Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 43:14 - ಕನ್ನಡ ಸಮಕಾಲಿಕ ಅನುವಾದ

14 ಸರ್ವಶಕ್ತ ದೇವರು ನಿಮ್ಮ ಮತ್ತೊಬ್ಬ ಸಹೋದರನನ್ನೂ ಬೆನ್ಯಾಮೀನನನ್ನೂ ಕಳುಹಿಸಿಕೊಡುವ ಹಾಗೆ, ಆ ಮನುಷ್ಯನು ನಿಮ್ಮ ಮೇಲೆ ಕರುಣೆ ತೋರಿಸುವಂತೆ ಮಾಡಲಿ. ನಾನಂತೂ ಮಕ್ಕಳನ್ನು ಕಳೆದುಕೊಂಡವನಾಗಿರಬೇಕಾದರೆ ಹಾಗೆಯೇ ಆಗಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಸರ್ವಶಕ್ತನಾದ ದೇವರು ನಿಮ್ಮ ಇನ್ನೊಬ್ಬ ಅಣ್ಣನನ್ನೂ, ಬೆನ್ಯಾಮೀನನನ್ನೂ ನಿಮ್ಮೊಂದಿಗೆ ಕಳುಹಿಸಿಕೊಡುವಂತೆ ನಿಮ್ಮ ಮೇಲೆ ಕರುಣೆ ತೋರುವಂತೆ ಮಾಡಲಿ. ನಾನಂತೂ ಮಕ್ಕಳನ್ನು ಕಳೆದುಕೊಂಡವನಾಗಿರಬೇಕು ಎಂದರೆ ಹಾಗೆಯೇ ಆಗಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅವನು ನಿಮ್ಮ ಮೇಲೆ ಕನಿಕರವಿಟ್ಟು ನಿಮ್ಮ ಅಣ್ಣನನ್ನೂ ಬೆನ್ಯಾಮೀನನನ್ನೂ ನಿಮ್ಮೊಂದಿಗೆ ಕಳುಹಿಸಿಬಿಡುವಂತೆ ಸರ್ವವಲ್ಲಭರಾದ ದೇವರು ಅನುಗ್ರಹಿಸಲಿ; ನಾನಂತೂ ಮಕ್ಕಳನ್ನು ಕಳೆದುಕೊಂಡವನಾಗಬೇಕಾದರೆ ಹಾಗೆಯೇ ಆಗಲಿ!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅವನು ನಿಮ್ಮ ಮೇಲೆ ಕನಿಕರವಿಟ್ಟು ನಿಮ್ಮ ಅಣ್ಣನನ್ನೂ ಬೆನ್ಯಾಮೀನನನ್ನೂ ನಿಮ್ಮೊಂದಿಗೆ ಕಳುಹಿಸಿ ಬಿಡುವಂತೆ ಸರ್ವಶಕ್ತನಾದ ದೇವರು ಅನುಗ್ರಹಿಸಲಿ; ನಾನಂತೂ ಮಕ್ಕಳನ್ನು ಕಳಕೊಂಡವನಾಗಬೇಕಾದರೆ ಹಾಗೆಯೇ ಆಗಲಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನೀವು ರಾಜ್ಯಪಾಲನ ಮುಂದೆ ನಿಂತುಕೊಂಡಾಗ ಸರ್ವಶಕ್ತನಾದ ದೇವರು ನಿಮಗೆ ಸಹಾಯ ಮಾಡುವಂತೆ ನಾನು ಪ್ರಾರ್ಥಿಸುತ್ತೇನೆ. ಬೆನ್ಯಾಮೀನನನ್ನೂ ಸಿಮೆಯೋನನನ್ನೂ ಕಳುಹಿಸಿಕೊಡುವಂತೆ ಮತ್ತು ನೀವು ಸುರಕ್ಷಿತವಾಗಿ ಮರಳಿಬರುವಂತೆ ನಾನು ಪ್ರಾರ್ಥಿಸುತ್ತೇನೆ. ಇಲ್ಲವಾದರೆ, ನನ್ನ ಮಗನನ್ನು ಕಳೆದುಕೊಂಡು ನಾನು ಮತ್ತೆ ದುಃಖಿತನಾಗುವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 43:14
30 ತಿಳಿವುಗಳ ಹೋಲಿಕೆ  

“ನೀನು ಹೋಗಿ ಶೂಷನಿನಲ್ಲಿರುವ ಎಲ್ಲಾ ಯೆಹೂದ್ಯರನ್ನು ಕೂಡಿಸು; ನೀವು ರಾತ್ರಿ ಹಗಲೂ ಮೂರು ದಿನ ಅನ್ನಪಾನಗಳನ್ನು ಬಿಟ್ಟು ನನಗೋಸ್ಕರ ಉಪವಾಸಮಾಡಿರಿ. ಹಾಗೆಯೇ ನಾನೂ ನನ್ನ ದಾಸಿಯರೊಡನೆ ಉಪವಾಸ ಮಾಡುವೆನು. ಅನಂತರ ನಾನು ರಾಜಾಜ್ಞೆಯನ್ನು ಮೀರಿ ಅರಸನ ಬಳಿಗೆ ಹೋಗುವೆನು. ನಾನು ಸತ್ತರೂ ಸಾಯುವೆನು,” ಎಂದು ಹೇಳಿಕಳುಸಿದಳು.


ಅಬ್ರಾಮನು ತೊಂಬತ್ತೊಂಬತ್ತು ವರ್ಷದವನಾದಾಗ, ಯೆಹೋವ ದೇವರು ಅಬ್ರಾಮನಿಗೆ ಕಾಣಿಸಿಕೊಂಡು, “ನಾನೇ ಸರ್ವಶಕ್ತ ದೇವರು. ನೀನು ನನ್ನ ಸನ್ನಿಧಿಯಲ್ಲಿಯೇ ನಡೆಯುತ್ತಾ ದೋಷವಿಲ್ಲದವನಾಗಿರು.


ಪೌಲನು ಸಮ್ಮತಿಸದೆ ಇದ್ದ ಕಾರಣ, “ಕರ್ತ ಯೇಸುವಿನ ಚಿತ್ತ ನೆರವೇರಲಿ,” ಎಂದು ಹೇಳಿ ನಾವು ಸುಮ್ಮನಾದೆವು.


ದೇವರೇ, ನಿಮ್ಮ ಹೆಸರಲ್ಲಿ ಭಯಭಕ್ತಿಯಿಂದ ಹರ್ಷಿಸುವ ನಿಮ್ಮ ಸೇವಕರ ಪ್ರಾರ್ಥನೆಗೆ ಕಿವಿಗೊಡಿರಿ. ಇಂದು ನಿಮ್ಮ ಸೇವಕನಾದ ನನಗೆ ಯಶಸ್ವಿಯನ್ನು ಕೊಟ್ಟು, ಈ ಅರಸನ ದೃಷ್ಟಿಯಲ್ಲಿ ನನಗೆ ದಯೆ ದೊರಕುವಂತೆ ಮಾಡಿರಿ,” ಎಂದು ಬೇಡಿಕೊಂಡೆನು. ಆ ದಿವಸಗಳಲ್ಲಿ ನಾನು ಅರಸನಿಗೆ ಪಾನ ಸೇವಕನಾಗಿದ್ದೆನು.


ಮನುಷ್ಯನ ಮಾರ್ಗಗಳು ಯೆಹೋವ ದೇವರನ್ನು ಮೆಚ್ಚಿಸಿದಾಗ, ಅವರು ಅವನ ಶತ್ರುಗಳನ್ನು ಸಹ ಅವನೊಂದಿಗೆ ಸಮಾಧಾನದಲ್ಲಿರುವಂತೆ ಮಾಡುತ್ತಾರೆ.


ಯೆಹೋವ ದೇವರೇ, ನಿಮ್ಮ ಒಡಂಬಡಿಕೆಯ ಪ್ರೀತಿಯು ನನಗೆ ದೊರಕಲಿ, ನಿಮ್ಮ ವಾಗ್ದಾನದ ರಕ್ಷಣೆಯು ನನಗೆ ಉಂಟಾಗಲಿ;


ಯೆಹೋವ ದೇವರು ಒಳ್ಳೆಯವರು, ಅವರ ಕರುಣೆಯು ಯುಗಯುಗಕ್ಕೂ ಇರುವುದು. ಅವರ ಸತ್ಯತೆಯು ತಲತಲಾಂತರಕ್ಕೂ ಮುಂದುವರಿಯುವುದು.


ಅಬ್ರಹಾಮನು ಆ ಸ್ಥಳಕ್ಕೆ ಯೆಹೋವ ಯೀರೆ ಎಂದು ಹೆಸರಿಟ್ಟನು. “ಯೆಹೋವ ದೇವರು ಪರ್ವತದ ಮೇಲೆ ಒದಗಿಸುವರು,” ಎಂದು ಇಂದಿನವರೆಗೂ ಜನರು ಹೇಳುತ್ತಾರೆ.


ತಂದೆಯಾದ ದೇವರಿಂದಲೂ ಆ ತಂದೆಯ ಪುತ್ರ ಆಗಿರುವ ಕರ್ತ ಕ್ರಿಸ್ತ ಯೇಸುವಿನಿಂದಲೂ ಕೃಪೆಯು, ಕರುಣೆಯು ಮತ್ತು ಶಾಂತಿಯು ಸತ್ಯಪೂರ್ವಕವಾಗಿ ಪ್ರೀತಿಪೂರ್ವಕವಾಗಿ ನಿಮ್ಮೊಂದಿಗಿರಲಿ.


ನಮ್ಮಲ್ಲಿ ಹುದುವಾಗಿರುವ ವಿಶ್ವಾಸಕ್ಕೆ ಅನುಸಾರವಾಗಿ ನನ್ನ ನಿಜಕುಮಾರನಾದ ತೀತನಿಗೆ ಬರೆಯುವುದು: ತಂದೆಯಾದ ದೇವರಿಂದಲೂ ನಮಗೆ ರಕ್ಷಕ ಹಾಗೂ ಕರ್ತ ಆಗಿರುವ ಕ್ರಿಸ್ತ ಯೇಸುವಿನಿಂದಲೂ ಕೃಪೆಯೂ ಕರುಣೆಯೂ ಶಾಂತಿಯೂ ಆಗಲಿ.


ಆದರೂ ಇನ್ನು ಮುಂದೆ ನಿತ್ಯಜೀವಕ್ಕೆ ತಮ್ಮ ಮೇಲೆ ನಂಬಿಕೆಯಿಡುವವರಿಗೆ ದೃಷ್ಟಾಂತವಾಗಿರಬೇಕೆಂದು ಕ್ರಿಸ್ತ ಯೇಸು ಮುಖ್ಯ ಪಾಪಿಯಾದ ನನ್ನಲ್ಲಿ ತಮ್ಮ ಪೂರ್ಣ ಸಹನೆಯನ್ನು ತೋರ್ಪಡಿಸಿರುವುದಕ್ಕಾಗಿ ನನಗೆ ಕರುಣೆ ದೊರೆಯಿತು.


ನಂಬಿಕೆಯಲ್ಲಿ ನನ್ನ ನಿಜ ಪುತ್ರನಾಗಿರುವ ತಿಮೊಥೆಯನಿಗೆ ಬರೆಯುವುದು: ನಮ್ಮ ತಂದೆ ದೇವರಿಂದಲೂ, ನಮ್ಮ ಕರ್ತ ಆಗಿರುವ ಕ್ರಿಸ್ತ ಯೇಸುವಿನಿಂದಲೂ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ದೊರೆಯಲಿ.


ಅವನನ್ನು ಎಲ್ಲಾ ಸಂಕಟಗಳಿಂದ ಬಿಡಿಸಿದರು. ದೇವರು ಯೋಸೇಫನಿಗೆ ಜ್ಞಾನವನ್ನು ಕೊಟ್ಟು ಈಜಿಪ್ಟಿನ ಅರಸನಾದ ಫರೋಹನ ಮೆಚ್ಚುಗೆಗೆ ಪಾತ್ರನಾಗುವಂತೆ ಮಾಡಿದರು. ಹೀಗೆ ಯೋಸೇಫನನ್ನು ಈಜಿಪ್ಟ್ ದೇಶದ ಮೇಲೆಯೂ ತನ್ನ ಅರಮನೆಯ ಮೇಲೆಯೂ ಅಧಿಕಾರಿಯನ್ನಾಗಿ ಫರೋಹನು ನೇಮಿಸಿದನು.


ದೇವರಲ್ಲಿ ಭಯಭಕ್ತಿಯುಳ್ಳವರ ಮೇಲೆ, ಅವರ ಕರುಣೆಯು ತಲತಲಾಂತರಗಳಿಗೂ ಇರುವುದು.


ಆಕಾಶವೇ, ಹರ್ಷಧ್ವನಿ ಮಾಡು; ಭೂಮಿಯೇ, ಉಲ್ಲಾಸಪಡು! ಪರ್ವತಗಳೇ, ಹರ್ಷಧ್ವನಿಗೈಯಿರಿ! ಏಕೆಂದರೆ ಯೆಹೋವ ದೇವರು ತನ್ನ ಜನರನ್ನು ಆಧರಿಸಿ, ಶ್ರಮೆಪಟ್ಟ ತನ್ನವರನ್ನು ಕರುಣಿಸುವನು.


ಅರಸನ ಹೃದಯವು ಯೆಹೋವ ದೇವರ ಕೈಯಲ್ಲಿ ನೀರಿನ ಕಾಲುವೆಗಳಂತೆ; ತನಗೆ ಇಷ್ಟವಾದ ಕಡೆಗೆ ಆತನು ಅದನ್ನು ತಿರುಗಿಸುತ್ತಾನೆ.


ಇಸ್ರಾಯೇಲರ ಅರಸನೂ ದಾವೀದನ ಮಗನೂ ಆದ ಸೊಲೊಮೋನನ ಜ್ಞಾನೋಕ್ತಿಗಳು:


ಆಗ ಎಜ್ರನು, “ನಮ್ಮ ತಂದೆಗಳ ದೇವರಾಗಿರುವ ಯೆಹೋವ ದೇವರು ಸ್ತುತಿಹೊಂದಲಿ! ಯೆರೂಸಲೇಮಿನಲ್ಲಿರುವ ಯೆಹೋವ ದೇವರ ಆಲಯಕ್ಕೆ ಮಹಿಮೆಯನ್ನು ತರುವಂತೆ, ಅರಸನ ಹೃದಯದಲ್ಲಿ ಇಂಥಾದ್ದನ್ನು ಇಟ್ಟಿದ್ದಾರೆ.


ಆಗ ಅವರ ತಂದೆ ಯಾಕೋಬನು ಅವರಿಗೆ, “ನನ್ನನ್ನು ಮಕ್ಕಳಿಲ್ಲದವನನ್ನಾಗಿ ಮಾಡಿದ್ದೀರಿ. ಯೋಸೇಫನೂ ಇಲ್ಲ, ಸಿಮೆಯೋನನೂ ಇಲ್ಲ, ಬೆನ್ಯಾಮೀನನನ್ನೂ ಕರೆದುಕೊಂಡು ಹೋಗುವುದರಲ್ಲಿದ್ದೀರಿ. ಇವುಗಳೆಲ್ಲಾ ನನಗೆ ವಿರೋಧವಾಗಿವೆ,” ಎಂದನು.


ಅನಂತರ ಯೋಸೇಫನು ಅವರ ಬಳಿಯಿಂದ ಹೊರಟುಹೋಗಿ ಅತ್ತನು. ಮತ್ತೆ ಅವರ ಬಳಿಗೆ ಬಂದು, ಅವರ ಸಂಗಡ ಮಾತನಾಡಿ ಅವರೊಂದಿಗೆ ಸಿಮೆಯೋನನನ್ನು ತಂದು, ಅವರ ಕಣ್ಣೆದುರಿನಲ್ಲಿ ಬಂಧಿಸಿ ಸೆರೆಯಲ್ಲಿ ಹಾಕಿದನು.


ಆದರೆ ಯೆಹೋವ ದೇವರು ಯೋಸೇಫನ ಸಂಗಡ ಇದ್ದು, ಅವನ ಮೇಲೆ ಕರುಣೆಯಿಟ್ಟು, ಸೆರೆಮನೆಯ ಯಜಮಾನನು ಅವನ ಮೇಲೆ ದಯೆ ತೋರಿಸುವಂತೆ ಮಾಡಿದರು.


ದೇವರು ಅವನಿಗೆ, “ಸರ್ವಶಕ್ತ ದೇವರು ನಾನೇ. ನೀನು ಅಭಿವೃದ್ಧಿಯಾಗಿ, ನಿನ್ನ ಸಂತಾನವು ಹೆಚ್ಚಲಿ. ಜನಾಂಗವೂ ಜನಾಂಗಗಳ ಗುಂಪೂ ನಿನ್ನಿಂದ ಉಂಟಾಗುವುವು. ಅರಸರು ನಿನ್ನಿಂದ ಹುಟ್ಟುವರು.


ಸರ್ವಶಕ್ತ ದೇವರು ನಿನ್ನನ್ನು ಆಶೀರ್ವದಿಸಿ, ನೀನು ದೊಡ್ಡ ಸಮುದಾಯವಾಗುವಂತೆ ನಿನ್ನನ್ನು ಅಭಿವೃದ್ಧಿ ಮಾಡಿ ಹೆಚ್ಚಿಸಲಿ.


ಯೆಹೋವ ದೇವರೇ, ನಿಮ್ಮ ಒಡಂಬಡಿಕೆಯ ಪ್ರೀತಿಯನ್ನು ನಮಗೆ ತೋರಿಸಿರಿ. ನಿಮ್ಮ ರಕ್ಷಣೆಯನ್ನು ನಮಗೆ ಕೊಡಿರಿ.


ಪಿಲಾತನು, “ನಾನು ಬರೆದದ್ದು ಬರೆದಾಯಿತು,” ಎಂದು ಉತ್ತರಕೊಟ್ಟನು.


ನಿಮ್ಮ ಸಹೋದರನನ್ನು ಕರೆದುಕೊಂಡು ಆ ಮನುಷ್ಯನ ಬಳಿಗೆ ತಿರುಗಿ ಹೋಗಿರಿ.


ಅವರನ್ನು ಸೆರೆಹಿಡಿದವರ ಕರುಣೆ ತೋರುವಂತೆ ಮಾಡಿದರು.


ಅವರು ಹಿರಿಯನನ್ನು ಮೊದಲುಗೊಂಡು ಕಿರಿಯವನವರೆಗೆ ಶೋಧಿಸಲಾಗಿ, ಆ ಪಾತ್ರೆಯು ಬೆನ್ಯಾಮೀನನ ಚೀಲದಲ್ಲಿ ಸಿಕ್ಕಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು