Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 42:2 - ಕನ್ನಡ ಸಮಕಾಲಿಕ ಅನುವಾದ

2 ಅವನು ಮುಂದುವರಿಸಿ, “ಈಜಿಪ್ಟಿನಲ್ಲಿ ಧಾನ್ಯ ಉಂಟೆಂದು ನಾನು ಕೇಳಿದ್ದೇನೆ. ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಇಳಿದು ಹೋಗಿ, ನಮಗಾಗಿ ಅಲ್ಲಿಂದ ಧಾನ್ಯವನ್ನು ಕೊಂಡುಕೊಳ್ಳಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಐಗುಪ್ತ ದೇಶದಲ್ಲಿ ದವಸಧಾನ್ಯ ಉಂಟೆಂಬುದನ್ನು ಕೇಳಿದ್ದೇನೆ. ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಹೋಗಿ ಬೇಕಾದ ದವಸವನ್ನು ಖರೀದಿಸಿಕೊಂಡು ಬನ್ನಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಈಜಿಪ್ಟಿನಲ್ಲಿ ದವಸಧಾನ್ಯ ಉಂಟೆಂದು ನಾನು ಕೇಳಿದ್ದೇನೆ, ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಹೋಗಿ, ಬೇಕಾದ ದವಸವನ್ನು ಕೊಂಡುಕೊಂಡು ಬನ್ನಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಐಗುಪ್ತ ದೇಶದಲ್ಲಿ ದವಸಧಾನ್ಯ ಉಂಟೆಂಬದನ್ನು ಕೇಳಿದ್ದೇನೆ; ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಹೋಗಿ ಬೇಕಾದ ದವಸವನ್ನು ಕೊಂಡುಕೊಂಡು ಬನ್ನಿರಿ ಎಂದು ಹೇಳಿದ್ದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಈಜಿಪ್ಟಿನಲ್ಲಿ ದವಸಧಾನ್ಯಗಳಿರುವುದಾಗಿ ನಾನು ಕೇಳಿದ್ದೇನೆ. ಆದ್ದರಿಂದ ನಾವು ಅಲ್ಲಿಗೆ ಹೋಗಿ ನಮ್ಮ ಆಹಾರವನ್ನು ಕೊಂಡುಕೊಳ್ಳೋಣ. ಆಗ ನಾವು ಸಾಯದೆ ಬದುಕಿಕೊಳ್ಳುವೆವು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 42:2
11 ತಿಳಿವುಗಳ ಹೋಲಿಕೆ  

ಯೆಹೂದನು ತನ್ನ ತಂದೆ ಇಸ್ರಾಯೇಲನಿಗೆ, “ಆ ಹುಡುಗನನ್ನು ನನ್ನ ಸಂಗಡ ಕಳುಹಿಸು, ಆಗ ನಾವು ಹೋಗುವೆವು. ನಾವು, ನೀನೂ ಮತ್ತು ನಮ್ಮ ಮಕ್ಕಳು ಸಾಯದೆ ಬದುಕುವೆವು.


ಅದಕ್ಕೆ ಯೇಸು, “ಪವಿತ್ರ ವೇದದಲ್ಲಿ ಬರೆದಿರುವ ಪ್ರಕಾರ, ‘ಮನುಷ್ಯನು ಜೀವಿಸುವುದು ರೊಟ್ಟಿಯಿಂದ ಮಾತ್ರವಲ್ಲ, ದೇವರ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೂ ಜೀವಿಸುತ್ತಾನೆ,’” ಎಂದರು.


ಆ ದಿವಸಗಳಲ್ಲಿ ಹಿಜ್ಕೀಯನು ರೋಗದಿಂದ ಮರಣಾವಸ್ಥೆಯಲ್ಲಿದ್ದನು. ಆಗ ಆಮೋಚನ ಮಗನಾದ ಪ್ರವಾದಿ ಯೆಶಾಯನು ಅವನ ಬಳಿಗೆ ಬಂದು ಅವನಿಗೆ, “ನೀನು ನಿನ್ನ ಮನೆಯನ್ನು ವ್ಯವಸ್ಥೆ ಮಾಡಿಕೋ, ಏಕೆಂದರೆ ನೀನು ಬದುಕದೆ ಸಾಯುವೆ, ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದು ಹೇಳಿದನು.


ನಾನು ಸಾಯದೆ ಬದುಕಿರುವೆನು, ಯೆಹೋವ ದೇವರು ಮಾಡಿದ್ದನ್ನು ಸಾರುವೆನು.


ನೀವು ಶೀಘ್ರವಾಗಿ ನನ್ನ ತಂದೆಯ ಬಳಿಗೆ ಹೊರಟುಹೋಗಿ, ‘ನಿನ್ನ ಮಗ ಯೋಸೇಫನನ್ನು ದೇವರು ಈಜಿಪ್ಟಿಗೆಲ್ಲಾ ಪ್ರಭುವನ್ನಾಗಿ ಮಾಡಿದ್ದಾರೆ, ತಡಮಾಡದೆ ನನ್ನ ಬಳಿಗೆ ಬೇಗ ಬಾ.


ನೀನು ನಮ್ಮ ತಮ್ಮನನ್ನು ನಮ್ಮ ಸಂಗಡ ಕಳುಹಿಸಿದರೆ, ನಾವು ಹೋಗಿ ನಿನಗಾಗಿ ಆಹಾರವನ್ನು ಕೊಂಡುಕೊಂಡು ಬರುತ್ತೇವೆ.


ಅವರು ಈಜಿಪ್ಟಿನಿಂದ ತಂದಿದ್ದ ಧಾನ್ಯವು ತೀರಿದ ಮೇಲೆ ಅವರ ತಂದೆ ಅವರಿಗೆ, “ತಿರುಗಿ ಹೋಗಿ ನಮಗಾಗಿ ಸ್ವಲ್ಪ ಆಹಾರ ಕೊಂಡುಕೊಳ್ಳಿರಿ,” ಎಂದನು.


ಈಜಿಪ್ಟಿನಲ್ಲಿ ದವಸಧಾನ್ಯ ದೊರೆಯುವುದೆಂದು ಯಾಕೋಬನಿಗೆ ತಿಳಿದುಬಂದಾಗ, ಅವನು ನಮ್ಮ ಪಿತೃಗಳನ್ನು ಮೊದಲನೆಯ ಸಾರಿ ಅಲ್ಲಿಗೆ ಕಳುಹಿಸಿದನು.


ಆಗ ಯೋಸೇಫನ ಹತ್ತು ಮಂದಿ ಸಹೋದರರು ಈಜಿಪ್ಟಿನಲ್ಲಿ ಧಾನ್ಯವನ್ನು ಕೊಂಡುಕೊಳ್ಳುವುದಕ್ಕೆ ಹೋದರು.


ಯೆಹೋವ ದೇವರ ಕಣ್ಣು ತಮಗೆ ಭಯಪಡುವವರ ಮೇಲಿರುತ್ತದೆ, ಅವರ ಒಡಂಬಡಿಕೆಯ ಪ್ರೀತಿಯನ್ನು ಎದುರು ನೋಡುವವರ ಮೇಲೆಯೂ ಇರುತ್ತೆ.


ಇದರಿಂದ ದೇವರು ಅವರ ಪ್ರಾಣವನ್ನು ಮರಣದಿಂದ ಬಿಡಿಸಿ, ಬರಗಾಲದಲ್ಲಿ ಅವರ ಜೀವವನ್ನು ಕಾಪಾಡುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು