ದರು.


ಆದರೆ ಮೋಶೆಯು ಯುದ್ಧದಿಂದ ಬಂದ ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಆಗಿರುವ ಪಾಳೆಯದ ಮೇಲೆ ಕೋಪಮಾಡಿಕೊಂಡರು.


“ಹೀಗಿರುವುದರಿಂದ ಈಗ ಫರೋಹನು ವಿವೇಕಿಯಾದ ಬುದ್ಧಿಯುಳ್ಳ ಒಬ್ಬನನ್ನು ನೋಡಿ, ಅವನನ್ನು ಈಜಿಪ್ಟ್ ದೇಶದ ಮೇಲೆ ನೇಮಿಸಲಿ.


ಅಧಿಕಾರಿಗಳು ಮುಂಬರುವ ಈ ಒಳ್ಳೆಯ ವರ್ಷಗಳ ಆಹಾರವನ್ನೆಲ್ಲಾ ಕೂಡಿಸಿ, ಫರೋಹನ ಕೈಕೆಳಗೆ ಧಾನ್ಯವನ್ನು ಪಟ್ಟಣಗಳಲ್ಲಿ ಇಟ್ಟುಕೊಂಡು ಕಾಯಲಿ.


ಬೆಳೆ ಬಂದಾಗ ಐದನೆಯ ಪಾಲನ್ನು ಫರೋಹನಿಗೆ ಕೊಡಬೇಕು. ಉಳಿದ ನಾಲ್ಕು ಪಾಲು ಹೊಲದ ಬೀಜಕ್ಕಾಗಿಯೂ, ನಿಮ್ಮ ಆಹಾರಕ್ಕಾಗಿಯೂ, ನಿಮ್ಮ ಮಕ್ಕಳ ಆಹಾರಕ್ಕಾಗಿಯೂ ನಿಮಗೆ ಇರಲಿ,” ಎಂದನು.


ಹೀಗೆ ಯೋಸೇಫನು ಫರೋಹನಿಗೆ ಐದನೆಯ ಪಾಲು ಆಗಬೇಕೆಂಬುದನ್ನು ಈಜಿಪ್ಟಿನ ಭೂಮಿಗೆ ಇಂದಿನವರೆಗೂ ನಿಯಮವಾಗಿ ಸ್ಥಾಪಿಸಿದನು. ಯಾಜಕರ ಭೂಮಿಯು ಮಾತ್ರ ಫರೋಹನದಾಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು