Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 43:3 - ಕನ್ನಡ ಸಮಕಾಲಿಕ ಅನುವಾದ

3 ಆಗ ಯೆಹೂದನು ಅವನಿಗೆ, “ಆ ಮನುಷ್ಯನು ನಮಗೆ ನಿಮ್ಮ ಸಹೋದರನು ನಿಮ್ಮ ಸಂಗಡ ಇದ್ದ ಹೊರತು, ನೀವು ನನ್ನ ಮುಖವನ್ನು ನೋಡಬಾರದೆಂದು, ನಮಗೆ ದೃಢವಾಗಿ ನಿರ್ಣಯಿಸಿ ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅದಕ್ಕೆ ಯೆಹೂದನು ತನ್ನ ತಂದೆಗೆ ಹೇಳಿದ್ದೇನಂದರೆ, “ಆ ಮನುಷ್ಯನು ನಮಗೆ ‘ನಿಮ್ಮ ತಮ್ಮನನ್ನು ಕರೆದುಕೊಂಡು ಬಂದ ಹೊರತು ನನ್ನ ಮುಖವನ್ನು ನೋಡಬಾರದು’ ಎಂದು ಖಂಡಿತವಾಗಿ” ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅದಕ್ಕೆ ಯೆಹೂದನು ಹೀಗೆಂದನು: “ಆ ಮನುಷ್ಯ ನಮಗೆ, ‘ನಿಮ್ಮ ತಮ್ಮನನ್ನು ಕರೆದುಕೊಂಡು ಬಂದ ಹೊರತು ನನ್ನ ದರ್ಶನಕ್ಕೆ ಬರಕೂಡದು’ ಎಂದು ಕಡುಖಂಡಿತವಾಗಿ ಹೇಳಿಬಿಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅದಕ್ಕೆ ಯೆಹೂದನು - ಆ ಮನುಷ್ಯನು ನಮಗೆ, ನಿಮ್ಮ ತಮ್ಮನನ್ನು ಕರಕೊಂಡುಬಂದ ಹೊರತು ನನ್ನ ಮುಖವನ್ನು ನೋಡಕೂಡದು ಎಂದು ಖಂಡಿತವಾಗಿ ಹೇಳಿದನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೂದನು ಯಾಕೋಬನಿಗೆ, “ಆ ದೇಶದ ರಾಜ್ಯಪಾಲನು ನಮಗೆ ಎಚ್ಚರಿಕೆ ಕೊಟ್ಟಿದ್ದಾನೆ. ಅವನು, ‘ನೀವು ನಿಮ್ಮ ಸಹೋದರನನ್ನು ನನ್ನ ಬಳಿಗೆ ಕರೆದುಕೊಂಡು ಬಾರದೆ ನನ್ನನ್ನು ಭೇಟಿಯಾಗಕೂಡದು’ ಎಂದು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 43:3
13 ತಿಳಿವುಗಳ ಹೋಲಿಕೆ  

ಆಗ ನೀವು ನಿನ್ನ ದಾಸರಿಗೆ, ‘ನಿಮ್ಮ ಚಿಕ್ಕ ತಮ್ಮನು ನಿಮ್ಮ ಸಂಗಡ ಇಲ್ಲಿಗೆ ಬಾರದಿದ್ದರೆ, ಇನ್ನು ಮೇಲೆ ನನ್ನ ಮುಖವನ್ನು ನೋಡಬಾರದು,’ ಎಂದು ಹೇಳಿದೆ.


ಅವನನ್ನು ಕಳುಹಿಸದೆ ಹೋದರೆ, ನಾವು ಹೋಗುವುದಿಲ್ಲ. ಏಕೆಂದರೆ ಆ ಮನುಷ್ಯನು, ‘ನಿಮ್ಮ ತಮ್ಮನು ನಿಮ್ಮ ಸಂಗಡ ಇಲ್ಲದಿದ್ದರೆ, ನನ್ನ ಮುಖವನ್ನು ನೋಡಬಾರದು,’ ಎಂದು ನಮಗೆ ಹೇಳಿದ್ದಾನೆ,” ಎಂದನು.


“ನೀವು ನನ್ನ ಮುಖವನ್ನು ಇನ್ನೆಂದೂ ಕಾಣಲಾರಿರಿ,” ಎಂದು ಅವನು ಹೇಳಿದ ಮಾತುಗಳಿಗೆ ಅವರು ಬಹಳವಾಗಿ ದುಃಖಗೊಂಡು, ಅವನೊಂದಿಗೆ ನೌಕೆಯವರೆಗೆ ಹೋದರು.


“ನಿಮ್ಮ ಮಧ್ಯದಲ್ಲಿ ನಾನು ದೇವರ ರಾಜ್ಯದ ಬಗ್ಗೆ ಬೋಧಿಸುತ್ತಾ ಇದ್ದೆನು. ನಿಮ್ಮಲ್ಲಿ ಯಾರೂ ನನ್ನ ಮುಖವನ್ನು ಇನ್ನೊಮ್ಮೆ ಕಾಣಲಾರಿರಿ ಎಂದು ನಾನು ಬಲ್ಲೆನು.


ಈಜಿಪ್ಟಿನಲ್ಲಿ ನನ್ನ ಜನರ ದುರವಸ್ಥೆಯನ್ನು ನಾನು ಕಂಡಿದ್ದೇನೆ. ಅವರ ನರಳಾಟವನ್ನು ಕೇಳಿಸಿಕೊಂಡಿದ್ದೇನೆ. ಅವರನ್ನು ಬಿಡುಗಡೆ ಮಾಡಲು ನಾನಿಳಿದು ಬಂದಿದ್ದೇನೆ. ಇಲ್ಲಿ ಬಾ, ನಾನು ನಿನ್ನನ್ನು ಹಿಂದಿರುಗಿ ಈಜಿಪ್ಟಿಗೆ ಕಳುಹಿಸುತ್ತೇನೆ,’ ಎಂದರು.


ಅಬ್ಷಾಲೋಮನು ಯೋವಾಬನಿಗೆ, “ನಾನು ಗೆಷೂರಿನಿಂದ ಏಕೆ ಬಂದೆನೆಂದು ಅರಸನಿಗೆ ಹೇಳುವುದಕ್ಕೆ ನಿನ್ನನ್ನು ಕಳುಹಿಸುವ ಹಾಗೆ ‘ಇಲ್ಲಿಗೆ ಬಾ’ ಎಂದು ನಿನ್ನನ್ನು ಕರೆಕಳುಹಿಸಿದೆನು. ನಾನು ಇನ್ನೂ ಅಲ್ಲಿಯೇ ಇದ್ದಿದ್ದರೆ ನನಗೆ ಉತ್ತಮವಾಗಿತ್ತು. ಈಗ ನಾನು ಅರಸನ ಮುಖವನ್ನು ನೋಡಬೇಕು. ನನ್ನಲ್ಲಿ ಅಕ್ರಮ ಇದ್ದರೆ, ಅವನು ನನ್ನನ್ನು ಕೊಂದು ಹಾಕಲಿ,” ಎಂದನು.


ಅಬ್ಷಾಲೋಮನು ಅರಸನ ಮುಖವನ್ನು ಕಾಣದೆ, ಪೂರ್ಣವಾಗಿ ಎರಡು ವರ್ಷ ಯೆರೂಸಲೇಮಿನಲ್ಲಿ ವಾಸವಾಗಿದ್ದನು.


ಆದರೆ ಅರಸನು, “ಅವನು ತನ್ನ ಮನೆಗೆ ತಿರುಗಿ ಹೋಗಲಿ. ಅವನು ನನ್ನ ಮುಖವನ್ನು ನೋಡಬಾರದು,” ಎಂದನು. ಆದ್ದರಿಂದ ಅಬ್ಷಾಲೋಮನು ಅರಸನ ಮುಖವನ್ನು ನೋಡದೆ ತನ್ನ ಮನೆಗೆ ತಿರುಗಿಹೋದನು.


ಅದಕ್ಕೆ ದಾವೀದನು, “ಒಳ್ಳೆಯದು, ನಾನು ನಿನ್ನ ಸಂಗಡ ಒಡಂಬಡಿಕೆಯನ್ನು ಮಾಡುವೆನು. ಆದರೆ ನಾನು ನಿನ್ನಲ್ಲಿ ಒಂದನ್ನು ಕೇಳುತ್ತೇನೆ.” ಏನೆಂದರೆ, “ನೀನು ನನ್ನನ್ನು ನೋಡುವುದಕ್ಕೆ ಬರುವಾಗ, ಸೌಲನ ಮಗಳಾದ ಮೀಕಲಳನ್ನು ನೀನು ಕರೆದುಕೊಂಡು ಬಾರದೆ ಹೋದರೆ, ನೀನು ನನ್ನ ಮುಖವನ್ನು ಕಾಣಬಾರದು,” ಎಂದನು.


ಅವರು ಈಜಿಪ್ಟಿನಿಂದ ತಂದಿದ್ದ ಧಾನ್ಯವು ತೀರಿದ ಮೇಲೆ ಅವರ ತಂದೆ ಅವರಿಗೆ, “ತಿರುಗಿ ಹೋಗಿ ನಮಗಾಗಿ ಸ್ವಲ್ಪ ಆಹಾರ ಕೊಂಡುಕೊಳ್ಳಿರಿ,” ಎಂದನು.


ನೀನು ನಮ್ಮ ತಮ್ಮನನ್ನು ನಮ್ಮ ಸಂಗಡ ಕಳುಹಿಸಿದರೆ, ನಾವು ಹೋಗಿ ನಿನಗಾಗಿ ಆಹಾರವನ್ನು ಕೊಂಡುಕೊಂಡು ಬರುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು