Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 41:51 - ಕನ್ನಡ ಸಮಕಾಲಿಕ ಅನುವಾದ

51 ಜೇಷ್ಠಪುತ್ರನಿಗೆ ಯೋಸೇಫನು ಮನಸ್ಸೆ ಎಂದು ಹೆಸರಿಟ್ಟನು. ಏಕೆಂದರೆ ಅವನು, “ದೇವರು ನನ್ನ ಕಷ್ಟವನ್ನು ಮತ್ತು ನನ್ನ ತಂದೆಯ ಮನೆಯನ್ನು ಮರೆತುಬಿಡುವಂತೆ ಮಾಡಿದರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

51 ಚೊಚ್ಚಲು ಮಗನು ಹುಟ್ಟಿದಾಗ ಯೋಸೇಫನು, “ನಾನು ನನ್ನ ಎಲ್ಲಾ ಕಷ್ಟವನ್ನು, ತಂದೆಯ ಮನೆಯವರನ್ನೂ ಮರೆತುಬಿಡುವಂತೆ ದೇವರು ಮಾಡಿದನು” ಎಂದು ಹೇಳಿ ಅವನಿಗೆ “ಮನಸ್ಸೆ” ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

51 ಜೇಷ್ಠಮಗ ಹುಟ್ಟಿದಾಗ ಜೋಸೆಫನು, “ನಾನು ನನ್ನ ಕಷ್ಟದುಃಖವನ್ನೂ ತಂದೆಯ ಮನೆಯವರನ್ನೂ ಮರೆಯುವಂತೆ ದೇವರು ಮಾಡಿದ್ದಾರಲ್ಲಾ!” ಎಂದುಕೊಂಡು ಆ ಮಗುವಿಗೆ, ‘ಮನಸ್ಸೆ’ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

51 ಚೊಚ್ಚಲುಮಗನು ಹುಟ್ಟಿದಾಗ ಯೋಸೇಫನು - ನಾನು ನನ್ನ ಎಲ್ಲಾ ಕಷ್ಟವನ್ನೂ ತಂದೆಯ ಮನೆಯವರನ್ನೂ ಮರೆತುಬಿಡುವಂತೆ ದೇವರು ಮಾಡಿದ್ದಾನಲ್ಲಾ ಎಂದು ಹೇಳಿ ಅವನಿಗೆ ಮನಸ್ಸೆ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

51 ಮೊದಲನೆಯ ಮಗನು ಹುಟ್ಟಿದಾಗ, “ನನ್ನ ಎಲ್ಲಾ ಕಷ್ಟಗಳನ್ನೂ ನನ್ನ ತಂದೆಯ ಮನೆಯವರನ್ನೂ ಮರೆತುಬಿಡುವಂತೆ ದೇವರು ನನಗೆ ಸಹಾಯ ಮಾಡಿದನು” ಎಂದು ಹೇಳಿ ಯೋಸೇಫನು ಆ ಮಗುವಿಗೆ, “ಮನಸ್ಸೆ” ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 41:51
19 ತಿಳಿವುಗಳ ಹೋಲಿಕೆ  

ಅವರ ಕೋಪವು ಕ್ಷಣಮಾತ್ರವೇ; ಆದರೆ ಅವರ ದಯೆಯು ಜೀವಮಾನವೆಲ್ಲಾ ಇರುತ್ತದೆ; ರಾತ್ರಿಯಲ್ಲಿ ದುಃಖ ಬಂದಿದ್ದರೂ; ಬೆಳಿಗ್ಗೆ ಆನಂದವು ಬರುವುದು.


ಅವರು ಕುಡಿದು ಬಡತನವನ್ನು ಮರೆಯಲಿ. ತಮ್ಮ ಯಾತನೆಯನ್ನು ಜ್ಞಾಪಕಕ್ಕೆ ತಾರದಿರಲಿ.


ನೀವು ನನ್ನ ಗೋಳಾಟವನ್ನು ಕುಣಿದಾಟಕ್ಕೆ ತಿರುಗಿಸಿದ್ದೀರಿ; ನೀವು ನನ್ನ ಗೋಣಿತಟ್ಟನ್ನು ತೆಗೆದುಹಾಕಿ ಹರ್ಷವಸ್ತ್ರವನ್ನು ನನಗೆ ಧರಿಸಿದ್ದೀರಿ.


ಅವನ ವೈಭವವು ಚೊಚ್ಚಲ ಹೋರಿಯಂತೆ ಇರುವುದು, ಅವನ ಕೊಂಬುಗಳು ಕಾಡುಕೋಣಗಳ ಕೊಂಬುಗಳಂತೆ ಇರುವುದು. ಇವುಗಳಿಂದ ಜನಾಂಗಗಳನ್ನೆಲ್ಲಾ ಇರಿದು ಒಟ್ಟಿಗೆ ಭೂಮಿಯ ಅಂಚಿನವರೆಗೆ ಓಡಿಸುವನು. ಎಫ್ರಾಯೀಮ್ ಕುಲದ ಹತ್ತು ಸಾವಿರ ಜನರೂ ಇಂಥವರೇ. ಮನಸ್ಸೆ ಕುಲದ ಸಹಸ್ರ ಜನರೂ ಇಂಥವರೇ ಆಗಿದ್ದಾರೆ.”


ಆದರೆ ಅವುಗಳ ಹಿಂದೆ ಏಳು ವರ್ಷಗಳ ಬರಗಾಲ ಬರುತ್ತವೆ. ಆಗ ಈಜಿಪ್ಟಿನಲ್ಲಿದ್ದ ಸುಭಿಕ್ಷವು ಮರೆಯುವಂತಾಗುವುದು. ಇದಲ್ಲದೆ ಬರಗಾಲವು ದೇಶವನ್ನು ನಾಶಮಾಡುವುದು.


ಆಗ ದೇಶದಲ್ಲಿ ತನ್ನನ್ನು ಆಶೀರ್ವದಿಸುವವನು, ಸತ್ಯ ದೇವರಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವನು; ದೇಶದಲ್ಲಿ ಆಣೆ ಇಟ್ಟುಕೊಳ್ಳುವವನು, ಸತ್ಯ ದೇವರಲ್ಲಿ ಆಣೆ ಇಟ್ಟುಕೊಳ್ಳುವನು. ಏಕೆಂದರೆ ಮುಂಚಿನ ಕಷ್ಟಗಳು ಮರೆತು ಹೋಗಿವೆ, ಮತ್ತು ಅವು ನನ್ನ ಕಣ್ಣಿಗೆ ಮರೆಯಾಗಿವೆ.


ನಾನು ಎಂದೆಂದಿಗೂ ವ್ಯಾಜ್ಯವಾಡುವುದಿಲ್ಲ. ಯಾವಾಗಲೂ ಕೋಪಿಸಿಕೊಳ್ಳೆನು. ಏಕೆಂದರೆ ಆತ್ಮವೂ, ನಾನು ಉಂಟುಮಾಡಿದ ಜೀವವೂ ನನ್ನಿಂದ ಕುಂದಿ ಹೋದಾವು.


ಕೇಳು ಮಗಳೇ, ಇದನ್ನು ಆಲೋಚಿಸಿ, ಕಿವಿಗೊಡು. ನಿಮ್ಮ ಜನರನ್ನೂ, ನಿಮ್ಮ ತಂದೆಯ ಮನೆಯನ್ನೂ ಮರೆತುಬಿಡು.


“ಈಗ ನಾನು ನಿನ್ನ ಬಳಿಗೆ ಈಜಿಪ್ಟಿಗೆ ಬರುವ ಮೊದಲು ಈಜಿಪ್ಟಿನಲ್ಲಿ ನಿನಗೆ ಹುಟ್ಟಿದ ಇಬ್ಬರು ಪುತ್ರರಾದ ಎಫ್ರಾಯೀಮ್ ಮನಸ್ಸೆಯರು ನನ್ನವರಾಗಿರಬೇಕು. ಅವರು ರೂಬೇನ್ ಮತ್ತು ಸಿಮೆಯೋನರಂತೆ ನನ್ನವರಾಗಿರಬೇಕು.


ಇದಲ್ಲದೆ ಬರಗಾಲದ ವರ್ಷಗಳು ಬರುವುದಕ್ಕೆ ಮುಂಚೆ, ಯೋಸೇಫನಿಗೆ ಇಬ್ಬರು ಮಕ್ಕಳು ಹುಟ್ಟಿದರು. ಓನಿನ ಯಾಜಕನಾದ ಪೋಟೀಫೆರನ ಮಗಳಾದ ಆಸನತ್, ಅವಳನ್ನು ಯೋಸೇಫನಿಗೆ ಹೆತ್ತಳು.


ಅವನು ತನ್ನ ಎರಡನೆಯ ಮಗನಿಗೆ ಎಫ್ರಾಯೀಮ್ ಎಂದು ಹೆಸರಿಟ್ಟನು. “ನಾನು ಬಾಧೆಯನ್ನನುಭವಿಸಿದ ದೇಶ ಫಲಭರಿತವಾಗುವಂತೆ ದೇವರು ಮಾಡಿದ್ದಾರೆ,” ಎಂದನು.


ಕೆಲವು ಕಾಲದ ನಂತರ ಯೋಸೇಫನಿಗೆ, “ನಿನ್ನ ತಂದೆ ಅಸ್ವಸ್ಥನಾಗಿದ್ದಾನೆ,” ಎಂಬ ಸುದ್ದಿ ಬಂದಿತು. ಆಗ ಅವನು ತನ್ನ ಇಬ್ಬರು ಪುತ್ರರಾದ ಮನಸ್ಸೆಯನ್ನೂ, ಎಫ್ರಾಯೀಮನನ್ನೂ ಕರೆದುಕೊಂಡು ತಂದೆಯ ಬಳಿಗೆ ಬಂದನು.


ಯೋಸೇಫನ ಮಕ್ಕಳಾದ ಮನಸ್ಸೆಯೂ, ಎಫ್ರಾಯೀಮನೂ ಎರಡು ಗೋತ್ರಗಳಾಗಿದ್ದರು. ಲೇವಿಯರಿಗೆ ದೇಶದಲ್ಲಿ ಪಾಲುಕೊಡಲಿಲ್ಲ. ಆದರೆ ವಾಸಮಾಡುವ ಪಟ್ಟಣಗಳನ್ನೂ, ದನಕುರಿಗಳಿಗೋಸ್ಕರವಾಗಿ ಹುಲ್ಲುಗಾವಲುಗಳನ್ನೂ, ಪ್ರಾಂತಗಳನ್ನೂ ಮಾಡಿಕೊಟ್ಟರು.


ಇದಲ್ಲದೆ ಮನಸ್ಸೆಯ ಗೋತ್ರಕ್ಕೂ ಭಾಗ ದೊರೆಯಿತು. ಏಕೆಂದರೆ ಅವನು ಯೋಸೇಫನಿಗೆ ಚೊಚ್ಚಲ ಮಗನಾಗಿದ್ದನು. ಮನಸ್ಸೆಯ ಹಿರಿಯ ಮಗ ಗಿಲ್ಯಾದನ ತಂದೆಯಾದ ಮಾಕೀರನು ಶೂರನಾದುದರಿಂದ ಗಿಲ್ಯಾದ್, ಬಾಷಾನ್ ಎಂಬ ಪ್ರಾಂತ್ಯಗಳು ಅವನ ಪಾಲಿಗೆ ಬಂದವು.


ಹನ್ನಳು ಗರ್ಭವತಿಯಾಗಿ, ಕಾಲವು ಪೂರ್ತಿಯಾದ ತರುವಾಯ ಮಗನನ್ನು ಹೆತ್ತು, “ನಾನು ಇವನಿಗಾಗಿ ಯೆಹೋವ ದೇವರನ್ನು ಬೇಡಿ ಪಡೆದುಕೊಂಡೆನು,” ಎಂದು ಹೇಳಿ ಅವನಿಗೆ, ಸಮುಯೇಲ ಎಂದು ಹೆಸರಿಟ್ಟಳು.


ಕುಟುಂಬಗಳ ಪ್ರಕಾರ ಯೋಸೇಫನ ಪುತ್ರರು: ಮನಸ್ಸೆ, ಎಫ್ರಾಯೀಮ್.


ಖಂಡಿತವಾಗಿ ನಿನ್ನ ಕಷ್ಟವನ್ನು ಮರೆತುಬಿಡುವಿ; ಹರಿದುಹೋದ ನೀರಿನ ಹಾಗೆ ಅದನ್ನು ಜ್ಞಾಪಕಮಾಡಿಕೊಳ್ಳುವಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು