Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 43:30 - ಕನ್ನಡ ಸಮಕಾಲಿಕ ಅನುವಾದ

30 ಆಗ ಯೋಸೇಫನ ಕರುಳು ತನ್ನ ತಮ್ಮನ ಬಗ್ಗೆ ಮರುಗಿದ್ದರಿಂದ ಅವನು ಅವಸರದಲ್ಲಿ ಎದ್ದು ಅಳುವುದಕ್ಕೆ ಸ್ಥಳವನ್ನು ಹುಡುಕಿ, ತನ್ನ ಕೋಣೆಯೊಳಗೆ ಹೋಗಿ ಅಲ್ಲಿ ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಯೋಸೇಫನು ಅವಸರವಾಗಿ ಎದ್ದು ತನ್ನ ಕೋಣೆಯೊಳಗೆ ಹೋದನು. ಏಕೆಂದರೆ ತನ್ನ ಕರಳು ತಮ್ಮನ ಮೇಲೆ ಮರುಗಿದ್ದರಿಂದ ಅವನು ತನ್ನ ಕೋಣೆಯೊಳಗೆ ಹೋಗಿ ಅಲ್ಲಿ ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಜೋಸೆಫನಿಗೆ ತಮ್ಮನನ್ನು ನೋಡಿದ ಮೇಲೆ ಕರುಳು ಕರಗಿತು. ಕಣ್ಣೀರನ್ನು ತಡೆಯಲಾಗದೆ ಒಳ ಅರಮನೆಗೆ ತ್ವರೆಯಾಗಿ ಹೋಗಿ ಅಲ್ಲಿ ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಯೋಸೇಫನಿಗೆ ತಮ್ಮನ ಮೇಲೆ ಕರುಳು ಮರುಗಿದ್ದರಿಂದ ಅವನು ಬೇಗನೆ ಎದ್ದು ಅಳುವದಕ್ಕೆ ಸ್ಥಳವನ್ನು ನೋಡಿಕೊಂಡು ತನ್ನ ಕೋಣೆಯೊಳಗೆ ಹೋಗಿ ಅಲ್ಲಿ ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಯೋಸೇಫನು ತನ್ನ ತಮ್ಮನಾದ ಬೆನ್ಯಾಮೀನನನ್ನು ಬಹಳವಾಗಿ ಪ್ರೀತಿಸುತ್ತಿದ್ದ ಕಾರಣ ಆನಂದದಿಂದ ಅವನ ಕಣ್ಣಲ್ಲಿ ನೀರು ಉಕ್ಕೇರಿ ಬಂದದ್ದರಿಂದ ಕೋಣೆಯೊಳಗೆ ಹೋಗಿ ಕಣ್ಣೀರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 43:30
16 ತಿಳಿವುಗಳ ಹೋಲಿಕೆ  

ಅನಂತರ ಯೋಸೇಫನು ಅವರ ಬಳಿಯಿಂದ ಹೊರಟುಹೋಗಿ ಅತ್ತನು. ಮತ್ತೆ ಅವರ ಬಳಿಗೆ ಬಂದು, ಅವರ ಸಂಗಡ ಮಾತನಾಡಿ ಅವರೊಂದಿಗೆ ಸಿಮೆಯೋನನನ್ನು ತಂದು, ಅವರ ಕಣ್ಣೆದುರಿನಲ್ಲಿ ಬಂಧಿಸಿ ಸೆರೆಯಲ್ಲಿ ಹಾಕಿದನು.


ಯೆಹೋವ ದೇವರು ಮುಂದುವರೆಸಿ, ‘ಎಫ್ರಾಯೀಮನು ನನಗೆ ಪ್ರಿಯ ಪುತ್ರನಲ್ಲವೇ? ಅವನು ನನಗೆ ಹರ್ಷಗೊಂಡಿರುವ ನನ್ನ ಮಗುವಲ್ಲವೋ? ನಾನು ಅವನಿಗೆ ವಿರೋಧವಾಗಿ ಆಗಾಗ ಮಾತಾಡಿದ್ದರೂ, ಅವನನ್ನು ಇನ್ನು ಬಹಳವಾಗಿ ಜ್ಞಾಪಕ ಮಾಡುತ್ತೇನೆ. ಆದ್ದರಿಂದ ಅವನಿಗೋಸ್ಕರ ನನ್ನ ಹೃದಯ ಮರುಗುತ್ತದಲ್ಲಾ ಅವನನ್ನು ಕನಿಕರಿಸುವೆನು,’ ” ಎಂದು ಯೆಹೋವ ದೇವರು ಹೇಳುತ್ತಾರೆ.


ನೀವು ಕ್ರಿಸ್ತನೊಂದಿಗೆ ಐಕ್ಯವಾಗಿರುವುದರಿಂದ ಉತ್ತೇಜನ, ಅವರ ಪ್ರೀತಿಯಿಂದ ಸಂತೈಸುವಿಕೆ, ಆತ್ಮನಲ್ಲಿ ಅನ್ಯೋನ್ಯತೆ, ಕನಿಕರದ ವಾತ್ಸಲ್ಯಗಳು ಇರುವುದಾದರೆ,


ಕ್ರಿಸ್ತ ಯೇಸುವಿನ ವಾತ್ಸಲ್ಯದಿಂದ ನಿಮ್ಮೆಲ್ಲರಿಗೋಸ್ಕರ ನಾನು ಎಷ್ಟೋ ಹಂಬಲಿಸುತ್ತೇನೆ. ಇದಕ್ಕೆ ದೇವರೇ ಸಾಕ್ಷಿ.


“ಎಫ್ರಾಯೀಮೇ, ನಿನ್ನನ್ನು ಹೇಗೆ ಬಿಟ್ಟುಬಿಡಲಿ? ಇಸ್ರಾಯೇಲೇ, ನಿನ್ನನ್ನು ಹೇಗೆ ಕೈಬಿಡಲಿ? ಅದ್ಮದ ಹಾಗೆ ನಿನ್ನನ್ನು ದುರ್ಗತಿಗೆ ಹೇಗೆ ಒಪ್ಪಿಸಲಿ? ಚೆಬೋಯಿಮನಂತೆ ನಿನ್ನನ್ನು ಹೇಗೆ ನಾಶಮಾಡಲಿ? ನನ್ನ ಹೃದಯವು ನನ್ನಲ್ಲಿ ಮಾರ್ಪಟ್ಟಿದೆ. ನನ್ನಲ್ಲಿ ಕರುಣೆ ಉಕ್ಕಿ ಬಂದಿದೆ.


ಆಗ ಬದುಕಿರುವ ಕೂಸಿನ ತಾಯಿಯಾಗಿರುವವಳ ಕರುಳುಗಳು ತನ್ನ ಮಗನಿಗಾಗಿ ಮರುಗಿದ್ದರಿಂದ ಅವಳು ಅರಸನಿಗೆ, “ನನ್ನ ಒಡೆಯನೇ, ಬದುಕಿರುವ ಕೂಸನ್ನು ಇವಳಿಗೆ ಕೊಡು, ಕೊಲ್ಲಬೇಡ,” ಎಂದಳು. ಆದರೆ, ಮತ್ತೊಬ್ಬಳು, ಅದು ನನಗಾಗಲಿ ನಿನಗಾಗಲಿ ಆಗಿರಬಾರದು, ಕಡಿಯಿರಿ. ಎಂದಳು.


ಆಗ ಅವನು ತನ್ನ ಸ್ವರವೆತ್ತಿ ಅತ್ತಾಗ, ಹೊರಗಿದ್ದ ಈಜಿಪ್ಟಿನವರೂ, ಫರೋಹನ ಮನೆಯವರೂ ಕೇಳಿಸಿಕೊಂಡರು.


ಆದರೆ ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರ ಸಹೋದರಿಯರನ್ನು ನೋಡಿ, ಕರುಣೆ ತೋರಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವುದು ಹೇಗೆ?


ನಾನು ನಿನ್ನ ಕಣ್ಣೀರನ್ನು ನೆನಪಿಗೆ ತಂದು, ನಿನ್ನನ್ನು ನೋಡಿ ಆನಂದಭರಿತನಾಗಬೇಕೆಂದು ಬಹಳವಾಗಿ ಹಂಬಲಿಸುತ್ತೇನೆ.


ಆದಕಾರಣ ದೇವರಿಂದ ಆಯ್ಕೆಯಾದವರೂ ಪರಿಶುದ್ಧರೂ ಪ್ರಿಯರೂ ಆಗಿರುವ ನೀವು ಕನಿಕರ, ದಯೆ, ದೀನತ್ವ, ಸಾತ್ವಿಕತ್ವ, ದೀರ್ಘಶಾಂತಿ ಇವುಗಳನ್ನು ಧರಿಸಿಕೊಳ್ಳಿರಿ.


ಅವರೆಲ್ಲರೂ ಪೌಲನ ಕೊರಳನ್ನು ಅಪ್ಪಿಕೊಂಡು ಕಣ್ಣೀರಿಡುತ್ತಾ ಅವನಿಗೆ ಮುದ್ದಿಟ್ಟರು.


ಆದ್ದರಿಂದ ನಾನು ಮೂರು ವರ್ಷಗಳ ಕಾಲ ಹಗಲುರಾತ್ರಿ ಕಣ್ಣೀರಿಡುತ್ತಾ ಎಡಬಿಡದೆ ನಿಮ್ಮನ್ನು ಎಚ್ಚರಿಸುತ್ತಾ ಇದ್ದೇನೆಂಬುದನ್ನು ಜ್ಞಾಪಕದಲ್ಲಿಟ್ಟುಕೊಂಡು ಎಚ್ಚರವಾಗಿರಿ.


ಯೆಹೂದ್ಯರ ಒಳಸಂಚುಗಳಿಂದ ನಾನು ಕಠಿಣ ಪರೀಕ್ಷೆಗಳಿಗೆ ಒಳಗಾಗಿದ್ದರೂ ಬಹಳ ದೀನತೆಯಿಂದಲೂ ಕಣ್ಣೀರಿನಿಂದಲೂ ಕರ್ತ ಯೇಸುವಿನ ಸೇವೆ ಮಾಡಿದೆನು.


ಆಗ ಯೋಸೇಫನು ತನ್ನ ರಥವನ್ನು ಸಿದ್ಧಮಾಡಿಕೊಂಡು, ತನ್ನ ತಂದೆ ಇಸ್ರಾಯೇಲನಿಗೆ ಎದುರಾಗಿ ಗೋಷೆನಿಗೆ ಹೋದನು. ಯೋಸೇಫನು ತನ್ನ ತಂದೆಯನ್ನು ಸಂಧಿಸಿ, ಅಪ್ಪಿಕೊಂಡು, ಬಹಳ ಹೊತ್ತಿನವರೆಗೆ ಅತ್ತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು