Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 42:13 - ಕನ್ನಡ ಸಮಕಾಲಿಕ ಅನುವಾದ

13 ಅದಕ್ಕವರು, “ನಿನ್ನ ದಾಸರಾದ ನಾವು ಹನ್ನೆರಡು ಸಹೋದರರು. ನಾವು ಕಾನಾನ್ ದೇಶದಲ್ಲಿರುವ ಒಬ್ಬ ಮನುಷ್ಯನ ಮಕ್ಕಳು. ಈಗ ಚಿಕ್ಕವನು ನನ್ನ ತಂದೆಯೊಂದಿಗೆ ಇದ್ದಾನೆ, ಮತ್ತೊಬ್ಬನು ಇಲ್ಲ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅದಕ್ಕೆ ಅವರು, “ತಮ್ಮ ಸೇವಕರಾದ ನಾವು ಹನ್ನೆರಡು ಮಂದಿ ಅಣ್ಣತಮ್ಮಂದಿರು, ನಾವು ಕಾನಾನ್ ದೇಶದವರು, ಒಬ್ಬ ತಂದೆಯ ಮಕ್ಕಳು. ನಮ್ಮಲ್ಲಿ ಚಿಕ್ಕವನು ತಂದೆಯ ಬಳಿಯಲ್ಲಿದ್ದಾನೆ. ಮತ್ತೊಬ್ಬನು ಇಲ್ಲ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅದಕ್ಕೆ ಅವರು, “ತಮ್ಮ ಸೇವಕರಾದ ನಾವು ಹನ್ನೆರಡು ಮಂದಿ ಅಣ್ಣತಮ್ಮಂದಿರು; ಕಾನಾನ್ ನಾಡಿನವರು, ಒಬ್ಬ ತಂದೆಯ ಮಕ್ಕಳು; ನಮ್ಮಲ್ಲಿ ಚಿಕ್ಕವನು ತಂದೆಯ ಬಳಿಯಲ್ಲೇ ಇದ್ದಾನೆ; ಒಬ್ಬನು ಇಲ್ಲವಾದನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅವರು - ತಮ್ಮ ಸೇವಕರಾದ ನಾವು ಹನ್ನೆರಡು ಮಂದಿ ಅಣ್ಣತಮ್ಮಂದಿರು; ನಾವು ಕಾನಾನ್ ದೇಶದವರು, ಒಬ್ಬ ತಂದೆಯ ಮಕ್ಕಳು; ನಮ್ಮಲ್ಲಿ ಚಿಕ್ಕವನು ತಂದೆಯ ಬಳಿಯಲ್ಲಿದ್ದಾನೆ; ಒಬ್ಬನಿಲ್ಲ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅದಕ್ಕೆ ಅವರು, “ಇಲ್ಲ, ನಾವೆಲ್ಲಾ ಸಹೋದರರು. ನಮ್ಮ ಕುಟುಂಬದಲ್ಲಿ ಹನ್ನೆರಡು ಮಂದಿ ಅಣ್ಣತಮ್ಮಂದಿರು. ನಮ್ಮೆಲ್ಲರಿಗೂ ಒಬ್ಬನೇ ತಂದೆ. ನಮ್ಮ ಕಿರಿಯ ತಮ್ಮನು ನಮ್ಮ ತಂದೆಯೊಂದಿಗೆ ಮನೆಯಲ್ಲಿದ್ದಾನೆ; ಇನ್ನೊಬ್ಬ ತಮ್ಮನು ಹೊರಟುಹೋದನು. ತಮ್ಮ ಸೇವಕರಾದ ನಾವು ಕಾನಾನ್ ದೇಶದಿಂದ ಬಂದವರು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 42:13
26 ತಿಳಿವುಗಳ ಹೋಲಿಕೆ  

ಅವನು ತನ್ನ ಸಹೋದರರ ಬಳಿಗೆ ತಿರುಗಿ ಹೋಗಿ, “ಬಾಲಕನು ಅಲ್ಲಿ ಇಲ್ಲವಲ್ಲಾ, ನಾನು ಎಲ್ಲಿಗೆ ಹೋಗಲಿ?” ಎಂದನು.


ನಾವು ನಮ್ಮ ಒಡೆಯನಿಗೆ, ‘ನಮಗೆ ಮುದುಕನಾದ ತಂದೆಯೂ ಅವನಿಗೆ ಮುಪ್ಪಿನಲ್ಲಿ ಹುಟ್ಟಿದ ಚಿಕ್ಕ ಮಗನೂ ಇದ್ದಾನೆ, ಅವನ ಸಹೋದರನು ಸತ್ತುಹೋಗಿದ್ದಾನೆ. ಅವನ ತಂದೆಯು ಅವನನ್ನು ಪ್ರೀತಿಸುತ್ತಾನೆ,’ ಎಂದು ಹೇಳಿದೆವು.


ನಾವು ಹನ್ನೆರಡು ಮಂದಿ ಸಹೋದರರಾಗಿದ್ದು, ಒಂದೇ ತಂದೆಯ ಪುತ್ರರಾಗಿದ್ದೇವೆ, ಒಬ್ಬನು ಇಲ್ಲ, ಚಿಕ್ಕವನು ಇಂದು ನಮ್ಮ ತಂದೆಯ ಸಂಗಡ ಕಾನಾನ್ ದೇಶದಲ್ಲಿ ಇದ್ದಾನೆ,” ಎಂದೆವು.


ಅವರು ಅವನಿಗೆ, “ಆ ಮನುಷ್ಯನು ನಮ್ಮ ವಿಷಯದಲ್ಲಿ ಮತ್ತು ನಮ್ಮ ಮನೆಯವರ ವಿಷಯದಲ್ಲಿ ನೇರವಾಗಿ ಕೇಳಿ ಅವನು, ‘ನಿಮ್ಮ ತಂದೆ ಇನ್ನೂ ಬದುಕಿದ್ದಾನೋ? ನಿಮಗೆ ಇನ್ನೊಬ್ಬ ಸಹೋದರನು ಇದ್ದಾನೋ?’ ಎಂದು ಕೇಳಿದನು. ಆಗ ಈ ಮಾತುಗಳಿಗೆ ತಕ್ಕ ಹಾಗೆ ನಾವು ಅವನಿಗೆ ತಿಳಿಸಿದೆವು. ‘ನಿಮ್ಮ ತಮ್ಮನನ್ನು ಕರೆದುಕೊಂಡು ಬನ್ನಿರಿ,’ ಎಂದು ಅವನು ನಮಗೆ ಹೇಳುತ್ತಾನೆಂದು ನಮಗೆ ಹೇಗೆ ತಿಳಿಯಲು ಸಾಧ್ಯ?” ಎಂದರು.


“ರಾಮದಲ್ಲಿ ರೋದನೆಯು ಕೇಳಿಸಿತು, ಗೋಳಾಟವೂ ಮಹಾ ಪ್ರಲಾಪವೂ ಕೇಳಿಬಂತು. ರಾಹೇಲಳು ತನ್ನ ಮಕ್ಕಳಿಗಾಗಿ ಗೋಳಾಡುತ್ತಾ, ಆದರಣೆ ಹೊಂದದೆ ಹೋಗಿದ್ದಾಳೆ. ಏಕೆಂದರೆ ಅವಳ ಮಕ್ಕಳು ಇನ್ನಿಲ್ಲ.”


ಜ್ಞಾನಿಗಳು ತನಗೆ ಮೋಸಮಾಡಿದರೆಂದು ತಿಳಿದ ಹೆರೋದನು ಬಹಳ ಕೋಪಗೊಂಡನು, ಜ್ಞಾನಿಗಳಿಂದ ಸೂಕ್ಷ್ಮವಾಗಿ ವಿಚಾರಿಸಿಕೊಂಡ ಪ್ರಕಾರವೇ, ಬೇತ್ಲೆಹೇಮ್ ಮತ್ತು ಅದರ ಸುತ್ತಮುತ್ತಲ ಪ್ರದೇಶದಲ್ಲಿದ್ದ ಎರಡು ವರ್ಷದೊಳಗಿನ ಎಲ್ಲಾ ಗಂಡು ಮಕ್ಕಳನ್ನು ಕೊಂದುಹಾಕಿಸಿದನು.


ನಮ್ಮ ತಂದೆಗಳು ಪಾಪಮಾಡಿ ಇಲ್ಲವಾದರು. ನಾವು ಅವರ ಅಕ್ರಮಗಳನ್ನು ಹೊರುತ್ತೇವೆ.


ಯೆಹೋವ ದೇವರು ಮತ್ತೆ ಹೀಗೆ ಹೇಳುತ್ತಾರೆ: “ರಾಮದಲ್ಲಿ ರೋದನೆಯೂ, ಗೋಳಾಟವೂ ಅಘೋರವಾದ ಅಳುವಿಕೆಯೂ ಕೇಳಿಸುತ್ತಿದೆ. ರಾಹೇಲಳು ತನ್ನ ಮಕ್ಕಳಿಗಾಗಿ ಗೋಳಾಡುತ್ತಾ, ಆದರಣೆ ಹೊಂದದೆ ಹೋಗಿದ್ದಾಳೆ. ಏಕೆಂದರೆ ಅವಳ ಮಕ್ಕಳು ಇನ್ನಿಲ್ಲ.”


“ಯೋಸೇಫನು ಇನ್ನೂ ಜೀವದಿಂದ ಇದ್ದಾನೆ! ಅವನೇ ಈಜಿಪ್ಟ್ ದೇಶವನ್ನೆಲ್ಲಾ ಆಳುತ್ತಿದ್ದಾನೆ,” ಎಂದು ಅವನಿಗೆ ತಿಳಿಸಿದಾಗ, ಅವನು ಆಶ್ಚರ್ಯಪಟ್ಟನು, ಅವರನ್ನು ನಂಬಲಿಲ್ಲ.


ಒಬ್ಬನು ನನ್ನ ಬಳಿಯಿಂದ ಹೋಗಿ ಬಿಟ್ಟನು. “ಅವನು ನಿಶ್ಚಯವಾಗಿ ಕಾಡುಮೃಗದಿಂದ ಸೀಳಿ ಸತ್ತಿರಬೇಕು,” ಎಂದು ಹೇಳಿದಿರಿ. ಅವನನ್ನು ನಾನು ಈ ದಿನದವರೆಗೂ ನೋಡಲಿಲ್ಲ.


ಆದರೆ ಯಾಕೋಬನು, “ನನ್ನ ಮಗನು ನಿಮ್ಮ ಸಂಗಡ ಹೋಗಬಾರದು, ಅವನ ಅಣ್ಣ ಸತ್ತು ಹೋಗಿ, ಇವನೊಬ್ಬನೇ ಉಳಿದಿದ್ದಾನೆ. ನೀವು ಹೋಗುವ ಮಾರ್ಗದಲ್ಲಿ ಇವನಿಗೆ ಕೇಡು ಬಂದರೆ, ನನ್ನ ಮುದಿ ತಲೆಯನ್ನು ದುಃಖದಿಂದ ಸಮಾಧಿಗೆ ಇಳಿಸುವಿರಿ,” ಎಂದನು.


ಆಗ ಅವರ ತಂದೆ ಯಾಕೋಬನು ಅವರಿಗೆ, “ನನ್ನನ್ನು ಮಕ್ಕಳಿಲ್ಲದವನನ್ನಾಗಿ ಮಾಡಿದ್ದೀರಿ. ಯೋಸೇಫನೂ ಇಲ್ಲ, ಸಿಮೆಯೋನನೂ ಇಲ್ಲ, ಬೆನ್ಯಾಮೀನನನ್ನೂ ಕರೆದುಕೊಂಡು ಹೋಗುವುದರಲ್ಲಿದ್ದೀರಿ. ಇವುಗಳೆಲ್ಲಾ ನನಗೆ ವಿರೋಧವಾಗಿವೆ,” ಎಂದನು.


ನಾವೆಲ್ಲರೂ ಒಬ್ಬ ಮನುಷ್ಯನ ಪುತ್ರರಾಗಿದ್ದು ಸತ್ಯವಂತರಾಗಿದ್ದೇವೆ. ಆದ್ದರಿಂದ ನಿನ್ನ ದಾಸರು ಗೂಢಚಾರರಲ್ಲ,” ಎಂದರು.


ಆದರೆ ಅವನು ಅವರಿಗೆ, “ಇಲ್ಲ, ದೇಶದ ಒಳಗುಟ್ಟನ್ನು ನೀವು ತಿಳಿದುಕೊಳ್ಳುವುದಕ್ಕೋಸ್ಕರವೇ ಬಂದಿದ್ದೀರಿ,” ಎಂದನು.


ಆಗ ಯೋಸೇಫನು ಅವರಿಗೆ, “ನೀವು ಗೂಢಚಾರರೆಂದು ನಾನು ನಿಮಗೆ ಹೇಳಿದ ಮಾತು ನಿಜವೇ!


ಆಗ ಅವನು ತನ್ನ ದೃಷ್ಟಿಯಿಟ್ಟು, ತನ್ನ ತಾಯಿಯ ಮಗನೂ ತನ್ನ ತಮ್ಮನೂ ಆದ ಬೆನ್ಯಾಮೀನನನ್ನು ನೋಡಿ, “ನೀವು ನನಗೆ ಹೇಳಿದ ನಿಮ್ಮ ಚಿಕ್ಕ ತಮ್ಮನು ಇವನೋ?” ಎಂದು ಹೇಳಿ, “ನನ್ನ ಮಗನೇ, ದೇವರು ನಿನಗೆ ಕೃಪಾಳುವಾಗಿರಲಿ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು