Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 45:16 - ಕನ್ನಡ ಸಮಕಾಲಿಕ ಅನುವಾದ

16 ಯೋಸೇಫನ ಸಹೋದರರು ಬಂದಿದ್ದಾರೆಂಬ ಸುದ್ದಿಯನ್ನು ಫರೋಹನ ಮನೆಯವರು ಕೇಳಿದಾಗ ಫರೋಹನಿಗೂ, ಅವನ ಸೇವಕರಿಗೂ ಅದು ಮೆಚ್ಚಿಗೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೋಸೇಫನ ಅಣ್ಣತಮ್ಮಂದಿರು ಬಂದ ಸಮಾಚಾರವು ಫರೋಹನ ಮನೆಯವರಿಗೆ ತಿಳಿದಾಗ ಫರೋಹನಿಗೂ ಅವನ ಪರಿವಾರದವರಿಗೂ ಸಂತೋಷವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಜೋಸೆಫನ ಅಣ್ಣತಮ್ಮಂದಿರು ಬಂದಿರುವ ಸಮಾಚಾರ ಫರೋಹನ ಅರಮನೆಗೆ ತಲುಪಿತು. ಫರೋಹನೂ ಅವನ ಪರಿವಾರದವರೂ ಅದನ್ನು ಕೇಳಿ ಸಂತೋಷಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯೋಸೇಫನ ಅಣ್ಣತಮ್ಮಂದಿರು ಬಂದ ಸಮಾಚಾರವು ಫರೋಹನ ಮನೆಯವರಿಗೆ ತಿಳಿದಾಗ ಫರೋಹನಿಗೂ ಅವನ ಪರಿವಾರದವರಿಗೂ ಸಂತೋಷವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೋಸೇಫನ ಸಹೋದರರು ಅವನ ಬಳಿಗೆ ಬಂದಿರುವುದು ತಿಳಿದಾಗ ಫರೋಹನಿಗೂ ಅವನ ಮನೆಯವರಿಗೂ ತುಂಬ ಸಂತೋಷವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 45:16
15 ತಿಳಿವುಗಳ ಹೋಲಿಕೆ  

ಅವರು ಎರಡನೆಯ ಸಾರಿ ಅಲ್ಲಿಗೆ ಹೋದಾಗ, ಯೋಸೇಫನು ತಾನು ಯಾರೆಂಬುದನ್ನು ತನ್ನ ಸಹೋದರರಿಗೆ ತಿಳಿಸಿದನು. ಆಗ ಯೋಸೇಫನ ಕುಟುಂಬದ ಬಗ್ಗೆ ಫರೋಹನಿಗೆ ಗೊತ್ತಾಯಿತು.


ಈ ಮಾತು ಇಡೀ ಸಮೂಹಕ್ಕೆ ಮೆಚ್ಚುಗೆಯಾಯಿತು. ಅವರು ಪೂರ್ಣನಂಬಿಕೆಯುಳ್ಳವನೂ ಪವಿತ್ರಾತ್ಮಭರಿತನೂ ಆದ ಸ್ತೆಫನನ್ನು ಆರಿಸಿಕೊಂಡರು; ಅಲ್ಲದೆ ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ, ಪರ್ಮೇನ ಮತ್ತು ಯೆಹೂದ್ಯ ಮಾರ್ಗ ಅನುಸರಿಸುತ್ತಿದ್ದ ಅಂತಿಯೋಕ್ಯದ ನಿಕೊಲಾಯನನ್ನು ಆಯ್ಕೆಮಾಡಿದರು.


ಆಗ ಅವನ ಹೆಂಡತಿಯಾದ ಜೆರೆಷಳೂ ಅವನ ಸಮಸ್ತ ಸ್ನೇಹಿತರೂ ಅವನಿಗೆ, “ಅರಸನ ಅಪ್ಪಣೆಯನ್ನು ಪಡೆದು ಮೊರ್ದೆಕೈಯನ್ನು ಬೆಳಿಗ್ಗೆ ಗಲ್ಲಿಗೇರಿಸಲು ಇಪ್ಪತ್ತು ಮೀಟರ್ ಉದ್ದದ ಒಂದು ಗಲ್ಲುಮರವನ್ನು ಮಾಡು. ತರುವಾಯ ಅರಸನ ಸಂಗಡ ಔತಣಕ್ಕೆ ಹೋಗಿ ಸಂತೋಷವಾಗಿರು,” ಎಂದರು. ಈ ಸಲಹೆ ಹಾಮಾನನಿಗೆ ಮೆಚ್ಚಿಕೆಯಾದದ್ದರಿಂದ ಗಲ್ಲುಮರವನ್ನು ಸಿದ್ಧಮಾಡಿಸಿದನು.


ಅರಸನ ದೃಷ್ಟಿಗೆ ಮೆಚ್ಚಿಗೆಯಾಗಿರುವ ಕನ್ನಿಕೆಯು ವಷ್ಟಿಗೆ ಬದಲಾಗಿ ರಾಣಿಯಾಗಲಿ,” ಎಂದನು. ಆ ಮಾತು ಅರಸನಿಗೆ ಸರಿಕಂಡುಬಂದದ್ದರಿಂದ ಅದೇ ಪ್ರಕಾರ ಮಾಡಿದನು.


ಈ ಮಾತು ಅರಸನಿಗೂ ಶ್ರೇಷ್ಠರಿಗೂ ಸರಿಯೆಂದು ತೋರಿತು. ಆದುದರಿಂದ ಅರಸನು ಮೆಮೂಕಾನ್ ಮಾತಿನಂತೆಯೇ ಮಾಡಿದನು.


ಈ ಕಾರ್ಯವು ಅರಸನಿಗೂ ಸಮಸ್ತ ಜನರಿಗೂ ಸ್ಪಷ್ಟವಾಯಿತು.


ಜನರೆಲ್ಲರು ಅದನ್ನು ತಿಳಿದುಕೊಂಡಾಗ, ಅವರೆಲ್ಲರಿಗೆ ಮೆಚ್ಚಿಗೆಯಾಯಿತು. ಹಾಗೆಯೇ ಅರಸನು ಏನೇನು ಮಾಡಿದನೋ, ಅದು ಜನರಿಗೆ ಮೆಚ್ಚಿಗೆಯಾಗಿತ್ತು.


ಅವರೇ ನಿಮಗೆ ಇಳಿದುಕೊಳ್ಳುವುದಕ್ಕೆ ಸ್ಥಳವನ್ನು ಗೊತ್ತುಮಾಡಿ ನೀವು ಹೋಗತಕ್ಕ ಮಾರ್ಗವನ್ನು ನಿಮಗೆ ತೋರಿಸಲು ರಾತ್ರಿ ಹೊತ್ತು ಬೆಂಕಿಯಲ್ಲಿಯೂ ಹಗಲು ಹೊತ್ತು ಮೇಘದಲ್ಲಿಯೂ ನಿಮ್ಮ ಮುಂದೆ ಹೋದರು.


“ಹೀಗಿರುವುದರಿಂದ ಈಗ ಫರೋಹನು ವಿವೇಕಿಯಾದ ಬುದ್ಧಿಯುಳ್ಳ ಒಬ್ಬನನ್ನು ನೋಡಿ, ಅವನನ್ನು ಈಜಿಪ್ಟ್ ದೇಶದ ಮೇಲೆ ನೇಮಿಸಲಿ.


ಅವರ ಮಾತುಗಳು ಹಮೋರನಿಗೂ, ಅವನ ಮಗ ಶೆಕೆಮನಿಗೂ ಯೋಗ್ಯವಾಗಿ ಕಂಡವು.


ಅಬೀಮೆಲೆಕನು, “ನನ್ನ ದೇಶವು ನಿನ್ನ ಮುಂದೆ ಇದೆ, ನಿನಗೆ ಇಷ್ಟವಾಗಿರುವ ಸ್ಥಳದಲ್ಲಿ ವಾಸಮಾಡು,” ಎಂದನು.


ಆದರೆ ಅಬ್ರಾಮನು ಸಾರಯಳಿಗೆ, “ಇಗೋ, ನಿನ್ನ ದಾಸಿಯು ನಿನ್ನ ಕೈಯಲ್ಲಿ ಇದ್ದಾಳೆ. ನಿನ್ನ ಮನಸ್ಸಿಗೆ ಬಂದಂತೆ ಮಾಡು,” ಎಂದನು. ಆಗ ಸಾರಯಳು ಹಾಗರಳನ್ನು ಬಾಧಿಸಿದ್ದರಿಂದ, ಅವಳು ಸಾರಯಳಿಂದ ಓಡಿ ಹೋದಳು.


ಇದಲ್ಲದೆ ತನ್ನ ಸಹೋದರರಿಗೆಲ್ಲಾ ಮುದ್ದಿಟ್ಟು ಅವರನ್ನು ಅಪ್ಪಿಕೊಂಡು ಅತ್ತನು. ತರುವಾಯ ಅವನ ಸಹೋದರರು ಅವನ ಸಂಗಡ ಮಾತನಾಡಿದರು.


ಆಗ ಫರೋಹನು ಯೋಸೇಫನಿಗೆ, “ನಿನ್ನ ಸಹೋದರರಿಗೆ ಹೀಗೆ ಮಾಡಲು ಹೇಳು: ‘ನೀವು ನಿಮ್ಮ ವಾಹಕಪಶುಗಳ ಮೇಲೆ ವಸ್ತುಗಳನ್ನು ಹೇರಿ, ಕಾನಾನ್ ದೇಶಕ್ಕೆ ಹೋಗಿ,


ಈ ಮಾತುಗಳು ಫರೋಹನಿಗೂ, ಅವನ ಸೇವಕರಿಗೂ ಒಳ್ಳೆಯದೆಂದು ತೋರಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು