Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 42:9 - ಕನ್ನಡ ಸಮಕಾಲಿಕ ಅನುವಾದ

9 ಆಗ ಯೋಸೇಫನು ತನ್ನ ಸಹೋದರರನ್ನು ನೋಡಿ ಅವರನ್ನು ಗುರುತಿಸಿದರೂ ಆಗ ಯೋಸೇಫನು ತಾನು ಅವರ ವಿಷಯದಲ್ಲಿ ಕಂಡ ಕನಸುಗಳನ್ನು ಜ್ಞಾಪಕಮಾಡಿಕೊಂಡು ಅವರಿಗೆ, “ನೀವು ಗೂಢಚಾರರು, ದೇಶದ ಒಳಗುಟ್ಟನ್ನು ನೋಡುವುದಕ್ಕೆ ಬಂದಿದ್ದೀರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೋಸೇಫನು ಅವರ ವಿಷಯದಲ್ಲಿ ತನಗೆ ಬಿದ್ದ ಕನಸುಗಳನ್ನು ನೆನಪಿಗೆ ತಂದುಕೊಂಡನು. ಅವರಿಗೆ ಅವನು, “ನೀವು ಗೂಢಚಾರರು. ನಮ್ಮ ದೇಶದ ಭದ್ರತೆಯಿಲ್ಲದ ಸ್ಥಳಗಳನ್ನು ನೋಡುವುದಕ್ಕಾಗಿ ಬಂದವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅವರ ವಿಷಯವಾಗಿ ತಾನು ಕಂಡಿದ್ದ ಕನಸುಗಳನ್ನು ಜೋಸೆಫನು ನೆನಪಿಗೆ ತಂದುಕೊಂಡನು. ಅವರನ್ನು ನೋಡಿ, “ನೀವು ಗೂಢಚಾರರು; ನಮ್ಮ ದೇಶದ ದುರ್ಬಲ ಸ್ಥಳಗಳನ್ನು ಪತ್ತೆಹಚ್ಚುವುದಕ್ಕಾಗಿ ಬಂದವರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವನು ಅವರ ವಿಷಯ ತನಗೆ ಬಿದ್ದ ಕನಸುಗಳನ್ನು ನೆನಪಿಗೆ ತಂದುಕೊಂಡು ಅವರಿಗೆ - ನೀವು ಗೂಢಚಾರರು; ನಮ್ಮ ದೇಶದ ದುರ್ಬಲ ಸ್ಥಳಗಳನ್ನು ನೋಡಿಕೊಳ್ಳುವದಕ್ಕಾಗಿ ಬಂದವರು ಎಂದು ಹೇಳಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆಗ ಯೋಸೇಫನು ತನ್ನ ಅಣ್ಣಂದಿರ ಬಗ್ಗೆ ತಾನು ಕಂಡಿದ್ದ ಕನಸುಗಳ ಬಗ್ಗೆ ಜ್ಞಾಪಿಸಿಕೊಂಡು ಅವರಿಗೆ, “ನೀವು ಆಹಾರವನ್ನು ಕೊಂಡುಕೊಳ್ಳಲು ಬಂದಿಲ್ಲ; ನೀವು ಗೂಢಚಾರರು. ನಮ್ಮ ದೇಶದ ದುರ್ಬಲ ಸ್ಥಳಗಳನ್ನು ತಿಳಿದುಕೊಳ್ಳಲು ಬಂದಿರುವಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 42:9
15 ತಿಳಿವುಗಳ ಹೋಲಿಕೆ  

ಹೀಗೆ ಆರೋನನು ಮಾಡಿದ ಕರುವನ್ನು ಅವರು ಆರಾಧಿಸಿದ್ದರಿಂದ ಯೆಹೋವ ದೇವರು ಜನರನ್ನು ಉಪದ್ರವದಿಂದ ಬಾಧಿಸಿದರು.


ರಹಾಬಳೆಂಬ ವೇಶ್ಯೆಯು ಗೂಢಚಾರರನ್ನು ಸಮಾಧಾನವಾಗಿ ಸ್ವಾಗತಿಸಿದ್ದರಿಂದ ಅವಿಧೇಯರೊಂದಿಗೆ ನಾಶವಾಗದೆ ಉಳಿದದ್ದು ನಂಬಿಕೆಯಿಂದಲೇ.


ಅವರು ಯೇಸುವನ್ನು ಹೊಂಚಿ ನೋಡುತ್ತಾ, ಮಾತಿನಲ್ಲಿ ಅವರನ್ನು ಸಿಕ್ಕಿಸುವಂತೆ ಅಧಿಪತಿಗೂ ಅಧಿಕಾರಕ್ಕೂ ಒಪ್ಪಿಸಿಕೊಡಲು, ನೀತಿವಂತರೆಂದು ನಟಿಸುವ ಗೂಢಚಾರರನ್ನು ಕಳುಹಿಸಿದರು.


ದಾವೀದನು ಗೂಢಚಾರರನ್ನು ಕಳುಹಿಸಿ, ಸೌಲನು ಬಂದದ್ದು ನಿಶ್ಚಯವೆಂದು ತಿಳಿದುಕೊಂಡನು.


ಗೂಢಚಾರರು ಪಟ್ಟಣದೊಳಗಿಂದ ಬರುವ ಒಬ್ಬ ಮನುಷ್ಯನನ್ನು ಕಂಡು ಅವನಿಗೆ, “ದಯಮಾಡಿ ಪಟ್ಟಣದಲ್ಲಿ ಪ್ರವೇಶಿಸುವ ಮಾರ್ಗವನ್ನು ನಮಗೆ ತೋರಿಸು. ನಾವು ನಿನಗೆ ಕರುಣೆ ತೋರಿಸುವೆವು,” ಎಂದರು.


ಅದರಂತೆ ಆ ಯೌವನಸ್ಥರು ಒಳಗೆ ಹೋಗಿ, ರಾಹಾಬಳನ್ನೂ ಅವಳ ತಂದೆಯನ್ನೂ ಅವಳ ತಾಯಿಯನ್ನೂ ಅವಳ ಸಹೋದರರನ್ನೂ ಅವಳಿಗಿದ್ದ ಸಮಸ್ತವನ್ನೂ ಅವಳ ಗೋತ್ರದ ಎಲ್ಲಾ ಸಂಬಂಧಿಕರನ್ನೂ ಹೊರಗೆ ಕರೆತಂದು ಇಸ್ರಾಯೇಲ್ ಪಾಳೆಯದ ಹೊರಗೆ ಅವರನ್ನು ಇರಿಸಿದರು.


ನೂನನ ಮಗನಾದ ಯೆಹೋಶುವನು ಇಬ್ಬರು ಗೂಢಚಾರರನ್ನು ಶಿಟ್ಟೀಮಿನಿಂದ ಗುಪ್ತವಾಗಿ ಕಳುಹಿಸಿ, ಅವರಿಗೆ, “ನೀವು ಹೋಗಿ ದೇಶವನ್ನೂ, ವಿಶೇಷವಾಗಿ ಯೆರಿಕೋ ಪಟ್ಟಣವನ್ನೂ ಸುತ್ತಿ ನೋಡಿರಿ,” ಎಂದನು. ಅವರು ಹೋಗಿ ರಾಹಾಬಳೆಂಬ ಹೆಸರುಳ್ಳ ಒಬ್ಬ ವೇಶ್ಯೆಯ ಮನೆಯಲ್ಲಿ ಇಳಿದು ಅಲ್ಲಿಯೇ ಉಳಿದುಕೊಂಡರು.


“ನಾನು ಇಸ್ರಾಯೇಲರಿಗೆ ಕೊಡುವ ಕಾನಾನ್ ದೇಶವನ್ನು ಪರೀಕ್ಷಿಸುವ ಹಾಗೆ ನೀನು ಜನರನ್ನು ಕಳುಹಿಸು. ಅವರವರ ಪಿತೃಗಳ ಗೋತ್ರದ ಪ್ರಕಾರ ಅವರೊಳಗೆ ಅಧಿಕಾರಿಯಾಗಿರುವ ಪ್ರತಿಯೊಬ್ಬನನ್ನು ಕಳುಹಿಸು,” ಎಂದರು.


ನಿಮ್ಮ ಚಿಕ್ಕ ತಮ್ಮನನ್ನು ನನ್ನ ಬಳಿಗೆ ತನ್ನಿರಿ. ಆಗ ನೀವು ಗೂಢಚಾರರಲ್ಲವೆಂದೂ, ಯಥಾರ್ಥರೆಂದೂ ತಿಳಿದುಕೊಂಡು, ನಿಮ್ಮ ಸಹೋದರರನ್ನು ನಿಮಗೆ ಒಪ್ಪಿಸುವೆನು. ಆಗ ನೀವು ದೇಶದಲ್ಲಿ ವ್ಯಾಪಾರ ಮಾಡಬಹುದು,’ ಎಂದು ಹೇಳಿದನು,” ಎಂದರು.


ನಿಮ್ಮಲ್ಲಿಂದ ಒಬ್ಬನನ್ನು ಕಳುಹಿಸಿರಿ, ಅವನು ನಿಮ್ಮ ಸಹೋದರನನ್ನು ಕರೆದುಕೊಂಡು ಬರಲಿ. ಆದರೆ ನೀವು ಸೆರೆಮನೆಯಲ್ಲಿರಬೇಕು. ಹೀಗೆ ನಿಮ್ಮಲ್ಲಿ ಸತ್ಯವು ಉಂಟೋ, ಇಲ್ಲವೋ ಎಂದು ನಿಮ್ಮ ಮಾತುಗಳನ್ನು ಪರೀಕ್ಷಿಸುತ್ತೇನೆ. ಇಲ್ಲದಿದ್ದರೆ, ಫರೋಹನ ಜೀವದಾಣೆ ನಿಶ್ಚಯವಾಗಿ ನೀವು ಗೂಢಚಾರರು,” ಎಂದು ಹೇಳಿದನು.


ಆಗ ಅಮ್ಮೋನಿಯರ ಪ್ರಧಾನರು ತಮ್ಮ ಯಜಮಾನನಾದ ಹಾನೂನನಿಗೆ, “ದಾವೀದನು ನಿನ್ನ ಬಳಿಗೆ ಸಂತಾಪ ಸೂಚಿಸುವವರನ್ನು ಕಳುಹಿಸಿದ್ದರಿಂದ, ನಿನ್ನ ತಂದೆಯನ್ನು ಘನಪಡಿಸುತ್ತಾನೆಂದು ಯೋಚಿಸುತ್ತೀಯೋ? ದಾವೀದನು ತನ್ನ ಸೇವಕರನ್ನು ಈ ಪಟ್ಟಣವನ್ನು ಸಂಚರಿಸಿ ನೋಡುವುದಕ್ಕೂ ಶೋಧಿಸುವುದಕ್ಕೂ ಅದನ್ನು ಕೆಡವಿ ಹಾಕುವುದಕ್ಕೂ ನಿನ್ನ ಬಳಿಗೆ ಕಳುಹಿಸಿದ್ದಾನಲ್ಲವೇ,” ಎಂದರು.


ಹೀಗೆ ಅವನ ಸಹೋದರರು ಅವನ ಮೇಲೆ ಹೊಟ್ಟೆಕಿಚ್ಚುಪಟ್ಟರು. ಆದರೆ ಅವನ ತಂದೆ ಆ ಮಾತನ್ನು ಮನಸ್ಸಿನಲ್ಲಿ ಇಟ್ಟುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು