Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 47:12 - ಕನ್ನಡ ಸಮಕಾಲಿಕ ಅನುವಾದ

12 ಯೋಸೇಫನು ತನ್ನ ತಂದೆಯನ್ನೂ, ತನ್ನ ಸಹೋದರರನ್ನೂ, ತನ್ನ ತಂದೆಯ ಮನೆಯವರೆಲ್ಲರನ್ನೂ ಅವರ ಮಕ್ಕಳ ಲೆಕ್ಕದ ಪ್ರಕಾರ ಆಹಾರಕೊಟ್ಟು, ಅವರನ್ನು ಸಂರಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೋಸೇಫನು ತನ್ನ ತಂದೆಗೂ, ಅಣ್ಣತಮ್ಮಂದಿರಿಗೂ, ತಂದೆಯ ಮನೆಯವರೆಲ್ಲರಿಗೂ ಅವರವರ ಕುಟುಂಬಗಳಿಗೆ ಸೇರಿದವರ ಲೆಕ್ಕದ ಪ್ರಕಾರ ಆಹಾರವನ್ನು ಕೊಟ್ಟು ಅವರನ್ನು ಸಂರಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ತಂದೆಗೂ ಸಹೋದರರಿಗೂ ತಂದೆಯ ಮನೆಯವರೆಲ್ಲರಿಗೂ ಅವರವರ ಕುಟುಂಬಗಳಿಗೆ ಸೇರಿದವರ ಲೆಕ್ಕದ ಪ್ರಕಾರ ಆಹಾರಕೊಟ್ಟು ಅವರನ್ನು ಸಂರಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯೋಸೇಫನು ತನ್ನ ತಂದೆಗೂ ಅಣ್ಣತಮ್ಮಂದಿರಿಗೂ ತಂದೆಯ ಮನೆಯವರೆಲ್ಲರಿಗೂ ಅವರವರ ಕುಟುಂಬಗಳಿಗೆ ಸೇರಿದವರ ಲೆಕ್ಕದ ಪ್ರಕಾರ ಆಹಾರಕ್ಕೆ ಕೊಟ್ಟು ಅವರನ್ನು ಸಂರಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೋಸೇಫನು ತನ್ನ ತಂದೆಗೂ ತನ್ನ ಸಹೋದರರಿಗೂ ಮತ್ತು ಅಲ್ಲಿನ ಎಲ್ಲಾ ಜನರಿಗೂ ಬೇಕಾಗಿದ್ದ ಆಹಾರವನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 47:12
16 ತಿಳಿವುಗಳ ಹೋಲಿಕೆ  

ಅಲ್ಲಿ ನಿನ್ನನ್ನು ಪೋಷಿಸುವೆನು. ಏಕೆಂದರೆ ಇನ್ನೂ ಕ್ಷಾಮದ ಐದು ವರ್ಷಗಳಿವೆ. ನಿನಗೂ, ನಿನ್ನ ಮನೆಗೂ, ನಿನಗಿರುವುದೆಲ್ಲದಕ್ಕೂ ಬಡತನವಾಗಬಾರದು’ ಎಂದು ಹೇಳಿರಿ.


ಯಾವನಾದರೂ ಸ್ವಂತದವರನ್ನು ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ನಂಬಿಕೆಯನ್ನು ಅಲ್ಲಗಳೆದವನೂ ಅವಿಶ್ವಾಸಿಗಿಂತ ನೀಚನೂ ಆಗಿದ್ದಾನೆ.


ಆದರೆ ಯಾವ ವಿಧವೆಗಾದರೂ ಮಕ್ಕಳಾಗಲಿ, ಮೊಮ್ಮಕ್ಕಳಾಗಲಿ ಇದ್ದರೆ ಅವರೇ ಮೊದಲು ತಮ್ಮ ಮನೆಯಲ್ಲಿ ಭಕ್ತಿಯಿಂದಿರುವುದಕ್ಕೂ ತಂದೆತಾಯಿಗಳಿಗೆ ಪ್ರತ್ಯುಪಕಾರ ಮಾಡುವುದಕ್ಕೂ ಕಲಿತುಕೊಳ್ಳಲಿ. ಇದು ದೇವರ ದೃಷ್ಟಿಯಲ್ಲಿ ಮೆಚ್ಚಿಕೆಯಾದದ್ದು.


ದೇಹ ಸಾಧನೆಯೂ ಸ್ವಲ್ಪಮಟ್ಟಿಗೆ ಲಾಭಕರವಾಗಿದೆ. ಭಕ್ತಿಯಾದರೋ ಎಲ್ಲಾ ವಿಧದಲ್ಲಿಯೂ ಲಾಭಕರವಾದದ್ದು. ಅದಕ್ಕೆ ಈಗಲೂ ಮುಂದೆಯೂ ಜೀವ ವಾಗ್ದಾನ ಉಂಟು.


ಅದರ ಬದಲಾಗಿ, ನಾವು ನಿಮ್ಮ ನಡುವೆ ಶಿಶುಗಳಂತೆ ಇದ್ದೆವು. ತಾಯಿಯು ತನ್ನ ಮಕ್ಕಳನ್ನು ಪೋಷಿಸುವಂತೆ,


ಅವನು ನಿನಗೆ ಪ್ರಾಣವನ್ನು ಪುನರುಜ್ಜೀವಿಸುವವನಾಗಿಯೂ ನಿನ್ನ ವೃದ್ಧ ವಯಸ್ಸಿನಲ್ಲಿ ಸಂರಕ್ಷಿಸುವವನಾಗಿಯೂ ಇರುವನು. ಏಕೆಂದರೆ ನಿನ್ನನ್ನು ಪ್ರೀತಿ ಮಾಡುವ ಏಳುಮಂದಿ ಮಕ್ಕಳಿಗಿಂತ ನಿನಗೆ ಉತ್ತಮಳಾಗಿರುವ ನಿನ್ನ ಸೊಸೆಯು ಅವನನ್ನು ಹೆತ್ತಳು,” ಎಂದರು.


ನಿನ್ನ ದೇವರಾದ ಯೆಹೋವ ದೇವರು ನಿನಗೆ ಕೊಡುವ ದೇಶದಲ್ಲಿ ನೀನು ಬಹುಕಾಲ ಬಾಳುವಂತೆ ನಿನ್ನ ತಂದೆತಾಯಿಗಳನ್ನು ಗೌರವಿಸು.


ಬೆಳೆ ಬಂದಾಗ ಐದನೆಯ ಪಾಲನ್ನು ಫರೋಹನಿಗೆ ಕೊಡಬೇಕು. ಉಳಿದ ನಾಲ್ಕು ಪಾಲು ಹೊಲದ ಬೀಜಕ್ಕಾಗಿಯೂ, ನಿಮ್ಮ ಆಹಾರಕ್ಕಾಗಿಯೂ, ನಿಮ್ಮ ಮಕ್ಕಳ ಆಹಾರಕ್ಕಾಗಿಯೂ ನಿಮಗೆ ಇರಲಿ,” ಎಂದನು.


ಯೋಸೇಫನು ಈಜಿಪ್ಟ್ ದೇಶದ ಒಂದು ಮೇರೆಯಿಂದ ಇನ್ನೊಂದು ಮೇರೆಯವರೆಗೂ ಜನರನ್ನು ದಾಸರನ್ನಾಗಿ ಮಾಡಿದನು.


ಯೋಸೇಫನು ಹೋಗಿ ಫರೋಹನಿಗೆ, “ನನ್ನ ತಂದೆಯೂ, ನನ್ನ ಸಹೋದರರೂ ತಮ್ಮ ಕುರಿದನಗಳನ್ನೂ, ತಮಗಿದ್ದ ಎಲ್ಲವುಗಳನ್ನೂ ತೆಗೆದುಕೊಂಡು ಕಾನಾನ್ ದೇಶದಿಂದ ಬಂದಿದ್ದಾರೆ. ಅವರು ಗೋಷೆನ್ ಪ್ರಾಂತದಲ್ಲಿ ಇದ್ದಾರೆ,” ಎಂದನು.


ಹೀಗಿರುವುದರಿಂದ ನೀವು ಭಯಪಡಬೇಡಿರಿ. ನಾನು ನಿಮ್ಮನ್ನೂ, ನಿಮ್ಮ ಮಕ್ಕಳನ್ನೂ ಸಂರಕ್ಷಿಸುತ್ತೇನೆ,” ಎಂದು ಹೇಳಿ, ಅವರನ್ನು ಸಂತೈಸಿ, ದಯೆಯಿಂದ ಮಾತನಾಡಿದನು.


ಆದ್ದರಿಂದ ನಿಮ್ಮ ಸಂತತಿಯನ್ನು ಭೂಮಿಯಲ್ಲಿ ಉಳಿಸುವುದಕ್ಕೂ, ದೊಡ್ಡ ಬರಗಾಲದಿಂದ ನಿಮ್ಮ ಪ್ರಾಣಗಳನ್ನು ಉಳಿಸುವುದಕ್ಕೂ ದೇವರು ನನ್ನನ್ನು ಇಲ್ಲಿಗೆ ಕಳುಹಿಸಿದ್ದಾರೆ.


ಗೋಷೆನ್ ಪ್ರದೇಶದಲ್ಲಿ ನೀನು ವಾಸವಾಗಿದ್ದು ನಿನ್ನ ಮಕ್ಕಳೂ, ಮೊಮ್ಮಕ್ಕಳೂ, ದನಕುರಿಗಳೂ, ನಿನಗಿದ್ದದ್ದೆಲ್ಲವೂ ನನ್ನ ಸಮೀಪದಲ್ಲಿರಬೇಕು.


ಬಟ್ಟಲು ಮೊದಲುಗೊಂಡು ಕೊಡದ ತನಕ, ಸಕಲ ಸಾಧಾರಣ ಪಾತ್ರೆಗಳನ್ನು ಅಂದರೆ ತಂದೆಯ ಸಂತಾನ, ಸಂತತಿಯಾದ ಅವನ ಮನೆಯ ಎಲ್ಲಾ ವೈಭವವನ್ನು ಅವರು ಅವನಿಗೆ ವಹಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು