Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 43:29 - ಕನ್ನಡ ಸಮಕಾಲಿಕ ಅನುವಾದ

29 ಆಗ ಅವನು ತನ್ನ ದೃಷ್ಟಿಯಿಟ್ಟು, ತನ್ನ ತಾಯಿಯ ಮಗನೂ ತನ್ನ ತಮ್ಮನೂ ಆದ ಬೆನ್ಯಾಮೀನನನ್ನು ನೋಡಿ, “ನೀವು ನನಗೆ ಹೇಳಿದ ನಿಮ್ಮ ಚಿಕ್ಕ ತಮ್ಮನು ಇವನೋ?” ಎಂದು ಹೇಳಿ, “ನನ್ನ ಮಗನೇ, ದೇವರು ನಿನಗೆ ಕೃಪಾಳುವಾಗಿರಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆಗ ಅವನು ಕಣ್ಣೆತ್ತಿ ತನ್ನ ಒಡಹುಟ್ಟಿದ ತಮ್ಮನಾದ ಬೆನ್ಯಾಮೀನನನ್ನು ನೋಡಿ, “ನೀವು ಹೇಳಿದ ನಿಮ್ಮ ಕಿರಿಯ ತಮ್ಮನು ಇವನೋ?” ಎಂದು ಕೇಳಿ ಅವನಿಗೆ, “ಮಗನೇ, ದೇವರ ದಯೆ ನಿನ್ನ ಮೇಲೆ ಇರಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಅನಂತರ ಕಣ್ಣೆತ್ತಿ, ತನ್ನ ಒಡಹುಟ್ಟಿದ ತಮ್ಮನಾದ ಬೆನ್ಯಾಮೀನನನ್ನು ನೋಡಿದನು. “ನೀವು ಹೇಳಿದ ನಿಮ್ಮ ಕಿರಿಯ ತಮ್ಮ ಇವನೇನೋ?” ಎಂದು ಕೇಳಿ ಅವನಿಗೆ, “ಮಗು, ದೇವರ ಪ್ರೀತಿ ನಿನ್ನ ಮೇಲಿರಲಿ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಆಗ ಅವನು ಕಣ್ಣೆತ್ತಿ ತನ್ನ ಒಡಹುಟ್ಟಿದ ತಮ್ಮನಾದ ಬೆನ್ಯಾಮೀನನನ್ನು ನೋಡಿ - ನೀವು ಹೇಳಿದ ನಿಮ್ಮ ಕಿರೀ ತಮ್ಮನು ಇವನೋ ಎಂದು ಕೇಳಿ ಅವನಿಗೆ - ಮಗನೇ, ದೇವರ ದಯೆ ನಿನ್ನ ಮೇಲಿರಲಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಬಳಿಕ ಯೋಸೇಫನು ತನ್ನ ಸಹೋದರನಾದ ಬೆನ್ಯಾಮೀನನನ್ನು ನೋಡಿದನು. (ಬೆನ್ಯಾಮೀನ ಮತ್ತು ಯೋಸೇಫ ಒಂದೇ ತಾಯಿಯ ಮಕ್ಕಳು.) ಯೋಸೇಫನು, “ನೀವು ನನಗೆ ತಿಳಿಸಿದ ನಿಮ್ಮ ಕಿರಿಯ ತಮ್ಮನು ಇವನೋ?” ಎಂದು ಕೇಳಿದನು. ಆಮೇಲೆ ಯೋಸೇಫನು ಬೆನ್ಯಾಮೀನನಿಗೆ “ಮಗನೇ, ದೇವರು ನಿನಗೆ ಒಳ್ಳೆಯದನ್ನು ಮಾಡಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 43:29
22 ತಿಳಿವುಗಳ ಹೋಲಿಕೆ  

ಯೆಹೋವ ದೇವರು ತಮ್ಮ ಮುಖವನ್ನು ನಿಮ್ಮ ಕಡೆಗೆ ಪ್ರಕಾಶಿಸುವಂತೆ ಮಾಡಿ, ನಿಮಗೆ ಕೃಪೆ ತೋರಿಸಲಿ.


ಅದಕ್ಕವರು, “ನಿನ್ನ ದಾಸರಾದ ನಾವು ಹನ್ನೆರಡು ಸಹೋದರರು. ನಾವು ಕಾನಾನ್ ದೇಶದಲ್ಲಿರುವ ಒಬ್ಬ ಮನುಷ್ಯನ ಮಕ್ಕಳು. ಈಗ ಚಿಕ್ಕವನು ನನ್ನ ತಂದೆಯೊಂದಿಗೆ ಇದ್ದಾನೆ, ಮತ್ತೊಬ್ಬನು ಇಲ್ಲ,” ಎಂದು ಹೇಳಿದರು.


ಪ್ರಿಯರೇ, ಒಬ್ಬರಿಗೊಬ್ಬರು ಪ್ರೀತಿಯಲ್ಲಿ ಮುಂದುವರೆಯಿರಿ.


ನಂಬಿಕೆಯಲ್ಲಿ ನನ್ನ ನಿಜ ಪುತ್ರನಾಗಿರುವ ತಿಮೊಥೆಯನಿಗೆ ಬರೆಯುವುದು: ನಮ್ಮ ತಂದೆ ದೇವರಿಂದಲೂ, ನಮ್ಮ ಕರ್ತ ಆಗಿರುವ ಕ್ರಿಸ್ತ ಯೇಸುವಿನಿಂದಲೂ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ದೊರೆಯಲಿ.


ಶಿಷ್ಯರು ಯೇಸುವಿನ ಮಾತುಗಳಿಗೆ ಬೆರಗಾದರು. ಆದರೆ ಯೇಸು ತಿರುಗಿ ಅವರಿಗೆ, “ಮಕ್ಕಳೇ, ದೇವರ ರಾಜ್ಯವನ್ನು ಪ್ರವೇಶಿಸುವುದು ಬಹಳ ಕಷ್ಟ.


ಯೇಸು ಹಿಂತಿರುಗಿ ಆಕೆಯನ್ನು ನೋಡಿ, “ಮಗಳೇ, ಧೈರ್ಯವಾಗಿರು; ನಿನ್ನ ನಂಬಿಕೆಯೇ ನಿನ್ನನ್ನು ಗುಣಪಡಿಸಿದೆ,” ಎಂದರು. ಆ ಗಳಿಗೆಯಲ್ಲೇ ಆ ಸ್ತ್ರೀಯು ಸ್ವಸ್ಥಳಾದಳು.


ಆಗ ಹಾಸಿಗೆಯ ಮೇಲೆ ಮಲಗಿದ್ದ, ಒಬ್ಬ ಪಾರ್ಶ್ವವಾಯು ರೋಗಿಯನ್ನು ಜನರು ಯೇಸುವಿನ ಬಳಿಗೆ ತಂದರು. ಯೇಸು ಅವರ ನಂಬಿಕೆಯನ್ನು ಕಂಡು, ಆ ಪಾರ್ಶ್ವವಾಯು ರೋಗಿಗೆ, “ಮಗನೇ, ಧೈರ್ಯವಾಗಿರು. ನಿನ್ನ ಪಾಪಗಳು ಕ್ಷಮಿಸಲಾಗಿವೆ,” ಎಂದರು.


“ಈಗ ದೇವರು ನಮ್ಮನ್ನು ಕನಿಕರಿಸುವ ಹಾಗೆ ಆತನನ್ನು ಬೇಡಿಕೊಳ್ಳಿರಿ. ನಿಮ್ಮ ಕೈಗಳಿಂದ ಅಂಥ ಅರ್ಪಣೆಯನ್ನು ಅವರು ಸ್ವೀಕರಿಸುವರೋ?” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಯೆಹೋವ ದೇವರೇ, ನಮ್ಮ ಕಡೆಗೆ ಕೃಪೆ ತೋರಿಸಿರಿ. ನಿನಗೋಸ್ಕರ ನಾವು ಕಾದಿದ್ದೇವೆ. ಪ್ರತಿ ಮುಂಜಾನೆ ನಮಗೆ ಭುಜಬಲವಾಗಿಯೂ, ಇಕ್ಕಟ್ಟಿನ ಕಾಲದಲ್ಲಿ ನಮ್ಮ ರಕ್ಷಣೆಯಾಗಿಯೂ ಇರು.


ಏಕೆಂದರೆ, ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳಬೇಕಾಗಿಲ್ಲ. ನೀವು ಕೂಗಿ ದುಃಖಿಸಿದ ಶಬ್ದವನ್ನು ದೇವರು ಕೇಳಿ ನಿಮಗೆ ಕೃಪೆ ತೋರಿಸೇ ತೋರಿಸುವರು. ದೇವರು ನಿಮ್ಮ ಸ್ವರವನ್ನು ಕೇಳಿದ ಕೂಡಲೇ ಸದುತ್ತರವನ್ನು ದಯಪಾಲಿಸುವರು.


ಯಥಾರ್ಥರಿಗೆ ಕತ್ತಲಲ್ಲಿ ಬೆಳಕು ಮೂಡುವುದು; ಅವರು ಕೃಪೆಯೂ, ಅನುಕಂಪವೂ, ನೀತಿಯೂ ಉಳ್ಳವವರಾಗಿರುವರು.


ದೇವರು ತಮ್ಮ ಅದ್ಭುತಗಳ ಜ್ಞಾಪಕವನ್ನು ಉಳಿದಿರುವಂತೆ ಮಾಡಿದ್ದಾರೆ; ಯೆಹೋವ ದೇವರು ಕೃಪೆಯೂ, ಅನುಕಂಪವೂ ಉಳ್ಳವರು.


ದೇವರು ನಮ್ಮ ಮೇಲೆ ಕರುಣೆಯಿಟ್ಟು, ನಮ್ಮನ್ನು ಆಶೀರ್ವದಿಸಲಿ. ದೇವರು ತಮ್ಮ ಮುಖವನ್ನು ನಮ್ಮ ಮೇಲೆ ಪ್ರಕಾಶಿಸಮಾಡಲಿ.


ನನ್ನ ಮಕ್ಕಳೇ, ಉದಾಸೀನರಾಗಿರಬೇಡಿರಿ. ಏಕೆಂದರೆ ತಮ್ಮ ಸಮ್ಮುಖದಲ್ಲಿ ನಿಲ್ಲುವುದಕ್ಕೂ, ತಮ್ಮನ್ನು ಸೇವಿಸುವುದಕ್ಕೂ, ತಮಗೆ ಸೇವಕರಾಗಿರುವುದಕ್ಕೂ, ತಮಗೆ ಧೂಪವನ್ನು ಸುಡುವುದಕ್ಕೂ ಯೆಹೋವ ದೇವರು ನಿಮ್ಮನ್ನು ಆಯ್ದುಕೊಂಡಿದ್ದಾರೆ,” ಎಂದನು.


ಆಗ ಯೆಹೋಶುವನು ಆಕಾನನಿಗೆ, “ನನ್ನ ಮಗನೇ, ನೀನು ಈಗ ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ಘನಪಡಿಸಿ, ಅವರಿಗೆ ಸ್ತೋತ್ರ ಸಲ್ಲಿಸು. ಏನು ಮಾಡಿದೆಯೋ ಅದನ್ನು ನನಗೆ ತಿಳಿಸು, ನನಗೆ ಮರೆಮಾಡಬೇಡ,” ಎಂದನು.


“ಆದ್ದರಿಂದ ಈಗ ನೀವಲ್ಲ, ದೇವರು ತಾವೇ ನನ್ನನ್ನು ಇಲ್ಲಿಗೆ ಕಳುಹಿಸಿದ್ದಾರೆ. ದೇವರು ನನ್ನನ್ನು ಫರೋಹನಿಗೆ ತಂದೆಯಾಗಿಯೂ, ಅವನ ಮನೆಗೆಲ್ಲಾ ಯಜಮಾನನನ್ನಾಗಿಯೂ ಈಜಿಪ್ಟ್ ದೇಶಕ್ಕೆಲ್ಲಾ ಅಧಿಕಾರಿಯನ್ನಾಗಿಯೂ ಮಾಡಿದ್ದಾರೆ.


ನಾವೆಲ್ಲರೂ ಒಬ್ಬ ಮನುಷ್ಯನ ಪುತ್ರರಾಗಿದ್ದು ಸತ್ಯವಂತರಾಗಿದ್ದೇವೆ. ಆದ್ದರಿಂದ ನಿನ್ನ ದಾಸರು ಗೂಢಚಾರರಲ್ಲ,” ಎಂದರು.


ರಾಹೇಲಳ ಪುತ್ರರು: ಯೋಸೇಫ್ ಮತ್ತು ಬೆನ್ಯಾಮೀನ್.


“ಅದಕ್ಕೆ ನೀನು ನಿನ್ನ ದಾಸರಿಗೆ, ‘ನಾನು ಅವನನ್ನು ನೋಡುವ ಹಾಗೆ, ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ,’ ಎಂದು ಹೇಳಿದೆಯಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು