Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 45:27 - ಕನ್ನಡ ಸಮಕಾಲಿಕ ಅನುವಾದ

27 ಆದರೆ ಯೋಸೇಫನು ತಮಗೆ ಹೇಳಿದ ಎಲ್ಲಾ ಮಾತುಗಳನ್ನು ಅವರು ಯಾಕೋಬನಿಗೆ ಹೇಳಿದರು. ಅವನನ್ನು ಕರೆದುಕೊಂಡು ಹೋಗುವುದಕ್ಕೆ ಯೋಸೇಫನು ಕಳುಹಿಸಿದ ರಥಗಳನ್ನು ಅವನು ನೋಡಿದಾಗ ಯಾಕೋಬನ ಆತ್ಮವು ಉಜ್ಜೀವಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ತರುವಾಯ ಯೋಸೇಫನು ಹೇಳಿ ಕಳುಹಿಸಿದ್ದ ಎಲ್ಲಾ ಮಾತುಗಳನ್ನು ಕೇಳಿ ತನ್ನ ಪ್ರಯಾಣಕ್ಕೋಸ್ಕರ ಯೋಸೇಫನ ಕಡೆಯಿಂದ ಬಂದ ರಥಗಳನ್ನು ನೋಡಿದಾಗ ಯಾಕೋಬನ ಆತ್ಮವು ಉಲ್ಲಾಸಗೊಂಡಿತು, ಅಲ್ಲದೆ ಅವನಿಗೆ ಹೊಸ ಜೀವ ಬಂದಂತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆದರೆ ಜೋಸೆಫನು ಹೇಳಿಕಳಿಸಿದ ಎಲ್ಲ ಮಾತುಗಳನ್ನು ಕೇಳಿ, ತನ್ನ ಪ್ರಯಾಣಕ್ಕಾಗಿ ಅವನಿಂದ ಬಂದಿದ್ದ ಬಂಡಿಗಳನ್ನು ನೋಡಿ ಅವರ ತಂದೆ ಯಕೋಬನಿಗೆ ಹೊಸ ಜೀವ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ತರುವಾಯ ಯೋಸೇಫನು ಹೇಳಿಕಳುಹಿಸಿದ್ದ ಎಲ್ಲಾ ಮಾತುಗಳನ್ನು ಕೇಳಿ ತನ್ನ ಪ್ರಯಾಣಕ್ಕೋಸ್ಕರ ಯೋಸೇಫನ ಕಡೆಯಿಂದ ಬಂದ ರಥಗಳನ್ನು ನೋಡಿ ಇಸ್ರಾಯೇಲನೆನಿಸಿಕೊಳ್ಳುವ ಅವರ ತಂದೆ ಯಾಕೋಬನು ಚೇತರಿಸಿಕೊಂಡು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆದರೆ ಯೋಸೇಫನು ತಮಗೆ ಹೇಳಿದ್ದೆಲ್ಲವನ್ನು ಸಹೋದರರು ತಮ್ಮ ತಂದೆಗೆ ಹೇಳಿದರು. ಆಮೇಲೆ ತನ್ನನ್ನು ಈಜಿಪ್ಟಿಗೆ ಕರೆದುಕೊಂಡು ಬರಲು ಯೋಸೇಫನು ಕಳುಹಿಸಿದ್ದ ರಥಗಳನ್ನು ಯಾಕೋಬನು ನೋಡಿ ಉಲ್ಲಾಸಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 45:27
8 ತಿಳಿವುಗಳ ಹೋಲಿಕೆ  

ಏಕೆಂದರೆ ಉನ್ನತನೂ, ಮಹೋನ್ನತನೂ, ನಿತ್ಯವಾಗಿ ವಾಸಿಸುವವನೂ, ಪರಿಶುದ್ಧನು ಎಂಬ ಹೆಸರುಳ್ಳಾತನೂ ಹೇಳುವುದೇನೆಂದರೆ: “ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿಸುವ ನಾನಾದರೂ, ಪಶ್ಚಾತ್ತಾಪ ಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪ ಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.


“ಇದನ್ನು ಸಹ ನಿನ್ನ ಸಹೋದರರು ಹೇಳುವಂತೆ ನಿನಗೆ ಅಪ್ಪಣೆಯಾಗಿದೆ: ‘ಈಜಿಪ್ಟ್ ದೇಶದೊಳಗಿಂದ ನಿಮ್ಮ ಚಿಕ್ಕವರಿಗಾಗಿಯೂ, ಹೆಂಡತಿಯರಿಗಾಗಿಯೂ ಬಂಡಿಗಳನ್ನು ತೆಗೆದುಕೊಂಡುಹೋಗಿ, ನಿಮ್ಮ ತಂದೆಯನ್ನು ಕರೆದುಕೊಂಡು ಬನ್ನಿರಿ.


ಅವರು ಎರಡು ದಿವಸಗಳಾದ ಮೇಲೆ ನಮ್ಮನ್ನು ಪುನರ್ಜೀವಿಸ ಮಾಡುವನು. ಮೂರನೆಯ ದಿವಸದಲ್ಲಿ ಆತನೇ ನಮ್ಮನ್ನು ಪುನಃಸ್ಥಾಪಿಸುವರು. ನಾವು ಅವರ ದೃಷ್ಟಿಯಲ್ಲಿ ಜೀವಿಸುವೆವು.


ನಿಮ್ಮ ಜನರು ನಿಮ್ಮಲ್ಲಿ ಸಂತೋಷಪಡುವಂತೆ ನೀವು ತಿರುಗಿ ನಮ್ಮನ್ನು ಉಜ್ಜೀವಿಸುವುದಿಲ್ಲವೋ?


ಅವನಿಗೆ ನೀರನ್ನು ಕುಡಿಸಿ, ಅಂಜೂರ ಹಣ್ಣಿನ ಉಂಡೆಯನ್ನೂ, ಒಣಗಿದ ಎರಡು ದ್ರಾಕ್ಷಿ ಗೊಂಚಲುಗಳನ್ನೂ ಅವನಿಗೆ ಕೊಟ್ಟರು. ಅವನು ಅವುಗಳನ್ನು ತಿಂದಾಗ ಚೇತರಿಸಿಕೊಂಡನು. ಅವನು ರಾತ್ರಿ ಹಗಲು ಮೂರು ದಿವಸದಿಂದ ರೊಟ್ಟಿ ತಿಂದಿರಲಿಲ್ಲ, ನೀರನ್ನೂ ಕುಡಿದಿರಲಿಲ್ಲ.


ಆಗ ದೇವರು ಲೇಹಿಯಲ್ಲಿ ಟೊಳ್ಳಾದ ಸ್ಥಳವನ್ನು ಸೀಳಿಬಿಟ್ಟರು. ಅದರೊಳಗಿಂದ ನೀರು ಹೊರಟು ಬಂತು. ಸಂಸೋನನು ಆ ನೀರನ್ನು ಕುಡಿದದ್ದರಿಂದ ಅವನ ಬಲ ತಿರುಗಿಬಂದು, ಅವನು ಚೇತರಿಸಿಕೊಂಡನು. ಆದ್ದರಿಂದ ಏನ್ ಹಕ್ಕೋರೇ ಎಂದು ಅದಕ್ಕೆ ಹೆಸರಾಯಿತು. ಈ ದಿವಸದವರೆಗೂ ಅದು ಲೇಹಿಯಲ್ಲಿ ಇದೆ.


ಕೊನೆಗೆ ಇಸ್ರಾಯೇಲನು, “ನನ್ನ ಮಗ ಯೋಸೇಫನು ಇನ್ನೂ ಜೀವಂತವಾಗಿದ್ದಾನೆ, ಅಷ್ಟೇ ಸಾಕು! ನಾನು ಸಾಯುವುದಕ್ಕಿಂತ ಮುಂಚೆ ಹೋಗಿ ಅವನನ್ನು ನೋಡುತ್ತೇನೆ,” ಎಂದನು.


ಬಾಯಾರಿದವನಿಗೆ ತಣ್ಣೀರು ಹೇಗೋ ದೂರದೇಶದಿಂದ ಬಂದ ಒಳ್ಳೆಯ ಸಮಾಚಾರವು ಹಾಗೆಯೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು