Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 42:22 - ಕನ್ನಡ ಸಮಕಾಲಿಕ ಅನುವಾದ

22 ಆಗ ರೂಬೇನನು ಅವರಿಗೆ ಉತ್ತರವಾಗಿ, “ಹುಡುಗನಿಗೆ ಏನೂ ಕೇಡು ಮಾಡಬೇಡಿರಿ, ಎಂದು ನಾನು ನಿಮಗೆ ಹೇಳಿದರೂ ನೀವು ಕೇಳಲಿಲ್ಲ. ಆದ್ದರಿಂದ ಅವನಿಗಾದ ಪ್ರಾಣಹಾನಿಯ ವಿಷಯದಲ್ಲಿ ಈಗ ನಾವು ಲೆಕ್ಕ ಒಪ್ಪಿಸುತ್ತಿದ್ದೇವೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅದಕ್ಕೆ ರೂಬೇನನು, “ಆ ಹುಡುಗನಿಗೆ ಏನೂ ಕೇಡು ಮಾಡಬೇಡಿರಿ ಎಂದು ನಾನು ಹೇಳಿದೆನಲ್ಲವೆ. ನೀವು ಕೇಳಲಿಲ್ಲ. ಆದುದರಿಂದ ಅವನಿಗಾದ ಪ್ರಾಣ ಹಾನಿಯ ವಿಷಯದಲ್ಲಿ ನಾವು ಈಗ ಉತ್ತರ ಹೇಳಬೇಕಾಗಿ ಬಂದಿದೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅಂತೆಯೇ ರೂಬೇನನು, “ಆ ಹುಡುಗನಿಗೆ ಯಾವ ಕೇಡೂ ಮಾಡಬೇಡಿ’ ಎಂದು ನಾನು ಹೇಳಲಿಲ್ಲವೆ? ನೀವು ಕೇಳದೆಹೋದಿರಿ. ಅವನ ರಕ್ತ ಈಗ ನಮ್ಮಿಂದ ಪ್ರಾಯಶ್ಚಿತ್ತ ಕೇಳುತ್ತಿದೆ,” ಎಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅದಕ್ಕೆ ರೂಬೇನನು - ಆ ಹುಡುಗನಿಗೆ ಏನೂ ಕೇಡು ಮಾಡಬೇಡಿರಿ ಎಂದು ನಾನು ಹೇಳಿದೆನಲ್ಲವೇ; ನೀವು ಕೇಳಲಿಲ್ಲ. ಆದದರಿಂದ ಅವನಿಗಾದ ಪ್ರಾಣಹಾನಿಯ ವಿಷಯದಲ್ಲಿ ನಾವು ಉತ್ತರ ಹೇಳಬೇಕಾಗಿ ಬಂತು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಅದಕ್ಕೆ ರೂಬೇನನು ಅವರಿಗೆ, “ಆ ಹುಡುಗನಿಗೆ ಕೇಡು ಮಾಡಬೇಡಿ ಎಂದು ನಾನು ನಿಮಗೆ ಹೇಳಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ. ಆದ್ದರಿಂದ ಈಗ ನಾವು ಅವನ ಮರಣಕ್ಕೆ ತಕ್ಕ ಶಿಕ್ಷೆ ಹೊಂದುತ್ತಿದ್ದೇವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 42:22
19 ತಿಳಿವುಗಳ ಹೋಲಿಕೆ  

ಅವರು ಪ್ರಾಣಹತ್ಯೆ ಮಾಡುವವರನ್ನು ಮುಯ್ಯಿತೀರಿಸಲು ಜ್ಞಾಪಕಮಾಡಿಕೊಳ್ಳುವರು; ಬಾಧೆಗೆ ಒಳಗಾಗಿರುವ ದೀನರ ಕೂಗನ್ನು ಅವರು ಅಲಕ್ಷ್ಯಮಾಡುವುದಿಲ್ಲ.


ಹಾಗೆಯೇ ಅರಸನಾದ ಯೋವಾಷನು, ಇವನ ತಂದೆಯಾದ ಯೆಹೋಯಾದಾವನು ತನಗೆ ತೋರಿಸಿದ ದಯೆಯನ್ನು ಜ್ಞಾಪಕಮಾಡದೆ ಅವನ ಮಗನನ್ನು ಕೊಂದುಹಾಕಿದನು. ಜೆಕರ್ಯನು ಸಾಯುವಾಗ, “ಯೆಹೋವ ದೇವರು ನೋಡಿ ವಿಚಾರಿಸಲಿ,” ಎಂದು ಹೇಳಿದನು.


ಆಗ ಯೆಹೋವ ದೇವರು ಅವನ ತಲೆಯ ಮೇಲೆ ಅವನ ರಕ್ತಾಪರಾಧವನ್ನು ಬರಮಾಡುವರು. ಏಕೆಂದರೆ ಅವನು ನನ್ನ ತಂದೆ ದಾವೀದನಿಗೆ ತಿಳಿಯದೆ ತನಗಿಂತ ಉತ್ತಮರೂ ನೀತಿವಂತರೂ ಆದ ಇಬ್ಬರು ವ್ಯಕ್ತಿಗಳನ್ನು ಖಡ್ಗದಿಂದ ಕೊಂದನು. ಅವರು ಯಾರೆಂದರೆ, ಇಸ್ರಾಯೇಲಿನ ಸೈನ್ಯಕ್ಕೆ ಅಧಿಪತಿಯೂ ನೇರನ ಮಗನೂ ಆದ ಅಬ್ನೇರನು, ಯೆಹೂದ ಸೈನ್ಯಕ್ಕೆ ಅಧಿಪತಿಯೂ ಯೆತೆರನ ಮಗನೂ ಆದ ಅಮಾಸನು.


ಮನುಷ್ಯರು ಬಲವಾದ ಕಾವಿನಿಂದ ಕಂದಿ ಹೋದಾಗ್ಯೂ, ಈ ಉಪದ್ರವಗಳ ಮೇಲೆ ಅಧಿಕಾರ ಹೊಂದಿರುವ ದೇವರ ನಾಮವನ್ನು ದೂಷಿಸಿದರು. ಆದರೆ ಅವರು ದೇವರಿಗೆ ಮಹಿಮೆಯನ್ನು ಸಲ್ಲಿಸುವ ಹಾಗೆ ಪಶ್ಚಾತ್ತಾಪ ಪಡಲಿಲ್ಲ.


“ಸೆರೆಹಿಡಿಯುವವನು ತಾನೇ ಸೆರೆಯಾಗಿ ಹೋಗುವನು. ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಕೊಲೆಯಾಗುವನು.” ಇದರಲ್ಲಿ ದೇವಜನರ ಸೈರಣೆಯೂ ನಂಬಿಕೆಯೂ ಇವೆ.


ಅವರು ತಮ್ಮ ನಡತೆಯಿಂದಲೇ ನಿಯಮವು ತಮ್ಮ ಹೃದಯದಲ್ಲಿ ಬರೆದಿದೆ ಎಂಬುದನ್ನು ತೋರಿಸುತ್ತಾರೆ. ಇದಕ್ಕೆ ಅವರ ಮನಸ್ಸು ಸಾಕ್ಷಿಕೊಡುತ್ತದೆ. ಅವರ ಯೋಚನೆಗಳು ಒಂದಕ್ಕೊಂದು ಇದು ತಪ್ಪು ಅಥವಾ ತಪ್ಪಲ್ಲ ಎಂಬುದನ್ನು ಸೂಚಿಸುತ್ತವೆ.


ಸರ್ಪವು ಪೌಲನ ಕೈಗೆ ಸುತ್ತಿಕೊಂಡಿರುವುದನ್ನು ದ್ವೀಪ ನಿವಾಸಿಗಳು ಕಂಡಾಗ, “ನಿಶ್ವಯವಾಗಿ ಈ ಮನುಷ್ಯನು ಕೊಲೆಗಾರನಾಗಿರಬೇಕು. ಸಮುದ್ರದಿಂದ ತಪ್ಪಿಸಿಕೊಂಡು ಬಂದರೂ ನ್ಯಾಯವು ಅವನನ್ನು ಜೀವಿಸಲಿಕ್ಕೆ ಬಿಡಲಿಲ್ಲ,” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.


ನಮಗಾದರೋ ನಮ್ಮ ಕೃತ್ಯಕ್ಕೆ ತಕ್ಕ ಶಿಕ್ಷೆ ನ್ಯಾಯವಾಗಿ ಸಿಕ್ಕಿದೆ. ಈತನಾದರೋ ತಪ್ಪಾದದ್ದೇನೂ ಮಾಡಲಿಲ್ಲ,” ಎಂದನು.


ನಾನು ದುಷ್ಟನಿಗೆ, ‘ನೀನು ನಿಶ್ಚಯವಾಗಿ ಸಾಯುವೆ,’ ಎಂದು ಹೇಳುವಾಗ, ನೀನು ಅವನನ್ನು ಎಚ್ಚರಿಸದೆ, ಅವನು ತನ್ನ ದುರ್ಮಾರ್ಗಗಳನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳುವಂತೆ ನೀನು ಅವನಿಗೆ ಬುದ್ಧಿಹೇಳದೆ ಹೋದರೆ, ಆ ದುಷ್ಟ ಮನುಷ್ಯನು ತನ್ನ ಪಾಪಗಳಿಂದಲೇ ಸಾಯಬೇಕಾಗುವದು; ಆದರೆ ಅವನ ಸಾವಿಗೆ ನಿನ್ನನ್ನೇ ಹೊಣೆಮಾಡುವೆನು.


ಅದಕ್ಕೆ ಯೆಹೋವ ದೇವರು, “ನೀನು ಏನು ಮಾಡಿದೆ? ನಿನ್ನ ತಮ್ಮನ ರಕ್ತವು ಭೂಮಿಯಿಂದ ನನ್ನನ್ನು ಕೂಗುತ್ತಿದೆ.


ಆದರೆ ಯೋಸೇಫನು ಅವರು ಆಡಿದ್ದನ್ನು ತಿಳಿದುಕೊಳ್ಳುತ್ತಿದ್ದನು ಎಂಬುದು ಅವರಿಗೆ ಗೊತ್ತಾಗಲಿಲ್ಲ. ಏಕೆಂದರೆ ಯೋಸೇಫನು ಅನುವಾದಕನ ಮುಖಾಂತರ ಅವರ ಸಂಗಡ ಮಾತಾಡುತ್ತಿದ್ದನು.


ಯೋಸೇಫನು ತನ್ನ ಸಹೋದರರಿಗೆ, “ನಾನು ಯೋಸೇಫನು! ನನ್ನ ತಂದೆಯು ಬದುಕಿದ್ದಾನೋ?” ಎಂದನು. ಅದಕ್ಕೆ ಅವನ ಸಹೋದರರು ಅವನ ಮುಂದೆ ಕಳವಳಗೊಂಡವರಾಗಿ, ಅವನಿಗೆ ಉತ್ತರ ಕೊಡಲಾರದೆ ಹೋದರು.


ತಮ್ಮ ತಂದೆ ಸತ್ತು ಹೋದ ಮೇಲೆ ಯೋಸೇಫನ ಸಹೋದರರು, “ಒಂದು ವೇಳೆ ಯೋಸೇಫನು ನಮ್ಮನ್ನು ಹಗೆಮಾಡಿ, ನಾವು ಅವನಿಗೆ ಮಾಡಿದ್ದ ಎಲ್ಲಾ ಕೇಡಿಗಾಗಿ ನಿಶ್ಚಯವಾಗಿ ಪ್ರತೀಕಾರಮಾಡಬಹುದು,” ಎಂದುಕೊಂಡು,


ಹಾಗೆಯೇ ಯೋನಾತಾನನು ತನ್ನ ತಂದೆ ಸೌಲನ ಸಂಗಡ ದಾವೀದನನ್ನು ಕುರಿತು ಒಳ್ಳೆಯದನ್ನು ಮಾತನಾಡಿ ಅವನಿಗೆ, “ಅರಸನು ತನ್ನ ಸೇವಕನಾದ ದಾವೀದನಿಗೆ ದ್ರೋಹಮಾಡದೆ ಇರಲಿ. ಏಕೆಂದರೆ ಅವನು ನಿನಗೆ ದ್ರೋಹಮಾಡಲಿಲ್ಲ. ಅವನು ಮಾಡಿದ್ದೆಲ್ಲವೂ ನಿನ್ನ ಹಿತಕ್ಕಾಗಿಯೇ.


ಆದ್ದರಿಂದ ಅವರ ರಕ್ತಾಪರಾಧವು ಯೋವಾಬನ ತಲೆಯ ಮೇಲೆಯೂ, ಅವನ ಸಂತತಿಯವರ ತಲೆಯ ಮೇಲೆಯೂ ಯುಗಯುಗಕ್ಕೂ ಇರುವುದು. ಆದರೆ ದಾವೀದನ ಮೇಲೆಯೂ, ಅವನ ಸಂತಾನದವರ ಮೇಲೆಯೂ, ಅವನ ಮನೆಯ ಮೇಲೆಯೂ, ಅವನ ಸಿಂಹಾಸನದ ಮೇಲೆಯೂ ಯೆಹೋವ ದೇವರಿಂದ ಸಮಾಧಾನವು ಯುಗಯುಗಾಂತರಕ್ಕೂ ಇರುವುದು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು