Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 47:14 - ಕನ್ನಡ ಸಮಕಾಲಿಕ ಅನುವಾದ

14 ಆಗ ಯೋಸೇಫನು ಈಜಿಪ್ಟ್ ದೇಶದಲ್ಲಿಯೂ, ಕಾನಾನ್ ದೇಶದಲ್ಲಿಯೂ ಜನರು ಕೊಂಡುಕೊಂಡ ಧಾನ್ಯಕ್ಕೆ ಬದಲಾಗಿ ಕೊಟ್ಟ ಹಣವನ್ನೆಲ್ಲಾ ಕೂಡಿಸಿ, ಅದನ್ನು ಫರೋಹನ ಮನೆಗೆ ತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೋಸೇಫನು ಜನರಿಗೆ ಧಾನ್ಯವನ್ನು ಮಾರುತ್ತಾ ಐಗುಪ್ತ ದೇಶದಲ್ಲಿಯೂ, ಕಾನಾನ್‌ ದೇಶದಲ್ಲಿಯೂ ಇದ್ದ ಎಲ್ಲಾ ಹಣವನ್ನು ಕೂಡಿಸಿಕೊಂಡು ಫರೋಹನ ಬೊಕ್ಕಸದೊಳಗೆ ತುಂಬಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಜೋಸೆಫನು ಈಜಿಪ್ಟ್ ದೇಶದವರಿಗೂ ಕಾನಾನ್ ನಾಡಿಗರಿಗೂ ದವಸಧಾನ್ಯ ಮಾರಿ ಬಂದ ಹಣದಿಂದ ಫರೋಹನ ಬೊಕ್ಕಸವನ್ನು ತುಂಬಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೋಸೇಫನು ಜನರಿಗೆ ಧಾನ್ಯವನ್ನು ಮಾರುತ್ತಾ ಐಗುಪ್ತದೇಶದಲ್ಲಿಯೂ ಕಾನಾನ್‍ದೇಶದಲ್ಲಿಯೂ ಇದ್ದ ಎಲ್ಲಾ ಹಣವನ್ನೂ ಸೆಳಕೊಂಡು ಫರೋಹನ ಬೊಕ್ಕಸದೊಳಗೆ ತುಂಬಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಈಜಿಪ್ಟ್ ಮತ್ತು ಕಾನಾನ್ ದೇಶಗಳ ಜನರು ಧಾನ್ಯಗಳನ್ನು ಕೊಂಡುಕೊಂಡರು. ಯೋಸೇಫನು ಹಣವನ್ನು ಉಳಿಸಿ ಫರೋಹನ ಭಂಡಾರಕ್ಕೆ ಸೇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 47:14
8 ತಿಳಿವುಗಳ ಹೋಲಿಕೆ  

ಈಜಿಪ್ಟಿನಲ್ಲೆಲ್ಲಾ ಬರವಿತ್ತು. ಯೋಸೇಫನು ಧಾನ್ಯವಿದ್ದ ಕಣಜಗಳನ್ನೆಲ್ಲಾ ತೆರೆದು ಈಜಿಪ್ಟಿನವರಿಗೆ ಮಾರಿದನು. ಆಗ ಬರವು ಈಜಿಪ್ಟ್ ದೇಶದಲ್ಲಿ ಕಠಿಣವಾಗಿತ್ತು.


ನೀವು ದೇವರಿಂದ ವಿವಿಧ ಕೃಪಾವರಗಳನ್ನು ಹೊಂದಿರಲಾಗಿ ಒಳ್ಳೆಯ ನಿರ್ವಾಹಕರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿರುವ ವರಗಳನ್ನು ಎಲ್ಲರ ಸೇವೆಯಲ್ಲಿ ಉಪಯೋಗಿಸಲಿ.


ಹೀಗಿರುವುದರಿಂದ ನಂಬಿಗಸ್ತರಾಗಿರುವುದು ನಿರ್ವಾಹಕರಲ್ಲಿ ಅವಶ್ಯವಾಗಿ ಕಾಣತಕ್ಕ ಸದ್ಗುಣವಾಗಿದೆ.


ಈಜಿಪ್ಟ್ ದೇಶದಲ್ಲಿಯೂ, ಕಾನಾನ್ ದೇಶದಲ್ಲಿಯೂ ಹಣವು ಮುಗಿದಾಗ, ಈಜಿಪ್ಟಿನವರೆಲ್ಲರೂ ಯೋಸೇಫನ ಬಳಿಗೆ ಬಂದು, “ನಮಗೆ ಆಹಾರವನ್ನು ಕೊಡು, ನಾವು ನಿನ್ನ ಮುಂದೆ ಏಕೆ ಸಾಯಬೇಕು? ಏಕೆಂದರೆ ಹಣವೆಲ್ಲಾ ತೀರಿತು,” ಎಂದರು.


ಇದಲ್ಲದೆ ಭೂಮಿಯ ಮೇಲೆಲ್ಲಾ ಬರಗಾಲವು ಕಠಿಣವಾಗಿದ್ದದರಿಂದ, ಎಲ್ಲಾ ದೇಶದವರು ಯೋಸೇಫನಿಂದ ಧಾನ್ಯವನ್ನು ಕೊಂಡುಕೊಳ್ಳುವುದಕ್ಕೆ ಈಜಿಪ್ಟಿಗೆ ಬರುತ್ತಿದ್ದರು.


ಧಾನ್ಯವನ್ನು ಬಚ್ಚಿಟ್ಟುಕೊಳ್ಳುವವನನ್ನು ಜನರು ಶಪಿಸುವರು; ಆದರೆ ಅದನ್ನು ಮಾರುವವನ ಮೇಲೆ ಆಶೀರ್ವಾದವು ನೆಲೆಯಾಗಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು